AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಉದ್ಯಮಿಯ ವಜ್ರ, ಚಿನ್ನಾಭರಣ ಕಳ್ಳತನ ಮಾಡಿದ್ದ ಕ್ಯಾಬ್ ಚಾಲಕನ ಬಂಧನ

ಮದುವೆಗೆಂದು ಚೆನ್ನೈನಿಂದ ಬೆಂಗಳೂರಿಗೆ ಬಂದಿದ್ದ ಉದ್ಯಮಿಯ ವಜ್ರ, ಚಿನ್ನಾಭರಣ ಕಳ್ಳತನ ಮಾಡಿದ್ದ ಕ್ಯಾಬ್​ ಚಾಲಕನನ್ನು ಯಲಹಂಕ ನ್ಯೂಟೌನ್ ಪೊಲೀಸರು ಬಂಧಿಸಿದ್ದಾರೆ. ಆರೋಪಿ ನಂದೀಶ್​​ನಿಂದ 30 ಲಕ್ಷ ಮೌಲ್ಯದ 485 ಗ್ರಾಂ ಚಿನ್ನ, 17 ಕ್ಯಾರೆಟ್ ತೂಕದ ವಜ್ರವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು: ಉದ್ಯಮಿಯ ವಜ್ರ, ಚಿನ್ನಾಭರಣ ಕಳ್ಳತನ ಮಾಡಿದ್ದ ಕ್ಯಾಬ್ ಚಾಲಕನ ಬಂಧನ
ಸಾಂದರ್ಭಿಕ ಚಿತ್ರ
ರಾಚಪ್ಪಾಜಿ ನಾಯ್ಕ್
| Edited By: ವಿವೇಕ ಬಿರಾದಾರ|

Updated on: Sep 02, 2023 | 11:15 AM

Share

ಬೆಂಗಳೂರು ಸೆ.02: ವಜ್ರ, ಚಿನ್ನಾಭರಣ ಕಳ್ಳತನ ಮಾಡಿದ್ದ ಕ್ಯಾಬ್​ ಚಾಲಕನನ್ನು (Cab Driver) ಯಲಹಂಕ (Yelahanka) ನ್ಯೂಟೌನ್ ಪೊಲೀಸರು ಬಂಧಿಸಿದ್ದಾರೆ. ರಾಜಾನುಕುಂಟೆ ಮೂಲದ ಕ್ಯಾಬ್ ಚಾಲಕ ನಂದೀಶ್ ಬಂಧಿತ ಆರೋಪಿ. ಆರೋಪಿ ನಂದೀಶ್​​ನಿಂದ 30 ಲಕ್ಷ ಮೌಲ್ಯದ 485 ಗ್ರಾಂ ಚಿನ್ನ, 17 ಕ್ಯಾರೆಟ್ ತೂಕದ ವಜ್ರವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಉದ್ಯಮಿಯೊಬ್ಬರು ಚೆನ್ನೈನಿಂದ ಬೆಂಗಳೂರಿಗೆ ಮದುವೆಗೆ ಬಂದಿದ್ದರು. ಉದ್ಯಮಿ ನಗರದ ಯಲಹಂಕ ಬಳಿಯ ಹೊಟೇಲ್​ನಲ್ಲಿ ಉಳಿದುಕೊಂಡಿದ್ದರು. ಮದುವೆ ಮುಗಿಸಿ ವಾಪಸ್ ತೆರಳುತ್ತಿರುವ ವೇಳೆ ಸೂಟ್​​ಕೇಸ್ ಕದ್ದುಕೊಂಡು ಪರಾರಿಯಾಗಿದ್ದಾನೆ. ಈ ಬಗ್ಗೆ ಉದ್ಯಮಿ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಂದೀಶ್ ಈ ಹಿಂದೆ ಹಲವು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದನು.

ಇದನ್ನೂ ಓದಿ: ಮಗಳನ್ನು ಹತ್ಯೆಗೈದಿದ್ದ ತಂದೆಗೆ ಕಠಿಣ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

ಚಿನ್ನ ಕದಿಯುತ್ತಿದ್ದ ಕಿಲಾಡಿ ಲೇಡಿ ಜೋಡಿ ಅರೆಸ್ಟ್

ನಗರದಲ್ಲಿ ಚಿನ್ನದ ಅಂಗಡಿಗಳನ್ನೇ ಟಾರ್ಗೆಟ್​ ಮಾಡಿ ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಜೋಡಿಯನ್ನು ಹತ್ತು ವರ್ಷದ ಬಳಿಕ ಬನಶಂಕರಿ ಪೊಲೀಸರು ಬಂಧಿಸಿದ್ದಾರೆ. ಚಿನ್ನ ಖರೀದಿಸುವ ನೆಪದಲ್ಲಿ ಜ್ಯುವೆಲರಿ ಶಾಪ್​ಗಳಿಗೆ ಎಂಟ್ರಿ ಕೊಡುವ ಈ ಖತರ್ನಾಕ್​ ಲೇಡಿ ಜೋಡಿ ಮಾಲೀಕನಿಗೆ ತಿಳಿಯದ ಹಾಗೆ ಚಿನ್ನ ಕದ್ದು ಪರಾರಿಯಾಗುತ್ತಿದ್ದರು. ಸದ್ಯ ಈ ಜೋಡಿ ಹತ್ತು ವರ್ಷದ ಬಳಿಕ ಮತ್ತೆ ಸದ್ದು ಮಾಡಿ ಈಗ ಸಿಕ್ಕಿ ಬಿದ್ದಿದೆ. ರತ್ನ ಪೆರುಮಾಳ್ ಹಾಗೂ ಕೃಷ್ಣವೇಣಿ ಬಂಧಿತ ಆರೋಪಿಗಳು. ಇವರು ಬೆಂಗಳೂರಿನ ಚಿನ್ನದ ಅಂಗಡಿಗಳನ್ನೇ ಟಾರ್ಗೆಟ್​ ಮಾಡುತ್ತಿದ್ದರು.

ಬಂಧಿತ ಮಹಿಳೆಯರು, ನಕಲಿ ಚಿನ್ನದೊಂದಿಗೆ ಚಿನ್ನದ ಅಂಗಡಿಗಳಿಗೆ ಎಂಟ್ರಿ ಕೊಡುತ್ತಿದ್ದರು. ಮಾಲೀಕರ ಗಮನ ಬೇರೆಡೆ ಸೆಳೆದು ನಕಲಿ ಚಿನ್ನವನ್ನಿಟ್ಟು ಅಸಲಿ ಚಿನ್ನದೊಂದಿಗೆ ಎಸ್ಕೇಪ್ ಆಗುತ್ತಿದ್ದರು. ತಮಿಳುನಾಡು ಮೂಲದವರಾದ ಈ ಮಹಿಳೆಯರು ಬೆಂಗಳೂರಿನ ಹಲವೆಡೆ ತಮ್ಮ ಕೈಚಳಕ ತೋರಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!