AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಪೊಲೀಸ್ ಕಳ್ಳಾಟ: ಮತ್ತೋರ್ವ PSI ಸಸ್ಪೆಂಡ್

ಬೆಂಗಳೂರಿನಲ್ಲಿ ಪೊಲೀಸರಿಂದಲೇ ನಡೆಯುತ್ತಿರುವ ದರೋಡೆ ಮತ್ತು ಭ್ರಷ್ಟಾಚಾರ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಇತ್ತೀಚಿನ ದಿನದಲ್ಲಿ ಪೊಲೀಸರೇ ಕಳ್ಳತನ, ವಂಚನೆಯಲ್ಲಿ ತೋಡಗಿಕೊಂಡಿರುವುದು ಪತ್ತೆಯಾಗಿದೆ.ಕಾನ್ಸ್ಟೇಬಲ್​​ಗಳು ಸೇರಿದಂತೆ ಅನೇಕ ಪೊಲೀಸ್​​ ಅಧಿಕಾರಿಗಳು ಕಳ್ಳತನದ ಕೃತ್ಯದಲ್ಲಿ ಭಾಗಿಯಾಗುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿದೆ. ಇದೀಗ ಇದಕ್ಕೆ ಮತ್ತೊಂದು ಪ್ರಕರಣ ಸೇರಿಕೊಂಡಿದೆ.

ಕರ್ನಾಟಕದಲ್ಲಿ ಪೊಲೀಸ್ ಕಳ್ಳಾಟ: ಮತ್ತೋರ್ವ PSI ಸಸ್ಪೆಂಡ್
ಪಿಎಸ್‌ಐ ​​​
ಪ್ರಶಾಂತ್​ ಬಿ.
| Edited By: |

Updated on:Dec 16, 2025 | 5:26 PM

Share

ಬೆಂಗಳೂರು, ಡಿ.16: ಕಳ್ಳತನ, ಸುಲಿಗೆ, ದರೋಡೆ, ಅತ್ಯಾಚಾರ, ಕೊಲೆಯನ್ನು ತಡೆಯಬೇಕಿರುವ ಪೊಲೀಸರೇ, ಈ ಕೆಲಸ ಮಾಡಿದ್ರೆ ಹೇಗಿರುತ್ತೆ. ಇತ್ತೀಚೆಗೆ ಬೆಂಗಳೂರಿನಲ್ಲಿ (Bengaluru police corruption) ಪೊಲೀಸರೇ ದರೋಡೆ, ಕಳ್ಳತನ ಮಾಡಿ ಅಪರಾಧಿ ಸ್ಥಾನದಲ್ಲಿ ನಿಲ್ಲುತ್ತಿದ್ದಾರೆ. ರಾಜ್ಯದಲ್ಲಿ ಜನ ಪೊಲೀಸರು ಇದ್ದರೆ ಎಂಬ ನಂಬಿಕೆಯಲ್ಲಿ ನಿರ್ಭೀತರಾಗಿ ಓಡಾಡುತ್ತಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಪೊಲೀಸರೇ ಕಳ್ಳತನ ಮಾಡುತ್ತಿದ್ದಾರೆ. ಮೋಸ, ವಂಚನೆಯಲ್ಲಿ ತೋಡಗಿಸಿಕೊಂಡಿದ್ದಾರೆ. ಪೊಲೀಸರೇ ಇಂತಹ ಕೃತ್ಯದಲ್ಲಿ ಭಾಗಿಯಾದರೆ, ನ್ಯಾಯ ಯಾರಲ್ಲಿ ಕೇಳುವುದು. ಬೆಂಗಳೂರಿನ ಹಲವು ಭಾಗದಲ್ಲಿ ಪೊಲೀಸರು ಕಳ್ಳತನ ಪ್ರಕರಣದಲ್ಲಿ ಭಾಗಿಯಾಗುತ್ತಿರುವುದು ಬೆಂಗಳೂರಿನ ಜನರಿಗೆ ಆತಂಕ ಸೃಷ್ಟಿಸಿದೆ. ಇದೀಗ  ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಜ್ಯೂಸ್ ಹಾಗೂ ಜೆರಾಕ್ಸ್ ಅಂಗಡಿ ಮಾಲೀಕನಿಗೆ ಸುಳ್ಳುಕೇಸ್ ದಾಖಲಿಸುವುದಾಗಿ ಬೆದರಿಸಿ ಲಕ್ಷ ಲಕ್ಷ ಲೂಟಿ ಮಾಡಿದ್ದಾರೆ.

ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರದ ಜ್ಯೂಸ್ ಹಾಗೂ ಜೆರಾಕ್ಸ್ ಅಂಗಡಿ ಮಾಲೀಕನಿಂದ PSI ಹರೀಶ್ 1.60 ಲಕ್ಷ ರೂ ವಸೂಲಿ ಮಾಡಿದ್ದಾರೆ ಎಂದು ಹೇಳಲಾಗಿದೆ. ಇದೀಗ PSI ಹರೀಶ್​​ ಅವರನ್ನ ಬೆಂಗಳೂರು ದಕ್ಷಿಣ ಜಿಲ್ಲೆ ಎಸ್ ಪಿ ಶ್ರೀನಿವಾಸ್ ಗೌಡ ಅವರು ಸೇವೆಯಿಂದ ಅಮಾನತು ‌ಮಾಡಿದ್ದಾರೆ. ಅಕ್ಟೋಬರ್ 29 ರಂದು ಅಂದಿನ ಚನ್ನಪಟ್ಟಣ ಟೌನ್​​​ PSI ಆಗಿದ್ದ ಹರೀಶ್, ರಾಜೇಶ್ ಅವರ ಅಂಗಡಿ ಬಳಿ ಹೋಗಿ ನೀವು ನಕಲಿ ಆಧಾರ್ ಕಾರ್ಡ್ ಮಾಡುತ್ತೀದ್ದೀರಿ ಎಂದು ಕನಕಪುರದಿಂದ ಚನ್ನಪಟ್ಟಣ ಠಾಣೆಗೆ ಕರೆದುಕೊಂಡು ಬಂದು, ಬೆದರಿಕೆ ಹಾಕಿದ್ದರು. ಯಾವುದೇ ಪ್ರಕರಣ ದಾಖಲಿಸಿಕೊಳ್ಳದೇ, ಪೆಟ್ರೋಲ್ ಬಂಕ್​​ನಲ್ಲಿ 60 ಸಾವಿರ ಸ್ಕ್ಯಾನ್ ಮಾಡಿಸಿಕೊಂಡಿದ್ದರು ಎಂದು ಅಂಗಡಿ ಮಾಲೀಕ ರಾಜೇಶ್​​ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಜೊತೆಗೆ ಒಂದು ಲಕ್ಷ ನಗದು ಕೂಡ ರಾಜೇಶ್​ ಅವರಿಂದ ಕಸಿದುಕೊಂಡಿದ್ದರು. ಹೀಗಾಗಿ ವಾರದ ಹಿಂದೆ ರಾಜೇಶ್ ಕೇಂದ್ರವಲಯ ಐಜಿಪಿ ಅವರಿಗೆ ದೂರು ನೀಡಿದ್ದರು.

ಇದನ್ನೂ ಓದಿ: ಕಿಡ್ನಿ ದಾನಕ್ಕೆ ಮನವಿ ಮಾಡಿದ್ದ ವೈದ್ಯೆಗೆ ಹೈಕೋರ್ಟ್​ ಗ್ರೀನ್ ಸಿಗ್ನಲ್

ಈ ಬಗ್ಗೆ ತಕ್ಷಣ ಪ್ರಕ್ರಿಯಿಸಿದ ಐಜಿಪಿ ಕಚೇರಿ, ಇದರ ತನಿಖೆಯನ್ನು ಸೆನ್ ಠಾಣೆಯ DYSP ಕೆಂಚೇಗೌಡ ಅವರಿಗೆ ವಹಿಸಲಾಗಿತ್ತು. ಈ ಬಗ್ಗೆ DYSP ಕೆಂಚೇಗೌಡ ಅವರು ತನಿಖೆಯನ್ನು ನಡೆಸಿ, ವರದಿಯನ್ನು ಕೇಂದ್ರವಲಯ ಐಜಿಪಿ ಕಚೇರಿಗೆ ನೀಡಿದ್ದಾರೆ. ತನಿಖೆಯಲ್ಲಿ ಆರೋಪ ಮೇಲ್ನೋಟಕ್ಕೆ ಸಾಬೀತಾಗಿತ್ತು. ಈ ಹಿನ್ನೆಲೆಯಲ್ಲಿ ಎಸ್ ಪಿ ಶ್ರೀನಿವಾಸ್ ಗೌಡ ಅವರು ಕಗ್ಗಲಿಪುರ ಠಾಣೆಯಲ್ಲಿ PSI ಆಗಿ ಕೆಲಸ ಮಾಡುತ್ತಿದ್ದ ಹರೀಶ್ ಅವರನ್ನು ಅಮಾನತು ಮಾಡಿದ್ದಾರೆ.

ತನಿಖೆಯ ವೇಳೆ ಪಿಎಸ್ ಐ ಹರೀಶ್​​ ಅವರು, ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ಹೇಳಿದ್ದಾರೆ. ಇನ್ನು ಅಂಗಡಿ ಮಾಲೀಕ ರಾಜೇಶ್​ ಹೇಳಿರುವ ಪ್ರಕಾರ, ನನ್ನ ಮೇಲೆ ಯಾವುದೇ ದೂರು ದಾಖಲಿಸಿಕೊಳ್ಳದೇ, ಮೆಡಿಕಲ್ ಪರೀಕ್ಷೆ ಕೂಡ ಮಾಡಿಸಿದ್ರು ಎಂದು ಹೇಳಿದ್ದಾರೆ. ಇದೀಗ ಪಿಎಸ್ ಐ ಹರೀಶ್​​ ಅಮಾನತುಗೊಂಡಿರುವ ಬಗ್ಗೆ ರಾಜೇಶ್​​ ಅವರು ಸಂತಸ ವ್ಯಕ್ತಪಡಿಸಿದ್ದು, ಇನ್ನು ಇಂತಹ ಅಧಿಕಾರಿಗಳು ಬೆಂಗಳೂರಿನಲ್ಲಿ ಇದ್ದಾರೆ, ಅವರನ್ನು ಕೂಡ ಅಮಾನತು ಮಾಡಿ ಎಂದು ಹೇಳಿದ್ದಾರೆ.

ಬೆಂಗಳೂರಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:23 pm, Tue, 16 December 25

Follow Us
Prashantha B
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?