20 ದಿನ ಸಾವು ಬದುಕಿನ ನಡುವೆ ಹೋರಾಡಿದರೂ ಉಳಿಯಲಿಲ್ಲ ಜೀವ! ಚಿಕಿತ್ಸೆ ಫಲಿಸದೆ ಸಾವು

ಬೆಂಗಳೂರಿನ ಬಸವೇಶ್ವರನಗರದಲ್ಲಿ ಮಗಳ ಮದುವೆಗೆ ನಿರಾಕರಿಸಿದ್ದಕ್ಕೆ ತಾಯಿ ಗೀತಾ ಮೇಲೆ ಯುವಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ. ಗಂಭೀರವಾಗಿ ಗಾಯಗೊಂಡಿದ್ದ ಗೀತಾ ವಿಕ್ಟೋರಿಯಾ ಆಸ್ಪತ್ರೆಯಲ್ಲಿ 20 ದಿನ ಸಾವು ನೋವಿನೊಂದಿಗಿನ ಹೋರಾಟದ ನಂತರ ಕೊನೆಯುಸಿರೆಳೆದಿದ್ದಾರೆ. ಆರೋಪಿ ಮುತ್ತುವನ್ನು ಬಂಧಿಸಲಾಗಿದ್ದು, ಕೊಲೆಯತ್ನ ಪ್ರಕರಣ ಇದೀಗ ಕೊಲೆ ಪ್ರಕರಣವಾಗಿ ಮಾರ್ಪಟ್ಟಿದೆ.

20 ದಿನ ಸಾವು ಬದುಕಿನ ನಡುವೆ ಹೋರಾಡಿದರೂ ಉಳಿಯಲಿಲ್ಲ ಜೀವ! ಚಿಕಿತ್ಸೆ ಫಲಿಸದೆ ಸಾವು
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ್ದ ಕೇಸ್; ಚಿಕಿತ್ಸೆ ಫಲಿಸದೆ ತಾಯಿ ಗೀತಾ ಸಾವು
Edited By:

Updated on: Jan 07, 2026 | 11:27 AM

ಬೆಂಗಳೂರು, ಜನವರಿ 07: ಮಗಳನ್ನು ಮದುವೆ ಮಾಡಿಕೊಡಲು ನಿರಾಕರಿಸಿದ್ದಕ್ಕೆ ಯುವತಿಯ ತಾಯಿ ಗೀತಾಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಭೀಕರ ಘಟನೆ ಬೆಂಗಳೂರಿನ ಬಸವೇಶ್ವರನಗರದ ಭೋವಿ ಕಾಲೋನಿಯಲ್ಲಿ ನಡೆದಿತ್ತು. ತೀವ್ರವಾಗಿ ಗಾಯಗೊಂಡಿದ್ದ ಆಕೆಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.  ನಿನ್ನೆ ರಾತ್ರಿ ಚಿಕಿತ್ಸೆ ಫಲಿಸದೆ ಗೀತಾ ಕೊನೆಯುಸಿರೆಳೆದಿದ್ದಾರೆ.

20 ದಿನಗಳಿಂದ ಸಾವು ಬದುಕಿನ ನಡುವೆ ಹೋರಾಟ

ಗೀತಾ ಪ್ರಾವಿಷನ್ ಸ್ಟೋರ್ ನಡೆಸುತ್ತಿದ್ದು, ಅದೇ ಪ್ರದೇಶದಲ್ಲಿ ಟೀ ಸ್ಟಾಲ್ ಇಟ್ಟುಕೊಂಡಿದ್ದ ಮುತ್ತು ಎಂಬ ಯುವಕನೊಂದಿಗೆ ಸಲುಗೆಯಿಂದಿದ್ದರು. ಒಬ್ಬರಿಗೊಬ್ಬರು ಪರಿಚಯವಾದ ಬಳಿಕ, ಗೀತಾ, ಆಕೆಯ 19 ವರ್ಷದ ಮಗಳು ಹಾಗೂ ಮುತ್ತು ಒಂದೇ ಮನೆಯಲ್ಲಿ ವಾಸವಿದ್ದರು. ಈ ವೇಳೆ ಯುವತಿಯನ್ನು ಮದುವೆ ಮಾಡಿಕೊಡುವಂತೆ ಮುತ್ತು ಗೀತಾಳ ಮೇಲೆ ಒತ್ತಡ ಹೇರುತ್ತಿದ್ದ ಎಂದು ಆರೋಪಿಸಲಾಗಿತ್ತು. ಆದರೆ ಗೀತಾ ಇದಕ್ಕೆ ಸ್ಪಷ್ಟವಾಗಿ ನಿರಾಕರಿಸಿದ್ದಕ್ಕೆ ಕೋಪಗೊಂಡ ಯುವಕ ಆಕೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ. ಘಟನೆ ನಂತರ ಆರೋಪಿ ಪರಾರಿಯಾಗಿದ್ದ. ತೀವ್ರವಾಗಿ ಗಾಯಗೊಂಡ ಗೀತಾಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು.

ಇದನ್ನೂ ಓದಿ ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!

ಈ ಕುರಿತು ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿತ್ತು. ಅತ್ತ ಶೇ.50ಕ್ಕಿಂತ ಹೆಚ್ಚು ಸುಟ್ಟಗಾಯಗಳಿಂದ ಬಳಲುತ್ತಿದ್ದ ಗೀತಾ, 20 ದಿನಗಳ ಕಾಲ ಸಾವು ಬದುಕಿನ ಹೋರಾಟ ನಡೆಸುತ್ತಿದ್ದರು. ನಿನ್ನೆ ರಾತ್ರಿ ಚಿಕಿತ್ಸೆ ಫಲಿಸದೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸದ್ಯ ಕೊಲೆಯತ್ನ ಪ್ರಕರಣವನ್ನು ಕೊಲೆ ಕೇಸ್ ಆಗಿ ಪರಿವರ್ತಿಸಿ ತನಿಖೆ ಮುಂದುವರೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us