AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಟ್​ಕಾಯಿನ್ ಹಗರಣ ಆರೋಪದ ಬಗ್ಗೆ ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಯಿಂದ ಸ್ಪಷ್ಟನೆ; ವಿವರ ಇಲ್ಲಿದೆ

Bitcoin: ತನಿಖೆಯಲ್ಲಿ ಹ್ಯಾಕಿಂಗ್ ಬಗ್ಗೆ ಮಾಹಿತಿ ನೀಡಿದ್ದ ಆರೋಪಿ ಶ್ರೀಕಿ. ಬಳಿಕ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾಯಿಸಲಾಗಿತ್ತು ಎಂದು ಪೊಲೀಸ್ ಆಯುಕ್ತರ ಕಚೇರಿಯಿಂದ ಹೇಳಲಾಗಿದೆ.

ಬಿಟ್​ಕಾಯಿನ್ ಹಗರಣ ಆರೋಪದ ಬಗ್ಗೆ ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಯಿಂದ ಸ್ಪಷ್ಟನೆ; ವಿವರ ಇಲ್ಲಿದೆ
ಬಿಟ್​ಕಾಯಿನ್ (ಸಾಂದರ್ಭಿಕ ಚಿತ್ರ)
TV9 Web
| Updated By: ganapathi bhat|

Updated on:Nov 13, 2021 | 9:00 PM

Share

ಬೆಂಗಳೂರು: ಸರ್ಕಾರದ ವಿರುದ್ಧ ಬಿಟ್ ​ಕಾಯಿನ್ ಹಗರಣ ಆರೋಪದ ಬಗ್ಗೆ ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಯಿಂದ ಸ್ಪಷ್ಟನೆ ನೀಡಲಾಗಿದೆ. ಪ್ರಕರಣದ ತನಿಖೆಯನ್ನ ಪಾರದರ್ಶಕವಾಗಿ ನಡೆಸಲಾಗಿದೆ. ಯಾವುದೇ ಬಾಹ್ಯ ಒತ್ತಡಗಳಿಗೆ ಒಳಗಾಗಿ ತನಿಖೆ ನಡೆಸಿಲ್ಲ. ಹಗರಣ ಸಂಬಂಧ 3 ಠಾಣೆಗಳಲ್ಲಿ ಪ್ರಕರಣ ದಾಖಲಾಗಿತ್ತು. ಸೈಬರ್ ಕ್ರೈಂ, ಕೆ.ಜಿ.ನಗರ, ಅಶೋಕನಗರ ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿದೆ. ಕೆ.ಜಿ.ನಗರ ಠಾಣೆಯಲ್ಲಿ ದಾಖಲಾದ ದೂರಿನಲ್ಲಿ ಚಾರ್ಜ್‌ಶೀಟ್‌ ಸಲ್ಲಿಸಲಾಗಿದೆ. ಈಗಾಗಲೇ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಸಲಾಗಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಯಿಂದ ಸ್ಪಷ್ಟನೆ ನೀಡಲಾಗಿದೆ.

ಕೆ.ಜಿ.ನಗರ ಠಾಣೆಯಲ್ಲಿ ದಾಖಲಾಗಿದ್ದ ದೂರಿನಿಂದ ರಾಜ್ಯದಲ್ಲಿ ಬಿಟ್ ​ಕಾಯಿನ್ ಹಗರಣದ ಬಗ್ಗೆ ವಿಚಾರ ಬಯಲಾಗಿತ್ತು. ಕಳೆದ ವರ್ಷ ನವೆಂಬರ್ 4 ರಂದು ದೂರು ದಾಖಲಾಗಿತ್ತು. 500 ಗ್ರಾಂ ಹೈಡ್ರೋ ಗಾಂಜಾ ಸಹಿತ ಓರ್ವ ಆರೋಪಿ ಸೆರೆ ಆಗಿದ್ದ. ಬಳಿಕ ಸೆರೆಯಾದ 10 ಜನ ಪೈಕಿ ಶ್ರೀಕಿ ಸಹ ಓರ್ವ ಆರೋಪಿ ಆಗಿದ್ದಾನೆ. ಕ್ರಿಪ್ಟೋ ಕರೆನ್ಸಿ ವೆಬ್‌ಸೈಟ್ ಹ್ಯಾಕಿಂಗ್ ಬಗ್ಗೆ ಆತ ಮಾಹಿತಿ ನೀಡಿದ್ದ. ತನಿಖೆಯಲ್ಲಿ ಹ್ಯಾಕಿಂಗ್ ಬಗ್ಗೆ ಮಾಹಿತಿ ನೀಡಿದ್ದ ಆರೋಪಿ ಶ್ರೀಕಿ. ಬಳಿಕ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾಯಿಸಲಾಗಿತ್ತು ಎಂದು ಪೊಲೀಸ್ ಆಯುಕ್ತರ ಕಚೇರಿಯಿಂದ ಹೇಳಲಾಗಿದೆ.

ತನಿಖೆಯ ದೃಷ್ಟಿಯಿಂದ ಬಿಟ್ ಕಾಯಿನ್ ವ್ಯಾಲೆಟ್ ತೆರೆಯುವುದು ಅಗತ್ಯವಾಗಿತ್ತು. ಕೋರ್ಟ್ ಅನುಮತಿ ಪಡೆದು ಸೈಬರ್ ತಜ್ಞರ ಸಮ್ಮುಖದಲ್ಲಿ ವ್ಯಾಲೆಟ್ ತೆರೆದಿದ್ದೆವು. 31.8 ಬಿಟ್ ಕಾಯಿನ್ ಜಫ್ತಿ ಮಾಡಿ ಪಾಸ್ ವರ್ಡ್ ಸಮೇತ ನ್ಯಾಯಾಲಕ್ಕೆ ಸಲ್ಲಿಸಲಾಗಿದೆ. ಬಳಿಕ ಬಿಟ್ ಕಾಯಿನ್ ವರ್ಗಾವಣೆಗಾಗಿ ನ್ಯಾಯಾಲಯದ ಅನುಮತಿ ಪಡೆಯಲಾಯ್ತು. ವ್ಯಾಲೆಟ್ ತೆರೆದಾಗ ಪತ್ತೆಯಾಗಿದ್ದು 186.811 ಬಿಟ್ ಕಾಯಿನ್. ಅಸಲಿಗೆ ಆರೋಪಿ ಶ್ರೀಕೃಷ್ಣನ ಬಳಿ ಸ್ವಂತ ಬಿಟ್ ಕಾಯಿನ್ ವ್ಯಾಲೆಟ್ ಇರಲಿಲ್ಲ. ಆತನಿಂದ ವಶಕ್ಕೆ ಪಡೆದಿದ್ದು ಲೈವ್ ವ್ಯಾಲೆಟ್ ಆಗಿರುತ್ತದೆ. ಮತ್ತು ಆ ಲೈವ್ ವ್ಯಾಲೆಟ್ ನ ಕೀ ಸಹ ಆರೋಪಿ ಬಳಿ ಪತ್ತೆಯಾಗಿರುವುದಿಲ್ಲ. ಹಾಗಾಗಿ ವಶಪಡಿಸಿಕೊಂಡ ವ್ಯಾಲೆಟ್ ಹಾಗೆಯೇ ಬಿಡಲಾಗಿರುತ್ತದೆ. ಮತ್ತು ಈ ಎಲ್ಲ ವಿವರಣೆಗಳ ಸಹಿತ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲಾಗಿದೆ ಎಂದು ಹೇಳಿದ್ದಾರೆ.

ಪೊಲೀಸ್ ಸಿಬ್ಬಂದಿ, ನುರಿತ ಸೈಬರ್ ತಜ್ಞರನ್ನ ಒಳಗೊಂಡಂತೆ ತನಿಖೆ ನಡೆಸಲಾಗಿದೆ. ತನಿಖೆಯ ಪ್ರತೀ ಹಂತದಲ್ಲಿಯೂ ವಿಡಿಯೋ ಚಿತ್ರೀಕರಣ ಮಾಡಲಾಗಿದೆ. ವೇಲ್ ಅಲರ್ಟ್ ನಲ್ಲಿ 14,682 ಬಿಟ್ ಕಾಯಿನ್ ವರ್ಗಾವಣೆ ಆಗಿದೆ ಎಂದಿರುವುದು ಆಧಾರರಹಿತ. ಈ ನೆಲದ ಕಾನೂನಿನಂತೆ ನಿಷ್ಪಕ್ಷಪಾತ ತನಿಖೆ ಮಾಡಲಾಗಿದೆ. ನಿರ್ದಿಷ್ಟವಲ್ಲದ, ಸಾಮಾಜಿಕ ಜಾಲತಾಣದ ಆರೋಪಗಳಿಗೆ ಉತ್ತರಿಸಲು ಸಾಧ್ಯವಿಲ್ಲ. ಬಂಧಿತ ಆರೋಪಿಗಳು ಮಾಧ್ಯಮಗಳಲ್ಲಿ ಹೆಚ್ಚು ಸುದ್ದಿಯಾಗುತ್ತಿದ್ದಾರೆ‌. ಆದರೂ ಸಹ ಯಾವುದೇ ವಿದೇಶಿ, ಅಂತರಾಷ್ಟ್ರೀಯ ತನಿಖಾ ಸಂಸ್ಥೆ ನಮ್ಮನ್ನ ಸಂಪರ್ಕಿಸಿಲ್ಲ. ಆರೋಪಿ ಹೇಳಿಕೊಂಡಿರುವಂತೆ ಹ್ಯಾಕಿಂಗ್ ಆಗಿದೆ ಎನ್ನುವುದನ್ನ ಯಾರೊಬ್ಬರೂ ಖಚಿತಪಡಿಸಿಲ್ಲ ಎಂದು ತಿಳಿಸಿದ್ದಾರೆ.

ಸೈಬರ್ ತಜ್ಞರ ಸಲಹೆ ಪಡೆದಾಗ ಆರೋಪಿ ಹೇಳಿರುವ ಸಾಕಷ್ಟು ವಿಚಾರ ಆಧಾರರಹಿತ ಎಂದು ಸಾಬೀತಾಗಿದೆ ಪ್ರಕರಣ ದಾಖಲಾಗಿ 1 ವರ್ಷಗಳೇ ಕಳೆದಿವೆ. ಬಿಟ್ ಕಾಯಿನ್ ಅಥಾರಿಟಿ ಸಹ ನಮ್ಮನ್ನ ಸಂಪರ್ಕಿಸಿಲ್ಲ. ಆರೋಪಿ ಸಾಕಷ್ಟು ವೆಬ್‌ಸೈಟ್ ಹ್ಯಾಕ್ ಮಾಡಿರುವುದಾಗಿ ಸ್ವಯಂ ಹೇಳಿಕೆ ನೀಡಿದ್ದಾನೆ‌. ಆದರೇ ಯಾವುದೇ ಹೆಚ್ಚಿನ ಮಾಹಿತಿಯನ್ನ ಆರೋಪಿ ನೀಡಿರುವುದಿಲ್ಲ. ಸೈಬರ್ ತಜ್ಞರ ಸಲಹೆ ಪಡೆದಾಗ ಆರೋಪಿ ಹೇಳಿರುವ ಸಾಕಷ್ಟು ವಿಚಾರ ಆಧಾರರಹಿತ ಎಂದು ಸಾಬೀತಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಂಟರ್ ಪೋಲ್ ಗೆ ಮನವಿ ಮಾಡಲಾಗಿದೆ. ವರದಿ ಬಂದ ಬಳಿಕ ಪ್ರಕರಣಕ್ಕೆ ತಾರ್ಕಿಕವಾಗಿ ಅಂತ್ಯ ಸಿಗಲಿದೆ. ಸಂಬಂಧಪಟ್ಟ ಇಲಾಖೆಗಳೊಂದಿಗೆ ಮಾಹಿತಿ ಹಂಚಿಕೊಳ್ಳಲಾಗಿದೆ. ಇಡೀ ಪ್ರಕರಣ ಬೆಂಗಳೂರಿನಿಂದ ಹುಟ್ಟಿಕೊಂಡಿದೆ. ಪ್ರಕರಣದ ಮಾಹಿತಿಯನ್ನ ಸಿಬಿಐ ಮೂಲಕ ಇಂಟರ್ ಪೋಲ್ ಗೆ ನೀಡಲಾಗಿದೆ. ಸಂಬಂಧಿಸಿದ ಯಾರೇ ಇದ್ದರೂ ಇಂಟರ್ ಪೋಲ್ ಗಮನಕ್ಕೆ ತರಬಹುದು ಎಂದು ಹೇಳಿದ್ದಾರೆ.

ಇತ್ತೀಚಿನ ಆತನ ಬಂಧನದ ಬಳಿಕ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದೇವೆ. ಆತನ ಬಳಿ ಪತ್ತೆಯಾದ ಮಾದಕದ ಕುರಿತು ತನಿಖೆಗೆ ಕಸ್ಟಡಿಗೆ ಕೇಳಲಾಗಿತ್ತು. ರಕ್ತ ಮತ್ತು ಮೂತ್ರದ ಮಾದರಿ ಪಡೆಯಲು ಅನುಮತಿ ಪಡೆಯಲಾಗಿತ್ತು. ವಿಕ್ಟೋರಿಯಾದಲ್ಲಿ ಸಾಧ್ಯವಾಗದ ಕಾರಣ ಬೌರಿಂಗ್ ನಲ್ಲಿ ಪರೀಕ್ಷೆ ನಡೆಸಲಾಗಿದೆ. ರಕ್ತ ಮತ್ತು ಮೂತ್ರದ ಮಾದರಿಯನ್ನ ಎಫ್ ಎಸ್ ಎಲ್ ಗೆ ಕಳಿಸಲಾಗಿತ್ತು. ಎಫ್ ಎಸ್ ಎಲ್ ವರದಿಯಲ್ಲಿ ನೆಗೆಟೀವ್ ಬಂದಿರುತ್ತದೆ. ನಂತರ ಆತನ ಬಂಧನದ ವಿಚಾರವಾಗಿ ರಿಟ್ ಅರ್ಜಿ ಹಾಕಲಾಗಿತ್ತು. ರಿಟ್ ಅರ್ಜಿ ಸಲ್ಲಿಸಿದವರಿಗೆ 5 ಸಾವಿರ ದಂಡ ವಿಧಿಸಿ ಶ್ರೀಕೃಷ್ಣನ ಬಿಡುಗಡೆಯಾಗಿರುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಬಿಟ್ ​ಕಾಯಿನ್ ಹಗರಣದ ಬಗ್ಗೆ ಪ್ರಧಾನಿ ಮಹತ್ವದ ಸಭೆ ಬಿಟ್ ​ಕಾಯಿನ್ ಹಗರಣದ ಬಗ್ಗೆ ಪ್ರಧಾನಿ ಮಹತ್ವದ ಸಭೆ ನಡೆಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಲಾಗಿದೆ. ಹಿರಿಯ ಅಧಿಕಾರಿಗಳ ಜೊತೆ ಪ್ರಧಾನಿ ಮೋದಿ ಚರ್ಚೆ ಮಾಡಿದ್ದಾರೆ. ಆರ್‌ಬಿಐ, ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿಗಳು, ಕೇಂದ್ರ ಗೃಹ ಇಲಾಖೆ ಹಿರಿಯ ಅಧಿಕಾರಿಗಳ ಜತೆ ಸಭೆ ಮಾಡಲಾಗಿದೆ. ತಜ್ಞರ ಜೊತೆ ಪ್ರಧಾನಿ ಮಹತ್ವದ ಸಭೆ ನಡೆಸುತ್ತಿದ್ದಾರೆ. ದೆಹಲಿಯ ಪ್ರಧಾನಿ ನಿವಾಸದಲ್ಲಿ ಸಭೆ ನಡೆಯುತ್ತಿದೆ.

ಇದನ್ನೂ ಓದಿ: ಬಿಟ್​ಕಾಯಿನ್ ಕುರಿತು ಅಧಿಕಾರಿಗಳ ಆಡಿಯೋ ವೈರಲ್; ಇಬ್ಬರನ್ನೂ ವಿಚಾರಣೆ ನಡೆಸಿದ ಪೊಲೀಸರು

ಇದನ್ನೂ ಓದಿ: ಬಿಟ್‌ ಕಾಯಿನ್ ಪ್ರಕರಣ: ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಬಸವರಾಜ ಬೊಮ್ಮಾಯಿ ಚರ್ಚೆ

Published On - 8:54 pm, Sat, 13 November 21

ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ
ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ಫ್ಯಾನ್ಸ್- ಪೊಲೀಸರ ನಡುವೆ ಚೇರ್ ಎಸೆದಾಟ
ಫ್ಯಾನ್ಸ್- ಪೊಲೀಸರ ನಡುವೆ ಚೇರ್ ಎಸೆದಾಟ
ಮೆಸ್ಸಿ ಜೊತೆ ಮಗನನ್ನು ನಿಲ್ಲಿಸಿ ಫೋಟೋ ಕ್ಲಿಕ್ಕಿಸಿದ ಶಾರುಖ್ ಖಾನ್
ಮೆಸ್ಸಿ ಜೊತೆ ಮಗನನ್ನು ನಿಲ್ಲಿಸಿ ಫೋಟೋ ಕ್ಲಿಕ್ಕಿಸಿದ ಶಾರುಖ್ ಖಾನ್
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
‘ಗೌರಿ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್​; ಆಗಸದಲ್ಲೇ ಮದುವೆ
‘ಗೌರಿ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್​; ಆಗಸದಲ್ಲೇ ಮದುವೆ