AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ ಮಾಫಿಯಾ ವಿರುದ್ಧ ಬೆಂಗಳೂರು ಪೊಲೀಸರ ಸತತ ದಾಳಿ: 11 ತಿಂಗಳಲ್ಲಿ 146 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ

ಬೆಂಗಳೂರು ಪೊಲೀಸರು 2025ರಲ್ಲಿ 146 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, 19-35 ವರ್ಷದ ಯುವಕರನ್ನು ಗುರಿಯಾಗಿಸಿಕೊಂಡ ಡ್ರಗ್ ಮಾಫಿಯಾ ವಿರುದ್ಧ ಸಿಸಿಬಿ ಸೇರಿದಂತೆ ಬೆಂಗಳೂರು ಪೊಲೀಸರ ಹಲವು ತಂಡಗಳು ಯಶಸ್ವಿ ಕಾರ್ಯಾಚರಣೆ ನಡೆಸಿವೆ.

ಡ್ರಗ್ ಮಾಫಿಯಾ ವಿರುದ್ಧ ಬೆಂಗಳೂರು ಪೊಲೀಸರ ಸತತ ದಾಳಿ: 11 ತಿಂಗಳಲ್ಲಿ 146 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on:Dec 04, 2025 | 9:38 AM

Share

ಬೆಂಗಳೂರು, ಡಿಸೆಂಬರ್ 4: ಪ್ರತೀ ವರ್ಷದಂತೆ ಈ ವರ್ಷವೂ ಬೆಂಗಳೂರು ಪೊಲೀಸರು ಡ್ರಗ್ ಮಾಫಿಯಾ ವಿರುದ್ಧ ಭರ್ಜರಿ ಬೇಟೆ ನಡೆಸಿದ್ದಾರೆ. ಸಿಸಿಬಿ ಸೇರಿದಂತೆ ಬೆಂಗಳೂರು (Bengaluru) ನಗರದ ವಿವಿಧ ಪೊಲೀಸ್ ಠಾಣೆಗಳ ತಂಡಗಳು ನಡೆಸಿದ ಸತತ ಕಾರ್ಯಾಚರಣೆಯ ಪರಿಣಾಮವಾಗಿ 2025ರಲ್ಲಿ 146 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದೆ. ನಗರದಲ್ಲಿ 11 ತಿಂಗಳಲ್ಲಿ ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ನೂರಾರು ಆರೋಪಿಗಳ ಬಂಧನವಾಗಿದೆ. ವಿಶೇಷವಾಗಿ ಸಿಸಿಬಿ ಪೊಲೀಸರ ಕಾರ್ಯಾಚರಣೆಗಳು ಗಮನಸೆಳೆದಿವೆ. ಒಂದೊಂದು ಪ್ರಕರಣವೂ ವಿಭಿನ್ನ ರೀತಿಯಿದ್ದು, ಪೆಡ್ಲರ್‌ಗಳು ಹೊಸ ಹೊಸ ಸಂಚು ರೂಪಿಸಿದರೂ ಪ್ರತಿಯೊಂದು ಹಂತದಲ್ಲೂ ಪೊಲೀಸರು ಯಶಸ್ವಿಯಾಗಿ ಬಲೆ ಬೀಸಿದ್ದಾರೆ.

ಚಾಕಲೆಟ್, ಕಾಫಿ ಪುಡಿ ಹೆಸರಿನಲ್ಲಿ ಡ್ರಗ್ಸ್ ಸಾಗಾಟ

ಚಾಕಲೆಟ್, ಕಾಫಿ ಪುಡಿ, ಪಾರ್ಸೆಲ್, ಗಿಫ್ಟ್ ಬಾಕ್ಸ್ ಜತೆಗೆ ಇಟ್ಟುಕೊಂಡು ಸಾಗಿಸುವುದೂ ಸೇರಿದಂತೆ ಅನೇಕ ಮಾದರಿಯಲ್ಲಿ ಡ್ರಗ್‌ಗಳನ್ನು ಸಾಗಿಸಲು ಪೆಡ್ಲರ್‌ಗಳು ಯತ್ನಿಸಿದ ಘಟನೆಗಳು ಬೆಳಕಿಗೆ ಬಂದಿವೆ. ದೇಶ-ವಿದೇಶಗಳ ಪೆಡ್ಲರ್‌ಗಳು, ವಿಶೇಷವಾಗಿ ನೈಜೀರಿಯನ್ನರು, ಕೇರಳ ಮೂಲದವರು, ಪೆಡ್ಲಿಂಗ್‌ನಲ್ಲಿ ಸಕ್ರಿಯರಾಗಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ.

19 ರಿಂದ 35 ವರ್ಷದ ಯುವಕ, ಯುವತಿಯರೇ ಟಾರ್ಗೆಟ್

19 ರಿಂದ 35 ವರ್ಷದ ಯುವಕರು, ಯುವತಿಯರೇ ಡ್ರಗ್ ಮಾಫಿಯಾದ ಪ್ರಮುಖ ಟಾರ್ಗೆಟ್ ಎಂಬುದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. ನಗರದ ಹೊರವಲಯಕ್ಕೆ ಸೇರಿದ ಪ್ರದೇಶಗಳಲ್ಲಿ ಪೆಡ್ಲರ್‌ಗಳು ಹೆಚ್ಚು ಸಕ್ರಿಯರಾಗಿರುವುದನ್ನು ಪೊಲೀಸರು ಗುರುತಿಸಿದ್ದಾರೆ.

1000 ಕೆಜಿಗೂ ಹೆಚ್ಚು ಗಾಂಜಾ, ಹೈಡ್ರೋ ಗಾಂಜಾ ವಶ

ಡ್ರಗ್ ಮಾತ್ರವಲ್ಲದೆ ಸಾವಿರ ಕೆಜಿಗೂ ಅಧಿಕ ಗಾಂಜಾ ಮತ್ತು ಹೈಡ್ರೋ ಗಾಂಜಾ ಕೂಡ ಈ ಅವಧಿಯಲ್ಲಿ ಜಪ್ತಿ ಮಾಡಲಾಗಿದೆ. ಪೊಲೀಸರ ಕಣ್ತಪ್ಪಿಸಲು ಹೊಸ ಹೊಸ ಐಡಿಯಾಗಳನ್ನು ಡ್ರಗ್ ಪೆಡ್ಲರ್​ಗಳು ಬಳಸಿದರೂ, ಮಾಫಿಯಾ ಬೆನ್ನಟ್ಟುವಲ್ಲಿ ಬೆಂಗಳೂರು ಪೊಲೀಸರು ಸತತ ಯಶಸ್ಸು ಸಾಧಿಸುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಬರೋಬ್ಬರಿ 17 ಮನೆಗೆ ಕನ್ನ, ಕೆಜಿಗಟ್ಟಲೆ ಚಿನ್ನ-ಬೆಳ್ಳಿ, ನಗದು ಕದ್ದವ ಕೊನೆಗೂ ಪೊಲೀಸ್ ಬಲೆಗೆ

ಬೆಂಗಳೂರು ನಗರದಲ್ಲಿ ಡ್ರಗ್ ಮಾಫಿಯಾದ ಅಟ್ಟಹಾಸ ಕಡಿಮೆ ಮಾಡಲು ಇನ್ನಷ್ಟು ಚುರುಕಿನ ಕಾರ್ಯಾಚರಣೆ ನಡೆಸಲಾಗುವುದು. ಮಾಫಿಯಾವನ್ನು ಮಟ್ಟಹಾಕಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ವರದಿ: ಪ್ರದಿಪ್ ಚಿಕ್ಕಾಟಿ, ಟಿವಿ9 ಬೆಂಗಳೂರು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:37 am, Thu, 4 December 25

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್