Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಕೆಲಸ ಕೊಡಿಸ್ತೀವಿ ಅಂತಾ ಕರೆದು ಸುಲಿಗೆ ಮಾಡಿದ್ದ ಗ್ಯಾಂಗ್​ ಬಂಧನ ​

ಕೆಲಸ ಕೊಡಿಸುತ್ತೇವೆ ಅಂತ ಕರೆದು ಸುಲಿಗೆ ಮಾಡಿದ್ದ ಗ್ಯಾಂಗ್​ನ್ನು ಕೊಡಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

Bengaluru News: ಕೆಲಸ ಕೊಡಿಸ್ತೀವಿ ಅಂತಾ ಕರೆದು ಸುಲಿಗೆ ಮಾಡಿದ್ದ ಗ್ಯಾಂಗ್​ ಬಂಧನ   ​
ಕೊಡಿಗೆಹಳ್ಳಿ ಪೊಲೀಸ್​​ ಠಾಣೆ
Follow us
TV9 Web
| Updated By: ವಿವೇಕ ಬಿರಾದಾರ

Updated on: Feb 03, 2023 | 12:01 PM

ಬೆಂಗಳೂರು: ಕೆಲಸ ಕೊಡಿಸುತ್ತೇವೆ ಅಂತ ಕರೆದು ಸುಲಿಗೆ ಮಾಡಿದ್ದ ಗ್ಯಾಂಗ್​ನ್ನು ಕೊಡಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶ ಮೂಲದ ಮಲ್ಲು ಶಿವಶಂಕರ ರೆಡ್ಡಿ, ಗುಂಜ ಮಂಗರಾವ್, ಶೇಕ್ ಶಹಬಾಜಿ, ಮಹೇಶ್ ಬಂಧಿತ ಆರೋಪಿಗಳು. ಗ್ಯಾಂಗ್ ಸಾಮಾಜಿಕ ಜಾಲತಾಣದ ಮೂಲಕ ಕೆಲಸ ಕೊಡಿಸುತ್ತೇವೆ ಎಂದು ಜಾಹಿರಾತು ನೀಡಿದೆ. ಇದನ್ನು ನಂಬಿದ್ದ ಆಂಧ್ರಪ್ರದೇಶದ ಪ್ರದೀಪ್ ಅಸಾಮ್ವರ್​​ಗೆ ಆರೋಪಿ ಮಲ್ಲು ಶಿವಶಂಕರ್ ರೆಡ್ಡಿ ಫೇಸ್ ಬುಕ್​ ಮುಖಾಂತರ ಪರಿಚಯವಾಗಿದ್ದನು. ನಂತರ ಖಾಸಗಿ ಕಂಪನಿಯಲ್ಲಿ ಕೆಲಸ ಕೊಡಿಸುತ್ತೇನೆಂದು ನಂಬಿಸಿ, ಆಂದ್ರದಿಂದ ಬೆಂಗಳೂರಿಗೆ ಬರುವಂತೆ ಆರೋಪಿ ಹೇಳಿದ್ದನು.

ಇದರಂತೆ ಪ್ರದೀಪ್ ಅಸಾಮ್ವರ್ ಜನವರಿ 11 ರಂದು ಬೆಳಗ್ಗೆ 5.30 ಕ್ಕೆ ಹೆಬ್ಬಾಳ ಬಳಿ ಬಂದು ಇಳಿದಿದ್ದನು. ಹೆಬ್ಬಾಳನಲ್ಲಿ ಪ್ರದೀಪ್ ಅಸಾಮ್ವರ್​​ನನ್ನು ಸ್ವಿಫ್ಟ್ ಕಾರಿನಲ್ಲಿ ಬಂದು ನಾಲ್ವರು ಪಿಕ್ ಮಾಡಿಕೊಂಡಿದ್ದಾರೆ. ಈ ವೇಳೆ ಪ್ರದೀಪ್ ಅಸಾಮ್ವರ್ ಕಾರಿನ ಫೋಟೊ ತೆಗೆದುಕೊಂಡಿದ್ದನು. ಪ್ರದೀಪ್​​ನ​ನ್ನು ಕಾರಿನಲ್ಲಿ ಕೂರಿಸಿಕೊಂಡಿದ್ದ ಗ್ಯಾಂಗ್​ ಮ್ಯಾನೆಜರ್ ಭೇಟಿ ಮಾಡಿಸ್ತೇವೆ ಎಂದು ಕರೆದೊಯ್ದಿದ್ದಾರೆ. ಹೀಗೆ ಕಾರಿನಲ್ಲಿ ಹೋಗುವಾಗ ಪ್ರದೀಪ್, ಶಿವಶಂಕರ್ ರೆಡ್ಡಿ ಜೊತೆಗೆ ಬಂದಿದ್ದವರ ಹೆಸರು ಕೇಳಿದ್ದಾನೆ. ಆಗ ಆರೋಪಿ ಶಿವಶಂಕರ್​ ರೆಡ್ಡಿ ಹೆಸರು ಹೇಳದಿದ್ದಾಗ ಆತನಿಗೆ ಅನುಮಾನ ಬಂದಿದೆ.

ಬಳಿಕ ಗ್ಯಾಂಗ್ ಡಾಕ್ಯುಮೆಂಟ್ ಚಾರ್ಜ್ ಎಂದು 30 ಸಾವಿರ ಹಣ ಹಾಕಲು ಪ್ರದೀಪ್​​ಗೆ ಹೇಳಿದೆ. ಗೂಗಲ್​​ ಪೇ ವರ್ಕ್ ಆಗದಿದ್ದಾಗ ಮೊಬೈಲ್ ಕಸಿದು ಪರಿಶೀಲನೆ ಮಾಡಿದ್ದಾರೆ. ಆಗ ಕಾರಿನ ಫೋಟೊ ಲೈವ್ ಲೊಕೇಶನ್ ನೋಡಿ ಪ್ರದೀಪ್​ಗೆ ಥಳಿಸಿದ್ದಾರೆ. ನಂತರ ನಿನಗೆ ಕೆಲಸ ಸಿಕ್ಕಿದೆ ಎಂದು ಸ್ನೇಹಿತರ ಬಳಿ ಹಣ ಹಾಕಿಸಿಕೊ ಎಂದು ಪ್ರದೀಪ್​ಗೆ ಬೆದರಿಸಿದ್ದಾರೆ. ಹೀಗೆ ಆರೋಪಿಗಳು ಒಟ್ಟು 6 ಲಕ್ಷ ಹಣ ಅಕೌಂಟ್ ಮೂಲಕ ಪಾವತಿ ಮಾಡಿಸಿಕೊಂಡಿದೆ. ಅಲ್ಲದೆ ಕ್ರಿಕೆಟ್ ಬೆಟ್ಟಿಂಗ್ ಆ್ಯಪ್​ನಲ್ಲೂ ಹಾಣ ಹಾಕಿಸಿಕೊಂಡಿದ್ದಾರೆ. ನಂತರ ಯಲಹಂಕ ಸಮೀದ ಡೆಕಾತ್ ಲ್ಯಾನ್ ಬಳಿ ಬಿಟ್ಟು ಪರಾರಿಯಾಗಿದ್ದಾರೆ.

ಬಳಿಕ ಪ್ರದೀಪ್ ಘಟನೆ ಸಂಬಂಧ ಕೊಡಿಗೆಹಳ್ಳಿ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಅನ್ವಯ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಸಿದ್ದಾರೆ. ಸದ್ಯ 5 ಅಕೌಂಟ್​ನಲ್ಲಿರುವ 5 ಲಕ್ಷ ಹಣ ಫ್ರೀಜ್ ಮಾಡಿಸಲಾಗಿದೆ.

ವಿಚಾರಣೆ ವೇಳೆ ಹೊರಬಂತು ಭಯಾನಕ ವಿಚಾರ

ಕೊಡಿಗೆಹಳ್ಳಿ ಪೊಲೀಸರ ವಿಚಾರಣೆ ವೇಳೆ ಭಯಾನಕ ವಿಚಾರ ಹೊರಬಂದಿದೆ. ಆರೋಪಿ ಮಲ್ಲು ಅಲಿಯಾಸ್​ ಗೋಪಿಚಂದ್ ಕೂಡ ಟೆಕ್ಕಿಯಾಗಿದ್ದಾನೆ. ಮಾನ್ಯತಾ ಟೆಕ್ ಪಾರ್ಕ್​​ನಲ್ಲಿ ಕೆಲಸ ಮಾಡಿಕೊಂಡಿದ್ದನು. ಆಸಾಮಿ ಡೂಪ್ಲಿಕೇಟ್ ದಾಖಲಾತಿ‌ ನೀಡಿ ಕೆಲಸಕ್ಕೆ ಸೇರಿಕೊಂಡಿದ್ದನು. ವಿಷಯ ಗೊತ್ತಾದ ಬಳಿಕ ಆತನನ್ನ ಕೆಲಸದಿಂದ ತೆಗೆದುಹಾಕಲಾಗಿತ್ತು. ಆಗಿನಿಂದ ಕೆಲಸ ಇಲ್ಲದೆ ಖಾಲಿ‌ ಇದ್ದನು.

ಹೀಗಾಗಿ ಫೇಸ್ ಬುಕ್ ನಲ್ಲಿ ಶಿವಶಂಕರ್ ಎನ್ನುವ ಹೆಸರಲ್ಲಿ‌ ನಕಲಿ‌ ಖಾತೆ ತೆರೆದಿದ್ದನು. ನಂತರ ನಮ್ಮಲ್ಲಿ ಕನ್ಸಲ್ಟೆನ್ಸಿ ಕೆಲಸ ಕೊಡಿಸುತ್ತೇವೆ ಎಂದು ಜಾಹಿರಾತು ನೀಡಿದ್ದರು. ಆಸಕ್ತಿ ಇರುವವರು ಸಂಪರ್ಕಿಸಿದಾಗ ಬಲೆ ಹಾಕುತ್ತಿದ್ದನು. ಆರೋಪಿ ಕೇವಲ‌ ಮೆಸೆಂಜರ್​ನಲ್ಲಿ ಮಾತ್ರ ಸಂಪರ್ಕ ಮಾಡುತ್ತಿದ್ದನು. ಕೆಲಸ ಕೊಡಿಸಲು 4-5 ಲಕ್ಷಕ್ಕೆ ಡಿಮ್ಯಾಂಡ್ ಮಾಡುತ್ತಿದ್ದನು. ದುಡ್ಡು ಇದ್ಯೋ‌ ಇಲ್ವೋ ಅನ್ನೋದನ್ನ ತಿಳಿಯಲು ಅಕೌಂಟ್ ಬ್ಯಾಲೆನ್ಸ್ ಸ್ಕ್ರೀನ್ ಶಾಟ್ ಕಳುಹಿಸಿಕೊಳ್ಳುತ್ತಿದ್ದನು.

ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ