Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಮಹಾಲಕ್ಷ್ಮೀ ಕೊಲೆ ಆರೋಪಿಯ ಸುಳಿವು ನೀಡಿದ ಪೊಲೀಸ್​ ಕಮಿಷನರ್

Bengaluru Mahalaxmi Murder Case: ದೆಹಲಿ ಶ್ರದ್ಧಾ ಕೊಲೆ ಮಾದರಿಯಲ್ಲಿ ಬೆಂಗಳೂರಿನಲ್ಲೂ ನಡೆದಿದೆ. ಬೆಂಗಳೂರು ನಗರದ ವೈಯಾಲಿಕಾವಲ್‌ನಲ್ಲಿ ವಾಸವಿದ್ದ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಿ, 30ಕ್ಕೂ ಹೆಚ್ಚು ತುಂಡು ಮಾಡಿ ಪ್ರೀಜರ್​ನಲ್ಲಿ ತುಂಬಲಾಗಿತ್ತು. ಮಹಾಲಕ್ಷ್ಮೀಯನ್ನು ಕೊಲೆ ಮಾಡಿದ ಆರೋಪಿಯ ಸುಳಿವು ಸಿಕ್ಕಿದೆ.

Follow us
Jagadisha B
| Updated By: ವಿವೇಕ ಬಿರಾದಾರ

Updated on:Sep 23, 2024 | 2:55 PM

ಬೆಂಗಳೂರು, ಸೆಪ್ಟೆಂಬರ್​ 23: ಬೆಂಗಳೂರು ವೈಯಾಲಿಕಾವಲ್‌ ನಿವಾಸಿ ಮಹಾಲಕ್ಷ್ಮೀ ಕೊಲೆ (Bengaluru Mahalaxmi Murder Case)​ ಪ್ರಕರಣದ ಆರೋಪಿಯ ಗುರುತು ಪತ್ತೆಯಾಗಿದೆ. ಆರೋಪಿಗಾಗಿ ಹುಡುಕಾಟ ಮುಂದುವರೆದಿದ್ದು, ಶೀಘ್ರದಲ್ಲಿ ಬಂಧಿಸುತ್ತೇವೆ. ಆರೋಪಿ ಹೊರ ರಾಜ್ಯದವನು ಎಂಬ ಮಾಹಿತಿ ಲಭ್ಯವಾಗಿದೆ. ಆತ ಬೆಂಗಳೂರಿನಲ್ಲಿ ವಾಸವಾಗಿದ್ದ ಎಂಬುವುದು ತಿಳಿದುಬಂದಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಗಣೇಶಮೂರ್ತಿ ಮೆರವಣಿಗೆ ವೇಳೆ ಗಲಾಟೆ ನಡೆದಿಲ್ಲ. ಯಾವುದೇ ಅಹಿತಕರ ಘಟನೆಯಾಗಿಲ್ಲ ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಡ್ರಗ್ಸ್​ ಸರಬರಾಜು ಮಾಡುತ್ತಿದ್ದ ಓರ್ವ ವಿದೇಶಿ ಪ್ರಜೆ ಮತ್ತು ಆತನ ಸಂಪರ್ಕದಲ್ಲಿದ್ದ ಮಹಿಳೆಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 1.5 ಕೋಟಿ ಮೌಲ್ಯದ ಒಂದು ಕೆಜಿ ಎಂಡಿಎಂಎ ವಶಕ್ಕೆ ಪಡೆಯಲಾಗಿದೆ. ಈಗಾಗಲೇ ತನಿಖೆ ಮುಂದುವರೆದಿದೆ. ಆರೋಪಿ ಮೂಲತಃ ಆಫ್ರಿಕಾ ದೇಶದವನಾಗಿದ್ದು, 2018ರಲ್ಲಿ ಭಾರತಕ್ಕೆ ಬಂಧಿದ್ದನು. ಆತನ ಜೊತೆಗೆ ಸಿಕ್ಕ ಮಹಿಳಾ ಆರೋಪಿ ಕೂಡ ಕೃತ್ಯದಲ್ಲಿ ಭಾಗಿಯಾಗಿದ್ದಳು ಎಂದು ತಿಳಿಸಿದರು.

ಇದನ್ನೂ ಓದಿ: FSL​ ತಜ್ಞರಿಗೆ ತಲೆನೋವಾದ ಬೆಂಗಳೂರು ಮಹಾಲಕ್ಷ್ಮೀ ಕೊಲೆ, ಪತ್ತೆಯಾಗದ ರಕ್ತದ ಕಲೆ!

ದಕ್ಷಿಣ ಸೆನ್ ವಿಭಾಗದ ಪೊಲೀಸರು ಒಂದು ಸೈಬರ್​ ವಂಚನೆ ಪ್ರಕರಣವನ್ನು ಬೇಧಿಸಿದ್ದಾರೆ. ಸೈಬರ್ ವಂಚನೆಯಲ್ಲಿ ತೊಡಗಿದ್ದ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಈತನ ನಾಲ್ವರು ಸಹಚರರಿಗಾಗಿ ಹುಡುಕಾಟ ನಡೆಸಿದ್ದಾರೆ. ಆರೋಪಿಗಳು ಕೆಂಗೇರಿಯಲ್ಲಿ ರೂಂವೊಂದನ್ನು ಬಾಡಿಗೆ  ಪೆಡೆದು ವಾಸವಾಗಿದ್ದರು. ಆರೋಪಿಗಳು ಓರ್ವ ವ್ಯಕ್ತಿಯಿಂದ ಬರೊಬ್ಬರಿ 30 ಲಕ್ಷ ರೂ. ಪಡೆದು, ವಂಚನೆ ಮಾಡಿದ್ದಾರೆ ಎಂದು ತಿಳಿಸಿದರು.

ಹುಳಿಮಾವು ಪೊಲೀಸರು ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 35 ಲಕ್ಷ ಮೌಲ್ಯದ ಮಾಲು ವಶಕ್ಕೆ ಪಡೆಯಲಾಗಿದೆ‌. ಆರೋಪಿಗಳಿಂದ 11 ಪ್ರಕರಣಗಳು ಬೆಳಕಿಗೆ ಬಂದಿವೆ. ಮೊದಲ ಆರೋಪಿಯ ಮೇಲೆ 24 ಪ್ರಕರಣ ದಾಖಲಾಗಿವೆ. ಎರಡನೇ ಆರೋಪಿ ವಿರುದ್ಧ 20 ಪ್ರಕರಣಗಳು ದಾಖಲಾಗಿವೆ ಎಂದು ಮಾಹಿತಿ ನೀಡಿದರು.

ಕೊತ್ತನೂರಿನ ಐಷಾರಾಮಿ ವಿಲ್ಲಾಗಳಲ್ಲಿ ಕಳ್ಳತನ ಮಾಡುತಿದ್ದ ಆರೋಪಿಯನ್ನು ಕೊತ್ತನೂರು ಪೊಲೀಸರು ಬಂಧಿಸಿದ್ದಾರೆ. 29ಲಕ್ಷ ಮೌಲ್ಯದ ಚಿನ್ನಾಭರಣ, ವಿದೇಶಿ ಕರೆನ್ಸಿ, ವಾಚ್​ಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಯ ಬಂಧನದಿಂದ 9 ಪ್ರಕರಣಗಳು ಪತ್ತೆಯಾಗಿವೆ. ಆರೋಪಿ ತ್ರಿಪುರ ಮೂಲದವನು ಅಂತ ತಿಳಿದುಬಂದಿದೆ ಎಂದು ಹೇಳಿದರು.

ಸುಬ್ರಮಣ್ಯ ನಗರ ಪೊಲೀಸರು ಕಳತನದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 12 ಪ್ರಕರಣ ಬೆಳಕಿಗೆ ಬಂದಿವೆ. ಮೂರು ಪ್ರಕರಣ ಕರ್ನಾಟಕ, ಉಳಿದ ಆರು ಪ್ರಕರಣ ಆಂಧ್ರ ಹಾಗೂ ತೆಲಂಗಾಣದಲ್ಲಿ ದಾಖಲಾಗಿವೆ. ಬಂಧಿತರಲ್ಲಿ ಕೆಲವರು ಎಂಓಬಿಗಳಾಗಿದ್ದಾರೆ. ಕೆಲವರು ನಾಪತ್ತೆಯಾಗಿದ್ದು ಹುಡುಕಾಟ ನಡೆಸಿದ್ದೇವೆ. ಬಂಧಿತರಿಂದ 3 ಲಕ್ಷಕ್ಕೂ ಅಧಿಕ ಮೌಲ್ಯದ ವಿದೇಶಿ ಕರೆನ್ಸಿ ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:15 pm, Mon, 23 September 24

ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು
ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ
ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ