AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಕಾಣೆಯಾಗಿದ್ದ ಹಸ್ಕಿ ತಳಿಯ ಕುರುಡು ಶ್ವಾನ ಪತ್ತೆ ಹಚ್ಚಿದ ಪೊಲೀಸರು

ಹಸ್ಕಿ ತಳಿಯ ಶ್ವಾನಗಳು ದುಬಾರಿ ಬೆಲೆಯದ್ದಾಗಿವೆ. ಇಂತಹ ಶ್ವಾನವೊಂದು ಶಿವಾಜಿನಗರದ ಮನೆಯೊಂದರಿಂದ ಕಾಣೆಯಾಗಿತ್ತು. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಸದ್ಯ ಈ ಶ್ವಾನ ಪೊಲೀಸರ ಕಣ್ಣಿಗೆ ಬಿದ್ದಿದೆ. ದುಬಾರಿ ಬೆಲೆಯ ಈ ಶ್ವಾನ ಕುರುಡಾಗಿದ್ದರಿಂದ ರಸ್ತೆಯಲ್ಲಿ ಬಿಡಲಾಗಿತ್ತು. ಹೀಗಾಗಿ ಇದು ಪೊಲೀಸರ ಕೈಗೆ ಸಿಕ್ಕಿದೆ.

ಬೆಂಗಳೂರು: ಕಾಣೆಯಾಗಿದ್ದ ಹಸ್ಕಿ ತಳಿಯ ಕುರುಡು ಶ್ವಾನ ಪತ್ತೆ ಹಚ್ಚಿದ ಪೊಲೀಸರು
ಕಾಣೆಯಾಗಿದ್ದ ಹಸ್ಕಿ ತಳಿಯ ಕುರುಡು ಶ್ವಾನವನ್ನು ಪತ್ತೆ ಹಚ್ಚಿದ ಪೊಲೀಸರು
Shivaprasad B
| Edited By: Rakesh Nayak Manchi|

Updated on: Aug 28, 2023 | 4:02 PM

Share

ಬೆಂಗಳೂರು, ಆಗಸ್ಟ್ 28: ಕೆಲವು ದಿನಗಳ ಹಿಂದೆ ನಗರದ (Bengaluru) ಶಿವಾಜಿನಗರದ ಮನೆಯೊಂದರಿಂದ ಕಾಣೆಯಾಗಿದ್ದ ಹಸ್ಕಿ ತಳಿಯ ಕುರುಡು ಶ್ವಾನವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಕಾವಲ್ ಬೈರಸಂದ್ರ ಮನೆಯೊಂದರಲ್ಲಿ ಶ್ವಾನ ಇರುವುದನ್ನು ಪತ್ತೆಹಚ್ಚಿದ ಪೊಲೀಸರು, ಶ್ವಾನವನ್ನು ರಕ್ಷಿಸಿ ಮಾಲೀಕರಿಗೆ ಒಪ್ಪಿಸಿದ್ದಾರೆ.

ಶಿವಾಜಿನಗರದ ರಮ್ಯಾ ಎಂಬವರ ಮನೆಯಲ್ಲಿ ಸಾಕಿದ್ದ ಹಸ್ಕಿ ತಳಿಯ ಕುರುಡು ಶ್ವಾನ ಆಗಸ್ಟ್ 22 ರಂದು ಕಾಣೆಯಾಗಿತ್ತು. ಈ ಸಂಬಂಧ ಕಮರ್ಷಿಯಲ್ ಠಾಣೆಗೆ ರಮ್ಯಾ ಅವರು ದೂರು ನೀಡಿದ್ದರು. ಅಲ್ಲದೆ, ಪೂರ್ವ ವಿಭಾಗ ಡಿಸಿಪಿ ಭೀಮಾಶಂಕರ್ ಗುಳೇದ್ ಅವರಲ್ಲೂ ಶ್ವಾನ ಪತ್ತೆಗೆ ಮನವಿ ಮಾಡಿದ್ದರು.

ಇದನ್ನೂ ಓದಿ: ಬೆಂಗಳೂರು: ಹಳಿ ದಾಟುವ ವೇಳೆ ಬಂದ ಗೂಡ್ಸ್ ರೈಲು, ಸಾವನ್ನೇ ಗೆದ್ದು ಬಂದ ಮಹಿಳೆ

ಶ್ವಾನ ಮಾಲೀಕರು ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಪತ್ತೆ ಕಾರ್ಯ ನಡೆಸುತ್ತಿದ್ದರು. ಅದರಂತೆ ಕಾವಲ್ ಬೈರ ಸಂದ್ರದ ಮನೆಯೊಂದರಲ್ಲಿ ಈ ಶ್ವಾನ ಪತ್ತೆಯಾಗಿದೆ. ವಿಚಾರಣೆ ವೇಳೆ, ಆಟೋ ಚಾಲಕರೊಬ್ಬರು ಶಿವಾಜಿನಗರದಿಂದ ಆಟೋದಲ್ಲಿ ಕರೆದೊಯ್ದಿದ್ದರು. ಬಳಿಕ ಅದನ್ನು ಬ್ರೀಡರ್ ಓರ್ವನಿಗೆ ನೀಡಿದ್ದ. ಆದರೆ ಇದು ಕುರುಡು ನಾಯಿಯಾಗಿದ್ದರಿಂದ ಲಾಭವಿಲ್ಲವೆಂದು ಬೀದಿಗೆ ಬಿಟ್ಟಿರುವುದು ತಿಳಿದುಬಂದಿದೆ.

ಸದ್ಯ 14 ವರ್ಷಗಳಿಂದ ಸಾಕಿದ್ದ ಹಸ್ಕಿ ಶ್ವಾನ ಮತ್ತೆ ಮನೆ ಸೇರಿಸಿದ್ದಕ್ಕೆ ಮಾಲೀಕೆ ರಮ್ಯಾ ಅವರು ಪೊಲೀಸರಿಗೆ ಕೃತಜ್ಙತೆ ಸಲ್ಲಿಸಿದ್ದಾರೆ. ಪೂರ್ವ ವಿಭಾಗ ಡಿಸಿಪಿ ಡಾ. ಭೀಮಾಶಂಕರ ಗುಳೇದ್, ಸಿಬ್ಬಂದಿ ಪಿಎಸ್ಐ ಚೌದ್ರಿ, ಪ್ರಶಾಂತ್ವನಾಯ್ಕ್ ಮತ್ತು ಹುಸೈನ್ ಅವರಿಗೆ ಕೃತಜ್ಞತೆ ಅರ್ಪಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Shivaprasad B
Shivaprasad B
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?