Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿನ ಸೈಬರ್​ ಕ್ರೈಂ ಪ್ರಕರಣಗಳ ಪತ್ತೆಗೆ ನಾಲ್ವರು ಡಿಸಿಪಿಗಳ ನೇಮಕ

ಈಗಾಗಲೇ ಒಂದೊಂದು ವಿಭಾಗದಲ್ಲಿ ಸಾವಿರಕ್ಕು ಅಧಿಕ ಪ್ರಕರಣಗಳು ದಾಖಲಾಗಿವೆ. ಬರೀ ಪ್ರಕರಣ ಮಾತ್ರ ದಾಖಲಾಗುತ್ತಿದೆ. ಅದರೆ ತನಿಖೆಯಾಗುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಹೀಗಾಗಿ ತನಿಖೆಗೆ ಸಹಾಯ, ಆರೋಪಿಗಳ ಬಂಧನಕ್ಕೆ ಬಲೆ ಬೀಸುವುದು ಸೇರಿದಂತೆ ಪ್ರಕರಣದ ಸಂಪೂರ್ಣ ಜವಾಬ್ದಾರಿಯನ್ನು ಡಿಸಿಪಿ ನೇತೃತ್ವದ ತಂಡಕ್ಕೆ ವಹಿಸಲಾಗಿದೆ.

ಬೆಂಗಳೂರಿನಲ್ಲಿನ ಸೈಬರ್​ ಕ್ರೈಂ ಪ್ರಕರಣಗಳ ಪತ್ತೆಗೆ ನಾಲ್ವರು ಡಿಸಿಪಿಗಳ ನೇಮಕ
ಸಾಂದರ್ಭಿಕ ಚಿತ್ರ
Follow us
Jagadisha B
| Updated By: ವಿವೇಕ ಬಿರಾದಾರ

Updated on: Nov 18, 2023 | 10:00 AM

ಬೆಂಗಳೂರು ನ.18: ನಗರದಲ್ಲಿ ಮಿತಿ ಮೀರಿದ ಸೈಬರ್ ವಂಚಕರ ಹಾವಳಿ ಮಿತಿ ಮೀರಿದ್ದು, ಪ್ರತಿ ವರ್ಷ ಹತ್ತು ಸಾವಿರಕ್ಕು ಅಧಿಕ ಪ್ರಕರಣಗಳು ದಾಖಲಾಗುತ್ತಿವೆ. ಸೈಬರ್​​ ವಂಚಕರ ಬಲೆಗೆ ಬಿದ್ದು ಜನರು ಕೋಟ್ಯಾಂತರ ರೂಪಾಯಿ ಕಳೆದುಕೊಂಡಿದ್ದಾರೆ. ಈ ಸೈಬರ್​ ವಂಚಕರನ್ನು ಮಟ್ಟ ಹಾಕಲು ಬೆಂಗಳೂರು ಮಹಾನಗರ ಪೊಲೀಸ್​ ಆಯುಕ್ತ ಬಿ.‌ದಯಾನಂದ್ (B Dayananda) ಹೊಸ ಕ್ರಮಕ್ಕೆ ಕೈಗೊಂಡಿದ್ದಾರೆ. ಸೈಬರ್​ ಕ್ರೈಂ (Cyber Crime) ತಡೆಯಲು ಮತ್ತು ಆರೋಪಿಗಳನ್ನು ಪತ್ತೆ ಹಚ್ಚಲು ನಾಲ್ವರು ಡಿಸಿಪಿಗಳನ್ನು (DCP)ನೇಮಿಸಿದ್ದಾರೆ. ಸೈಬರ್ ಕ್ರೈಂ ವಂಚನೆಗಳನ್ನು ನಾಲ್ಕು ವಿಭಾಗಗಳಾಗಿ ವಿಂಗಡಿಸಲಾಗಿದೆ. ಒಂದೊಂದು ವಿಭಾಗಕ್ಕೆ ಒಬ್ಬ ಡಿಸಿಪಿಯನ್ನು ನೇಮಿಸಲಾಗಿದೆ.

  1. ಆಧಾರ್ ಕಾರ್ಡ್ ಎನೇಮಲ್ ಪೇಮೆಂಟ್ ಸರ್ವೀಸ್ ವಂಚನೆ- ಈಶಾನ್ಯ ವಿಭಾಗ ಡಿಸಿಪಿ ಲಕ್ಷ್ಮೀ ಪ್ರಸಾದ್
  2. ಪೆಡೆಕ್ಸ್ ಕೊರಿಯರ್ ವಂಚನೆ- ಪೂರ್ವ ವಿಭಾಗ ಸಂಚಾರ ಡಿಸಿಪಿ ಕುಲದೀಪ್ ಕುಮಾರ್ ಜೈನ್
  3. ಆನ್ ಲೈನ್ ಜಾಬ್ ಚೀಟಿಂಗ್- ದಕ್ಷಿಣ ವಿಭಾಗ ಸಂಚಾರ ಡಿಸಿಪಿ ಶಿವಪ್ರಕಾಶ್ ದೇವರಾಜ್
  4. ಸೆಕ್ಸ್ ಟ್ರಾಕ್ಷನ್ ಕೇಸ್​ಗಳ ತನಿಖೆ- ಉತ್ತರ ವಿಭಾಗ ಸಂಚಾರ ಡಿಸಿಪಿ‌ ಸಚಿನ್ ಘೋರ್ಪಡೆ ಅವರನ್ನು ನೇಮಿಸಿದ್ದಾರೆ.

ಇದನ್ನೂ ಓದಿ: ಸೈಬರ್​ ಕ್ರೈಂ ಪ್ರಕರಣ ತಡೆಗಟ್ಟಲು ಪ್ರತ್ಯೇಕ CEN ಘಟಕಗಳ ಆರಂಭ

ಈಗಾಗಲೇ ಒಂದೊಂದು ವಿಭಾಗದಲ್ಲಿ ಸಾವಿರಕ್ಕು ಅಧಿಕ ಪ್ರಕರಣಗಳು ದಾಖಲಾಗಿವೆ. ಬರೀ ಪ್ರಕರಣ ಮಾತ್ರ ದಾಖಲಾಗುತ್ತಿದೆ. ಅದರೆ ತನಿಖೆಯಾಗುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಹೀಗಾಗಿ ತನಿಖೆಗೆ ಸಹಾಯ, ಆರೋಪಿಗಳ ಬಂಧನಕ್ಕೆ ಬಲೆ ಬೀಸುವುದು ಸೇರಿದಂತೆ ಪ್ರಕರಣದ ಸಂಪೂರ್ಣ ಜವಾಬ್ದಾರಿಯನ್ನು ಡಿಸಿಪಿ ನೇತೃತ್ವದ ತಂಡಕ್ಕೆ ವಹಿಸಲಾಗಿದೆ.

ಆಧಾರ್ ಕಾರ್ಡ್ ಬಳಸಿಕೊಂಡು ಸಾರ್ವಜನಿಕರ ಹಣ ಲಪಟಾಯಿಸುವುದು, ಹಾಗೂ ಅಶ್ಲೀಲ ಪೋಟೊ, ವಿಡಿಯೋ ತೋರಿಸಿ ಜನರಿಗೆ ಬ್ಲಾಕ್ ಮೇಲ್ ಮಾಡುವುದು. ವಿಡಿಯೋ ಕರೆ ಮಾಡಿ ಜನರಿಗೆ ಬೆದರಿಕೆ ಹಾಕಿ ಹಣ ವಸೂಲಿ ಮಾಡುವುದು. ಕೆಲಸ ಕೊಡಿಸುವುದು, ಗಿಪ್ಟ್ ಹೆಸರಲ್ಲಿ ಮಕ್ಮಲ್ ಟೋಪಿ ಹಾಕುವ ಪ್ರಕರಣಗಳ ತನಿಖೆಗೆ ಕಮೀಷನರ್ ಸೂಚನೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

2 ಬಾರಿ ಫೈನ್ ಕಟ್ಟಿದ ಬಳಿಕ ಹೊಸ ಸೆಲೆಬ್ರೇಷನ್ ಪರಿಚಯಿಸಿದ ದಿಗ್ವೇಶ್ ರಾಠಿ
2 ಬಾರಿ ಫೈನ್ ಕಟ್ಟಿದ ಬಳಿಕ ಹೊಸ ಸೆಲೆಬ್ರೇಷನ್ ಪರಿಚಯಿಸಿದ ದಿಗ್ವೇಶ್ ರಾಠಿ
ಅಧಿವೇಶನದ ಬಗ್ಗೆ ಬೆಂಗಳೂರಲ್ಲಿ ಬ್ರೀಫ್ ಮಾಡಿದ್ದ ಮಲ್ಲಿಕಾರ್ಜುನ ಖರ್ಗೆ
ಅಧಿವೇಶನದ ಬಗ್ಗೆ ಬೆಂಗಳೂರಲ್ಲಿ ಬ್ರೀಫ್ ಮಾಡಿದ್ದ ಮಲ್ಲಿಕಾರ್ಜುನ ಖರ್ಗೆ
ದಾಳಿಗೆ ಬಂದ ಚಿರತೆಯಿಂದ ಬಾಲಕನನ್ನು ರಕ್ಷಿಸಿದ ಶ್ವಾನಗಳು
ದಾಳಿಗೆ ಬಂದ ಚಿರತೆಯಿಂದ ಬಾಲಕನನ್ನು ರಕ್ಷಿಸಿದ ಶ್ವಾನಗಳು
ಕೊಕ್ಕನೂರ ಆಂಜನೇಯ ಉತ್ಸವದಲ್ಲಿ ಗಮನ ಸೆಳೆದ ಗರಿ ಗರಿ ನೋಟಿನ‌ ಪಲ್ಲಕ್ಕಿ
ಕೊಕ್ಕನೂರ ಆಂಜನೇಯ ಉತ್ಸವದಲ್ಲಿ ಗಮನ ಸೆಳೆದ ಗರಿ ಗರಿ ನೋಟಿನ‌ ಪಲ್ಲಕ್ಕಿ
ರಥಗಳ ಮೇಲೆ ಬಾಳೆಹಣ್ಣು ಎಸೆದು ಹರಕೆ ತೀರಿಸಿಕೊಂಡ ಭಕ್ತರು
ರಥಗಳ ಮೇಲೆ ಬಾಳೆಹಣ್ಣು ಎಸೆದು ಹರಕೆ ತೀರಿಸಿಕೊಂಡ ಭಕ್ತರು
ಬೆಟ್ಟಿಂಗ್ ಆ್ಯಪ್ ಪ್ರಮೋಷನ್​ಗೆ ಇನ್​ಫ್ಲುಯೆನ್ಸರ್​ಗಳು ಎಷ್ಟು ಪಡೀತಾರೆ?
ಬೆಟ್ಟಿಂಗ್ ಆ್ಯಪ್ ಪ್ರಮೋಷನ್​ಗೆ ಇನ್​ಫ್ಲುಯೆನ್ಸರ್​ಗಳು ಎಷ್ಟು ಪಡೀತಾರೆ?
ಶವ ಸಂಸ್ಕಾರದ ಸಮಯದಲ್ಲಿ ಮಾಡಿದ ಸಹಾಯ ಹೇಗೆ ಫಲ ಕೊಡುತ್ತೆ?
ಶವ ಸಂಸ್ಕಾರದ ಸಮಯದಲ್ಲಿ ಮಾಡಿದ ಸಹಾಯ ಹೇಗೆ ಫಲ ಕೊಡುತ್ತೆ?
ರವಿ ಮೀನ ರಾಶಿಯಲ್ಲಿ, ಚಂದ್ರ ಸಿಂಹ ರಾಶಿಯಲ್ಲಿ ಸಂಚಾರ
ರವಿ ಮೀನ ರಾಶಿಯಲ್ಲಿ, ಚಂದ್ರ ಸಿಂಹ ರಾಶಿಯಲ್ಲಿ ಸಂಚಾರ
‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ
‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ
ಪತಿರಾನ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಪ್ರಿಯಾಂಶ್
ಪತಿರಾನ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಪ್ರಿಯಾಂಶ್