AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಭೇಟಿಯಾಗೋಣ ಬಾ ಗೆಳೆಯ’ ಸ್ನೇಹಿತೆಯ ಮಾತು ನಂಬಿ ಹೋಟೆಲ್​ನಿಂದ ಹೊರಬಂದ ಯುವಕ ಕಿಡ್ನ್ಯಾಪ್​

ಆತನದ್ದು ಐಷಾರಾಮಿ ಜೀವನ, ದೊಡ್ಡ ಹೋಟೆಲ್​ನಲ್ಲಿ ವಾಸ್​, ಪೋಕರ್ ಪಬ್​ನಲ್ಲೇ ಸಾಕಷ್ಟು ಸಮಯ ಕಳೆಯುತ್ತಿದ್ದನು. ಐಷಾರಾಮಿ ಜೀವನ ನಡೆಸುತ್ತಿದ್ದವನಿಗೆ, ಓರ್ವ ಯುವತಿಯ ಪರಿಚಯವಾಗಿದೆ. ಆದರೆ ಈಗ ಆಕೆಯೇ ಆತನಿಗೆ ಖೆಡ್ಡಾ ತೋಡಿದ್ದಾಳೆ. ಹಣಕ್ಕಾಗಿ ಅಪಹರಿಸಿ, ಚಿತ್ರಹಿಂಸೆ ಕೊಟ್ಟು ಕೊನೆಗೆ ಪೊಲೀಸರ ಭಯಕ್ಕೆ ಪರಾರಿಯಾಗಿದ್ದಾಳೆ.

'ಭೇಟಿಯಾಗೋಣ ಬಾ ಗೆಳೆಯ' ಸ್ನೇಹಿತೆಯ ಮಾತು ನಂಬಿ ಹೋಟೆಲ್​ನಿಂದ ಹೊರಬಂದ ಯುವಕ ಕಿಡ್ನ್ಯಾಪ್​
ಬಂಧಿತ ಆರೋಪಿಗಳು
ವಿವೇಕ ಬಿರಾದಾರ
|

Updated on:Jul 26, 2025 | 4:55 PM

Share

ಬೆಂಗಳೂರು, ಜುಲೈ 26: ಯುವಕನ‌ನ್ನು ಅಪಹರಿಸಿ (Kidnap) 2.5 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದ ಆರೋಪಿಗಳನ್ನು ಬೆಂಗಳೂರಿನ (Bengaluru) ಅಶೋಕ್‌ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಾದ ಶಕೀಬ್, ಸುರೇಶ್, ಆಸೀಫ್, ಅಲ್ತಾಫ್, ಸುಹೇಲ್ ಬಂಧಿತರು. ಲಾರೆನ್ಸ್ ಮೆಲ್ವಾನಿ ಅಪಹರಣಕ್ಕೆ ಒಳಗಾಗಿದ್ದ ಯುವಕ.

ಲಾರೆನ್ಸ್ ಮೆಲ್ವಾನಿ ದುಬೈನಲ್ಲಿ‌ ಕೆಲಸ ಮಾಡುತ್ತಿದ್ದು, ಇತ್ತೀಚಿಗೆ ಬೆಂಗಳೂರಿಗೆ ಬಂದಿದ್ದರು. ಐಷಾರಾಮಿ ಜೀವನ ನಡೆಸುತ್ತಿದ್ದ ಲಾರೆನ್ಸ್ ಮೆಲ್ವಾನಿ ಮನೆ ಬಿಟ್ಟು ಹೆಚ್ಚು ಹೋಟೆಲ್​ಗಳಲ್ಲೇ ಹೆಚ್ಚು ವಾಸವಿರುತ್ತಿದ್ದರು. ಐಷಾರಾಮಿ ಜೀವನ ನಡೆಸುತ್ತಿದ್ದ ಲಾರೆನ್ಸ್ ಮೆಲ್ವಾನಿ ಪೋಕರ್ ಗೇಮ್​ ಆಡಲು ಇಂದಿರಾನಗರದಲ್ಲಿರುವ ಪಬ್​ಗೆ ಹೋಗುತ್ತಿದ್ದರು. ಈ ವೇಳೆ ಲಾರೆನ್ಸ್ ಮೆಲ್ವಾನಿಗೆ ಯುವತಿ ಮಾಹಿಮಾಳ ಪರಿಚಯವಾಗಿದೆ.

ಲಾರೆನ್ಸ್ ಮೆಲ್ವಾನಿ ಜುಲೈ 15 ರಂದು ನಗರದ ಪ್ರತಿಷ್ಠಿತ ಹೋಟೆಲ್​ನಲ್ಲಿ ಉಳಿದುಕೊಂಡ ಸಮಯದಲ್ಲಿ ಸ್ನೇಹಿತೆ ಮಹಿಮಾ, ಲಾರೆನ್ಸ್ ಮೆಲ್ವಾನಿಗೆ ಮಧ್ಯರಾತ್ರಿ ಕರೆ ಮಾಡಿ ಭೇಟಿಯಾಗಬೇಕು, ಹೊರಗೆ ಬಾ ಎಂದು ಕರೆಸಿಕೊಂಡಿದ್ದಾಳೆ. ಸ್ನೇಹಿತೆ ಮಹಿಮಾ ಮಾತು ನಂಬಿ ಹೊರಬಂದ ಲಾರೆನ್ಸ್ ಮೇಲ್ವಾನಿ ಹೋಟೆಲ್​ ಮುಂದೆ ನಿಂತಿದ್ದ ಕ್ಯಾಬ್ ಹತ್ತಿದ್ದಾರೆ. ಕೂಡಲೇ ಇದೇ ಕ್ಯಾಬ್​ ಹತ್ತಿದ ಮೂವರು ಆರೋಪಿಗಳು ಲಾರೆನ್ಸ್ ಮೇಲ್ವಾನಿಯನ್ನು ಅಪಹರಿಸಿದ್ದಾರೆ.

ಇದನ್ನೂ ಓದಿ
Image
MBA ವಿದ್ಯಾರ್ಥಿನಿಗೆ ಡ್ರೈವರ್​​​ ಮೇಲೆ ಲವ್: ಒಂದೇ ವರ್ಷದಲ್ಲಿ ದುರಂತ!
Image
ಬೆಂಗಳೂರು ವಿಮಾನ ನಿಲ್ದಾದಲ್ಲಿ ಪ್ಯಾಸೆಂಜರ್ ಬ್ಯಾಗ್‌ಗೆ ಚಿನ್ನ ಹಾಕಿ ಪರಾರಿ!
Image
ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ನಾಳೆ ವೀಲ್‌ಚೇರ್ ಸ್ನೇಹಿ ಶೌಚಾಲಯ ಉದ್ಘಾಟನೆ
Image
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ, ವರ್ಕ್‌ ಫ್ರಮ್ ಹೋಮ್ ಬೆಸ್ಟ್‌

ಬಳಿಕ, ಲಾರೆನ್ಸ್ ಮೆಲ್ವಾನಿಯನ್ನು ಇಂದಿರಾನಗರದಲ್ಲಿರವ ಅಪಾರ್ಟ್‌ಮೆಂಟ್‌ವೊಂದರ ಮನೆಯಲ್ಲಿ ಕೂಡಿ ಹಾಕಿ, 2.5 ಕೋಟಿ ರೂ. ನೀಡುವಂತೆ ಹಲ್ಲೆ ಮಾಡಿದ್ದಾರೆ. ಮಗ ಲಾರೆನ್ಸ್ ಮೆಲ್ವಾನಿಯನ್ನು ಅಪಹರಿಸಿರುವ ವಿಚಾರ ತಿಳಿದ ತಾಯಿ ಅಶೋಕನಗರ ಪೊಲೀಸ್​ ಠಾಣೆಯಲ್ಲಿ ಕಾಣೆಯಾಗಿರುವ ಬಗ್ಗೆ ದೂರು ದಾಖಲಿಸಿದ್ದಾರೆ. ಪೊಲೀಸರು ದೂರು ದಾಖಲಿಸಿಕೊಂಡು ಹುಡುಕಾಟ ನಡೆಸುತ್ತಿದ್ದಾಗ, ಲಾರೆನ್ಸ್ ಮೇಲ್ವಾನಿ ಪಕ್ಕದ ಮನೆಯವರ ಸಹಾಯದಿಂದ ಪೊಲೀಸರನ್ನು ಸಂಪರ್ಕಿಸಿದ್ದಾರೆ.

ಇದನ್ನೂ ಓದಿ: ಪಿಎಸ್​ಐನ ಹೊಡೆತಕ್ಕೆ ಶಾಶ್ವತ ಕಿವುಡನಾದ ಮನೆ ಬಾಡಿಗೆದಾರ

ಪೊಲೀಸರು ಕಾಲ್ ಲೊಕೆಷನ್ ಆಧರಿಸಿ ಆರೋಪಿಗಳ ಇದ್ದ ಮನೆ ಬಳಿ ಹೋದರು. ಆದರೆ, ಪೊಲೀಸರ ಭಯದಿಂದ ಆರೋಪಿಗಳು ಲಾರೆನ್ಸ್​ನನ್ನು ಮನೆಯಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಪೊಲೀಸರು ಸಿನೀಮಿಯ ರೀತಿಯಲ್ಲಿ ಆರೋಪಿಗಳ ಚೇಸ್​ ಮಾಡಿ ಬಂಧಿಸಿದ್ದಾರೆ. ಪೊಲೀಸರು ಆರೋಪಿಗಳು ಬಳಸಿದ್ದ ಕಾರನ್ನು ಜಪ್ತಿ ಮಾಡಿದ್ದಾರೆ. ಲಾರೆನ್ಸ್​​ನ ಸ್ನೇಹಿತೆ ಮಹಿಮಾ ಪರಾರಿಯಾಗಿದ್ದಾಳೆ. ಪೊಲೀಸರು ಹುಡುಕಾಟ ನಡೆಸಿದ್ದಾರೆ. ಬಂಧಿತ ಆರೋಪಿಗಳನ್ನು ವಿಚಾರಣೆ ಒಳಪಡಿಸಿದಾಗ, ಲಾರೆನ್ಸ್​ ಬಳಿ ಇದ್ದ 1 ಲಕ್ಷ ಹಣ, 2 ಐಫೋನ್ ಕಸಿದುಕೊಂಡಿದ್ದಾಗಿ ಬಾಯಿಬಿಟ್ಟಿದ್ದಾರೆ.

ವರದಿ: ಪ್ರದೀಪ್​ ಚಿಕ್ಕಾಟಿ ಟಿವಿ9

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:54 pm, Sat, 26 July 25

Follow Us
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್