AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಲೂನ್ ಮಾರುವ ನೆಪದಲ್ಲಿ ಮನೆಗಳನ್ನು ಟಾರ್ಗೆಟ್ ಮಾಡಿ ಕನ್ನ, ಅಜ್ಮೀರ್​ಗೆ ತೆರಳಿ ಬಂಗಾರಿಯ ಗ್ಯಾಂಗ್​ನ ಮೂವರನ್ನು ಬಂಧಿಸಿದ ಪೊಲೀಸರು

ಬಂಗಾರಿಯ ಗ್ಯಾಂಗ್ ಆಗಸ್ಟ್ 8ರಂದು ಅಮೃತನಗರದ ಮನೆಯೊಂದಕ್ಕೆ ಕನ್ನ ಹಾಕಿದ್ದರು. ಸದ್ಯ ಈಗ ಅಮೃತಹಳ್ಳಿ ಪೊಲೀಸರು ರಾಜಸ್ಥಾನದ ಅಜ್ಮೀರ್ಗೆ ತೆರಳಿ ಮೂವರನ್ನೂ ಹೆಡೆಮುರಿ ಕಟ್ಟಿದ್ದಾರೆ.

ಬಲೂನ್ ಮಾರುವ ನೆಪದಲ್ಲಿ ಮನೆಗಳನ್ನು ಟಾರ್ಗೆಟ್ ಮಾಡಿ ಕನ್ನ, ಅಜ್ಮೀರ್​ಗೆ ತೆರಳಿ ಬಂಗಾರಿಯ ಗ್ಯಾಂಗ್​ನ ಮೂವರನ್ನು ಬಂಧಿಸಿದ ಪೊಲೀಸರು
ಪ್ರಾತಿನಿಧಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on:Sep 06, 2021 | 12:25 PM

Share

ಬೆಂಗಳೂರು: ಬವರಿಯಾ ಆಯ್ತು ಈಗ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬಂಗಾರಿಯ ಗ್ಯಾಂಗ್ನ ಕೃತ್ಯ ಚುರುಕಾಗಿದೆ. ಬಲೂನ್ ಮಾರುವ ನೆಪದಲ್ಲಿ ಬೆಳಿಗ್ಗೆ ಏರಿಯಾ ರೌಂಡ್ಸ್ ಹಾಕಿ ಕಳ್ಳತನ ಮಾಡುತ್ತಿದ್ದ ಬಗಾರಿಯ ಗ್ಯಾಂಗ್ನ ಮೂವರನ್ನು ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಮುಖೇಶ್, ಧರ್ಮ, ಲಕ್ಷ್ಮಣ್ ಬಂಧಿತರು.

ಬಂಗಾರಿಯ ಗ್ಯಾಂಗ್ ಬಲೂನ್ ಮಾರುವ ನೆಪದಲ್ಲಿ ಬೆಳಿಗ್ಗೆ ಏರಿಯಾ ರೌಂಡ್ಸ್ ಹಾಕುತ್ತಿದ್ದರು. ಬಳಿಕ ಬೀಗ ಹಾಕಿರುವ ಮನೆಗಳನ್ನು ಗುರುತಿಸಿ ರಾತ್ರಿ ವೇಳೆ ಮನೆಗಳಿಗೆ ನುಗ್ಗಿ 3-4 ನಿಮಿಷದಲ್ಲೇ ಕನ್ನ ಹಾಕಿ ಎಸ್ಕೇಪ್ ಆಗುತ್ತಿದ್ದರು. ಬಂಗಾರಿಯ ಗ್ಯಾಂಗ್ ಆಗಸ್ಟ್ 8ರಂದು ಅಮೃತನಗರದ ಮನೆಯೊಂದಕ್ಕೆ ಕನ್ನ ಹಾಕಿದ್ದರು. ಸದ್ಯ ಈಗ ಅಮೃತಹಳ್ಳಿ ಪೊಲೀಸರು ರಾಜಸ್ಥಾನದ ಅಜ್ಮೀರ್ಗೆ ತೆರಳಿ ಮೂವರನ್ನೂ ಹೆಡೆಮುರಿ ಕಟ್ಟಿದ್ದಾರೆ.

1 ವಾರ ಸತತ ಪರಿಶ್ರಮದ ಬಳಿಕ ಆರೋಪಿಗಳು ಅರೆಸ್ಟ್ ಆಗಿದ್ದಾರೆ. ಸದ್ಯ ಮೂವರು ಆರೋಪಿಗಳನ್ನು ಬಂಧಿಸಿದ್ದು ಮೂವರು ಆರೋಪಿಗಳು ನಾಪತ್ತೆಯಾಗಿದ್ದಾರೆ. ಬಂಧಿತರಿಂದ ಬರೊಬ್ಬರಿ 200 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸ್ ಸಿಬ್ಬಂದಿಗೆ ಅದ್ಧೂರಿಯಾಗಿ ಬೆಂಗಳೂರಿಗೆ ಸ್ವಾಗತ ಮಾಡಲಾಗಿದೆ.

ಬ್ಯಾನ್ ಆದ ನೋಟು ಬದಲಿಸುತ್ತಿದ್ದ ಆರೋಪಿಗಳ ಬಂಧನ ಇನ್ನು ಮತ್ತೊಂದು ಕಡೆ ಬ್ಯಾನ್ ಆದ ನೋಟು ಬದಲಿಸುತ್ತಿದ್ದ ಆರೋಪಿಗಳನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಪೊಲೀಸರು ಬಂಧಿಸಿದ್ದಾರೆ. ಇಮ್ರಾನ್, ಅಜರ್, ಮೊಹಮ್ಮದ್ ಬಂಧಿತ ಆರೋಪಿಗಳು. ಬಂಧಿತರಿಂದ 1.92 ಲಕ್ಷ ಬ್ಯಾನ್ ಆಗಿದ್ದ ನೋಟು ವಶಕ್ಕೆ ಪಡೆಯಲಾಗಿದೆ.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ರಸ್ತೆ ಪಕ್ಕ ಬ್ಯಾಗ್​ನಲ್ಲಿ ಹಣ ಹಿಡಿದು ನಿಂತಿದ್ದ ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಕಿರಣ್​ ರಾಜ್​​ಗೆ ಕಿಚ್ಚ ಸುದೀಪ್​ ಕಡೆಯಿಂದ ಸಿಕ್ತು ಸಲಹೆ; ‘ಕನ್ನಡತಿ’ ನಟನ ಉತ್ತರ ಏನು?

ಮಡಿವಾಳ: ವೈದ್ಯ ದಂಪತಿ ಮನೆಯಲ್ಲಿ ಕೆಲಸ ಮಾಡುವವರಿಂದಲೇ ಚಿನ್ನಾಭರಣ ಕಳ್ಳತನ; ಆರೋಪಿ ಅಮ್ಮು ಬಂಧನ

Published On - 12:08 pm, Mon, 6 September 21

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ