AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಸ್ಕ್ ಹಾಕದ ಯುವಕರಿಗೆ ದಂಡ ವಿಧಿಸಿದ್ದಕ್ಕೆ ಗಲಾಟೆ; ಘಟನೆ ವೇಳೆ ಹರಿದ ಪೊಲೀಸ್ ಹೆಡ್​ಕಾನ್​ಸ್ಟೇಬಲ್ ಸಮವಸ್ತ್ರ

ಓರ್ವ ಆರೋಪಿ ಸಚಿನ್​ನನ್ನ ಠಾಣೆಗೆ ಕರೆತರಲಾಗಿದೆ. ಅಜಿತ್, ಅಜಯ್​ಗಾಗಿ ಪೊಲೀಸರಿಂದ ಶೋಧಕಾರ್ಯ ಮುಂದುವರಿದಿದೆ. ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಮಾಸ್ಕ್ ಹಾಕದ ಯುವಕರಿಗೆ ದಂಡ ವಿಧಿಸಿದ್ದಕ್ಕೆ ಗಲಾಟೆ; ಘಟನೆ ವೇಳೆ ಹರಿದ ಪೊಲೀಸ್ ಹೆಡ್​ಕಾನ್​ಸ್ಟೇಬಲ್ ಸಮವಸ್ತ್ರ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Nov 26, 2021 | 2:53 PM

Share

ಬೆಂಗಳೂರು: ಮಾಸ್ಕ್ ಹಾಕದ ಯುವಕರಿಗೆ ದಂಡ ಹಾಕುವಾಗ ಗಲಾಟೆ ನಡೆದ ಘಟನೆ ಬೆಂಗಳೂರಿನ ಮಲ್ಲಸಂದ್ರದಲ್ಲಿ ಉಂಟಾಗಿದೆ. ಪೊಲೀಸರ ಜೊತೆ ಯುವಕರು ಮಾಸ್ಕ್ ಧರಿಸದ ವಿಚಾರವಾಗಿ ಗಲಾಟೆ ಮಾಡಿಕೊಂಡಿದ್ದಾರೆ. ಎಎಸ್​ಐ ರಾಜಶೇಖರ್, ಹೆಡ್ ಕಾನ್ಸ್‌ಟೇಬಲ್ ಮುನಿರಾಜು ಜೊತೆ ಯುವಕರು ಜಗಳವಾಡಿದ್ದಾರೆ. ಗಲಾಟೆ ವೇಳೆ ಹೆಡ್​ಕಾನ್ಸ್​ಟೇಬಲ್​​ ಹೆಚ್​ಸಿ ಮುನಿರಾಜು ಸಮವಸ್ತ್ರ ಹರಿದು ಹೋಗಿದೆ. ಹೆಡ್​ ಕಾನ್ಸ್​​ಟೇಬಲ್​ ಬಳಿ ಇದ್ದ ಮಷಿನ್​ಗೂ ಹಾನಿ ಉಂಟಾಗಿದೆ ಎಂದು ತಿಳಿದುಬಂದಿದೆ.

ಮಾಸ್ಕ್ ಧರಿಸದೆ ರಸ್ತೆ ಬದಿಯಲ್ಲಿ ನಿಂತಿದ್ದ ಯುವಕರನ್ನು ಪೊಲೀಸರು ಪ್ರಶ್ನೆ ಮಾಡಿದ್ದರು. ಮಾಸ್ಕ್​ ಧರಿಸದ್ದನ್ನು ಪ್ರಶ್ನಿಸಿದ್ದಕ್ಕೆ ಯುವಕರು ಉದ್ಧಟತನ ತೋರಿದ್ದಾರೆ. ದಂಡ ಪಾವತಿಸಿದೆ ಯುವಕರು ಉದ್ಧಟತನ ಪ್ರದರ್ಶನ ಮಾಡಿದ್ದಾರೆ. ಈ ವೇಳೆ, ಪೊಲೀಸ್ ಕಾನ್​ಸ್ಟೇಬಲ್ ಸಮವಸ್ತ್ರ ಕೂಡ ಹರಿದುಹೋಗಿದೆ. ಓರ್ವ ಆರೋಪಿ ಸಚಿನ್​ನನ್ನ ಠಾಣೆಗೆ ಕರೆತರಲಾಗಿದೆ. ಅಜಿತ್, ಅಜಯ್​ಗಾಗಿ ಪೊಲೀಸರಿಂದ ಶೋಧಕಾರ್ಯ ಮುಂದುವರಿದಿದೆ. ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ದೇವನಹಳ್ಳಿ: ಜಮೀನು ವಿಚಾರ 2 ಕುಟುಂಬಗಳ ಮಧ್ಯೆ ಮಾರಾಮಾರಿ ಜಮೀನು ವಿಚಾರದಲ್ಲಿ 2 ಕುಟುಂಬಗಳ ಮಧ್ಯೆ ಮಾರಾಮಾರಿ ನಡೆದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಬೈಚಾಪುರ ಗ್ರಾಮದಲ್ಲಿ ನಡೆದಿದೆ. ಶಶಿಧರ್, ಮುನಿಯಪ್ಪ ಕುಟುಂಬದ ಮಧ್ಯೆ ಹೊಡೆದಾಟ ಉಂಟಾಗಿದೆ. ಮೆಕ್ಕೆಜೋಳದ ತೋಟದಲ್ಲಿ ಸಿನಿಮಾ ಸ್ಟೈಲ್​ನಲ್ಲಿ ಗಲಾಟೆ ನಡೆದಿದೆ. ದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಬೆಂಗಳೂರು: ರಸ್ತೆ ಗುಂಡಿಯಲ್ಲಿ ಬಿಬಿಎಂಪಿ ಪ್ರತಿಕೃತಿ ಮುಚ್ಚಿ ಅಂತ್ಯಕ್ರಿಯೆ ಮಾಡಿದ ಪ್ರತಿಭಟನಾಕಾರರು; ಪಾಲಿಕೆ ವಿರುದ್ಧ ಆಕ್ರೋಶ

ಇದನ್ನೂ ಓದಿ: ಬೆಂಗಳೂರು: ಭೂಕಂಪದ ಯಾವುದೇ ಲಕ್ಷಣ ದಾಖಲಾಗಿಲ್ಲ; ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದ ಸ್ಪಷ್ಟನೆ

Published On - 2:49 pm, Fri, 26 November 21

Follow Us
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ