AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ; ತಿಮಿಂಗಿಲ ವಾಂತಿ ವಶ, ಅಫೀಮು ಮಾರಾಟ ಮಾಡ್ತಿದ್ದ ಆರೋಪಿಗಳು ಅರೆಸ್ಟ್

ಪರಪ್ಪನ ಅಗ್ರಹಾರ ಪೊಲೀಸರು ಕಾರ್ಯಾಚರಣೆ ನಡೆಸಿ 5 ಕೋಟಿ ರೂಪಾಯಿ ಬೆಲೆ ಬಾಳುವ 5 kg ತಿಮಿಂಗಿಲ ವಾಂತಿಯನ್ನು(ಅಂಬರ್ ಗ್ರೀಸ್) ವಶಕ್ಕೆ ಪಡೆದಿದ್ದು ಮಾರಾಟ ಮಾಡ್ತಿದ್ದ ತಮಿಳುನಾಡು ಮೂಲದ ಶಾಕಿರ್ನನ್ನು ಬಂಧಿಸಿದ್ದಾರೆ.

ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ; ತಿಮಿಂಗಿಲ ವಾಂತಿ ವಶ, ಅಫೀಮು ಮಾರಾಟ ಮಾಡ್ತಿದ್ದ ಆರೋಪಿಗಳು ಅರೆಸ್ಟ್
ಆಗ್ನೇಯ ವಿಭಾಗದ ಡಿಸಿಪಿ ಶ್ರೀನಾಥ್
TV9 Web
| Edited By: |

Updated on: Aug 22, 2021 | 12:32 PM

Share

ಬೆಂಗಳೂರು: ಆಗ್ನೇಯ ವಿಭಾಗದ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು ಅನೇಕ ಪ್ರಕರಣಗಳನ್ನು ಭೇದಿಸಿ ಆರೋಪಿಗಳನ್ನು ಸೆರೆ ಹಿಡಿದಿದ್ದಾರೆ. ಈ ಬಗ್ಗೆ ಆಗ್ನೇಯ ವಿಭಾಗದ ಡಿಸಿಪಿ ಶ್ರೀನಾಥ್ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.

ಪರಪ್ಪನ ಅಗ್ರಹಾರ ಪೊಲೀಸರು ಕಾರ್ಯಾಚರಣೆ ನಡೆಸಿ 5 ಕೋಟಿ ರೂಪಾಯಿ ಬೆಲೆ ಬಾಳುವ 5 kg ತಿಮಿಂಗಿಲ ವಾಂತಿಯನ್ನು(ಅಂಬರ್ ಗ್ರೀಸ್) ವಶಕ್ಕೆ ಪಡೆದಿದ್ದು ಮಾರಾಟ ಮಾಡ್ತಿದ್ದ ತಮಿಳುನಾಡು ಮೂಲದ ಶಾಕಿರ್ನನ್ನು ಬಂಧಿಸಿದ್ದಾರೆ.

ಅಲ್ಲದೆ ರಾಜಸ್ಥಾನದಿಂದ ಅಫೀಮು ತಂದು‌ ಮಾರಾಟ ಮಾಡ್ತಿದ್ದ ರಾಜಸ್ಥಾನದ ಅಮರ್ ರಾಮ್, ಮೋತಿಲಾಲ್ನನ್ನು ಬಂಧಿಸಿದ್ದಾರೆ. ಇವರಿಂದ ಸುಮಾರು 1 ಕೆ.ಜಿ ಅಫೀಮು ಜಪ್ತಿ ಮಾಡಲಾಗಿದೆ. ಆರೋಪಿಗಳು ಐಟಿ ಬಿಟಿ ಕಂಪನಿ ಉದ್ಯೋಗಿಗಳಿಗೆ ಅಫೀಮು ಮಾರಾಟ ಮಾಡುತ್ತಿದ್ದರು. ಹಾಗೂ ಕುಖ್ಯಾತ ಬೈಕ್ ಕಳ್ಳನನ್ನೂ ಸಹ ಬಂಧಿಸಿ ಬಂಧಿತನಿಂದ 3 ಲಕ್ಷ ರೂ ಮೌಲ್ಯದ ಐದು ಬೈಕ್ ವಶಕ್ಕೆ ಪಡೆದಿದ್ದಾರೆ. ವೀರಭದ್ರ ಅಲಿಯಾಸ್ ಸುಬ್ರಮಣಿ ಬಂಧಿತ ಆರೋಪಿ.

ಸುದ್ದಗುಂಟೆಪಾಳ್ಯ ಪೊಲೀಸರಿಂದ ಕುಖ್ಯಾತ ಮನೆಗಳ್ಳ ಮಂಜನಾಥ್ ಬಂಧನವಾಗಿದೆ. ಆರೋಪಿಯಿಂದ 35 ಲಕ್ಷ ರೂಪಾಯಿ ಮೌಲ್ಯದ 700 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ. ಎಲೆಕ್ಟ್ರಾನಿಕ್‌ಸಿಟಿ, ಹುಳಿಮಾವು ಪೊಲೀಸರ ಕಾರ್ಯಚರಣೆ ನಡೆಸಿ ನಾಗೇಂದ್ರನನ್ನು ಬಂಧಿಸಿದ್ದು 1.5 ಕೋಟಿ ಮೌಲ್ಯದ ಸುಮಾರು 206 ಕೆಜಿ ಗಾಂಜಾ ವಶಕ್ಕೆ ಪಡೆದಿದ್ದಾರೆ. ಬೇಗೂರು ಪೊಲೀಸರು ದೀಪಕ್, ಮಾರಿಮುತ್ತು ಎಂಬ ಕುಖ್ಯಾತ ಬೈಕ್ ಕಳ್ಳರನ್ನು ಬಂಧಿಸಿದ್ದಾರೆ. ಇವರು ಹ್ಯಾಂಡ್ ಲಾಕ್ ಮುರಿದು ಬೈಕ್ ಕಳ್ಳತನ ಮಾಡ್ತಿದ್ದರು. ಹುಳಿಮಾವು, ಜೆಪಿನಗರ, ಮೈಕೋಲೇಔಟ್ ಸೇರಿ ಐದು ಠಾಣೆಗೆ ಬೇಕಾಗಿದ್ದ ಆರೋಪಿಗಳು.

ಇದನ್ನೂ ಓದಿ: ಬೆಂಗಳೂರು-ಮೈಸೂರು 6 ಪಥದ ರಸ್ತೆ ನಿರ್ಮಾಣ ವಿಚಾರ; ಸಂಸದ ಪ್ರತಾಪ್ ಸಿಂಹಗೆ ಹೆಚ್.ವಿಶ್ವನಾಥ್ ಟಾಂಗ್

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್