AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಲಿಸುತ್ತಿದ್ದ ಕಾರನ್ನೇ ಒದ್ದು ಉದ್ಧಟತನ ಮೆರೆದ ಯುವಕರು, ವಿಡಿಯೋ ವೈರಲ್

ಮಾರೇನ ಹಳ್ಳಿ ಫ್ಲೈ ಓವರ್ ಮೇಲೆ ಬೈಕ್​ನಲ್ಲಿ ಬಂದ ಕೆಲ ಪುಂಡರು ಚಲಿಸುತ್ತಿದ್ದ ಕಾರನ್ನು ಕಾಲಿನಿಂದ ಒದ್ದು ಉದ್ಧಟತನ ಮೆರೆದಿದ್ದರು. ಸದ್ಯ ಈ ಪುಂಡರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋಗೆ ಅನೇಕ ಪ್ರತಿಕ್ರಿಯೆಗಳು ಬಂದಿವೆ.

ಚಲಿಸುತ್ತಿದ್ದ ಕಾರನ್ನೇ ಒದ್ದು ಉದ್ಧಟತನ ಮೆರೆದ ಯುವಕರು, ವಿಡಿಯೋ ವೈರಲ್
ಚಲಿಸುತ್ತಿದ್ದ ಕಾರನ್ನೇ ಒದ್ದು ಉದ್ಧಟತನ ಮೆರೆದ ಯುವಕರು, ವಿಡಿಯೋ ವೈರಲ್
ಆಯೇಷಾ ಬಾನು
|

Updated on: Jul 29, 2024 | 11:10 AM

Share

ಬೆಂಗಳೂರು, ಜುಲೈ.29: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪುಂಡರ ಹಾವಳಿ ಹೆಚ್ಚಾಗಿದೆ. ಬೈಕ್ ವೀಲಿಂಗ್ ಮಾಡೋದು, ಹೆದ್ದಾರಿಗಳಲ್ಲಿ ಸವಾರರನ್ನು ಚೇಡಿಸುವಂತಹ ಪ್ರಕರಣಗಳು ನಡೆಯುತ್ತಲೇ ಇರುತ್ತವೆ. ಸದ್ಯ ಇದೀಗ ಮಾರೇನಹಳ್ಳಿ ಫ್ಲೈ ಓವರ್ ಮೇಲೆ ಬೈಕ್‌ಗಳಲ್ಲಿ ಬಂದ ಯುವಕರ ಗುಂಪು ಕಾರೊಂದನ್ನು ಟಾರ್ಗೆಟ್​ ಮಾಡಿ ಆಕ್ರಮಣಕಾರಿಯಾಗಿ ವರ್ತನೆ ಮಾಡಿದ್ದ ಪುಂಡರನ್ನು ಪೊಲೀಸರು (Bengaluru Police) ಬಂಧಿಸಿ ಎಡೆಮುರಿ ಕಟ್ಟಿದ್ದಾರೆ.

ಬೈಕ್​ನಲ್ಲಿ ಬಂದ ಇಬ್ಬರು ಯುವಕರು ಚಲಿಸುತ್ತಿದ್ದ ಕಾರೊಂದನ್ನು ಟಾರ್ಗೆಟ್ ಮಾಡಿ ಕಾರು ಚಾಲಕನಿಗೆ ಬೈಯುತ್ತ, ಹೆದರಿಸುತ್ತ ಕಾರನ್ನು ಕಾಲಿನಿಂದ ಹೊಡೆದು ಆಕ್ರಮಣಕಾರಿಯಾಗಿ ವರ್ತಿಸಿದ್ದಾರೆ. ಅಲ್ಲದೆ ಮತ್ತೊಂದು ಬೈಕ್‌ನಲ್ಲಿ ಬಂದ ಮೂವರು ಯುವಕರು ಕೂಡ ಕಾರಿಗೆ ಡಿಕ್ಕಿ ಹೊಡೆಯಲು ಯತ್ನಿಸಿ ಚಾಲಕನಿಗೆ ಹೆದರಿಸಿದ ವಿಡಿಯೋವನ್ನು ಪೋಸ್ಟ್ ಮಾಡಿದ ಬೆಂಗಳೂರು ಪೊಲೀಸರು, ಈ ಪುಂಡರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿಗರನ್ನು ಕರೆಯಲು ಬರುತ್ತಿರುವ ಮಾಲ್ಡೀವ್ಸ್​ ಪ್ರವಾಸೋದ್ಯಮ ಸಚಿವ ಇಬ್ರಾಹಿಂ

“ರಸ್ತೆ ಮೇಲೆ ಗಾಡಿ ಓಡಿಸುತ್ತಾ ಸಿಕ್ಕ ಥ್ರಿಲ್ ಠಾಣೆಗೆ ಬಂದ ತಕ್ಷಣವೇ ಬದಲಾಗುತ್ತೆ! ಸ್ಟಂಟ್‌ಗಳೆಲ್ಲ ಸಿನಿಮಾಗಳಲ್ಲಿ ಚನ್ನಾಗಿರುತ್ತವೆ, ನಮ್ಮ ರಸ್ತೆಗಳ ಮೇಲಲ್ಲ!” ಎಂದು ಶೀರ್ಷಿಕೆ ನೀಡಿ ಬೆಂಗಳೂರು ಪೊಲೀಸರು ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಫೋಸ್ಟ್ ಮಾಡಿದ್ದಾರೆ.

ಈ ವೀಡಿಯೊವನ್ನು ಜುಲೈ 26 ರಂದು ಪೋಸ್ಟ್ ಮಾಡಲಾಗಿದ್ದು ನಾಲ್ಕು ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದಿದೆ. ಅನೇಕ ಮಂದಿ ಇದನ್ನು ಶೇರ್ ಮಾಡುತ್ತಿದ್ದು 11,000 ಲೈಕ್‌ಗಳು ಬಂದಿವೆ. ಜೊತೆಗೆ ಅನೇಕರು ಈ ಪೋಸ್ಟ್‌ಗೆ ಕಾಮೆಂಟ್‌ ಮಾಡಿ ಪೊಲೀಸರಿಗೆ ಧನ್ಯವಾದ ತಿಳಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?