AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮ್ಯಾಟ್ರಿಮೋನಿಯಲ್ಲಿ ಮದುವೆಯಾಗುವುದಾಗಿ ನಂಬಿಸಿ ವಂಚನೆ; ಬೆಂಗಳೂರಿನಲ್ಲಿ ಆರೋಪಿ ಸೆರೆ

ಆರೋಪಿ ಜಗನ್ನಾಥ್ ಮೂಲತಃ ವಿಜಯಪುರದವನು. ಸಿವಿಲ್ ಇಂಜಿನಿಯರ್ ಎಂದು ಪರಿಚಯ ಮಾಡಿಕೊಳ್ಳುತ್ತಿದ್ದ. ಆಕ್ಸಿಡೆಂಟ್ ಆಗಿದೆ. ಕ್ರೆಡಿಟ್ ಕಾರ್ಡ್ ಬ್ಲಾಕ್ ಆಗಿದೆ. ಸೈಟ್ ಖರೀದಿ ಮಾಡಲಿಕ್ಕೆ ಹಣ ಬೇಕು ಅಂತ ವಸೂಲಿ ಮಾಡುತ್ತಿದ್ದ.

ಮ್ಯಾಟ್ರಿಮೋನಿಯಲ್ಲಿ ಮದುವೆಯಾಗುವುದಾಗಿ ನಂಬಿಸಿ ವಂಚನೆ; ಬೆಂಗಳೂರಿನಲ್ಲಿ ಆರೋಪಿ ಸೆರೆ
ಆರೋಪಿ ಜಗನ್ನಾಥ್
TV9 Web
| Edited By: |

Updated on: Sep 01, 2021 | 12:23 PM

Share

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ವಂಚಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಹೆಣ್ಣೂರು ಪೊಲೀಸರು 34 ವರ್ಷದ ಜಗನ್ನಾಥ್ ಎಂಬುವವನ್ನು ಬಂಧಿಸಿದ್ದಾರೆ. ಮ್ಯಾಟ್ರಿಮೋನಿಯಲ್ಲಿ (Matrimony) ಮದುವೆಯಾಗುವುದಾಗಿ ನಂಬಿಸಿ ವಂಚನೆ ಮಾಡುತ್ತಿದ್ದ ಆರೋಪಿ ಜಗನ್ನಾಥ್, ಹಣ, ಒಡವೆ ಪಡೆಯುತ್ತಿದ್ದ. ಈತ 30 ವರ್ಷ ಮೇಲ್ಪಟ್ಟ ವಿಚ್ಛೇದಿತ ಮಹಿಳೆಯರನ್ನು ಟಾರ್ಗೆಟ್ ಮಾಡುತ್ತಿದ್ದ. ಅಪಘಾತವಾಗಿದೆ ಹಣ ಬೇಕೆಂದು ಪಡೆದು ವಂಚನೆ ಮಾಡುತ್ತಿದ್ದ. ಈವರೆಗೆ 10 ಮಹಿಳೆಯರಿಗೆ ಆರೋಪಿ ವಂಚಿಸಿದ್ದಾನೆ ಎಂದು ಹೇಳಲಾಗುತ್ತಿದೆ.

ಆರೋಪಿ ಜಗನ್ನಾಥ್ ಮೂಲತಃ ವಿಜಯಪುರದವನು. ಸಿವಿಲ್ ಇಂಜಿನಿಯರ್ ಎಂದು ಪರಿಚಯ ಮಾಡಿಕೊಳ್ಳುತ್ತಿದ್ದ. ಆಕ್ಸಿಡೆಂಟ್ ಆಗಿದೆ. ಕ್ರೆಡಿಟ್ ಕಾರ್ಡ್ ಬ್ಲಾಕ್ ಆಗಿದೆ. ಸೈಟ್ ಖರೀದಿ ಮಾಡಲಿಕ್ಕೆ ಹಣ ಬೇಕು ಅಂತ ವಸೂಲಿ ಮಾಡುತ್ತಿದ್ದ. ಆರೋಪಿ ವಿರುದ್ಧ ಇದುವರೆಗೆ ಮೂರು ಯುವತಿಯರು ದೂರು ನೀಡಿದ್ದಾರೆ. ಬನಶಂಕರಿ ಹೆಣ್ಣೂರು ಬಾಗಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿ ಜಗನ್ನಾಥ್ ಈ ಹಿಂದೆ ಕಾರಿನಲ್ಲಿ ಆಕ್ಸಿಡೆಂಟ್ ಆಗಿದ್ದ ಫೋಟೋ ಬಳಸಿ ಹಣ ವಸೂಲಿ ಮಾಡುತ್ತಿದ್ದ. ಮೊದಲೆರಡು ಬಾರಿ ಯುವತಿಯರನ್ನ ಭೇಟಿ ಆಗಿ ಮದುವೆಯಾಗುವುದಾಗಿ ನಂಬಿಸುತ್ತಿದ್ದ. ನಂತರ ಬೇರೆ ಬೇರೆ ಕಾರಣ ಹೇಳಿ ಹಣ ವಸೂಲಿ ಮಾಡುತ್ತಿದ್ದ. ಸದ್ಯ ಈತನನ್ನು ಪೊಲೀಸರು ಬಂಧಿಸಿದ್ದಾರೆ.

ಮ್ಯಾಟ್ರಿಮೋನಿಯಲ್ಲಿ ಟಾರ್ಗೆಟ್ ಮಾಡುತ್ತಿದ್ದ ಆರೋಪಿ ಬಂಧನ ಇದೇ ರೀತಿ ಸುಮಾರು 12 ಮಹಿಳೆಯರ ಮೇಲೆ ಅತ್ಯಾಚಾರ ಮಾಡಿದ್ದ ಆರೋಪಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದರು. ಸುಮಾರು 12 ಮಹಿಳೆಯರನ್ನು ಅತ್ಯಾಚಾರ ಮಾಡಿದ ಆರೋಪ ಎದುರಿಸುತ್ತಿರುವ 37 ವರ್ಷದ ವ್ಯಕ್ತಿಯನ್ನು ನವೀ ಮುಂಬೈ ಪೊಲೀಸರು ಮಲಾಡ್ ಎಂಬಲ್ಲಿ ಬಂಧಿಸಿದ್ದರು. ಈತನ ಹೆಸರು ಮಹೇಶ್ ಅಲಿಯಾಸ್ ಕರಣ್ ಗುಪ್ತಾ. ಇವನು ಮೆಕ್ಯಾನಿಕಲ್ ಇಂಜನಿಯರ್ ಆಗಿದ್ದು, ಹಲವು ಗೌರವಾನ್ವಿತ ಕಂಪನಿಗಳಲ್ಲಿ ಕೆಲಸ ಕೂಡ ಮಾಡಿದ್ದಾನೆ. ಮ್ಯಾಟ್ರಿಮೋನಿ ಮೂಲಕ ಮಹಿಳೆಯರನ್ನು ವಂಚಿಸಿ ಅತ್ಯಾಚಾರ ಮಾಡುತ್ತಿದ್ದ ಎಂದು ಪೊಲೀಸರು ಹೇಳಿದ್ದರು.

ಇದನ್ನೂ ಓದಿ

ಕಳಪೆ ಕಾಮಗಾರಿಯಿಂದ ಬೆಂಗಳೂರಿನಲ್ಲಿ ಅನಾಹುತ, ರಸ್ತೆಯೊಳಕ್ಕೆ ಇಳಿಯಿತು ಲಾರಿ ಚಕ್ರ

ಹಾಸನದಲ್ಲಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧ ಧಿಕ್ಕಾರ; ಸಭೆ ಮೊಟಕುಗೊಳಿಸಿ ತೆರಳಿದ ಸ್ವಾಮೀಜಿ

(Bengaluru Police arrested a man accused of cheating on  matrimony)

Follow Us
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ