Ganesh Chaturthi Guidelines 2023: ಗೌರಿ ಗಣೇಶ ಹಬ್ಬಕ್ಕೆ ಬೆಂಗಳೂರು ಪೊಲೀಸ್ ಇಲಾಖೆಯಿಂದ ಗೈಡ್ ಲೈನ್ಸ್

ಗೌರಿ ಗಣೇಶ ಹಬ್ಬಕ್ಕೆ ನಗರ ಪೊಲೀಸ್ ಇಲಾಖೆ ಗೈಡ್ ಲೈನ್ಸ್ ಬಿಡುಗಡೆ ಮಾಡಿದೆ. ಕಾರ್ಯಕ್ರಮದ ಆಯೋಜಕರು ಪಾಲಿಸಬೇಕಾದ ಕ್ರಮಗಳ ಬಗ್ಗೆ ಪೊಲೀಸ್ ಕಮಿಷನರ್ ಮಾಹಿತಿ ನೀಡಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಗಣೇಶ ಮೂರ್ತಿ ಸ್ಥಾಪಿಸಲು ಸ್ಥಳೀಯ ಪೊಲೀಸ್ ಠಾಣೆಯ ಅನುಮತಿ ಕಡ್ಡಾಯ. ಗಣೇಶ ಕೂರಿಸಲು ಕಾನೂನು ಬಾಹಿರಬಾಗಿ ಹಣ ಸಂಗ್ರಹ ಮಾಡುವಹಾಗಿಲ್ಲ ಎಂದು ಗೈಡ್ ಲೈನ್ಸ್​ನಲ್ಲಿ ಸೂಚಿಸಲಾಗಿದೆ.

Ganesh Chaturthi Guidelines 2023: ಗೌರಿ ಗಣೇಶ ಹಬ್ಬಕ್ಕೆ ಬೆಂಗಳೂರು ಪೊಲೀಸ್ ಇಲಾಖೆಯಿಂದ ಗೈಡ್ ಲೈನ್ಸ್
ಸಾಂದರ್ಭಿಕ ಚಿತ್ರ
Follow us
| Updated By: Digi Tech Desk

Updated on:Sep 19, 2023 | 9:57 AM

ಬೆಂಗಳೂರು, ಸೆ.16: ಪ್ರಥಮ ಪೂಜಿತ ಗಣೇಶ ಹಬ್ಬಕ್ಕೆ ಕೆಲವೇ ದಿನಗಳು ಬಾಕಿ ಇವೆ. ಏರಿಯಾ ಏರಿಯಾಗಳಲ್ಲಿ ಗೌರಿ-ಗಣೇಶನನ್ನು ಕೂರಿಸಿ ಸಂಭ್ರಮಿಸಲು ಯುವಕರು ಸಿದ್ಧತೆ ನಡೆಸುತ್ತಿದ್ದಾರೆ. ಸದ್ಯ ಗೌರಿ ಗಣೇಶ ಹಬ್ಬದ(Gowri Ganesha Festival) ಸಂದರ್ಭದಲ್ಲಿ ಗಣೇಶ ಕೂರಿಸುವ ವಿಚಾರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಪೊಲೀಸರು(Bengaluru Police) ಮುಂದಾಗಿದ್ದಾರೆ. ಈ ಹಿನ್ನೆಲೆ ಗೌರಿ ಗಣೇಶ ಹಬ್ಬಕ್ಕೆ ನಗರ ಪೊಲೀಸ್ ಇಲಾಖೆ ಗೈಡ್ ಲೈನ್ಸ್ ಬಿಡುಗಡೆ ಮಾಡಿದೆ. ಕಾರ್ಯಕ್ರಮದ ಆಯೋಜಕರು ಪಾಲಿಸಬೇಕಾದ ಕ್ರಮಗಳ ಬಗ್ಗೆ ಪೊಲೀಸ್ ಕಮಿಷನರ್ ಮಾಹಿತಿ ನೀಡಿದ್ದಾರೆ.

ಕಾರ್ಯಕ್ರಮದ ಆಯೋಜಕರು ಪಾಲಿಸಬೇಕಾದ ಕ್ರಮಗಳು

  • ಸಾರ್ವಜನಿಕ ಸ್ಥಳದಲ್ಲಿ ಗಣೇಶ ಮೂರ್ತಿ ಸ್ಥಾಪಿಸಲು ಸ್ಥಳೀಯ ಪೊಲೀಸ್ ಠಾಣೆಯ ಅನುಮತಿ ಕಡ್ಡಾಯ
  • ಗಣೇಶ ಕೂರಿಸಲು ಕಾನೂನು ಬಾಹಿರಬಾಗಿ ಹಣ ಸಂಗ್ರಹ ಮಾಡುವಹಾಗಿಲ್ಲ
  •  ಕಾರ್ಯಕ್ರಮ ನಡೆಸಲು ಚಪ್ಪರ, ಶಾಮಿಯಾನ, ಪೆಂಡಾಲ್ ಗೆ ವಿಶೇಷ ಅನುಮತಿ ಪಡೆಯಬೇಕು
  • ವಿವಾದಿತ ಜಾಗದಲ್ಲಿ ಗಣೇಶನ ಮೂರ್ತಿ ಪ್ರತಿಷ್ಠಾಪನೆ ಮಾಡುವಹಾಗಿಲ್ಲ
  • ಮೆರವಣಿಗೆ ವೇಳೆ ಏನೇ ಅಹಿಕತರ ಘಟನೆ ನಡೆದರೆ ಸಂಘಟಕರೇ ಅದಕ್ಕೆ ಹೊಣೆ
  • ಆಯೋಜಕರು ಕಾರ್ಯಕ್ರಮ ನಡೆಯುವ ಜಾಗದಲ್ಲಿ ಬೆಂಕಿ ನಂದಿಸುವ ಸಾಮಾಗ್ರಿಗಳು, ಸಿಸಿಟಿವಿ ಸೇರಿದಂತೆ ಅಗತ್ಯ ಕ್ರಮವಹಸಿಬೇಕು
  • ಮೂರ್ತಿ ಸ್ಥಾಪನೆಮಾಡಿರುವ ಜಾಗದಲ್ಲಿ ಕಟ್ಟಿಗೆ, ಉರುವಲು, ಸೀಮೆ ಎಣ್ಣೆ ಒಟ್ಟಾರೆ ಬೆಂಕಿ ಸಂಬಂಧಿಸಿದ ಸಾಮಾಗ್ರಿಗಳನ್ನು ಇಡಬಾರದು
  • ವಿದ್ಯುತ್ ಸಂಪರ್ಕ ಬೇಕಾಗಿರುವ ಬಗ್ಗೆ ಬೆಸ್ಕಾಂ ಮತ್ತು ಅಗ್ನಿ ಶಾಮಕ ಇಲಾಖೆಯ NOC ಕಡ್ಡಾಯ
  • ಧ್ವನಿ ವರ್ಧಕ ಬಳಕೆಗೆ ಬೆಳಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆವರೆಗೆ ಡೆಡ್ ಲೈನ್
  • ಯಾವುದೇ ಕಾರಣಕ್ಕೂ DJ ಸೌಂಡ್ ಸಿಸ್ಟಮ್ ಅಳವಡಿಕೆಗೆ ಅವಕಾಶ ಇಲ್ಲ
  • ಮೆರವಣಿಗೆ ಸೂಕ್ಷ್ಮ ಪ್ರದೇಶಗಳಲ್ಲಿ ಹಾಗೂ ಪ್ರಾರ್ಥನೆ ಸ್ಥಳಗಳ ಮುಂಭಾಗದಲ್ಲಿ ಪಟಾಕಿ, ಸಿಡಿ ಮದ್ದು ನಿಷೇಧ
  • ಗಣಪನ ವಿಸರ್ಜನೆ ಕಾರ್ಯಕ್ರಮ ರಾತ್ರಿ 10 ಗಂಟೆಯೊಳಗೆ ಮುಗಿಸಬೇಕುಬೆಂಗಳೂರು ಪೊಲೀಸರು ಗಣೇಶ ಕೂರಿಸುವ ಕಾರ್ಯಕ್ರಮದ ವರ್ತಕರಿಗೆ ಹೊಸ ಗೈಡ್ ಲೈನ್ಸ್ ಬಿಡುಗಡೆ ಮಾಡಿದ್ದು ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಎಚ್ಚರಿಕೆ ವಹಿಸಲು ಸೂಚಿಸಿದ್ದಾರೆ.

    ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ 

Published On - 12:42 pm, Sat, 16 September 23

ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?