AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಬೈಕ್​​ಗೆ ಗುದ್ದಿದ್ದೀರಿ ಎಂದು ಸುಳ್ಳು ಹೇಳಿ ಸುಲಿಗೆ ಮಾಡುತ್ತಿದ್ದ ಮೂವರು ಬೈಕ್​ ಸವಾರರು ಅರೆಸ್ಟ್​

ಕಾರಿನಲ್ಲಿ ಹೋಗುತ್ತಿದ್ದ ಟೆಕ್ಕಿಗಳನ್ನು ಅಡ್ಡಗಟ್ಟಿ ಸುಲಿಗೆ ಮಾಡಲು ಯತ್ನಿಸಿದ್ದ ಮೂವರನ್ನು ಬೆಂಗಳೂರು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಭಾನುವಾರ (ಜನವರಿ.07) ರಂದು ಸಂಜೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ನಮ್ಮ ಬೈಕ್​​ಗೆ ಗುದ್ದಿದ್ದೀರಿ ಎಂದು ಸುಳ್ಳು ಹೇಳಿ ಸುಲಿಗೆ ಮಾಡುತ್ತಿದ್ದ ಮೂವರು ಬೈಕ್​ ಸವಾರರು ಅರೆಸ್ಟ್​
ಸುಲಿಗೆ ಮಾಡಲು ಯತ್ನಿಸಿದವರು
Follow us
ವಿವೇಕ ಬಿರಾದಾರ
|

Updated on: Jan 10, 2024 | 8:15 AM

ಬೆಂಗಳೂರು, ಜನವರಿ 10: ಕಾರಿನಲ್ಲಿ ಹೋಗುತ್ತಿದ್ದ ಟೆಕ್ಕಿಗಳನ್ನು (Techie) ಅಡ್ಡಗಟ್ಟಿ ಸುಲಿಗೆ ಮಾಡಲು ಯತ್ನಿಸಿದ್ದ ಮೂವರನ್ನು ಬೆಂಗಳೂರು ಪೊಲೀಸರು (Bengaluru Police) ಸೋಮವಾರ ಬಂಧಿಸಿದ್ದಾರೆ. ಸಾಫ್ಟ್‌ವೇರ್ ಇಂಜಿನಿಯರ್ ಚರಣ್ ಪಾಲ್ ಸಿಂಗ್ ಎಂಬುವರು ಭಾನುವಾರ ಸಂಜೆ ಸಹೋದ್ಯೋಗಿಗಳೊಂದಿಗೆ ಸರ್ಜಾಪುರ-ಅತ್ತಿಬೆಲೆ ರಸ್ತೆಯಲ್ಲಿ ಹೋಗುತ್ತಿದ್ದರು. ಈ ವೇಳೆ ಸ್ಕೂಟರ್‌ನಲ್ಲಿ ಬಂದ ನಾಲ್ವರು ಕಾರಿಗೆ ಅಡ್ಡ ಹಾಕಿದ್ದಾರೆ.

ಬಳಿಕ “ನಮ್ಮ ಬೈಕ್​ಗೆ ಡಿಕ್ಕಿ ಹೊಡೆದಿದ್ದೀರಿ ಹಣ ನೀಡಿ” ಎಂದು ಚರಣ್ ಪಾಲ್ ಸಿಂಗ್ ಅವರ ಬಳಿ ಬಂದಿದ್ದಾರೆ. ಚರಣ್​ ಪಾಲ್​ ಸಿಂಗ್​ ಅವರು ಕಾರಿನಲ್ಲೇ ಕೂತಿದ್ದು, “ನಾವು ಯಾವುದೇ ಅಪಘಾತ ಮಾಡಿಲ್ಲ” ಎಂದಿದ್ದಾರೆ. ನಂತರ ಚರಣ್ ಪಾಲ್ ಸಿಂಗ್ ಅವರು ಕಾರಿನ ಗಾಜುಗಳನ್ನು ಹಾಕಿದ್ದಾರೆ. ಅದಕ್ಕೆ ದುಷ್ಕರ್ಮಿಗಳು ಗಾಜು ಇಳಿಸುವಂತೆ ಹೇಳಿದ್ದಾರೆ. ಆದರೆ ಚರಣ್ ಪಾಲ್ ಸಿಂಗ್ ಗಾಜು ಇಳಿಸಿಲ್ಲ.

ಆಗ ದುಷ್ಕರ್ಮಿಗಳು ಕಾರಿನ ಗಾಜುನ್ನು ಹೊಡೆದು ಬೆದರಿಕೆ ಹಾಕಲು ಮುಂದಾಗಿದ್ದಾರೆ. ಆದರೂ ಕೂಡ ಚರಣ್ ಪಾಲ್ ಸಿಂಗ್ ವಾಹನದಿಂದ ಇಳಿಯದೆ ಕಾರನ್ನು ಚಾಲು ಮಾಡಿ ವೇಗವಾಗಿ ಓಡಿಸುತ್ತಾ ಹತ್ತಿರದ ಪೊಲೀಸ್ ಠಾಣೆಗೆ ಹೋಗಿದ್ದಾರೆ. ಆರೋಪಿಗಳು ವಾಹನವನ್ನು ಹಿಂಬಾಲಿಸಿದ್ದಾರೆ. ಇಡೀ ಘಟನೆ ಕಾರಿನ ಡ್ಯಾಶ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಇನ್ನು ಪೊಲೀಸ್​ ಠಾಣೆಯಲ್ಲಿ ಚರಣ್ ಪಾಲ್ ಸಿಂಗ್ ದೂರು ನೀಡಿದ್ದಾರೆ. ಬಳಿಕ ಪೊಲೀಸರ ಪರಿಶೀಲಿಸಿದಾಗ ಚರಣ್ ಪಾಲ್ ಸಿಂಗ್ ಅಪಘಾತ ಮಾಡಿಲ್ಲವೆಂದು ಕಂಡುಕೊಂಡರು. ನಂತರ ಪೊಲೀಸರು ಪ್ರಕರಣದ ತನಿಖೆ ನಡೆಸಿ ಮೂವರು ದುಷ್ಕರ್ಮಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: ಪ್ರೇಮಿಗಳು, ದಂಪತಿಗಳನ್ನ ಹಿಂಬಾಲಿಸಿ ಸುಲಿಗೆ ಮಾಡುತ್ತಿದ್ದ ಆರೋಪಿಯ ಬಂಧನ

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಬೆಂಗಳೂರು ಪೊಲೀಸರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಸಾರ್ವಜನಿಕರು ಮನವಿ ಮಾಡಿದ್ದಾರೆ. ಅತ್ತಿಬೆಲೆ ರಸ್ತೆಯಿಂದ ದೊಮ್ಮಸಂದ್ರದವರೆಗಿನ ರಸ್ತೆಯಲ್ಲಿ ಬೀದಿ ದೀಪಗಳೇ ಇಲ್ಲ. ಬೀದಿ ದೀಪಗಳನ್ನು ಅಳವಡಿಸಬೇಕು. ಈ ಬಗ್ಗೆ ಅಧಿಕಾರಿಗಳು ಕ್ರಮಕೈಗೊಳ್ಳಬೇಕೆಂದು ಎಕ್ಸ್​ (ಟ್ವಿಟರ್​) ಬಳಕೆದಾರರು ಮನವಿ ಮಾಡಿದ್ದಾರೆ.

ದಯವಿಟ್ಟು ಈ ರೀತಿಯ ಘಟನೆಗಳ ಬಗ್ಗೆ ಗಂಭೀರ ಕ್ರಮ ತೆಗೆದುಕೊಳ್ಳಿ! ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಒಂದಲ್ಲ ಒಂದು ಕಡೆ ಇಂತಹ ಘಟನೆಗಳು ನಡೆಯುತ್ತಲೇ ಇರುತ್ತವೆ. ಮತ್ತು ಅಮಾಯಕರಿಗೆ ಅಲ್ಲಿ ಬದುಕುವುದೇ ಕಷ್ಟ! ಎಂದು ಮತ್ತೊಬ್ಬರು ಕಾಮೆಂಟ್​ ಮಾಡಿದ್ದಾರೆ.”

ಈ ಹಿಂದೆ ಬೆಂಗಳೂರಿನಲ್ಲಿ ಇಂತಹ ಹಲವು ಘಟನೆಗಳು ವರದಿಯಾಗಿದ್ದು, ಕೆಲವು ಬೈಕ್ ಸವಾರರು ವಿವಿಧ ರಾಜ್ಯಗಳ ನೋಂದಣಿ ಫಲಕಗಳಿರುವ ಕಾರುಗಳನ್ನು ಗುರಿಯಾಗಿಸಿಕೊಂಡು ಅಪಘಾತ ನೆಪ ಮಾಡಿ ಹಣ ಸುಲಿಗೆ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
‘ಮೌನ ಹಾಗೂ ನಗು’; ಉತ್ತರಿಸಲು ಹೊಸ ತಂತ್ರ ಕಂಡುಕೊಂಡ ಪವಿತ್ರಾ ಗೌಡ
‘ಮೌನ ಹಾಗೂ ನಗು’; ಉತ್ತರಿಸಲು ಹೊಸ ತಂತ್ರ ಕಂಡುಕೊಂಡ ಪವಿತ್ರಾ ಗೌಡ