ಬೆಂಗಳೂರು: ಅನ್ಯ ಧರ್ಮದ ಹುಡುಗನ ಜೊತೆ ಹೋಗುತ್ತಿದ್ದ ಯುವತಿಗೆ ಬುರ್ಖಾ ತೆಗೆಯುವಂತೆ ಒತ್ತಾಯ; ಮುಸ್ಲಿಂ ಯುವಕ ಬಂಧನ

ಕಾರಿನಿಂದ ಬೈಕ್​ ಅಡ್ಡಗಟ್ಟಿ ಮುಸ್ಲಿಂ ಯುವತಿಗೆ ನಿಂದಿಸಿ ಬುರ್ಖಾ ತೆಗೆಯುವಂತೆ ಒತ್ತಾಯಿಸ್ದ ಮುಸ್ಲಿಂ ಯುವಕನನ್ನು ಬೆಂಗಳೂರು ಪೂರ್ವ ವಿಭಾಗದ ಸೆನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಜಾಕೀರ್​ ಆರೋಪಿ ಜಾಕೀರ್ ಅಹಮ್ಮದ್ ರಷ್ಯಾದಲ್ಲಿ ಮೆಡಿಕಲ್ ಓದುತ್ತಿದ್ದು, ಎರಡು ತಿಂಗಳ ರಜೆಗಾಗಿ ಬೆಂಗಳೂರಿಗೆ ಬಂದಿದ್ದನು.

ಬೆಂಗಳೂರು: ಅನ್ಯ ಧರ್ಮದ ಹುಡುಗನ ಜೊತೆ ಹೋಗುತ್ತಿದ್ದ ಯುವತಿಗೆ ಬುರ್ಖಾ ತೆಗೆಯುವಂತೆ ಒತ್ತಾಯ; ಮುಸ್ಲಿಂ ಯುವಕ ಬಂಧನ
ಅನ್ಯ ಧರ್ಮದ ಹುಡುಗನ ಜೊತೆ ಹೋಗುತ್ತಿದ್ದಕ್ಕೆ ನಿಂದನೆ
Follow us
| Updated By: ವಿವೇಕ ಬಿರಾದಾರ

Updated on:Aug 28, 2023 | 11:04 AM

ಬೆಂಗಳೂರು: ಅನ್ಯ ಧರ್ಮದ ಹುಡುಗನ ಜೊತೆ ಹೋಗುತ್ತಿದ್ದಕ್ಕೆ ಮುಸ್ಲಿಂ (Muslim) ಯುವತಿಗೆ ಕೆಟ್ಟದಾಗಿ ನಿಂದಿಸಿದ್ದ ಮುಸ್ಲಿಂ ಯುವಕನನ್ನು ಬೆಂಗಳೂರು (Bengaluru) ಪೂರ್ವ ವಿಭಾಗದ ಸೆನ್ ಠಾಣೆ ಪೊಲೀಸರು (Police) ಬಂಧಿಸಿದ್ದಾರೆ. ಕೋಲಾರ ಜಿಲ್ಲೆ ಬಂಗಾರಪೇಟೆ ಮೂಲದ ಜಾಕೀರ್ ಅಹಮ್ಮದ್ ಬಂಧಿತ ಆರೋಪಿ. ಮುಸ್ಲಿಂ ಯುವತಿ, ಬೈಕ್​ನಲ್ಲಿದ್ದ ಯುವಕ ಇಬ್ಬರು ಪರಿಚಿತರು. ಇಬ್ಬರೂ ಕಂಪನಿಯೊಂದಕ್ಕೆ ಸಂದರ್ಶನ ನೀಡಲು ಹೋಗಿದ್ದರು. ಸಂದರ್ಶ ಮುಗಿದ ಬಳಿಕ ಯುವತಿಯನ್ನು ಮನೆಗೆ ಡ್ರಾಪ್ ಮಾಡಲು ಯುವಕ ಹೋಗುತ್ತಿದ್ದ.

ಮುಸ್ಲಿಂ ಯುವತಿ ಅನ್ಯಧರ್ಮಿಯ ಯುವಕನ ಜೊತೆಗೆ ಹೋಗುತ್ತಿದ್ದಿದ್ದನ್ನು ನೋಡಿದ ಆರೋಪಿ ಜಾಕೀರ್, ಕಾರಿನಿಂದ ಬೈಕ್ ಅಡ್ಡಗಟ್ಟಿದ್ದಾನೆ. ನಂತರ ಯುವತಿಯನ್ನು ಕೆಟ್ಟದಾಗಿ ನಿಂದಿಸಿದ್ದಾನೆ. ಅಲ್ಲದೇ ಬುರ್ಖಾ ತೆಗೆಯುವಂತೆ ಒತ್ತಾಯಿಸಿದ್ದಾನೆ. ತಾನು ಮಾಡುತ್ತಿರುವ ಕೃತ್ಯದ ಬಗ್ಗೆ ತಾನೇ ಮೊಬೈಲ್​ ಕ್ಯಾಮೆರಾದಲ್ಲಿ ಸೆರೆ ಹಿಡಿದು ಸೋಷಿಯಲ್ ಮೀಡಿಯಾದಲ್ಲಿ‌ ಹರಿಬಿಟ್ಟಿದ್ದಾನೆ.

ಇದನ್ನೂ ಓದಿ: ಬೆಂಗಳೂರು: ಗಣೇಶ ಮೂರ್ತಿ ಕೂರಿಸುವ ವಿಚಾರಕ್ಕೆ ಗಲಾಟೆ; ಚಾಕು ಇರಿತ

ಈ ವಿಡಿಯೋವನ್ನು ಫೇಸ್​​ಬುಕ್​​ನಲ್ಲಿ​​ ಫ್ಯಾಕ್ಟ್ಸ್​​​ ಖಾತೆದಾರರು ಸಚಿವ ಪ್ರಿಯಾಂಕ್​ ಖರ್ಗೆ ಅವರಿಗೆ ಟ್ಯಾಗ್​ ಮಾಡಿ “ಒಬ್ಬ ಬುರ್ಖಾ ಧಾರಿ ಯುವತಿ ಹಿಂದೂ ಯುವಕನೊಂದು ಸಂಚರಿಸಿದರೇ ಒಬ್ಬ ಮುಸ್ಲಿಂ ಯುವಕ ನಿಂದಿಸಿದ್ದು, ಸರಿಯೇ? ಇನ್ನು ಯುವತಿ ವಿರುದ್ಧ ಈ ರೀತಿಯಾದ ಭಾಷೆ ಬಳಸಿದ್ದು ಸರಿಯೇ ?” ಎಂದು ಫೇಸ್​ಬುಕ್​ನಲ್ಲಿ ಪೋಸ್ಟ್​​ ಮಾಡಿ ಪ್ರಶ್ನಿಸಿದ್ದಾರೆ. ನಂತರ ಬೆಂಗಳೂರು ಪೊಲೀಸರಿಗೆ ಟ್ಯಾಗ್​ ಮಾಡಿ “ಆತನ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಿ” ಎಂದು ಆಗ್ರಹಿಸಿದ್ದಾರೆ.

ಆರೋಪಿ ಜಾಕೀರ್ ಅಹಮ್ಮದ್ ರಷ್ಯಾದಲ್ಲಿ ಮೆಡಿಕಲ್ ಓದುತ್ತಿದ್ದು, ಎರಡು ತಿಂಗಳ ರಜೆಗಾಗಿ ಬೆಂಗಳೂರಿನ ಗೋವಿಂದಪುರದ ತನ್ನ ಅಕ್ಕನ ಮನೆಗೆ ಬಂದಿದ್ದನು. ಸದ್ಯ ಪೊಲೀಸರು ಗೋವಿಂದಪುರದ ಸೋದರಿ ಮನೆಯಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:00 am, Mon, 28 August 23

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು