AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲಾ-ಕಾಲೇಜು ಸುತ್ತಮುತ್ತಲಿನ ಅಂಗಡಿಗಳ ಮೇಲೆ ಪೊಲೀಸ್​ ದಾಳಿ; ಸಿಗರೇಟ್ ಸೇಲ್ ಮಾಡ್ತಿದ್ದ 19 ಮಾಲೀಕರ ವಿರುದ್ಧ ಕೇಸ್

ಇತ್ತೀಚೆಗೆ ಶಾಲೆಗಳಿಂದ (Schools) ನೂರು ಮೀಟರ್ ವ್ಯಾಪ್ತಿಯಲ್ಲಿ ಸಿಗರೇಟ್ ಮಾರಾಟ ನಿಷೇಧಿಸಲಾಗಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿದರೆ, ಅಂತಹವರ ವಿರುದ್ಧ ದಂಡದ ಪ್ರಮಾಣ 100 ರೂ. ರಿಂದ 1000 ರೂ. ಗೆ ಏರಿಕೆ ಮಾಡಲಾಗಿತ್ತು. ಅದರ ಬೆನ್ನಲ್ಲೆ ಇಂದು(ಮಾ.28) ದಕ್ಷಿಣ ವಿಭಾಗದ ಪೊಲೀಸರು, ಶಾಲಾ-ಕಾಲೇಜುಗಳ ಅಕ್ಕಪಕ್ಕದ ಕಾಂಡಿಮೆಂಟ್ಸ್ ಹಾಗೂ ಬೀಡಾ ಸ್ಟಾಲ್‌ಗಳ ಮೇಲೆ ದಾಳಿ ನಡೆಸಿದ್ದಾರೆ.

ಶಾಲಾ-ಕಾಲೇಜು ಸುತ್ತಮುತ್ತಲಿನ ಅಂಗಡಿಗಳ ಮೇಲೆ ಪೊಲೀಸ್​ ದಾಳಿ; ಸಿಗರೇಟ್ ಸೇಲ್ ಮಾಡ್ತಿದ್ದ 19 ಮಾಲೀಕರ ವಿರುದ್ಧ ಕೇಸ್
ಶಾಲಾ-ಕಾಲೇಜು ಸುತ್ತಮುತ್ತಲಿನ ಅಂಗಡಿಗಳ ಮೇಲೆ ಪೊಲೀಸ್​ ದಾಳಿ
ಜಗದೀಶ ಬಿ.
| Edited By: ಕಿರಣ್ ಹನುಮಂತ್​ ಮಾದಾರ್|

Updated on: Mar 28, 2024 | 9:35 PM

Share

ಬೆಂಗಳೂರು, ಮಾ.28: ಇತ್ತೀಚೆಗೆ ಸಿಗರೇಟ್​​ (cigarette)ಮತ್ತು ಇತರೆ ತಂಬಾಕು (Tobacco) ಉತ್ಪನ್ನಗಳ ಕುರಿತ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರವಾಗಿತ್ತು. ಈ ಹಿನ್ನೆಲೆಯಲ್ಲಿ ಶಾಲೆಗಳಿಂದ (Schools) ನೂರು ಮೀಟರ್ ವ್ಯಾಪ್ತಿಯಲ್ಲಿ ಸಿಗರೇಟ್ ಮಾರಾಟ ನಿಷೇಧಿಸಲಾಗಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿದರೆ, ಅಂತಹವರ ವಿರುದ್ಧ ದಂಡದ ಪ್ರಮಾಣ 100 ರೂ. ರಿಂದ 1000 ರೂ. ಗೆ ಏರಿಕೆ ಮಾಡಲಾಗಿತ್ತು. ಇದರ ಬೆನ್ನಲ್ಲೇ ಇದೀಗ ಶಾಲಾ-ಕಾಲೇಜುಗಳ ಅಕ್ಕಪಕ್ಕದ ಕಾಂಡಿಮೆಂಟ್ಸ್ ಹಾಗೂ ಬೀಡಾ ಸ್ಟಾಲ್‌ಗಳ ಮೇಲೆ ದಕ್ಷಿಣ ವಿಭಾಗದ ಪೊಲೀಸರ ದಾಳಿ ನಡೆಸಿದ್ದಾರೆ.

ನಿಯಮ ಬಾಹಿರವಾಗಿ ಸಿಗರೇಟ್ ಮಾರಾಟ ಮಾಡ್ತಿದ್ದವರ ವಿರುದ್ದ ಕೇಸ್​ ದಾಖಲು

ಈ ವೇಳೆ ದಕ್ಷಿಣ ವಿಭಾಗದ 243 ಅಂಗಡಿಗಳಲ್ಲಿ ಮಾದಕ ವಸ್ತು ಮಾರಾಟದ ಕುರಿತು ಪರಿಶೀಲನೆ ನಡೆಸಿದ್ದು, ನಿಯಮ ಬಾಹಿರವಾಗಿ ಸಿಗರೇಟ್ ಮಾರಾಟ ಮಾಡುತ್ತಿದ್ದ 19 ಅಂಗಡಿ ಮಾಲೀಕರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಜೊತೆಗೆ 78 ಅಂಗಡಿ ಮಾಲೀಕರಿಗೆ ದಕ್ಷಿಣ ವಿಭಾಗದ ಪೊಲೀಸರು ದಂಡ ಹಾಕಿದ್ದಾರೆ.

ಇದನ್ನೂ ಓದಿ:ಅಕ್ರಮ ಮರಳುಗಾರಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ: 7.50 ಲಕ್ಷ ರೂ ಮೌಲ್ಯದ ಮರಳು ಜಪ್ತಿ

ವಿಧೇಯಕ ಮಂಡಿಸಿದ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

2024ರ ಸಿಗರೇಟ್ ಸೇವನೆ ಮತ್ತು ಜಾಹೀರಾತು ನಿಷೇಧ, ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆ ಮತ್ತು ಸರಬರಾಜು ತಿದ್ದುಪಡಿ ವಿಧೇಯಕವನ್ನು ಸಚಿವ ದಿನೇಶ್​ ಗುಂಡೂರಾವ್​ ಮಂಡನೆ ಮಾಡಿದ್ದರು. ಬಳಿಕ ಮಾತನಾಡಿದ್ದ ಅವರು ,‘ಹುಕ್ಕಾಬಾರ್‌ಗಳನ್ನು ನಿಷೇಧ ಮಾಡಲಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಸಿಗರೇಟ್ ಸೇದಬಾರದು ಅಂತಿದೆ. ಆದರೆ, ಅನೇಕ ಬಾರ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ಹುಕ್ಕಾ ಬಾರ್‌ಗಳನ್ನು ಆರಂಭಿಸಿದ್ದಾರೆ. ಸಿಗರೇಟ್ ಸೇದೋದೇ ತಪ್ಪು ಅಂತ ಹೇಳಿದರೆ, ಮತ್ತೊಂದು ರೂಪದಲ್ಲಿ ತಂದಿದ್ದಾರೆ. ಇದಕ್ಕೆ ಕಡಿವಾಣ ಹಾಕಲು ಮುಂದಾಗಿದ್ದೇವೆ ಎಂದು ಹೇಳಿದ್ದರು. ಜೊತೆಗೆ ಕಾನೂನಿನಲ್ಲಿ 18 ವರ್ಷದೊಳಗಿನವರಿಗೆ ಮಾರಬಾರದು ಎಂದು ಇತ್ತು. ಅದನ್ನು 21 ವರ್ಷಕ್ಕೆ  ಏರಿಸಲಾಗಿದೆ. ಶಾಲಾ – ಕಾಲೇಜುಗಳ ಮೂರು ಮೀಟರ್ ಒಳಗೆ ಮಾರಾಟ ಮಾಡಬಾರದು ಅಂತ ನಿಯಮ ಇದೆ. ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇದುವವರಿಗೆ ಇನ್ನೂರು ದಂಡ ಇತ್ತು. ಈಗ ಸಿಗರೇಟ್ ಸೇದುವವರಿಗೆ 1000 ರೂ. ದಂಡ ಹಾಕಲಾಗುವುದು ಎಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ