AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಲಿಸುತ್ತಿದ್ದ ಕಾರನ್ನೇ ಒದ್ದು ಉದ್ಧಟತನ ಮೆರೆದ ಯುವಕರು, ವಿಡಿಯೋ ವೈರಲ್

ಮಾರೇನ ಹಳ್ಳಿ ಫ್ಲೈ ಓವರ್ ಮೇಲೆ ಬೈಕ್​ನಲ್ಲಿ ಬಂದ ಕೆಲ ಪುಂಡರು ಚಲಿಸುತ್ತಿದ್ದ ಕಾರನ್ನು ಕಾಲಿನಿಂದ ಒದ್ದು ಉದ್ಧಟತನ ಮೆರೆದಿದ್ದರು. ಸದ್ಯ ಈ ಪುಂಡರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋಗೆ ಅನೇಕ ಪ್ರತಿಕ್ರಿಯೆಗಳು ಬಂದಿವೆ.

ಚಲಿಸುತ್ತಿದ್ದ ಕಾರನ್ನೇ ಒದ್ದು ಉದ್ಧಟತನ ಮೆರೆದ ಯುವಕರು, ವಿಡಿಯೋ ವೈರಲ್
ಚಲಿಸುತ್ತಿದ್ದ ಕಾರನ್ನೇ ಒದ್ದು ಉದ್ಧಟತನ ಮೆರೆದ ಯುವಕರು, ವಿಡಿಯೋ ವೈರಲ್
ಆಯೇಷಾ ಬಾನು
|

Updated on: Jul 29, 2024 | 11:10 AM

Share

ಬೆಂಗಳೂರು, ಜುಲೈ.29: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪುಂಡರ ಹಾವಳಿ ಹೆಚ್ಚಾಗಿದೆ. ಬೈಕ್ ವೀಲಿಂಗ್ ಮಾಡೋದು, ಹೆದ್ದಾರಿಗಳಲ್ಲಿ ಸವಾರರನ್ನು ಚೇಡಿಸುವಂತಹ ಪ್ರಕರಣಗಳು ನಡೆಯುತ್ತಲೇ ಇರುತ್ತವೆ. ಸದ್ಯ ಇದೀಗ ಮಾರೇನಹಳ್ಳಿ ಫ್ಲೈ ಓವರ್ ಮೇಲೆ ಬೈಕ್‌ಗಳಲ್ಲಿ ಬಂದ ಯುವಕರ ಗುಂಪು ಕಾರೊಂದನ್ನು ಟಾರ್ಗೆಟ್​ ಮಾಡಿ ಆಕ್ರಮಣಕಾರಿಯಾಗಿ ವರ್ತನೆ ಮಾಡಿದ್ದ ಪುಂಡರನ್ನು ಪೊಲೀಸರು (Bengaluru Police) ಬಂಧಿಸಿ ಎಡೆಮುರಿ ಕಟ್ಟಿದ್ದಾರೆ.

ಬೈಕ್​ನಲ್ಲಿ ಬಂದ ಇಬ್ಬರು ಯುವಕರು ಚಲಿಸುತ್ತಿದ್ದ ಕಾರೊಂದನ್ನು ಟಾರ್ಗೆಟ್ ಮಾಡಿ ಕಾರು ಚಾಲಕನಿಗೆ ಬೈಯುತ್ತ, ಹೆದರಿಸುತ್ತ ಕಾರನ್ನು ಕಾಲಿನಿಂದ ಹೊಡೆದು ಆಕ್ರಮಣಕಾರಿಯಾಗಿ ವರ್ತಿಸಿದ್ದಾರೆ. ಅಲ್ಲದೆ ಮತ್ತೊಂದು ಬೈಕ್‌ನಲ್ಲಿ ಬಂದ ಮೂವರು ಯುವಕರು ಕೂಡ ಕಾರಿಗೆ ಡಿಕ್ಕಿ ಹೊಡೆಯಲು ಯತ್ನಿಸಿ ಚಾಲಕನಿಗೆ ಹೆದರಿಸಿದ ವಿಡಿಯೋವನ್ನು ಪೋಸ್ಟ್ ಮಾಡಿದ ಬೆಂಗಳೂರು ಪೊಲೀಸರು, ಈ ಪುಂಡರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿಗರನ್ನು ಕರೆಯಲು ಬರುತ್ತಿರುವ ಮಾಲ್ಡೀವ್ಸ್​ ಪ್ರವಾಸೋದ್ಯಮ ಸಚಿವ ಇಬ್ರಾಹಿಂ

“ರಸ್ತೆ ಮೇಲೆ ಗಾಡಿ ಓಡಿಸುತ್ತಾ ಸಿಕ್ಕ ಥ್ರಿಲ್ ಠಾಣೆಗೆ ಬಂದ ತಕ್ಷಣವೇ ಬದಲಾಗುತ್ತೆ! ಸ್ಟಂಟ್‌ಗಳೆಲ್ಲ ಸಿನಿಮಾಗಳಲ್ಲಿ ಚನ್ನಾಗಿರುತ್ತವೆ, ನಮ್ಮ ರಸ್ತೆಗಳ ಮೇಲಲ್ಲ!” ಎಂದು ಶೀರ್ಷಿಕೆ ನೀಡಿ ಬೆಂಗಳೂರು ಪೊಲೀಸರು ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಫೋಸ್ಟ್ ಮಾಡಿದ್ದಾರೆ.

ಈ ವೀಡಿಯೊವನ್ನು ಜುಲೈ 26 ರಂದು ಪೋಸ್ಟ್ ಮಾಡಲಾಗಿದ್ದು ನಾಲ್ಕು ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದಿದೆ. ಅನೇಕ ಮಂದಿ ಇದನ್ನು ಶೇರ್ ಮಾಡುತ್ತಿದ್ದು 11,000 ಲೈಕ್‌ಗಳು ಬಂದಿವೆ. ಜೊತೆಗೆ ಅನೇಕರು ಈ ಪೋಸ್ಟ್‌ಗೆ ಕಾಮೆಂಟ್‌ ಮಾಡಿ ಪೊಲೀಸರಿಗೆ ಧನ್ಯವಾದ ತಿಳಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್