AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಬೆಂಗಳೂರಿನಲ್ಲಿ 3 ಇನ್‌ಸ್ಟಾಗ್ರಾಮ್ ಖಾತೆಗಳ ವಿರುದ್ಧ ಎಫ್‌ಐಆರ್

ಬೆಂಗಳೂರು ಪೊಲೀಸರು ರಾಹುಲ್ ಗಾಂಧಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಮತ್ತು ಅವಹೇಳನಕಾರಿ ಪೋಸ್ಟ್‌ಗಳನ್ನು ಹಂಚಿಕೊಂಡ ಆರೋಪದ ಮೇಲೆ ಮೂರು ಇನ್‌ಸ್ಟಾಗ್ರಾಮ್ ಖಾತೆಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಕೆಪಿಸಿಸಿ ಕಾನೂನು ಕೋಶದ ದೂರಿನನ್ವಯ ಸೈಬರ್ ಕ್ರೈಂ ಪೊಲೀಸರು ತನಿಖೆ ಆರಂಭಿಸಿದ್ದಾರೆ. 'ground.reality_india' ಎಂಬ ಖಾತೆಯಲ್ಲಿ ರಾಹುಲ್ ಗಾಂಧಿ ಅವರ ವಿರುದ್ಧಪ್ರಚೋದಕ ಕಾಮೆಂಟ್‌ಗಳಿದ್ದ ವಿಡಿಯೋ ಅಪ್ಲೋಡ್ ಮಾಡಲಾಗಿದೆ.

ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಬೆಂಗಳೂರಿನಲ್ಲಿ 3 ಇನ್‌ಸ್ಟಾಗ್ರಾಮ್ ಖಾತೆಗಳ ವಿರುದ್ಧ ಎಫ್‌ಐಆರ್
ರಾಹುಲ್ ಗಾಂಧಿ
ಅಕ್ಷಯ್​ ಪಲ್ಲಮಜಲು​​
|

Updated on: Jul 30, 2026 | 8:04 AM

Share

ಬೆಂಗಳೂರು, ಜು.30: ಲೋಕಸಭೆಯ ವಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ, ನಿಂದನೀಯ ಹಾಗೂ ಅವಹೇಳನಕಾರಿ ಪೋಸ್ಟ್‌ಗಳನ್ನು ಹಂಚಿಕೊಂಡ ಆರೋಪದಡಿಯಲ್ಲಿ ಬೆಂಗಳೂರು ಪೊಲೀಸರು ಮೂರು ಇನ್‌ಸ್ಟಾಗ್ರಾಮ್ ಖಾತೆಗಳ ವಿರುದ್ಧ ಪ್ರಕರಣ (FIR) ದಾಖಲಿಸಿಕೊಂಡಿದ್ದಾರೆ.

ಕೆಪಿಸಿಸಿ ಶಾಸನಬದ್ಧ ಹಾಗೂ ಕಾನೂನು ಕೋಶದ (Legal Cell) ಸದಸ್ಯರೊಬ್ಬರು ನೀಡಿರುವ ದೂರಿನ ಆಧಾರದ ಮೇರೆಗೆ ಬೆಂಗಳೂರಿನ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಜುಲೈ 27ರಂದು ಈ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

‘ground.reality_india’ ಎಂಬ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಜುಲೈ 16ರಂದು 30 ಸೆಕೆಂಡುಗಳ ವೀಡಿಯೊ ಒಂದನ್ನು ಅಪ್‌ಲೋಡ್ ಮಾಡಲಾಗಿತ್ತು. ಈ ವೀಡಿಯೊಗೆ “ವಿಪಕ್ಷಗಳು ಏಕೆ ಮೌನವಾಗಿವೆ?” (Why is the Opposition party silent) ಎಂಬ ಕ್ಯಾಪ್ಷನ್ ನೀಡಲಾಗಿದ್ದು, ರಾಹುಲ್ ಗಾಂಧಿ ಅವರ ವಿರುದ್ಧ ತೀವ್ರ ನಿಂದನೀಯ ಹಾಗೂ ಲೈಂಗಿಕ ಪ್ರಚೋದಕ/ಅವಹೇಳನಕಾರಿ ಕಾಮೆಂಟ್‌ಗಳನ್ನು ಬಳಸಲಾಗಿತ್ತು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ವೀಡಿಯೊ ಮತ್ತು ಪೋಸ್ಟ್ ಜನಪ್ರತಿನಿಧಿಯೊಬ್ಬರ ಗೌರವಕ್ಕೆ ಧಕ್ಕೆ ತರುವ ಹಾಗೂ ಅವರ ತೇಜೋವಧೆ ಮಾಡುವ ದುರುದ್ದೇಶದಿಂದ ಕೂಡಿದೆ ಎಂದು ದೂರುದಾರರು ಆರೋಪಿಸಿದ್ದಾರೆ. ಈ ವೀಡಿಯೊ ಕೆಳಗೆ ಪ್ರಚೋದನಕಾರಿ ಹಾಗೂ ನಿಂದನೀಯ ಕಾಮೆಂಟ್‌ಗಳನ್ನು ಹಾಕಿದ್ದ ‘raashtravaadhi2’ ಹಾಗೂ ‘manvithamanojsamanvi’ ಎಂಬ ಇಬ್ಬರು ಇನ್‌ಸ್ಟಾಗ್ರಾಮ್ ಬಳಕೆದಾರರ ಹೆಸರುಗಳನ್ನು ಸಹ ಎಫ್‌ಐಆರ್‌ನಲ್ಲಿ ಸೇರಿಸಲಾಗಿದೆ.

ಇದನ್ನೂ ಓದಿ: ಪತಿ ಕಿರುಕುಳಕ್ಕೆ ಬೇಸತ್ತು ರಾಜಸ್ಥಾನದಿಂದ ಮಂಗಳೂರಿಗೆ ಬಂದಿದ್ದ ಮಹಿಳೆ ರಕ್ಷಣೆ: ಎನ್‌ಜಿಒ ನೆರವಿನಿಂದ ತಂದೆ-ಮಗಳ ಭಾವನಾತ್ಮಕ ಪುನರ್ಮಿಲನ

ಪ್ರಸ್ತುತ ಸೈಬರ್ ಕ್ರೈಮ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಈ ಖಾತೆಗಳ ಮಾಲೀಕರನ್ನು ಪತ್ತೆ ಹಚ್ಚಲು ಹಾಗೂ ತನಿಖೆ ಚುರುಕುಗೊಳಿಸಲು ಮುಂದಾಗಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಎನ್‌ಜಿಒ ನೆರವಿನಿಂದ ತಂದೆ-ಮಗಳ ಭಾವನಾತ್ಮಕ ಪುನರ್ಮಿಲನ
ಎನ್‌ಜಿಒ ನೆರವಿನಿಂದ ತಂದೆ-ಮಗಳ ಭಾವನಾತ್ಮಕ ಪುನರ್ಮಿಲನ
ನಿಮ್ಮ ಉದ್ಯೋಗ, ಆರ್ಥಿಕ ಸ್ಥಿತಿ ಹಾಗೂ ಅದೃಷ್ಟ ಹೇಗಿದೆ?
ನಿಮ್ಮ ಉದ್ಯೋಗ, ಆರ್ಥಿಕ ಸ್ಥಿತಿ ಹಾಗೂ ಅದೃಷ್ಟ ಹೇಗಿದೆ?
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ