AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್ಚಿನ ಸಂಬಳ ಆಸೆಗೆ ಚಾಲಕ ವೃತ್ತಿ ಬಿಟ್ಟು ಕಾರ್ಖಾನೆಯಲ್ಲಿ ಕೆಲಸಕ್ಕೆ ಸೇರಿ ಜೀವಕ್ಕೆ ತಂದುಕೊಂಡರು ಕುತ್ತು

ಬೆಂಗಳೂರು ದಕ್ಷಿಣ ತಾಲೂಕಿನ ರಾಮಸಂದ್ರದಲ್ಲಿರುವ ಪರ್ಫ್ಯೂಮ್ ಕಾರ್ಖಾನೆಯಲ್ಲಿ ಅಗ್ನಿ ಅವಘಡದಲ್ಲಿ ಐವರು ಗಾಯಗೊಂಡಿದ್ದಾರೆ. ಗಾಯಗೊಂಡ ಇರ್ಫಾನ್, ಅಪ್ರೋಜ್ ಪಾಷಾ ಹೊಸ ಫ್ಯಾಕ್ಟರಿಯಾಗಿದೆ ಸಂಬಳ ಜಾಸ್ತಿ ಸಿಗುತ್ತೆ ಅಂತ ಒಂದು ವಾರದ ಹಿಂದಷ್ಟೆ ಕೆಲಸಕ್ಕೆ ಸೇರಿದ್ದರು. ಇನ್ನು ಮನೆ ಪಕ್ಕದಲ್ಲೇ ಫ್ಯಾಕ್ಟರಿ ಇದೆ ಅಂತ ಕೆಲಸಕ್ಕೆ ಸೇರಿದ್ದರು.

ಹೆಚ್ಚಿನ ಸಂಬಳ ಆಸೆಗೆ ಚಾಲಕ ವೃತ್ತಿ ಬಿಟ್ಟು ಕಾರ್ಖಾನೆಯಲ್ಲಿ ಕೆಲಸಕ್ಕೆ ಸೇರಿ ಜೀವಕ್ಕೆ ತಂದುಕೊಂಡರು ಕುತ್ತು
ಮೃತ ಮೆಹಬೂಬ್​
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on:Feb 19, 2024 | 9:10 AM

Share

ಬೆಂಗಳೂರು, ಫೆಬ್ರವರಿ 19: ಬೆಂಗಳೂರು ದಕ್ಷಿಣ ತಾಲೂಕಿನ ರಾಮಸಂದ್ರದಲ್ಲಿರುವ ಪರ್ಫ್ಯೂಮ್ ಕಾರ್ಖಾನೆಯಲ್ಲಿ (Perfume Factory) ಅಗ್ನಿ ಅವಘಡ (Fire accident) ಸಂಭವಿಸಿದ್ದು, ಮೃತಪಟ್ಟ ಮೂವರು ಕಾರ್ಮಿಕರಲ್ಲಿ ಇಬ್ಬರ ಗುರುತು ಪತ್ತೆಯಾಗಿದೆ. ಗೊಡೌನ್ ಮಾಲಿಕ ಸಲೀಂ (50), ನಾಯಂಡಹಳ್ಳಿ ನಿವಾಸಿ ಚಾಲಕ ಮೆಹಬೂಬ್ (35) ಮೃತರು. ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಆರ್​ಆರ್​ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯಲ್ಲಿ ಆರು ಜನ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ (Victoria Hospital) ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಗಾಯಗೊಂಡವರಲ್ಲಿ 10 ವರ್ಷದ ಬಾಲಕನಿದ್ದು, ಈತನಿಗೆ ಶೇ60 ರಷ್ಟು ಸುಟ್ಟ ಗಾಯಗಳಾಗಿವೆ. ಬಾಲಕ ರಿಹಾನ್ ಸ್ಥಿತಿ ಗಂಭೀರವಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಉಳಿದ ಐವರಿಗೆ ಶೇ25 ರಷ್ಟು ಸುಟ್ಟ ಗಾಯಗಳಾಗಿವೆ.

ಪ್ರಕರಣ ಸಂಬಂಧ ಗೊಡೌನ್ ಮಾಲಿಕ ಸಲೀಂ ಮತ್ತು ಜಾಗದ ಮಾಲೀಕ ವಿಠ್ಠಲ್ ವಿರುದ್ಧ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಎಎಫ್​ಐಆರ್​ ದಾಖಲಾಗಿದೆ. ಇನ್ನು ಪ್ರಕರಣ ದಾಖಲಾಗುತ್ತಿದ್ದಂತೆ ವಿಠ್ಠಲ್ ಪರಾರಿಯಾಗಿದ್ದಾನೆ.  ಐಪಿಸಿ ಸೆಕ್ಷನ್ 420, 304, 467, 64, 67 ಅಡಿ ದೂರು ದಾಖಲಾಗಿದೆ.

600 ರೂ. ಕೂಲಿ ಕೆಲಸಕ್ಕೆ ಹೋಗಿ ಜೀವಕ್ಕೆ ಕುತ್ತು

ಹೊಸ ಫ್ಯಾಕ್ಟರಿಯಾಗಿದೆ ಸಂಬಳ ಜಾಸ್ತಿ ಸಿಗುತ್ತೆ, ಅಲ್ಲದೆ ಮನೆ ಪಕ್ಕದಲ್ಲೇ ಫ್ಯಾಕ್ಟರಿ ಇದೆ ಅಂತ ಅಂತ ಗಾಯಾಳುಗಳು ಇರ್ಫಾನ್, ಅಪ್ರೋಜ್ ಪಾಷಾ ಒಂದು ವಾರದ ಹಿಂದಷ್ಟೆ ಕೆಲಸಕ್ಕೆ ಸೇರಿದ್ದರು. ಇರ್ಫಾನ್ ಪಾಷಾ ಸುಗಂಧ ದ್ರವ್ಯ ಫ್ಯಾಕ್ಟರಿಯಲ್ಲಿ ಕ್ಯಾಂಟರ್ ಚಾಲಕನಾಗಿ ಕೆಲಸ ಮಾಡುತ್ತಿದ್ದನು. ಆದರೆ ಹೆಚ್ಚಿನ ಸಂಬಳ ನೀಡುತ್ತಾರೆ ಎಂಬ ಆಸೆಯಿಂದ ಡ್ರೈವರ್ ಕೆಲಸ ಬಿಟ್ಟು ಫ್ಯಾಕ್ಟರಿಗೆ ಸೇರಿದ್ದನು.

ಇದನ್ನೂ ಓದಿ: ಹಾಸನದ ಮಂಜುನಾಥ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: ರೋಗಿಗಳು ಬಚಾವ್​

ಇನ್ನು ರವಿವಾರ (ಫೆ.18) ರಂದು ರಜೆ ಇದ್ದ ಕಾರಣ, ಇರ್ಫಾನ್ ಪಾಷಾಗೆ ಊಟ ಕೊಡಲು ಅಪ್ರೋಜ್ ಪಾಷಾ, ಅಪ್ರೋಜ್ ಪಾಷಾರ ಮಗ ಮತ್ತು ಅಪ್ರೋಜ್ ಪಾಷಾರ ಅಕ್ಕನ ಮಗ ಕಾರ್ಖಾನೆಗೆ ಹೋಗಿದ್ದರು. ಈ ವೇಳೆ ಕಾರ್ಖಾನೆಯಲ್ಲಿ ಧಿಡೀರನೆ ಬೆಂಕಿ ಹೊತ್ತಿಕೊಂಡಿದೆ. ಕೂಡಲೆ ಐವರು ಹೊರಗೆ ಓಡಿ ಬಂದರೂ, ಬೆಂಕಿ ತಗುಲಿತ್ತು. ಗಾಯಾಳುಗಳು ಆಸ್ಪತ್ರೆಯಲ್ಲಿ ಜೀವನ್ಮರಣದ ಹೋರಾಟ ನಡೆಸುತ್ತಿದ್ದಾರೆ.

FSL ತಜ್ಞರ ವರದಿ ಬಳಿಕ ಘಟನೆಗೆ ಸ್ಪಷ್ಟ ಕಾರಣ ಗೊತ್ತಾಗಲಿದೆ: ಎಸ್‌ಪಿ ಕಾರ್ತಿಕ್‌ ರೆಡ್ಡಿ

ಘಟನಾ ಸ್ಥಳದಲ್ಲಿ ರಾಮನಗರ ಎಸ್‌ಪಿ ಕಾರ್ತಿಕ್‌ ರೆಡ್ಡಿ ಪ್ರತಿಕ್ರಿಯಿಸಿದ್ದು, ರಾಮಸಂದ್ರದಲ್ಲಿ ಸಂಜೆ 5 ಗಂಟೆಗೆ ಅಗ್ನಿ ಅವಘಡ ಸಂಭವಿಸಿದೆ. ಸಲೀಂ ಸೇರಿ ಮೂವರು ಮೃತಪಟ್ಟಿದ್ದಾರೆ. ಗಾಯಾಳು ಐವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.

FSL ತಜ್ಞರ ವರದಿ ಬಳಿಕ ಘಟನೆಗೆ ಸ್ಪಷ್ಟ ಕಾರಣ ಗೊತ್ತಾಗಲಿದೆ. ಗ್ರಾಮ ಪಂಚಾಯಿತಿನಿಂದ ಅನುಮತಿ ಪಡೆದಿದ್ದ ಬಗ್ಗೆ ಪರಿಶೀಲಿಸ್ತಿದ್ದೇವೆ. ವಿಠಲ್ ಎಂಬುವವರ ಜಾಗದಲ್ಲಿ ಸಲೀಂ ಗೋಡೌನ್ ನಡೆಸುತ್ತಿದ್ದ. ಕಳೆದ ಒಂದು ತಿಂಗಳ ಹಿಂದಷ್ಟೆ ಗೋದಾಮು ಆರಂಭಿಸಿದ್ದರು ಎಂದು ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:46 am, Mon, 19 February 24

Follow Us
Syed Nizamuddin
Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!