AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಪೊಲೀಸ್ ಕಳ್ಳಾಟ: ಮತ್ತೋರ್ವ PSI ಸಸ್ಪೆಂಡ್

ಬೆಂಗಳೂರಿನಲ್ಲಿ ಪೊಲೀಸರಿಂದಲೇ ನಡೆಯುತ್ತಿರುವ ದರೋಡೆ ಮತ್ತು ಭ್ರಷ್ಟಾಚಾರ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಇತ್ತೀಚಿನ ದಿನದಲ್ಲಿ ಪೊಲೀಸರೇ ಕಳ್ಳತನ, ವಂಚನೆಯಲ್ಲಿ ತೋಡಗಿಕೊಂಡಿರುವುದು ಪತ್ತೆಯಾಗಿದೆ.ಕಾನ್ಸ್ಟೇಬಲ್​​ಗಳು ಸೇರಿದಂತೆ ಅನೇಕ ಪೊಲೀಸ್​​ ಅಧಿಕಾರಿಗಳು ಕಳ್ಳತನದ ಕೃತ್ಯದಲ್ಲಿ ಭಾಗಿಯಾಗುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿದೆ. ಇದೀಗ ಇದಕ್ಕೆ ಮತ್ತೊಂದು ಪ್ರಕರಣ ಸೇರಿಕೊಂಡಿದೆ.

ಕರ್ನಾಟಕದಲ್ಲಿ ಪೊಲೀಸ್ ಕಳ್ಳಾಟ: ಮತ್ತೋರ್ವ PSI ಸಸ್ಪೆಂಡ್
ಪಿಎಸ್‌ಐ ​​​
ಪ್ರಶಾಂತ್​ ಬಿ.
| Edited By: |

Updated on:Dec 16, 2025 | 5:26 PM

Share

ಬೆಂಗಳೂರು, ಡಿ.16: ಕಳ್ಳತನ, ಸುಲಿಗೆ, ದರೋಡೆ, ಅತ್ಯಾಚಾರ, ಕೊಲೆಯನ್ನು ತಡೆಯಬೇಕಿರುವ ಪೊಲೀಸರೇ, ಈ ಕೆಲಸ ಮಾಡಿದ್ರೆ ಹೇಗಿರುತ್ತೆ. ಇತ್ತೀಚೆಗೆ ಬೆಂಗಳೂರಿನಲ್ಲಿ (Bengaluru police corruption) ಪೊಲೀಸರೇ ದರೋಡೆ, ಕಳ್ಳತನ ಮಾಡಿ ಅಪರಾಧಿ ಸ್ಥಾನದಲ್ಲಿ ನಿಲ್ಲುತ್ತಿದ್ದಾರೆ. ರಾಜ್ಯದಲ್ಲಿ ಜನ ಪೊಲೀಸರು ಇದ್ದರೆ ಎಂಬ ನಂಬಿಕೆಯಲ್ಲಿ ನಿರ್ಭೀತರಾಗಿ ಓಡಾಡುತ್ತಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಪೊಲೀಸರೇ ಕಳ್ಳತನ ಮಾಡುತ್ತಿದ್ದಾರೆ. ಮೋಸ, ವಂಚನೆಯಲ್ಲಿ ತೋಡಗಿಸಿಕೊಂಡಿದ್ದಾರೆ. ಪೊಲೀಸರೇ ಇಂತಹ ಕೃತ್ಯದಲ್ಲಿ ಭಾಗಿಯಾದರೆ, ನ್ಯಾಯ ಯಾರಲ್ಲಿ ಕೇಳುವುದು. ಬೆಂಗಳೂರಿನ ಹಲವು ಭಾಗದಲ್ಲಿ ಪೊಲೀಸರು ಕಳ್ಳತನ ಪ್ರಕರಣದಲ್ಲಿ ಭಾಗಿಯಾಗುತ್ತಿರುವುದು ಬೆಂಗಳೂರಿನ ಜನರಿಗೆ ಆತಂಕ ಸೃಷ್ಟಿಸಿದೆ. ಇದೀಗ  ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಜ್ಯೂಸ್ ಹಾಗೂ ಜೆರಾಕ್ಸ್ ಅಂಗಡಿ ಮಾಲೀಕನಿಗೆ ಸುಳ್ಳುಕೇಸ್ ದಾಖಲಿಸುವುದಾಗಿ ಬೆದರಿಸಿ ಲಕ್ಷ ಲಕ್ಷ ಲೂಟಿ ಮಾಡಿದ್ದಾರೆ.

ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರದ ಜ್ಯೂಸ್ ಹಾಗೂ ಜೆರಾಕ್ಸ್ ಅಂಗಡಿ ಮಾಲೀಕನಿಂದ PSI ಹರೀಶ್ 1.60 ಲಕ್ಷ ರೂ ವಸೂಲಿ ಮಾಡಿದ್ದಾರೆ ಎಂದು ಹೇಳಲಾಗಿದೆ. ಇದೀಗ PSI ಹರೀಶ್​​ ಅವರನ್ನ ಬೆಂಗಳೂರು ದಕ್ಷಿಣ ಜಿಲ್ಲೆ ಎಸ್ ಪಿ ಶ್ರೀನಿವಾಸ್ ಗೌಡ ಅವರು ಸೇವೆಯಿಂದ ಅಮಾನತು ‌ಮಾಡಿದ್ದಾರೆ. ಅಕ್ಟೋಬರ್ 29 ರಂದು ಅಂದಿನ ಚನ್ನಪಟ್ಟಣ ಟೌನ್​​​ PSI ಆಗಿದ್ದ ಹರೀಶ್, ರಾಜೇಶ್ ಅವರ ಅಂಗಡಿ ಬಳಿ ಹೋಗಿ ನೀವು ನಕಲಿ ಆಧಾರ್ ಕಾರ್ಡ್ ಮಾಡುತ್ತೀದ್ದೀರಿ ಎಂದು ಕನಕಪುರದಿಂದ ಚನ್ನಪಟ್ಟಣ ಠಾಣೆಗೆ ಕರೆದುಕೊಂಡು ಬಂದು, ಬೆದರಿಕೆ ಹಾಕಿದ್ದರು. ಯಾವುದೇ ಪ್ರಕರಣ ದಾಖಲಿಸಿಕೊಳ್ಳದೇ, ಪೆಟ್ರೋಲ್ ಬಂಕ್​​ನಲ್ಲಿ 60 ಸಾವಿರ ಸ್ಕ್ಯಾನ್ ಮಾಡಿಸಿಕೊಂಡಿದ್ದರು ಎಂದು ಅಂಗಡಿ ಮಾಲೀಕ ರಾಜೇಶ್​​ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಜೊತೆಗೆ ಒಂದು ಲಕ್ಷ ನಗದು ಕೂಡ ರಾಜೇಶ್​ ಅವರಿಂದ ಕಸಿದುಕೊಂಡಿದ್ದರು. ಹೀಗಾಗಿ ವಾರದ ಹಿಂದೆ ರಾಜೇಶ್ ಕೇಂದ್ರವಲಯ ಐಜಿಪಿ ಅವರಿಗೆ ದೂರು ನೀಡಿದ್ದರು.

ಇದನ್ನೂ ಓದಿ: ಕಿಡ್ನಿ ದಾನಕ್ಕೆ ಮನವಿ ಮಾಡಿದ್ದ ವೈದ್ಯೆಗೆ ಹೈಕೋರ್ಟ್​ ಗ್ರೀನ್ ಸಿಗ್ನಲ್

ಈ ಬಗ್ಗೆ ತಕ್ಷಣ ಪ್ರಕ್ರಿಯಿಸಿದ ಐಜಿಪಿ ಕಚೇರಿ, ಇದರ ತನಿಖೆಯನ್ನು ಸೆನ್ ಠಾಣೆಯ DYSP ಕೆಂಚೇಗೌಡ ಅವರಿಗೆ ವಹಿಸಲಾಗಿತ್ತು. ಈ ಬಗ್ಗೆ DYSP ಕೆಂಚೇಗೌಡ ಅವರು ತನಿಖೆಯನ್ನು ನಡೆಸಿ, ವರದಿಯನ್ನು ಕೇಂದ್ರವಲಯ ಐಜಿಪಿ ಕಚೇರಿಗೆ ನೀಡಿದ್ದಾರೆ. ತನಿಖೆಯಲ್ಲಿ ಆರೋಪ ಮೇಲ್ನೋಟಕ್ಕೆ ಸಾಬೀತಾಗಿತ್ತು. ಈ ಹಿನ್ನೆಲೆಯಲ್ಲಿ ಎಸ್ ಪಿ ಶ್ರೀನಿವಾಸ್ ಗೌಡ ಅವರು ಕಗ್ಗಲಿಪುರ ಠಾಣೆಯಲ್ಲಿ PSI ಆಗಿ ಕೆಲಸ ಮಾಡುತ್ತಿದ್ದ ಹರೀಶ್ ಅವರನ್ನು ಅಮಾನತು ಮಾಡಿದ್ದಾರೆ.

ತನಿಖೆಯ ವೇಳೆ ಪಿಎಸ್ ಐ ಹರೀಶ್​​ ಅವರು, ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ಹೇಳಿದ್ದಾರೆ. ಇನ್ನು ಅಂಗಡಿ ಮಾಲೀಕ ರಾಜೇಶ್​ ಹೇಳಿರುವ ಪ್ರಕಾರ, ನನ್ನ ಮೇಲೆ ಯಾವುದೇ ದೂರು ದಾಖಲಿಸಿಕೊಳ್ಳದೇ, ಮೆಡಿಕಲ್ ಪರೀಕ್ಷೆ ಕೂಡ ಮಾಡಿಸಿದ್ರು ಎಂದು ಹೇಳಿದ್ದಾರೆ. ಇದೀಗ ಪಿಎಸ್ ಐ ಹರೀಶ್​​ ಅಮಾನತುಗೊಂಡಿರುವ ಬಗ್ಗೆ ರಾಜೇಶ್​​ ಅವರು ಸಂತಸ ವ್ಯಕ್ತಪಡಿಸಿದ್ದು, ಇನ್ನು ಇಂತಹ ಅಧಿಕಾರಿಗಳು ಬೆಂಗಳೂರಿನಲ್ಲಿ ಇದ್ದಾರೆ, ಅವರನ್ನು ಕೂಡ ಅಮಾನತು ಮಾಡಿ ಎಂದು ಹೇಳಿದ್ದಾರೆ.

ಬೆಂಗಳೂರಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:23 pm, Tue, 16 December 25

‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್