AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಆ್ಯಸಿಡ್ ನಾಗ, ಲೌಡ್​ ಸ್ಪೀಕರ್​ ವಿವಾದದ ಬಗ್ಗೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದೇನು?

ಬೆಂಗಳೂರಲ್ಲಿ ಲೌಡ್​ಸ್ಪೀಕರ್​ ಬಳಕೆಗೆ ಆದೇಶ ಪಾಲನೆಯಾಗುತ್ತಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿಕೆ ನೀಡಿದ್ದಾರೆ. ಹಾಗೆಯೇ ಆ್ಯಸಿಡ್ ನಾಗನಿಗೆ ಹುಡುಕಾಟ ಮುಂದುವರೆದಿದೆ ಎಂದೂ ಮಾಹಿತಿ ನೀಡಿದ್ದಾರೆ.

ಬೆಂಗಳೂರು: ಆ್ಯಸಿಡ್ ನಾಗ, ಲೌಡ್​ ಸ್ಪೀಕರ್​ ವಿವಾದದ ಬಗ್ಗೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದೇನು?
ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್
TV9 Web
| Updated By: shivaprasad.hs|

Updated on:May 11, 2022 | 3:23 PM

Share

ಬೆಂಗಳೂರು: ಬೆಂಗಳೂರಲ್ಲಿ ಲೌಡ್​ಸ್ಪೀಕರ್​ ಬಳಕೆಗೆ ಆದೇಶ ಪಾಲನೆಯಾಗುತ್ತಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ (Kamal Panth) ಹೇಳಿಕೆ ನೀಡಿದ್ದಾರೆ. ಲೌಡ್​ಸ್ಪೀಕರ್ ಬಳಕೆಗೆ ಯಾವುದೇ ಗೊಂದಲ, ತಕರಾರು ಇಲ್ಲ ಎಂದಿರುವ ಕಮಲ್ ಪಂತ್, ಬೆಂಗಳೂರಿನಲ್ಲಿ 2002ರ ಸರ್ಕಾರದ ಆದೇಶ ಪಾಲನೆಯಾಗುತ್ತಿದೆ. ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ಲೌಡ್​​ಸ್ಪೀಕರ್​ಗೆ ಅವಕಾಶ ಇಲ್ಲ. ಅನಿವಾರ್ಯ ಸಂದರ್ಭದಲ್ಲಿ ಮಾತ್ರ ಕೆಲವೊಮ್ಮೆ ಅವಕಾಶ ಇದೆ. ಧ್ವನಿವರ್ಧಕ ಬಳಸುವವರು ಡೆಸಿಬಲ್ ನಿಯಮ ಪಾಲಿಸಬೇಕು. ಲೌಡ್​ಸ್ಪೀಕರ್​ಗೆ 15 ದಿನದೊಳಗೆ ಅನುಮತಿ ಪಡೆಯಬೇಕು. ಸಮಿತಿಯವರು ಪರಿಶೀಲನೆ ನಡೆಸಿ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ನುಡಿದಿದ್ದಾರೆ.

ಆ್ಯಸಿಡ್ ನಾಗ ಯಾವುದೇ ಸುಳಿವು ಬಿಟ್ಟಿಲ್ಲ: ಕಮಲ್ ಪಂತ್

ಬೆಂಗಳೂರಿನ ಯುವತಿ ಮೇಲೆ ಆ್ಯಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕಮಲ್ ಪಂತ್, ‘‘ಆರೋಪಿ ನಾಗೇಶ್​ಗಾಗಿ ಹುಡುಕಾಟ ಮುಂದುವರೆದಿದೆ. ಆ್ಯಸಿಡ್ ದಾಳಿಕೋರ ಸಂಚು ರೂಪಿಸಿ ಕೃತ್ಯವೆಸಗಿದ್ದಾನೆ. ಆ್ಯಸಿಡ್ ನಾಗ ಯಾವುದೇ ಸುಳಿವು ಬಿಟ್ಟಿಲ್ಲ. ಆತ ಬಹಳ ದಿನಗಳ ಕಾಲ ತಪ್ಪಿಸಿಕೊಳ್ಳಲು ಆಗುವುದಿಲ್ಲ. ಆರೋಪಿ ನಾಗೇಶ್ ಪತ್ತೆಗೆ ಬಹಳ ಪ್ರಯತ್ನ ನಡೆಯುತ್ತಿದೆ.  ಆತನನ್ನು ಆದಷ್ಟು ಬೇಗ ಬಂಧಿಸುತ್ತೇವೆ’’ ಎಂದಿದ್ದಾರೆ.

ಇದನ್ನೂ ಓದಿ
Image
ಇದೇ ಮೊದಲ ಬಾರಿ ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ 1.53 ಕೋಟಿ ರೂ. ಸಂಗ್ರಹ
Image
ನೈಟ್​ಶಿಫ್ಟ್​ನಲ್ಲಿ ಕೆಲಸ ಮಾಡ್ತಿದ್ದೀರಾ? ಹಾಗಾದರೆ ಈ ಸಲಹೆ ತಪ್ಪದೆ ಪಾಲಿಸಿ
Image
ಅಕಾಲಿಕ‌ ಮಳೆ ಹಿನ್ನೆಲೆ ತರಕಾರಿ, ಹಣ್ಣುಗಳ ಬೆಲೆ ಏರಿಕೆ; ಗ್ರಾಹಕರಿಗೆ ಶಾಕ್
Image
Cyclone Asani: ಆಂಧ್ರದ ಕರಾವಳಿಗೆ ತೇಲಿ ಬಂದ ಚಿನ್ನದ ತೇರು, ರಥ ನೋಡಲು ಜನಸಂದಣಿ

ಪಿಡಬ್ಲ್ಯುಡಿ ಜೆಇ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸದಂತೆ ಕಮಲ್ ಪಂತ್ ಪ್ರತಿಕ್ರಿಯೆ:

ಪಿಡಬ್ಲ್ಯುಡಿ ಜೆಇ ಪರೀಕ್ಷೆಯಲ್ಲಿ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ನಗರ ಪೊಲೀಸ್ ಆಯುಕ್ತ, ‘‘ರುದ್ರಗೌಡ ಪಾಟೀಲ್​ನನ್ನು ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಅಕ್ರಮದ ಬಗ್ಗೆ ಅನ್ನಪೂರ್ಣೇಶ್ವರಿನಗರ ಪೊಲೀಸರಿಂದ ತನಿಖೆ ನಡೆಯುತ್ತಿದ್ದು, ರುದ್ರಗೌಡನ ಪಾತ್ರದ ಬಗ್ಗೆ ಒಂದಷ್ಟು ಬೇರೆ ಬೇರೆ ಮಾಹಿತಿ ಸಿಕ್ಕಿದೆ. ಹಾಗಾಗಿ ತನಿಖೆ ಮಾಡಲು ಆರೋಪಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ತನಿಖೆ ಪೂರ್ಣವಾದ ಬಳಿಕ ಆರೋಪಿ ಪಾತ್ರದ ಬಗ್ಗೆ ಮಾಹಿತಿ ಸಿಗಲಿದೆ’’ ಎಂದು ಮಾಹಿತಿ ನೀಡಿದ್ದಾರೆ.

ಆರೋಪ ಸಾಬೀತಾದರೆ ಪಿಎಸ್​ಐ ಅಕ್ರಮದಲ್ಲಿ ಭಾಗಿಯಾದ ಸಿಬ್ಬಂದಿಗಳನ್ನು ಕೆಲಸದಿಂದ ವಜಾ: ಪಿಎಸ್​ಐ ಅಕ್ರಮದಲ್ಲಿ ಭಾಗಿಯಾಗಿರುವ ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ ಎಂದು ತಿಳಿಸಿರುವ ಕಮಲ್ ಪಂತ್, ಆರೋಪ ಸಾಬಿತಾದರೆ ಅವರನ್ನು ಕೆಲಸದಿಂದ ತೆಗೆದು ಹಾಕಲಾಗುತ್ತದೆ ಎಂದು ಹೇಳಿದ್ದಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 2:54 pm, Wed, 11 May 22

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!