AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರಮಂಗಲ ಪಿಜಿಯಲ್ಲಿ ಯುವತಿ ಕೊಲೆ ಬಳಿಕ ಎಚ್ಚೆತ್ತ ಪೊಲೀಸರು, ಬೆಂಗಳೂರು ಪಿಜಿಗಳಿಗೆ ಕಠಿಣ ಮಾರ್ಗಸೂಚಿ

ಮಹಿಳಾ ಪಿಜಿಗಳನ್ನು ನಡೆಸುವವರು ಅಗತ್ಯ ಭದ್ರತೆ, ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಾದದ್ದು ಅತ್ಯಗತ್ಯ. ಹೀಗಾಗಿಯೇ ಕೊರಮಂಗಲದ ಪಿಜಿಯಲ್ಲಿ ಯುವತಿಯ ಕೊಲೆಯಾದ ಪ್ರಕರಣದ ಬಳಿಕ ಎಚ್ಚೆತ್ತುಕೊಂಡಿರುವ ಬೆಂಗಳೂರು ಪೊಲೀಸರು ಪಿಜಿಗಳ ವ್ಯವಸ್ಥೆ ಬಗ್ಗೆ ಪರಿಶೀಲನೆಗೆ ಮುಂದಾಗಿದ್ದಾರೆ. ಜತೆಗೆ ಕಠಿಣ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ. ಹೊಸ ಮಾರ್ಗಸೂಚಿಯಲ್ಲಿ ಏನೇನಿದೆ ಎಂಬ ವಿವರ ಇಲ್ಲಿದೆ.

ಕೊರಮಂಗಲ ಪಿಜಿಯಲ್ಲಿ ಯುವತಿ ಕೊಲೆ ಬಳಿಕ ಎಚ್ಚೆತ್ತ ಪೊಲೀಸರು, ಬೆಂಗಳೂರು ಪಿಜಿಗಳಿಗೆ ಕಠಿಣ ಮಾರ್ಗಸೂಚಿ
ಸಾಂದರ್ಭಿಕ ಚಿತ್ರ
Jagadish PB
| Updated By: Ganapathi Sharma|

Updated on: Aug 01, 2024 | 8:13 AM

Share

ಬೆಂಗಳೂರು, ಆಗಸ್ಟ್ 1: ಕೊರಮಂಗಲದಲ್ಲಿ ನಡೆದಿದ್ದ ಕೃತಿ ಕುಮಾರಿ ಕೊಲೆ ಪ್ರಕರಣ ಇಡಿ ಬೆಂಗಳೂರನ್ನೇ ಬೆಚ್ಚಿ ಬೀಳಿಸಿತ್ತು. ಹಂತಕನ ಕ್ರೌರ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಆ ದೃಶ್ಯ ಎಂಥರ ಎದೆಯನ್ನೂ ಝಲ್ ಎನ್ನಿಸುವಂತಿತ್ತು. ಆದರೆ, ಇದರ ನಡುವೆ, ಅದೊಂದು ಅವ್ಯವಸ್ಥೆ ಆ ದೃಶ್ಯದ ಮುಖಾಂತರ ಕಂಡು ಬಂದಿತ್ತು. ಏನೆಂದರೆ, ಮಹಿಳಾ ಪಿಜಿಗೆ ಅಷ್ಟು ಸಲಿಸಾಗಿ ವ್ಯಕ್ತಿ ಹೇಗೆ ಒಳಬರಲು ಸಾಧ್ಯ? ಅಲ್ಲಿನ ಯುವತಿಯರ ಭದ್ರತೆ ಹೇಗಿತ್ತು ಎಂಬುದು. ಈ ಪ್ರಶ್ನೆ ಈಗ ನಗರ ಪೊಲೀಸ್ ಆಯುಕ್ತರಿಂದ ಬಂದಿದೆ. ಕೇವಲ ಒಂದು ಪಿಜಿಯಲ್ಲ, ನಗರದ ಎಲ್ಲಾ ಪಿಜಿಗಳ ಡೇಟಾ ಸಂಗ್ರಹಿಸುವಂತೆ ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಸೂಚನೆ ನೀಡಿದ್ದಾರೆ.

ನಗರದ ಎಲ್ಲಾ ಠಾಣೆಯ ಪೊಲೀಸ್ ಇನ್ಸ್​​​ಪೆಕ್ಟರ್​​ಗಳಿಗೆ ನಗರ ಪೊಲೀಸ್ ಆಯುಕ್ತ ದಯಾನಂದ್ ಸೂಚನೆ‌ ನೀಡಿದ್ದು, ಪ್ರತಿಯೊಂದು ಪಿಜಿಯ ಮಾಹಿತಿ ಪಡೆಯಲು ಮುಂದಾಗಿದ್ದಾರೆ. ಎಲ್ಲಾ ಪಿಜಿಗಳ ಗುರುತಿಸುವುದರ ಜೊತೆಗೆ ಪಿಜಿಯವರು ಪಾಲಿಸಬೇಕಾದ ಹಾಗೂ ಪೊಲೀಸರು ಕ್ರಮಕೈಗೊಳ್ಳಬೇಕಾದ ಒಟ್ಟು 13 ಅಂಶಗಳ ಮಾರ್ಗಸೂಚಿ ನೀಡಿದ್ದಾರೆ.

ಪಿಜಿಗಳಿಗೆ ಮಾರ್ಗಸೂಚಿ

  • ಪಿಜಿಗಳಲ್ಲಿ ಮುಖ್ಯವಾಗಿ ಸಿಸಿಟಿವಿ ಅಳವಡಿಸಬೇಕು.
  • ಪಿಜಿಗಳಲ್ಲಿ ಸೆಕ್ಯೂರಿಟಿ ಗಾರ್ಡ್ ನಿಯೋಜನೆ ಮಾಡಬೇಕು.
  • ಪಿಜಿಯಲ್ಲಿ ವಾಸ ಮಾಡುವ ಪ್ರತಿಯೊಬ್ಬರ ಡೇಟಾ ಕಲೆಕ್ಟ್ ಮಾಡಬೇಕು.
  • ಪಿಜಿಯಲ್ಲಿ ವಾಸಿಸುವವರ ಕೆವೈಸಿ ಮಾಡಿಸಬೇಕು.
  • ಹೊಸದಾಗಿ ಜಾರಿಗೆ ತಂದಿರೋ ಸಾಫ್ಟ್​​ವೇರ್​​ನಲ್ಲಿ ಎಲ್ಲಾ ಮಾಹಿತಿ ಅಪ್ಲೋಡ್ ಮಾಡಬೇಕು.
  • ಮಾಲೀಕರು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು.
  • ಆಹಾರದ ಗುಣಮಟ್ಟದ ಬಗ್ಗೆ ಮಾಲೀಕರು ಗಮನಹರಿಸಬೇಕು.
  • ಪಿಜಿಗಳ ಟ್ರೇಡ್ ಲೆಸೆನ್ಸ್​​ಗಳ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕಬೇಕು.
  • ಅನಧಿಕೃತ ಎಂದು ಕಂಡು ಬಂದ್ರೆ ಬಿಬಿಎಂಪಿಗೆ ಮಾಹಿತಿ ನೀಡಬೇಕು.
  • ಅಕ್ರಮ ,ಅನೈತಿಕ ಚಟುವಟಿಕೆ ನಡೆಯುತ್ತಿದ್ರೆ, ಮಾಹಿತಿ ಕಲೆ ಹಾಕಬೇಕು.
  • ಬಿಬಿಎಂಪಿ ಅಧಿಕಾರಿಗಳ ಜೊತೆ ಸೇರಿ ಕೇಸ್ ದಾಖಲಿಸುವುದು.
  • ತಿಂಗಳಿಗೊಮ್ಮೆ ಆಯಾ ಠಾಣಾ ವ್ಯಾಪ್ತಿಯಲ್ಲಿ ಪಿಜಿಗಳ ಪರಿಶೀಲನೆ ಮಾಡಬೇಕು.
  • ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು.

ಬೆಂಗಳೂರಿನಲ್ಲಿ ಹೆಚ್ಚಿವೆ ಅನಧಿಕೃತ ಪಿಜಿಗಳು

ನಗರ ಪೊಲೀಸ್ ಆಯುಕ್ತರ ಸೂಚನೆ ಮೇರೆಗೆ ಪರಿಶೀಲನೆಗೆ ಮುಂದಾದ ಪೊಲೀಸರಿಗೆ ನಗರದಲ್ಲಿ ಅನಧಿಕೃತ ಪಿಜಿಗಳು ಹೆಚ್ಚಾಗಿರುವುದು ಗೊತ್ತಾಗಿದೆ. ಇದು ಬಿಬಿಎಂಪಿಯ ಸಂಬಂಧಪಟ್ಟ ಅಧಿಕಾರಿಗಳ ನಿರ್ಲಕ್ಷ್ಯದಿಂದ ಹುಟ್ಟಿಕೊಂಡಿರುವ ಪಿಜಿಗಳಾಗಿದ್ದು, ಇದರ ಸಂಬಂಧ ಬಿಬಿಎಂಪಿಗೆ ಮಾಹಿತಿ ನೀಡಲು ಪೊಲೀಸರು ಮುಂದಾಗಿದ್ದಾರೆ.

ಇದನ್ನೂ ಓದಿ: ಕೋರಮಂಗಲದ ಪಿಜಿಯಲ್ಲಿ ಯುವತಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದ ಆರೋಪಿ ಮಧ್ಯ ಪ್ರದೇಶದಲ್ಲಿ ಅರೆಸ್ಟ್

ಒಟ್ಟಾರೆ ಪೊಲೀಸರ ಈ ಹೊಸ ನಿಯಮಗಳು ಮುಂದಿನ ದಿನಗಳ ಯಾವ ರೀತಿ ಜಾರಿಯಾಗಲಿದೆ? ಪಿಜಿಗಳಲ್ಲಿ ಸುರಕ್ಷತಾ ಕ್ರಮ ಎಷ್ಟರ ಮಟ್ಟಿಗೆ ಇರಲಿದೆ ಎಂಬುದನ್ನು ಮುಂದಿನ ದಿನಗಳಲ್ಲಿ ಕಾದು ನೋಡಬೇಕಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ