AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಲೂನ್ ಮಾರುವ ನೆಪದಲ್ಲಿ ಮನೆಗಳನ್ನು ಟಾರ್ಗೆಟ್ ಮಾಡಿ ಕನ್ನ, ಅಜ್ಮೀರ್​ಗೆ ತೆರಳಿ ಬಂಗಾರಿಯ ಗ್ಯಾಂಗ್​ನ ಮೂವರನ್ನು ಬಂಧಿಸಿದ ಪೊಲೀಸರು

ಬಂಗಾರಿಯ ಗ್ಯಾಂಗ್ ಆಗಸ್ಟ್ 8ರಂದು ಅಮೃತನಗರದ ಮನೆಯೊಂದಕ್ಕೆ ಕನ್ನ ಹಾಕಿದ್ದರು. ಸದ್ಯ ಈಗ ಅಮೃತಹಳ್ಳಿ ಪೊಲೀಸರು ರಾಜಸ್ಥಾನದ ಅಜ್ಮೀರ್ಗೆ ತೆರಳಿ ಮೂವರನ್ನೂ ಹೆಡೆಮುರಿ ಕಟ್ಟಿದ್ದಾರೆ.

ಬಲೂನ್ ಮಾರುವ ನೆಪದಲ್ಲಿ ಮನೆಗಳನ್ನು ಟಾರ್ಗೆಟ್ ಮಾಡಿ ಕನ್ನ, ಅಜ್ಮೀರ್​ಗೆ ತೆರಳಿ ಬಂಗಾರಿಯ ಗ್ಯಾಂಗ್​ನ ಮೂವರನ್ನು ಬಂಧಿಸಿದ ಪೊಲೀಸರು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Sep 06, 2021 | 12:25 PM

Share

ಬೆಂಗಳೂರು: ಬವರಿಯಾ ಆಯ್ತು ಈಗ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬಂಗಾರಿಯ ಗ್ಯಾಂಗ್ನ ಕೃತ್ಯ ಚುರುಕಾಗಿದೆ. ಬಲೂನ್ ಮಾರುವ ನೆಪದಲ್ಲಿ ಬೆಳಿಗ್ಗೆ ಏರಿಯಾ ರೌಂಡ್ಸ್ ಹಾಕಿ ಕಳ್ಳತನ ಮಾಡುತ್ತಿದ್ದ ಬಗಾರಿಯ ಗ್ಯಾಂಗ್ನ ಮೂವರನ್ನು ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಮುಖೇಶ್, ಧರ್ಮ, ಲಕ್ಷ್ಮಣ್ ಬಂಧಿತರು.

ಬಂಗಾರಿಯ ಗ್ಯಾಂಗ್ ಬಲೂನ್ ಮಾರುವ ನೆಪದಲ್ಲಿ ಬೆಳಿಗ್ಗೆ ಏರಿಯಾ ರೌಂಡ್ಸ್ ಹಾಕುತ್ತಿದ್ದರು. ಬಳಿಕ ಬೀಗ ಹಾಕಿರುವ ಮನೆಗಳನ್ನು ಗುರುತಿಸಿ ರಾತ್ರಿ ವೇಳೆ ಮನೆಗಳಿಗೆ ನುಗ್ಗಿ 3-4 ನಿಮಿಷದಲ್ಲೇ ಕನ್ನ ಹಾಕಿ ಎಸ್ಕೇಪ್ ಆಗುತ್ತಿದ್ದರು. ಬಂಗಾರಿಯ ಗ್ಯಾಂಗ್ ಆಗಸ್ಟ್ 8ರಂದು ಅಮೃತನಗರದ ಮನೆಯೊಂದಕ್ಕೆ ಕನ್ನ ಹಾಕಿದ್ದರು. ಸದ್ಯ ಈಗ ಅಮೃತಹಳ್ಳಿ ಪೊಲೀಸರು ರಾಜಸ್ಥಾನದ ಅಜ್ಮೀರ್ಗೆ ತೆರಳಿ ಮೂವರನ್ನೂ ಹೆಡೆಮುರಿ ಕಟ್ಟಿದ್ದಾರೆ.

1 ವಾರ ಸತತ ಪರಿಶ್ರಮದ ಬಳಿಕ ಆರೋಪಿಗಳು ಅರೆಸ್ಟ್ ಆಗಿದ್ದಾರೆ. ಸದ್ಯ ಮೂವರು ಆರೋಪಿಗಳನ್ನು ಬಂಧಿಸಿದ್ದು ಮೂವರು ಆರೋಪಿಗಳು ನಾಪತ್ತೆಯಾಗಿದ್ದಾರೆ. ಬಂಧಿತರಿಂದ ಬರೊಬ್ಬರಿ 200 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸ್ ಸಿಬ್ಬಂದಿಗೆ ಅದ್ಧೂರಿಯಾಗಿ ಬೆಂಗಳೂರಿಗೆ ಸ್ವಾಗತ ಮಾಡಲಾಗಿದೆ.

ಬ್ಯಾನ್ ಆದ ನೋಟು ಬದಲಿಸುತ್ತಿದ್ದ ಆರೋಪಿಗಳ ಬಂಧನ ಇನ್ನು ಮತ್ತೊಂದು ಕಡೆ ಬ್ಯಾನ್ ಆದ ನೋಟು ಬದಲಿಸುತ್ತಿದ್ದ ಆರೋಪಿಗಳನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಪೊಲೀಸರು ಬಂಧಿಸಿದ್ದಾರೆ. ಇಮ್ರಾನ್, ಅಜರ್, ಮೊಹಮ್ಮದ್ ಬಂಧಿತ ಆರೋಪಿಗಳು. ಬಂಧಿತರಿಂದ 1.92 ಲಕ್ಷ ಬ್ಯಾನ್ ಆಗಿದ್ದ ನೋಟು ವಶಕ್ಕೆ ಪಡೆಯಲಾಗಿದೆ.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ರಸ್ತೆ ಪಕ್ಕ ಬ್ಯಾಗ್​ನಲ್ಲಿ ಹಣ ಹಿಡಿದು ನಿಂತಿದ್ದ ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಕಿರಣ್​ ರಾಜ್​​ಗೆ ಕಿಚ್ಚ ಸುದೀಪ್​ ಕಡೆಯಿಂದ ಸಿಕ್ತು ಸಲಹೆ; ‘ಕನ್ನಡತಿ’ ನಟನ ಉತ್ತರ ಏನು?

ಮಡಿವಾಳ: ವೈದ್ಯ ದಂಪತಿ ಮನೆಯಲ್ಲಿ ಕೆಲಸ ಮಾಡುವವರಿಂದಲೇ ಚಿನ್ನಾಭರಣ ಕಳ್ಳತನ; ಆರೋಪಿ ಅಮ್ಮು ಬಂಧನ

Published On - 12:08 pm, Mon, 6 September 21

ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?