AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಕಾಣೆಯಾಗಿದ್ದ ಹಸ್ಕಿ ತಳಿಯ ಕುರುಡು ಶ್ವಾನ ಪತ್ತೆ ಹಚ್ಚಿದ ಪೊಲೀಸರು

ಹಸ್ಕಿ ತಳಿಯ ಶ್ವಾನಗಳು ದುಬಾರಿ ಬೆಲೆಯದ್ದಾಗಿವೆ. ಇಂತಹ ಶ್ವಾನವೊಂದು ಶಿವಾಜಿನಗರದ ಮನೆಯೊಂದರಿಂದ ಕಾಣೆಯಾಗಿತ್ತು. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಸದ್ಯ ಈ ಶ್ವಾನ ಪೊಲೀಸರ ಕಣ್ಣಿಗೆ ಬಿದ್ದಿದೆ. ದುಬಾರಿ ಬೆಲೆಯ ಈ ಶ್ವಾನ ಕುರುಡಾಗಿದ್ದರಿಂದ ರಸ್ತೆಯಲ್ಲಿ ಬಿಡಲಾಗಿತ್ತು. ಹೀಗಾಗಿ ಇದು ಪೊಲೀಸರ ಕೈಗೆ ಸಿಕ್ಕಿದೆ.

ಬೆಂಗಳೂರು: ಕಾಣೆಯಾಗಿದ್ದ ಹಸ್ಕಿ ತಳಿಯ ಕುರುಡು ಶ್ವಾನ ಪತ್ತೆ ಹಚ್ಚಿದ ಪೊಲೀಸರು
ಕಾಣೆಯಾಗಿದ್ದ ಹಸ್ಕಿ ತಳಿಯ ಕುರುಡು ಶ್ವಾನವನ್ನು ಪತ್ತೆ ಹಚ್ಚಿದ ಪೊಲೀಸರು
Shivaprasad B
| Edited By: |

Updated on: Aug 28, 2023 | 4:02 PM

Share

ಬೆಂಗಳೂರು, ಆಗಸ್ಟ್ 28: ಕೆಲವು ದಿನಗಳ ಹಿಂದೆ ನಗರದ (Bengaluru) ಶಿವಾಜಿನಗರದ ಮನೆಯೊಂದರಿಂದ ಕಾಣೆಯಾಗಿದ್ದ ಹಸ್ಕಿ ತಳಿಯ ಕುರುಡು ಶ್ವಾನವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಕಾವಲ್ ಬೈರಸಂದ್ರ ಮನೆಯೊಂದರಲ್ಲಿ ಶ್ವಾನ ಇರುವುದನ್ನು ಪತ್ತೆಹಚ್ಚಿದ ಪೊಲೀಸರು, ಶ್ವಾನವನ್ನು ರಕ್ಷಿಸಿ ಮಾಲೀಕರಿಗೆ ಒಪ್ಪಿಸಿದ್ದಾರೆ.

ಶಿವಾಜಿನಗರದ ರಮ್ಯಾ ಎಂಬವರ ಮನೆಯಲ್ಲಿ ಸಾಕಿದ್ದ ಹಸ್ಕಿ ತಳಿಯ ಕುರುಡು ಶ್ವಾನ ಆಗಸ್ಟ್ 22 ರಂದು ಕಾಣೆಯಾಗಿತ್ತು. ಈ ಸಂಬಂಧ ಕಮರ್ಷಿಯಲ್ ಠಾಣೆಗೆ ರಮ್ಯಾ ಅವರು ದೂರು ನೀಡಿದ್ದರು. ಅಲ್ಲದೆ, ಪೂರ್ವ ವಿಭಾಗ ಡಿಸಿಪಿ ಭೀಮಾಶಂಕರ್ ಗುಳೇದ್ ಅವರಲ್ಲೂ ಶ್ವಾನ ಪತ್ತೆಗೆ ಮನವಿ ಮಾಡಿದ್ದರು.

ಇದನ್ನೂ ಓದಿ: ಬೆಂಗಳೂರು: ಹಳಿ ದಾಟುವ ವೇಳೆ ಬಂದ ಗೂಡ್ಸ್ ರೈಲು, ಸಾವನ್ನೇ ಗೆದ್ದು ಬಂದ ಮಹಿಳೆ

ಶ್ವಾನ ಮಾಲೀಕರು ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಪತ್ತೆ ಕಾರ್ಯ ನಡೆಸುತ್ತಿದ್ದರು. ಅದರಂತೆ ಕಾವಲ್ ಬೈರ ಸಂದ್ರದ ಮನೆಯೊಂದರಲ್ಲಿ ಈ ಶ್ವಾನ ಪತ್ತೆಯಾಗಿದೆ. ವಿಚಾರಣೆ ವೇಳೆ, ಆಟೋ ಚಾಲಕರೊಬ್ಬರು ಶಿವಾಜಿನಗರದಿಂದ ಆಟೋದಲ್ಲಿ ಕರೆದೊಯ್ದಿದ್ದರು. ಬಳಿಕ ಅದನ್ನು ಬ್ರೀಡರ್ ಓರ್ವನಿಗೆ ನೀಡಿದ್ದ. ಆದರೆ ಇದು ಕುರುಡು ನಾಯಿಯಾಗಿದ್ದರಿಂದ ಲಾಭವಿಲ್ಲವೆಂದು ಬೀದಿಗೆ ಬಿಟ್ಟಿರುವುದು ತಿಳಿದುಬಂದಿದೆ.

ಸದ್ಯ 14 ವರ್ಷಗಳಿಂದ ಸಾಕಿದ್ದ ಹಸ್ಕಿ ಶ್ವಾನ ಮತ್ತೆ ಮನೆ ಸೇರಿಸಿದ್ದಕ್ಕೆ ಮಾಲೀಕೆ ರಮ್ಯಾ ಅವರು ಪೊಲೀಸರಿಗೆ ಕೃತಜ್ಙತೆ ಸಲ್ಲಿಸಿದ್ದಾರೆ. ಪೂರ್ವ ವಿಭಾಗ ಡಿಸಿಪಿ ಡಾ. ಭೀಮಾಶಂಕರ ಗುಳೇದ್, ಸಿಬ್ಬಂದಿ ಪಿಎಸ್ಐ ಚೌದ್ರಿ, ಪ್ರಶಾಂತ್ವನಾಯ್ಕ್ ಮತ್ತು ಹುಸೈನ್ ಅವರಿಗೆ ಕೃತಜ್ಞತೆ ಅರ್ಪಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ