AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಳೆತ ಶವ ಕೇಸ್ ಬೆನ್ನತ್ತಿದ್ದ ಪೊಲೀಸರಿಗೆ ಭಯಾನಕ ಸತ್ಯ ಬಯಲು, ಕಳ್ಳತನ ಮಾಡಿದ ಎಂಬ ಕಾರಣಕ್ಕೆ ಹೀಗಾ ಮಾಡೋದು!

ಗುಂಪೊಂದು ವ್ಯಕ್ತಿಯನ್ನು ಒಂದು ವಾರ ರೂಂನಲ್ಲಿ ಕೂಡಿಟ್ಟು ಹಲ್ಲೆ ನಡೆಸಿ ಕೊಲೆ ಮಾಡಿದ ಘಟನೆ ರಾಮಮೂರ್ತಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕೊಳೆತ ಶವ ಕೇಸ್ ಬೆನ್ನತ್ತಿದ್ದ ಪೊಲೀಸರಿಗೆ ಭಯಾನಕ ಸತ್ಯ ಬಯಲು, ಕಳ್ಳತನ ಮಾಡಿದ ಎಂಬ ಕಾರಣಕ್ಕೆ ಹೀಗಾ ಮಾಡೋದು!
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
|

Updated on: Apr 10, 2023 | 10:26 AM

Share

ಬೆಂಗಳೂರು: ಕೊಳೆತ ಶವ ಕೇಸ್ ಬೆನ್ನತ್ತಿದ್ದ ಪೊಲೀಸರು ಭಯಾನಕ‌ ಸತ್ಯವೊಂದನ್ನು ಪತ್ತೆ ಮಾಡಿದ್ದಾರೆ. ವ್ಯಕ್ತಿಯನ್ನ ಕೊಂದು ತಾನೇ ಮೃತನ ತಾಯಿ‌ಯ ಜೊತೆ ಹುಡುಕಾಟ ನಡೆಸಿದ್ದ ಹಂತಕನ ಕೊಲೆ ರಹಸ್ಯವನ್ನು ಬೇಧಿಸಿದ್ದಾರೆ. ಕಳ್ಳತನ ಮಾಡಿದ ಎಂದು ಆರೋಪಿಸಿ ರೂಂನಲ್ಲಿ ಒಂದು ವಾರ ಕೂಡಿಟ್ಟು ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ. ಸೈಫುಲ್ಲಾ(35) ಕೊಲೆಯಾದ ವ್ಯಕ್ತಿ.

ಗುಂಪೊಂದು ವ್ಯಕ್ತಿಯನ್ನು ಒಂದು ವಾರ ರೂಂನಲ್ಲಿ ಕೂಡಿಟ್ಟು ಹಲ್ಲೆ ನಡೆಸಿ ಕೊಲೆ ಮಾಡಿದ ಘಟನೆ ರಾಮಮೂರ್ತಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿಗಳ ಕಿರುಕುಳ ತಾಳಲಾರದೆ ರೂಂನಲ್ಲಿಯೇ ವ್ಯಕ್ತಿ ಸಾವನ್ನಪ್ಪಿದ್ದಾನೆ. ಇದಾದ ಬಳಿಕ ಹಂತಕರು ಮೃತದೇಹವನ್ನು ಎಸೆದು ತಮಗೇನು ಗೊತ್ತೇ ಇಲ್ಲ ಎನ್ನುವಂತೆ ಸುಮ್ಮನಾಗಿದ್ದಾರೆ. ಬಡಪಾಯಿ ವ್ಯಕ್ತಿಯನ್ನು ಕೊಂದು ಕೆಜಿ ಹಳ್ಳಿಯಲ್ಲಿ ಮೃತದೇಹ ಎಸೆದಿದ್ದಾರೆ. ಹಲ್ಲೆಯ ದೃಶ್ಯ ಮೊಬೈಲ್​ನಲ್ಲಿ ಸೆರೆ ಹಿಡಿದು ವಿಕೃತಿ ಮೆರೆಯಲಾಗಿದೆ.

ಸಹಜ ಸಾವು ಎಂದುಕೊಂಡಿದ್ದ ಪೊಲೀಸರಿಗೆ ತನಿಖೆ ವೇಳೆ ಶಾಕ್

ಮಾರ್ಚ್ 4ಕ್ಕೆ ರಾಮಮೂರ್ತಿನಗರ ಸಾದಹಳ್ಳಿ ಬ್ರಿಡ್ಜ್ ಚರಂಡಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಮೃತದೇಹದ ಫೋಟೋವನ್ನು ರಾಜ್ಯದ ಎಲ್ಲಾ ಠಾಣೆಗೆ ಕಳುಹಿಸಿ ಪೊಲೀಸರು ತನಿಖೆಗೆ ಇಳಿದಿದ್ದರು. ಆದರೆ ಯಾವುದೇ ಪ್ರಯೋಜನವಾಗಿರಲಿಲ್ಲ. ಪೋಸ್ಟ್ ಮಾರ್ಟಂ ರಿಪೋರ್ಟ್ ನಲ್ಲೂ ಯಾವುದೇ ಗಾಯದ ಕುರುಹು ಸಿಗಲಿಲ್ಲ. ಇದನ್ನ ಅಸಹಜ ಸಾವು ಎಂದೇ ಪರಿಗಣಿಸಲಾಗಿತ್ತು. ರಾಮಮೂರ್ತಿ ನಗರ ಪೊಲೀಸರು ಐಪಿಸಿ 174c ಅಡಿಯಲ್ಲಿ ಸಂಶಯಾಸ್ಪದ ಸಾವು ಎಂದು ಕೇಸ್ ದಾಖಲಿಸಿಕೊಳ್ಳಲಾಯಿತು. ಎಷ್ಟೇ ಪ್ರಯತ್ನ ಪಟ್ಟರು ಮೃತನ ಸುಳಿವು ಮಾತ್ರ ಸಿಗಲೇ ಇಲ್ಲ. ನಂತರ ಮಾರ್ಚ್ 6 ಕ್ಕೆ ಮಹಿಳೆಯೊಬ್ಬಳು ತನ್ನ ಮಗ ಕಾಣೆಯಾಗಿದ್ದಾನೆಂದು ಕೆಜಿ ಹಳ್ಳಿ ಠಾಣೆಗೆ ದೂರು ನೀಡಿದ್ದರು. ಕೆಜಿ ಹಳ್ಳಿಯ ಮುಸ್ಲಿಂ ಕಾಲೋನಿ ನಿವಾಸಿ ಮಹಿಳೆಗೆ ರಾಮಮೂರ್ತಿ ನಗರದಲ್ಲಿ ಸಿಕ್ಕ ಮೃತದೇಹ ತೋರಿಸಲಾಗುತ್ತೆ. ಇದು ತನ್ನದೇ ಮಗ ಎಂದು ಮಹಿಳೆ ಗುರುತಿಸಿದ್ದು ಮೃತ ವ್ಯಕ್ತಿ ಯಾರೆಂದು ಪೊಲೀಸರಿಗೆ ಸುಳಿವು ಸಿಕ್ಕಿತ್ತು.

ಇದನ್ನೂ ಓದಿ: ತ್ರಿಶೂಲ ಹಿಡಿದು ರಸ್ತೆಗಿಳಿದಿಲ್ಲವೆಂದರೆ ಮುಂದಿನ 5-7 ವರ್ಷಗಳಲ್ಲಿ ಭಾರತ ಮುಸ್ಲಿಂ ರಾಷ್ಟ್ರವಾಗುತ್ತೆ: ಬಿಜೆಪಿ ಮುಖಂಡ

ಈ ವೇಳೆ ಒಂದು ಸುಳಿವನ್ನು ಮೃತನ ತಾಯಿ‌‌ ಪೊಲೀಸರಿಗೆ ‌ನೀಡಿದ್ದರು. ಕಳ್ಳತನ ಮಾಡಿದ್ದ ಎಂದು ಕೆಲವರು ಕೂಡಿ ಹಾಕಿದ್ರು. ಕೆಲ ತಿಂಗಳ ಹಿಂದೆ ನಡೆದಿದ್ದ ಘಟನೆಯನ್ನ ಪೊಲೀಸರ ಮುಂದೆ ಮಹಿಳೆ ತಿಳಿಸಿದ್ದಾರೆ. ನಂತರ ಆತನನ್ನ ಬಿಟ್ಟು ಕಳುಹಿಸಿದರು ಎಂದು ಪೊಲೀಸರಿಗೆ ಮಹಿಳೆ ಮಾಹಿತಿ ನೀಡಿದರು. ಇದೇ ಅನುಮಾನದ ಮೇಲೆ ಪ್ರಶಾಂತ್ ಎಂಬಾತನನ್ನ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಆಗ ಕೊಲೆಯ ರಹಸ್ಯ ಬಯಲಾಗಿದೆ. ಮೊಬೈಲ್ ಪರಿಶೀಲನೆ ವೇಳೆ ಭಯಾನಕ ವಿಡಿಯೋ ಲಭ್ಯವಾಗಿದೆ. ಮೃತನನ್ನು ಕಟ್ಟಿ ಹಾಕಿ ಹಲ್ಲೆ ಮಾಡೊ‌ ವಿಡಿಯೋ ಸಿಕ್ಕಿದೆ. ಪ್ರಶಾಂತ್ ಮಾಹಿತಿ ಮೇರೆಗೆ ಜಬಿ, ಬಬನ್ @ ಶಾಬಾಜ್ ಅರೆಸ್ಟ್ ಮಾಡಲಾಗಿದೆ. ಆರೋಪಿ ಜಬಿ‌ ಮೃತನ ತಾಯಿ‌ ಜೊತೆಗೆ ಸೇರಿ ತಾನೂ ವ್ಯಕ್ತಿಯನ್ನು ಹುಡುಕುವ ನಾಟಕ ಮಾಡಿದ್ದ.

ಆರೋಪಿಗಳು ಸಫಿವುಲ್ಲಾ ಕೊಂದಿದ್ದು ಯಾಕೆ?

ಪ್ರಶಾಂತ್ ಕೆಜಿ ಹಳ್ಳಿಯಲ್ಲಿ ಸ್ಕ್ರಾಪ್ ಅಂಗಡಿ ಇಟ್ಟುಕೊಂಡಿದ್ದ. ಅವನ ಅಂಗಡಿಯಿಂದ ವಸ್ತುಗಳು ಆಗಾಗ ಕಳ್ಳತನವಾಗುತ್ತಿತ್ತು. ಹೀಗಾಗಿ ಮಾಲೀಕ ಪ್ರಶಾಂತ್ ಕಳ್ಳನನ್ನ ಹಿಡಿಯಲು ರಾತ್ರಿ ಅಡಗಿ ಕುಳಿತಿದ್ದ. ಈ ವೇಳೆ ಪ್ರಶಾಂತ್ ಅಂಗಡಿಗೆ ಮೃತ ಸೈಫುಲ್ಲಾ ಬಂದಿದ್ದಾನೆ. ಆಗ ಪ್ರಶಾಂತ್ ಅಂಡ್ ಟೀಂ ಸೈಫುಲ್ಲಾನನ್ನು ಹಿಡಿದುಕೊಂಡಿದ್ದಾರೆ. ಕಟ್ಟಡ ಮಾಲೀಕ ಜಬಿಗೆ ಪ್ರಶಾಂತ್ ಈ ವಿಚಾರ ಮುಟ್ಟಿಸಿದ್ದಾನೆ. ತನ್ನ ಪಟಾಲಂನ ಜೊತೆಗೆ ಆಗಮಿಸಿದ್ದ ಜಬಿ, ಸೈಫುಲ್ಲಾನನ್ನ ರೂಂ ನಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿದ್ದಾನೆ. ಒಂದು ವಾರ ಒಂದೇ ಕೊಠಡಿಯಲ್ಲಿ ಇಟ್ಟು ಹಲ್ಲೆ ಮಾಡಲಾಗಿದೆ. ರಕ್ತಸಿಕ್ತವಾಗಿ ಬಿದ್ದು ಬೇಡಿಕೊಂಡ್ರು ಬಿಟ್ಟಿಲ್ಲ. ಊಟ ತಿಂಡಿ ಏನನ್ನು ನೀಡದೇ ಪ್ರತಿದಿನ ಹಲ್ಲೆ ಮಾಡಿದ್ದಾರೆ. ಒಂದು ವಾರದ ಬಳಿಕ ರೂಮ್ ನಲ್ಲಿಯೇ ಸೈಫುಲ್ಲಾ ಮೃತಪಟ್ಟಿದ್ದಾನೆ. ಮೃತದೇಹ ಸಾದಹಳ್ಳಿ ಚರಂಡಿಗೆ ಎಸೆದಿದ್ದು ಮೂರ್ನಾಲ್ಕು ದಿನದ ಬಳಿಕ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಕೆಜಿ ಹಳ್ಳಿ ಮತ್ತು ರಾಮಮೂರ್ತಿ ನಗರ ಪೊಲೀಸರ ಕಾರ್ಯಾಚರಣೆಯಿಂದಾಗಿ ಪ್ರಶಾಂತ್, ಜಬಿ, ಬಬನ್ @ ಶಾಬಾಜ್ ಎಂಬುವವರನ್ನು ಬಂಧಿಸಲಾಗಿದೆ.

ಮತ್ತಷ್ಟು ಅಪರಾಧ ಸುದ್ದಿಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್