Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಲ್ ಆಫ್ ಏಷ್ಯಾಗೆ ಜನರ ಪ್ರವೇಶ ನಿರ್ಬಂಧ ಪ್ರಶ್ನಿಸಿ ರಿಟ್​ ಅರ್ಜಿ: ತುರ್ತು ವಿಚಾರಣೆ ನಡೆಸಿದ ಹೈಕೋರ್ಟ್​​

ರವಿವಾರ ಡಿಸೆಂಬರ್​ 31 ರಿಂದ ಮುಂದಿನ 15 ದಿನಗಳ ಕಾಲ ಮಾಲ್​ ಆಫ್​ ಏಷ್ಯಾವನ್ನು ಬಂದ್​ ಮಾಡಲಾಗಿದೆ. ಮಾಲ್ ಆಫ್ ಏಷ್ಯಾ ಬಂದ್ ಮಾಡಿದ್ದನ್ನು ಪ್ರಶ್ನಿಸಿ ಸ್ಪಾರ್ಕಲ್ ಒನ್ ಮಾಲ್ ಡೆವಲಪರ್ಸ್ ಪ್ರೈವೇಟ್​ ಲಿಮಿಟೆಡ್​ ಹೈಕೋರ್ಟ್​​ನಲ್ಲಿ ರಿಟ್​ ಅರ್ಜಿ ಸಲ್ಲಿಸಿದೆ.

ಮಾಲ್ ಆಫ್ ಏಷ್ಯಾಗೆ ಜನರ ಪ್ರವೇಶ ನಿರ್ಬಂಧ ಪ್ರಶ್ನಿಸಿ ರಿಟ್​ ಅರ್ಜಿ: ತುರ್ತು ವಿಚಾರಣೆ ನಡೆಸಿದ ಹೈಕೋರ್ಟ್​​
ಹೈಕೋರ್ಟ್​​
Follow us
Ramesha M
| Updated By: ವಿವೇಕ ಬಿರಾದಾರ

Updated on:Dec 31, 2023 | 1:47 PM

ಬೆಂಗಳೂರು, ಡಿಸೆಂಬರ್​ 31: ಮಾಲ್ ಆಫ್ ಏಷ್ಯಾಗೆ (Mall of Asia) ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಿರುವ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸ್ಪಾರ್ಕಲ್ ಒನ್ ಮಾಲ್ ಡೆವಲಪರ್ಸ್ ಪ್ರೈವೇಟ್​ ಲಿಮಿಟೆಡ್​ ಹೈಕೋರ್ಟ್​​ಗೆ (High Court) ರಿಟ್ ಅರ್ಜಿ ಸಲ್ಲಿಸಿದೆ. ಈ ರಿಟ್​​ ಅರ್ಜಿಯನ್ನು ತುರ್ತು ವಿಚಾರಣೆ ನಡೆಸಿದ ಏಕಸದಸ್ಯ ಪೀಠ ಸರ್ಕಾರಕ್ಕೆ ಹಲವು ಪ್ರಶ್ನೆಗಳನ್ನು ಕೇಳಿದೆ. ಅರ್ಜಿಯನ್ನು ಕೈಗೆತ್ತಿಕೊಂಡ ನ್ಯಾ. ಎಂ.ಜಿ.ಎಸ್. ಕಮಲ್ ಅವರು “ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಹೊಣೆಯಾಗಿದೆ. ಅನುಷ್ಠಾನಯೋಗ್ಯ ಪರಿಹಾರ ಯೋಚಿಸಿದ್ದೀರಾ? ಇಷ್ಟು ದಿನದ ನಂತರ ಮಾಲ್​ಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸುವುದು ಏಕೆ? ಎಂದು ಪ್ರಶ್ನಿಸಿದ್ದಾರೆ.

ಸಾರ್ವಜನಿಕರನ್ನ ಮಾಲ್​ಗೆ ನಿರ್ಬಂಧಿಸುವುದು ಪರಿಹಾರವೇ? ಮಾಲ್‌ನಲ್ಲಿ ಯಾವುದೇ ಱಲಿ ನಡೆಯುತ್ತಿಲ್ಲ. ಮಾಲ್​ನಲ್ಲಿ ಧಾರ್ಮಿಕ ಪ್ರವಚನಗಳು ನಡೆಯುತ್ತಿಲ್ಲ. ಅಕ್ಟೋಬರ್ ತಿಂಗಳಿನಿಂದ ಮಾಲ್ ಕಾರ್ಯಾಚರಣೆ ನಡೆಸುತ್ತಿದೆ. ಸರ್ಕಾರದ ಆದೇಶ ಗೊಂದಲವಾಗಿರಬಾರದು, ಸ್ಪಷ್ಟವಾಗಿರಬೇಕು. ಸರ್ಕಾರ ಮತ್ತು ಮಾಲ್ ಇಬ್ಬರೂ ಸೇರಿ ಸೂಕ್ತ ಪರಿಹಾರ ರೂಪಿಸಿ ಎಂದು ಸೂಚಿಸಿದರು.

ಇದನ್ನೂ ಓದಿ: ಡಿ.31 ರಿಂದ 15 ದಿನ ಮಾಲ್ ಆಫ್ ಏಷ್ಯಾ ಬಾಗಿಲು ಬಂದ್: ಕಾರಣ ಇಲ್ಲಿದೆ

ಸ್ವಯಂಪ್ರೇರಿತವಾಗಿ ಇಂದು ಮಾಲ್‌ ಮುಚ್ಚಲು ನಿರ್ಧರಿಸಲಾಗಿದೆ. ಮಾಲ್​​ ಒಳಗೆ ಸಾರ್ವಜನಿಕರ ಪ್ರವೇಶ ಪ್ರತಿಬಂಧಿಸಲಾಗಿಲ್ಲ. ಸಾರ್ವಜನಿಕರ ಪ್ರವೇಶಕ್ಕೆ ನಿಯಂತ್ರಣ ವಿಧಿಸಲಾಗಿದೆ. ಈ ನಿರ್ಬಂಧನೆಯ ವಿಧಾನದ ಬಗ್ಗೆ ಚರ್ಚಿಸಿ ತೀರ್ಮಾನಿಸಲಾಗುವುದು. ಮಧ್ಯಾಹ್ನ 3 ಗಂಟೆಗೆ ಪೊಲೀಸ್ ಆಯುಕ್ತರೊಂದಿಗೆ ಚರ್ಚಿಸಲಾಗುವುದು ಎಂದು ಮಾಲ್‌ಪರ ಹಿರಿಯ ವಕೀಲ ಧ್ಯಾನ್ ಚಿನ್ನಪ್ಪ ನ್ಯಾಯಾಲಯಕ್ಕೆ ತಿಳಿಸಿದರು.

ಎರಡೂ ಕಡೆಯ ವಾದವನ್ನು ಆಲಿಸಿದ ಏಕದಸ್ಯ ಪೀಠ “ಚರ್ಚೆಯ ಫಲಶೃತಿಯನ್ನು ಜನವರಿ 2 ರಂದು ತಿಳಿಸಬೇಕು. ಅಲ್ಲಿಯವರೆಗೆ ಮಾಲ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳಬಾರದು” ಎಂದು ಸರ್ಕಾರಕ್ಕೆ ಸೂಚನೆ ನೀಡಿತು.

ಪ್ರತಿಭಟನೆ ವೇಳೆ ಮಾಲ್ ಆಫ್ ಏಷ್ಯಾ ಮೇಲೆ ದಾಳಿ‌ ನಡೆಸಿದ್ದ ಕರವೇ

ಮೊನ್ನೆಯಷ್ಟೇ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಕರವೇ ಕಾರ್ಯಕರ್ತರು ಮಾಲ್​ ಆಫ್​ ಏಷ್ಯಾ ಮೇಲೆ ದಾಳಿ ನಡೆಸಿ, ನಾಮಪಲಕ ಒಡೆದು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಸಂಬಂಧ ಕೊಡಿಗೇಹಳ್ಳಿ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿತ್ತು. ಈಗ ಮುಂಜಾಗ್ರತೆ ಹಿನ್ನೆಲೆ ಮುಂದಿನ‌‌ 15 ನೇ ತಾರೀಖಿನವರೆಗೂ 144 ಸೆಕ್ಷನ್ ಜಾರಿ ಮಾಡಿ ಆದೇಶಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:05 pm, Sun, 31 December 23

ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್
ಚಾಮುಂಡೇಶ್ವರಿ ದೇವಾಲಯಕ್ಕೆ ಬಂದ ದರ್ಶನ್ ಪುತ್ರ ವಿನೀಶ್
ಚಾಮುಂಡೇಶ್ವರಿ ದೇವಾಲಯಕ್ಕೆ ಬಂದ ದರ್ಶನ್ ಪುತ್ರ ವಿನೀಶ್
ಕಾಂಗ್ರೆಸ್ ಸಾಮೂಹಿಕ ನಾಯಕತ್ವದಲ್ಲಿ ವಿಶ್ವಾಸ ಹೊಂದಿದೆ: ಎಂಬಿ ಪಾಟೀಲ್
ಕಾಂಗ್ರೆಸ್ ಸಾಮೂಹಿಕ ನಾಯಕತ್ವದಲ್ಲಿ ವಿಶ್ವಾಸ ಹೊಂದಿದೆ: ಎಂಬಿ ಪಾಟೀಲ್