AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಉದ್ಯಮಿಯ ವಜ್ರ, ಚಿನ್ನಾಭರಣ ಕಳ್ಳತನ ಮಾಡಿದ್ದ ಕ್ಯಾಬ್ ಚಾಲಕನ ಬಂಧನ

ಮದುವೆಗೆಂದು ಚೆನ್ನೈನಿಂದ ಬೆಂಗಳೂರಿಗೆ ಬಂದಿದ್ದ ಉದ್ಯಮಿಯ ವಜ್ರ, ಚಿನ್ನಾಭರಣ ಕಳ್ಳತನ ಮಾಡಿದ್ದ ಕ್ಯಾಬ್​ ಚಾಲಕನನ್ನು ಯಲಹಂಕ ನ್ಯೂಟೌನ್ ಪೊಲೀಸರು ಬಂಧಿಸಿದ್ದಾರೆ. ಆರೋಪಿ ನಂದೀಶ್​​ನಿಂದ 30 ಲಕ್ಷ ಮೌಲ್ಯದ 485 ಗ್ರಾಂ ಚಿನ್ನ, 17 ಕ್ಯಾರೆಟ್ ತೂಕದ ವಜ್ರವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು: ಉದ್ಯಮಿಯ ವಜ್ರ, ಚಿನ್ನಾಭರಣ ಕಳ್ಳತನ ಮಾಡಿದ್ದ ಕ್ಯಾಬ್ ಚಾಲಕನ ಬಂಧನ
ಸಾಂದರ್ಭಿಕ ಚಿತ್ರ
ರಾಚಪ್ಪಾಜಿ ನಾಯ್ಕ್
| Edited By: ವಿವೇಕ ಬಿರಾದಾರ|

Updated on: Sep 02, 2023 | 11:15 AM

Share

ಬೆಂಗಳೂರು ಸೆ.02: ವಜ್ರ, ಚಿನ್ನಾಭರಣ ಕಳ್ಳತನ ಮಾಡಿದ್ದ ಕ್ಯಾಬ್​ ಚಾಲಕನನ್ನು (Cab Driver) ಯಲಹಂಕ (Yelahanka) ನ್ಯೂಟೌನ್ ಪೊಲೀಸರು ಬಂಧಿಸಿದ್ದಾರೆ. ರಾಜಾನುಕುಂಟೆ ಮೂಲದ ಕ್ಯಾಬ್ ಚಾಲಕ ನಂದೀಶ್ ಬಂಧಿತ ಆರೋಪಿ. ಆರೋಪಿ ನಂದೀಶ್​​ನಿಂದ 30 ಲಕ್ಷ ಮೌಲ್ಯದ 485 ಗ್ರಾಂ ಚಿನ್ನ, 17 ಕ್ಯಾರೆಟ್ ತೂಕದ ವಜ್ರವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಉದ್ಯಮಿಯೊಬ್ಬರು ಚೆನ್ನೈನಿಂದ ಬೆಂಗಳೂರಿಗೆ ಮದುವೆಗೆ ಬಂದಿದ್ದರು. ಉದ್ಯಮಿ ನಗರದ ಯಲಹಂಕ ಬಳಿಯ ಹೊಟೇಲ್​ನಲ್ಲಿ ಉಳಿದುಕೊಂಡಿದ್ದರು. ಮದುವೆ ಮುಗಿಸಿ ವಾಪಸ್ ತೆರಳುತ್ತಿರುವ ವೇಳೆ ಸೂಟ್​​ಕೇಸ್ ಕದ್ದುಕೊಂಡು ಪರಾರಿಯಾಗಿದ್ದಾನೆ. ಈ ಬಗ್ಗೆ ಉದ್ಯಮಿ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಂದೀಶ್ ಈ ಹಿಂದೆ ಹಲವು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದನು.

ಇದನ್ನೂ ಓದಿ: ಮಗಳನ್ನು ಹತ್ಯೆಗೈದಿದ್ದ ತಂದೆಗೆ ಕಠಿಣ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

ಚಿನ್ನ ಕದಿಯುತ್ತಿದ್ದ ಕಿಲಾಡಿ ಲೇಡಿ ಜೋಡಿ ಅರೆಸ್ಟ್

ನಗರದಲ್ಲಿ ಚಿನ್ನದ ಅಂಗಡಿಗಳನ್ನೇ ಟಾರ್ಗೆಟ್​ ಮಾಡಿ ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಜೋಡಿಯನ್ನು ಹತ್ತು ವರ್ಷದ ಬಳಿಕ ಬನಶಂಕರಿ ಪೊಲೀಸರು ಬಂಧಿಸಿದ್ದಾರೆ. ಚಿನ್ನ ಖರೀದಿಸುವ ನೆಪದಲ್ಲಿ ಜ್ಯುವೆಲರಿ ಶಾಪ್​ಗಳಿಗೆ ಎಂಟ್ರಿ ಕೊಡುವ ಈ ಖತರ್ನಾಕ್​ ಲೇಡಿ ಜೋಡಿ ಮಾಲೀಕನಿಗೆ ತಿಳಿಯದ ಹಾಗೆ ಚಿನ್ನ ಕದ್ದು ಪರಾರಿಯಾಗುತ್ತಿದ್ದರು. ಸದ್ಯ ಈ ಜೋಡಿ ಹತ್ತು ವರ್ಷದ ಬಳಿಕ ಮತ್ತೆ ಸದ್ದು ಮಾಡಿ ಈಗ ಸಿಕ್ಕಿ ಬಿದ್ದಿದೆ. ರತ್ನ ಪೆರುಮಾಳ್ ಹಾಗೂ ಕೃಷ್ಣವೇಣಿ ಬಂಧಿತ ಆರೋಪಿಗಳು. ಇವರು ಬೆಂಗಳೂರಿನ ಚಿನ್ನದ ಅಂಗಡಿಗಳನ್ನೇ ಟಾರ್ಗೆಟ್​ ಮಾಡುತ್ತಿದ್ದರು.

ಬಂಧಿತ ಮಹಿಳೆಯರು, ನಕಲಿ ಚಿನ್ನದೊಂದಿಗೆ ಚಿನ್ನದ ಅಂಗಡಿಗಳಿಗೆ ಎಂಟ್ರಿ ಕೊಡುತ್ತಿದ್ದರು. ಮಾಲೀಕರ ಗಮನ ಬೇರೆಡೆ ಸೆಳೆದು ನಕಲಿ ಚಿನ್ನವನ್ನಿಟ್ಟು ಅಸಲಿ ಚಿನ್ನದೊಂದಿಗೆ ಎಸ್ಕೇಪ್ ಆಗುತ್ತಿದ್ದರು. ತಮಿಳುನಾಡು ಮೂಲದವರಾದ ಈ ಮಹಿಳೆಯರು ಬೆಂಗಳೂರಿನ ಹಲವೆಡೆ ತಮ್ಮ ಕೈಚಳಕ ತೋರಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ