AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಮಹಾಲಕ್ಷ್ಮೀ ಕೊಲೆ ಆರೋಪಿಯ ಸುಳಿವು ನೀಡಿದ ಪೊಲೀಸ್​ ಕಮಿಷನರ್

Bengaluru Mahalaxmi Murder Case: ದೆಹಲಿ ಶ್ರದ್ಧಾ ಕೊಲೆ ಮಾದರಿಯಲ್ಲಿ ಬೆಂಗಳೂರಿನಲ್ಲೂ ನಡೆದಿದೆ. ಬೆಂಗಳೂರು ನಗರದ ವೈಯಾಲಿಕಾವಲ್‌ನಲ್ಲಿ ವಾಸವಿದ್ದ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಿ, 30ಕ್ಕೂ ಹೆಚ್ಚು ತುಂಡು ಮಾಡಿ ಪ್ರೀಜರ್​ನಲ್ಲಿ ತುಂಬಲಾಗಿತ್ತು. ಮಹಾಲಕ್ಷ್ಮೀಯನ್ನು ಕೊಲೆ ಮಾಡಿದ ಆರೋಪಿಯ ಸುಳಿವು ಸಿಕ್ಕಿದೆ.

ಜಗದೀಶ ಬಿ.
| Edited By: ವಿವೇಕ ಬಿರಾದಾರ|

Updated on:Sep 23, 2024 | 2:55 PM

Share

ಬೆಂಗಳೂರು, ಸೆಪ್ಟೆಂಬರ್​ 23: ಬೆಂಗಳೂರು ವೈಯಾಲಿಕಾವಲ್‌ ನಿವಾಸಿ ಮಹಾಲಕ್ಷ್ಮೀ ಕೊಲೆ (Bengaluru Mahalaxmi Murder Case)​ ಪ್ರಕರಣದ ಆರೋಪಿಯ ಗುರುತು ಪತ್ತೆಯಾಗಿದೆ. ಆರೋಪಿಗಾಗಿ ಹುಡುಕಾಟ ಮುಂದುವರೆದಿದ್ದು, ಶೀಘ್ರದಲ್ಲಿ ಬಂಧಿಸುತ್ತೇವೆ. ಆರೋಪಿ ಹೊರ ರಾಜ್ಯದವನು ಎಂಬ ಮಾಹಿತಿ ಲಭ್ಯವಾಗಿದೆ. ಆತ ಬೆಂಗಳೂರಿನಲ್ಲಿ ವಾಸವಾಗಿದ್ದ ಎಂಬುವುದು ತಿಳಿದುಬಂದಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಗಣೇಶಮೂರ್ತಿ ಮೆರವಣಿಗೆ ವೇಳೆ ಗಲಾಟೆ ನಡೆದಿಲ್ಲ. ಯಾವುದೇ ಅಹಿತಕರ ಘಟನೆಯಾಗಿಲ್ಲ ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಡ್ರಗ್ಸ್​ ಸರಬರಾಜು ಮಾಡುತ್ತಿದ್ದ ಓರ್ವ ವಿದೇಶಿ ಪ್ರಜೆ ಮತ್ತು ಆತನ ಸಂಪರ್ಕದಲ್ಲಿದ್ದ ಮಹಿಳೆಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 1.5 ಕೋಟಿ ಮೌಲ್ಯದ ಒಂದು ಕೆಜಿ ಎಂಡಿಎಂಎ ವಶಕ್ಕೆ ಪಡೆಯಲಾಗಿದೆ. ಈಗಾಗಲೇ ತನಿಖೆ ಮುಂದುವರೆದಿದೆ. ಆರೋಪಿ ಮೂಲತಃ ಆಫ್ರಿಕಾ ದೇಶದವನಾಗಿದ್ದು, 2018ರಲ್ಲಿ ಭಾರತಕ್ಕೆ ಬಂಧಿದ್ದನು. ಆತನ ಜೊತೆಗೆ ಸಿಕ್ಕ ಮಹಿಳಾ ಆರೋಪಿ ಕೂಡ ಕೃತ್ಯದಲ್ಲಿ ಭಾಗಿಯಾಗಿದ್ದಳು ಎಂದು ತಿಳಿಸಿದರು.

ಇದನ್ನೂ ಓದಿ: FSL​ ತಜ್ಞರಿಗೆ ತಲೆನೋವಾದ ಬೆಂಗಳೂರು ಮಹಾಲಕ್ಷ್ಮೀ ಕೊಲೆ, ಪತ್ತೆಯಾಗದ ರಕ್ತದ ಕಲೆ!

ದಕ್ಷಿಣ ಸೆನ್ ವಿಭಾಗದ ಪೊಲೀಸರು ಒಂದು ಸೈಬರ್​ ವಂಚನೆ ಪ್ರಕರಣವನ್ನು ಬೇಧಿಸಿದ್ದಾರೆ. ಸೈಬರ್ ವಂಚನೆಯಲ್ಲಿ ತೊಡಗಿದ್ದ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಈತನ ನಾಲ್ವರು ಸಹಚರರಿಗಾಗಿ ಹುಡುಕಾಟ ನಡೆಸಿದ್ದಾರೆ. ಆರೋಪಿಗಳು ಕೆಂಗೇರಿಯಲ್ಲಿ ರೂಂವೊಂದನ್ನು ಬಾಡಿಗೆ  ಪೆಡೆದು ವಾಸವಾಗಿದ್ದರು. ಆರೋಪಿಗಳು ಓರ್ವ ವ್ಯಕ್ತಿಯಿಂದ ಬರೊಬ್ಬರಿ 30 ಲಕ್ಷ ರೂ. ಪಡೆದು, ವಂಚನೆ ಮಾಡಿದ್ದಾರೆ ಎಂದು ತಿಳಿಸಿದರು.

ಹುಳಿಮಾವು ಪೊಲೀಸರು ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 35 ಲಕ್ಷ ಮೌಲ್ಯದ ಮಾಲು ವಶಕ್ಕೆ ಪಡೆಯಲಾಗಿದೆ‌. ಆರೋಪಿಗಳಿಂದ 11 ಪ್ರಕರಣಗಳು ಬೆಳಕಿಗೆ ಬಂದಿವೆ. ಮೊದಲ ಆರೋಪಿಯ ಮೇಲೆ 24 ಪ್ರಕರಣ ದಾಖಲಾಗಿವೆ. ಎರಡನೇ ಆರೋಪಿ ವಿರುದ್ಧ 20 ಪ್ರಕರಣಗಳು ದಾಖಲಾಗಿವೆ ಎಂದು ಮಾಹಿತಿ ನೀಡಿದರು.

ಕೊತ್ತನೂರಿನ ಐಷಾರಾಮಿ ವಿಲ್ಲಾಗಳಲ್ಲಿ ಕಳ್ಳತನ ಮಾಡುತಿದ್ದ ಆರೋಪಿಯನ್ನು ಕೊತ್ತನೂರು ಪೊಲೀಸರು ಬಂಧಿಸಿದ್ದಾರೆ. 29ಲಕ್ಷ ಮೌಲ್ಯದ ಚಿನ್ನಾಭರಣ, ವಿದೇಶಿ ಕರೆನ್ಸಿ, ವಾಚ್​ಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಯ ಬಂಧನದಿಂದ 9 ಪ್ರಕರಣಗಳು ಪತ್ತೆಯಾಗಿವೆ. ಆರೋಪಿ ತ್ರಿಪುರ ಮೂಲದವನು ಅಂತ ತಿಳಿದುಬಂದಿದೆ ಎಂದು ಹೇಳಿದರು.

ಸುಬ್ರಮಣ್ಯ ನಗರ ಪೊಲೀಸರು ಕಳತನದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 12 ಪ್ರಕರಣ ಬೆಳಕಿಗೆ ಬಂದಿವೆ. ಮೂರು ಪ್ರಕರಣ ಕರ್ನಾಟಕ, ಉಳಿದ ಆರು ಪ್ರಕರಣ ಆಂಧ್ರ ಹಾಗೂ ತೆಲಂಗಾಣದಲ್ಲಿ ದಾಖಲಾಗಿವೆ. ಬಂಧಿತರಲ್ಲಿ ಕೆಲವರು ಎಂಓಬಿಗಳಾಗಿದ್ದಾರೆ. ಕೆಲವರು ನಾಪತ್ತೆಯಾಗಿದ್ದು ಹುಡುಕಾಟ ನಡೆಸಿದ್ದೇವೆ. ಬಂಧಿತರಿಂದ 3 ಲಕ್ಷಕ್ಕೂ ಅಧಿಕ ಮೌಲ್ಯದ ವಿದೇಶಿ ಕರೆನ್ಸಿ ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:15 pm, Mon, 23 September 24

Follow Us
ಬೆಳಗ್ಗೆ 6 ಗಂಟೆಯಿಂದಲೇ ‘ಟಾಕ್ಸಿಕ್’ ಪ್ರದರ್ಶನ ಆರಂಭ; ಜೋರಾಗಿದೆ ಕ್ರೇಜ್
ಬೆಳಗ್ಗೆ 6 ಗಂಟೆಯಿಂದಲೇ ‘ಟಾಕ್ಸಿಕ್’ ಪ್ರದರ್ಶನ ಆರಂಭ; ಜೋರಾಗಿದೆ ಕ್ರೇಜ್
ಬ್ರಿಕ್ಸ್ ಶೃಂಗಸಭೆಗೂ ಮುನ್ನ ಚೀನಾ ಸಚಿವರ ಜೊತೆ ಅಜಿತ್ ದೋವಲ್ ಮಾತುಕತೆ
ಬ್ರಿಕ್ಸ್ ಶೃಂಗಸಭೆಗೂ ಮುನ್ನ ಚೀನಾ ಸಚಿವರ ಜೊತೆ ಅಜಿತ್ ದೋವಲ್ ಮಾತುಕತೆ
ಅಮೆರಿಕಕ್ಕೆ ತೆರಳಿದ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್
ಅಮೆರಿಕಕ್ಕೆ ತೆರಳಿದ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್
‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಸಿಂಗಾರಗೊಂಡ ಗಾಂಧಿನಗರ; ವಿಡಿಯೋ ನೋಡಿ..
‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಸಿಂಗಾರಗೊಂಡ ಗಾಂಧಿನಗರ; ವಿಡಿಯೋ ನೋಡಿ..
1 ಲಕ್ಷ ರೂ. ಬಾಡಿಗೆ, 10 ಸಾವಿರ ರೂ. ಮುಂಗಡಕ್ಕೆ ಜಿಬಿಎ ಆಜ್ಞೆ
1 ಲಕ್ಷ ರೂ. ಬಾಡಿಗೆ, 10 ಸಾವಿರ ರೂ. ಮುಂಗಡಕ್ಕೆ ಜಿಬಿಎ ಆಜ್ಞೆ
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಫುಟ್‌ಪಾತ್ ತೆರವು ಅಭಿಯಾನ
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಫುಟ್‌ಪಾತ್ ತೆರವು ಅಭಿಯಾನ
ಒಳ್ಳೆ ಪತಿಯಾಗುವುದು ಹೇಗೆ? ಚಿಕ್ಕಣ್ಣನಿಗೆ ಪಾಠ ಹೇಳಿದ್ದಾರಂತೆ ಯಶ್
ಒಳ್ಳೆ ಪತಿಯಾಗುವುದು ಹೇಗೆ? ಚಿಕ್ಕಣ್ಣನಿಗೆ ಪಾಠ ಹೇಳಿದ್ದಾರಂತೆ ಯಶ್
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
ಕರ್ನಾಟಕದಲ್ಲಿ ಕೆಜಿ ಈರುಳ್ಳಿ ದರ ಶೀಘ್ರವೇ 100 ರೂಪಾಯಿ?
ಕರ್ನಾಟಕದಲ್ಲಿ ಕೆಜಿ ಈರುಳ್ಳಿ ದರ ಶೀಘ್ರವೇ 100 ರೂಪಾಯಿ?
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್