AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಸ್ಕ್ ಹಾಕದ ಯುವಕರಿಗೆ ದಂಡ ವಿಧಿಸಿದ್ದಕ್ಕೆ ಗಲಾಟೆ; ಘಟನೆ ವೇಳೆ ಹರಿದ ಪೊಲೀಸ್ ಹೆಡ್​ಕಾನ್​ಸ್ಟೇಬಲ್ ಸಮವಸ್ತ್ರ

ಓರ್ವ ಆರೋಪಿ ಸಚಿನ್​ನನ್ನ ಠಾಣೆಗೆ ಕರೆತರಲಾಗಿದೆ. ಅಜಿತ್, ಅಜಯ್​ಗಾಗಿ ಪೊಲೀಸರಿಂದ ಶೋಧಕಾರ್ಯ ಮುಂದುವರಿದಿದೆ. ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಮಾಸ್ಕ್ ಹಾಕದ ಯುವಕರಿಗೆ ದಂಡ ವಿಧಿಸಿದ್ದಕ್ಕೆ ಗಲಾಟೆ; ಘಟನೆ ವೇಳೆ ಹರಿದ ಪೊಲೀಸ್ ಹೆಡ್​ಕಾನ್​ಸ್ಟೇಬಲ್ ಸಮವಸ್ತ್ರ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Nov 26, 2021 | 2:53 PM

Share

ಬೆಂಗಳೂರು: ಮಾಸ್ಕ್ ಹಾಕದ ಯುವಕರಿಗೆ ದಂಡ ಹಾಕುವಾಗ ಗಲಾಟೆ ನಡೆದ ಘಟನೆ ಬೆಂಗಳೂರಿನ ಮಲ್ಲಸಂದ್ರದಲ್ಲಿ ಉಂಟಾಗಿದೆ. ಪೊಲೀಸರ ಜೊತೆ ಯುವಕರು ಮಾಸ್ಕ್ ಧರಿಸದ ವಿಚಾರವಾಗಿ ಗಲಾಟೆ ಮಾಡಿಕೊಂಡಿದ್ದಾರೆ. ಎಎಸ್​ಐ ರಾಜಶೇಖರ್, ಹೆಡ್ ಕಾನ್ಸ್‌ಟೇಬಲ್ ಮುನಿರಾಜು ಜೊತೆ ಯುವಕರು ಜಗಳವಾಡಿದ್ದಾರೆ. ಗಲಾಟೆ ವೇಳೆ ಹೆಡ್​ಕಾನ್ಸ್​ಟೇಬಲ್​​ ಹೆಚ್​ಸಿ ಮುನಿರಾಜು ಸಮವಸ್ತ್ರ ಹರಿದು ಹೋಗಿದೆ. ಹೆಡ್​ ಕಾನ್ಸ್​​ಟೇಬಲ್​ ಬಳಿ ಇದ್ದ ಮಷಿನ್​ಗೂ ಹಾನಿ ಉಂಟಾಗಿದೆ ಎಂದು ತಿಳಿದುಬಂದಿದೆ.

ಮಾಸ್ಕ್ ಧರಿಸದೆ ರಸ್ತೆ ಬದಿಯಲ್ಲಿ ನಿಂತಿದ್ದ ಯುವಕರನ್ನು ಪೊಲೀಸರು ಪ್ರಶ್ನೆ ಮಾಡಿದ್ದರು. ಮಾಸ್ಕ್​ ಧರಿಸದ್ದನ್ನು ಪ್ರಶ್ನಿಸಿದ್ದಕ್ಕೆ ಯುವಕರು ಉದ್ಧಟತನ ತೋರಿದ್ದಾರೆ. ದಂಡ ಪಾವತಿಸಿದೆ ಯುವಕರು ಉದ್ಧಟತನ ಪ್ರದರ್ಶನ ಮಾಡಿದ್ದಾರೆ. ಈ ವೇಳೆ, ಪೊಲೀಸ್ ಕಾನ್​ಸ್ಟೇಬಲ್ ಸಮವಸ್ತ್ರ ಕೂಡ ಹರಿದುಹೋಗಿದೆ. ಓರ್ವ ಆರೋಪಿ ಸಚಿನ್​ನನ್ನ ಠಾಣೆಗೆ ಕರೆತರಲಾಗಿದೆ. ಅಜಿತ್, ಅಜಯ್​ಗಾಗಿ ಪೊಲೀಸರಿಂದ ಶೋಧಕಾರ್ಯ ಮುಂದುವರಿದಿದೆ. ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ದೇವನಹಳ್ಳಿ: ಜಮೀನು ವಿಚಾರ 2 ಕುಟುಂಬಗಳ ಮಧ್ಯೆ ಮಾರಾಮಾರಿ ಜಮೀನು ವಿಚಾರದಲ್ಲಿ 2 ಕುಟುಂಬಗಳ ಮಧ್ಯೆ ಮಾರಾಮಾರಿ ನಡೆದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಬೈಚಾಪುರ ಗ್ರಾಮದಲ್ಲಿ ನಡೆದಿದೆ. ಶಶಿಧರ್, ಮುನಿಯಪ್ಪ ಕುಟುಂಬದ ಮಧ್ಯೆ ಹೊಡೆದಾಟ ಉಂಟಾಗಿದೆ. ಮೆಕ್ಕೆಜೋಳದ ತೋಟದಲ್ಲಿ ಸಿನಿಮಾ ಸ್ಟೈಲ್​ನಲ್ಲಿ ಗಲಾಟೆ ನಡೆದಿದೆ. ದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಬೆಂಗಳೂರು: ರಸ್ತೆ ಗುಂಡಿಯಲ್ಲಿ ಬಿಬಿಎಂಪಿ ಪ್ರತಿಕೃತಿ ಮುಚ್ಚಿ ಅಂತ್ಯಕ್ರಿಯೆ ಮಾಡಿದ ಪ್ರತಿಭಟನಾಕಾರರು; ಪಾಲಿಕೆ ವಿರುದ್ಧ ಆಕ್ರೋಶ

ಇದನ್ನೂ ಓದಿ: ಬೆಂಗಳೂರು: ಭೂಕಂಪದ ಯಾವುದೇ ಲಕ್ಷಣ ದಾಖಲಾಗಿಲ್ಲ; ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದ ಸ್ಪಷ್ಟನೆ

Published On - 2:49 pm, Fri, 26 November 21

ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ