AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಅನ್ಯ ಧರ್ಮದ ಹುಡುಗನ ಜೊತೆ ಹೋಗುತ್ತಿದ್ದ ಯುವತಿಗೆ ಬುರ್ಖಾ ತೆಗೆಯುವಂತೆ ಒತ್ತಾಯ; ಮುಸ್ಲಿಂ ಯುವಕ ಬಂಧನ

ಕಾರಿನಿಂದ ಬೈಕ್​ ಅಡ್ಡಗಟ್ಟಿ ಮುಸ್ಲಿಂ ಯುವತಿಗೆ ನಿಂದಿಸಿ ಬುರ್ಖಾ ತೆಗೆಯುವಂತೆ ಒತ್ತಾಯಿಸ್ದ ಮುಸ್ಲಿಂ ಯುವಕನನ್ನು ಬೆಂಗಳೂರು ಪೂರ್ವ ವಿಭಾಗದ ಸೆನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಜಾಕೀರ್​ ಆರೋಪಿ ಜಾಕೀರ್ ಅಹಮ್ಮದ್ ರಷ್ಯಾದಲ್ಲಿ ಮೆಡಿಕಲ್ ಓದುತ್ತಿದ್ದು, ಎರಡು ತಿಂಗಳ ರಜೆಗಾಗಿ ಬೆಂಗಳೂರಿಗೆ ಬಂದಿದ್ದನು.

ಬೆಂಗಳೂರು: ಅನ್ಯ ಧರ್ಮದ ಹುಡುಗನ ಜೊತೆ ಹೋಗುತ್ತಿದ್ದ ಯುವತಿಗೆ ಬುರ್ಖಾ ತೆಗೆಯುವಂತೆ ಒತ್ತಾಯ; ಮುಸ್ಲಿಂ ಯುವಕ ಬಂಧನ
ಅನ್ಯ ಧರ್ಮದ ಹುಡುಗನ ಜೊತೆ ಹೋಗುತ್ತಿದ್ದಕ್ಕೆ ನಿಂದನೆ
TV9 Web
| Edited By: |

Updated on:Aug 28, 2023 | 11:04 AM

Share

ಬೆಂಗಳೂರು: ಅನ್ಯ ಧರ್ಮದ ಹುಡುಗನ ಜೊತೆ ಹೋಗುತ್ತಿದ್ದಕ್ಕೆ ಮುಸ್ಲಿಂ (Muslim) ಯುವತಿಗೆ ಕೆಟ್ಟದಾಗಿ ನಿಂದಿಸಿದ್ದ ಮುಸ್ಲಿಂ ಯುವಕನನ್ನು ಬೆಂಗಳೂರು (Bengaluru) ಪೂರ್ವ ವಿಭಾಗದ ಸೆನ್ ಠಾಣೆ ಪೊಲೀಸರು (Police) ಬಂಧಿಸಿದ್ದಾರೆ. ಕೋಲಾರ ಜಿಲ್ಲೆ ಬಂಗಾರಪೇಟೆ ಮೂಲದ ಜಾಕೀರ್ ಅಹಮ್ಮದ್ ಬಂಧಿತ ಆರೋಪಿ. ಮುಸ್ಲಿಂ ಯುವತಿ, ಬೈಕ್​ನಲ್ಲಿದ್ದ ಯುವಕ ಇಬ್ಬರು ಪರಿಚಿತರು. ಇಬ್ಬರೂ ಕಂಪನಿಯೊಂದಕ್ಕೆ ಸಂದರ್ಶನ ನೀಡಲು ಹೋಗಿದ್ದರು. ಸಂದರ್ಶ ಮುಗಿದ ಬಳಿಕ ಯುವತಿಯನ್ನು ಮನೆಗೆ ಡ್ರಾಪ್ ಮಾಡಲು ಯುವಕ ಹೋಗುತ್ತಿದ್ದ.

ಮುಸ್ಲಿಂ ಯುವತಿ ಅನ್ಯಧರ್ಮಿಯ ಯುವಕನ ಜೊತೆಗೆ ಹೋಗುತ್ತಿದ್ದಿದ್ದನ್ನು ನೋಡಿದ ಆರೋಪಿ ಜಾಕೀರ್, ಕಾರಿನಿಂದ ಬೈಕ್ ಅಡ್ಡಗಟ್ಟಿದ್ದಾನೆ. ನಂತರ ಯುವತಿಯನ್ನು ಕೆಟ್ಟದಾಗಿ ನಿಂದಿಸಿದ್ದಾನೆ. ಅಲ್ಲದೇ ಬುರ್ಖಾ ತೆಗೆಯುವಂತೆ ಒತ್ತಾಯಿಸಿದ್ದಾನೆ. ತಾನು ಮಾಡುತ್ತಿರುವ ಕೃತ್ಯದ ಬಗ್ಗೆ ತಾನೇ ಮೊಬೈಲ್​ ಕ್ಯಾಮೆರಾದಲ್ಲಿ ಸೆರೆ ಹಿಡಿದು ಸೋಷಿಯಲ್ ಮೀಡಿಯಾದಲ್ಲಿ‌ ಹರಿಬಿಟ್ಟಿದ್ದಾನೆ.

ಇದನ್ನೂ ಓದಿ: ಬೆಂಗಳೂರು: ಗಣೇಶ ಮೂರ್ತಿ ಕೂರಿಸುವ ವಿಚಾರಕ್ಕೆ ಗಲಾಟೆ; ಚಾಕು ಇರಿತ

ಈ ವಿಡಿಯೋವನ್ನು ಫೇಸ್​​ಬುಕ್​​ನಲ್ಲಿ​​ ಫ್ಯಾಕ್ಟ್ಸ್​​​ ಖಾತೆದಾರರು ಸಚಿವ ಪ್ರಿಯಾಂಕ್​ ಖರ್ಗೆ ಅವರಿಗೆ ಟ್ಯಾಗ್​ ಮಾಡಿ “ಒಬ್ಬ ಬುರ್ಖಾ ಧಾರಿ ಯುವತಿ ಹಿಂದೂ ಯುವಕನೊಂದು ಸಂಚರಿಸಿದರೇ ಒಬ್ಬ ಮುಸ್ಲಿಂ ಯುವಕ ನಿಂದಿಸಿದ್ದು, ಸರಿಯೇ? ಇನ್ನು ಯುವತಿ ವಿರುದ್ಧ ಈ ರೀತಿಯಾದ ಭಾಷೆ ಬಳಸಿದ್ದು ಸರಿಯೇ ?” ಎಂದು ಫೇಸ್​ಬುಕ್​ನಲ್ಲಿ ಪೋಸ್ಟ್​​ ಮಾಡಿ ಪ್ರಶ್ನಿಸಿದ್ದಾರೆ. ನಂತರ ಬೆಂಗಳೂರು ಪೊಲೀಸರಿಗೆ ಟ್ಯಾಗ್​ ಮಾಡಿ “ಆತನ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಿ” ಎಂದು ಆಗ್ರಹಿಸಿದ್ದಾರೆ.

ಆರೋಪಿ ಜಾಕೀರ್ ಅಹಮ್ಮದ್ ರಷ್ಯಾದಲ್ಲಿ ಮೆಡಿಕಲ್ ಓದುತ್ತಿದ್ದು, ಎರಡು ತಿಂಗಳ ರಜೆಗಾಗಿ ಬೆಂಗಳೂರಿನ ಗೋವಿಂದಪುರದ ತನ್ನ ಅಕ್ಕನ ಮನೆಗೆ ಬಂದಿದ್ದನು. ಸದ್ಯ ಪೊಲೀಸರು ಗೋವಿಂದಪುರದ ಸೋದರಿ ಮನೆಯಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:00 am, Mon, 28 August 23

Follow Us
ದೇಶಕ್ಕೆ ಮೋದಿ ಕರ್ನಾಟಕಕ್ಕೆ ಜೆಸಿಬಿ: ಹೊಸ ಪಕ್ಷದ ಸುಳಿವು ಕೊಟ್ಟ ಯತ್ನಾಳ್​​
ದೇಶಕ್ಕೆ ಮೋದಿ ಕರ್ನಾಟಕಕ್ಕೆ ಜೆಸಿಬಿ: ಹೊಸ ಪಕ್ಷದ ಸುಳಿವು ಕೊಟ್ಟ ಯತ್ನಾಳ್​​
ಡಾಗ್ ಸತೀಶ್​​ಗೆ ಟಾಂಗ್ ಕೊಟ್ಟ ಮಾಜಿ ಬಿಗ್​​ಬಾಸ್ ಸ್ಪರ್ಧಿ ರಿಷಿಕಾ ಸಿಂಗ್
ಡಾಗ್ ಸತೀಶ್​​ಗೆ ಟಾಂಗ್ ಕೊಟ್ಟ ಮಾಜಿ ಬಿಗ್​​ಬಾಸ್ ಸ್ಪರ್ಧಿ ರಿಷಿಕಾ ಸಿಂಗ್
ಮುಂಬೈಗೆ ಆರಂಭದಲ್ಲೇ ಮರ್ಮಾಘಾತ ನೀಡಿದ ಭುವಿ
ಮುಂಬೈಗೆ ಆರಂಭದಲ್ಲೇ ಮರ್ಮಾಘಾತ ನೀಡಿದ ಭುವಿ
‘ರುದ್ರಾಭಿಷೇಕಂ’ ಸಿನಿಮಾ ಬಗ್ಗೆ ನಟಿ ಪ್ರಿಯಾಂಕಾ ತಿಮ್ಮೇಶ್ ಮಾತು
‘ರುದ್ರಾಭಿಷೇಕಂ’ ಸಿನಿಮಾ ಬಗ್ಗೆ ನಟಿ ಪ್ರಿಯಾಂಕಾ ತಿಮ್ಮೇಶ್ ಮಾತು
ಮೋದಿ ಸಂಚರಿಸುವ ರಸ್ತೆ ಬಳಿ ಜಿಲೆಟಿನ್ ಕಡ್ಡಿ ಪತ್ತೆ: DIG ಹೇಳಿದ್ದಿಷ್ಟು
ಮೋದಿ ಸಂಚರಿಸುವ ರಸ್ತೆ ಬಳಿ ಜಿಲೆಟಿನ್ ಕಡ್ಡಿ ಪತ್ತೆ: DIG ಹೇಳಿದ್ದಿಷ್ಟು
ಮೊದಲ ಭಾಷಣದಲ್ಲೇ ಸಾಲದ ಬಗ್ಗೆ ಮಾತಾಡಿದ ತಮಿಳುನಾಡು ಸಿಎಂ ವಿಜಯ್​​
ಮೊದಲ ಭಾಷಣದಲ್ಲೇ ಸಾಲದ ಬಗ್ಗೆ ಮಾತಾಡಿದ ತಮಿಳುನಾಡು ಸಿಎಂ ವಿಜಯ್​​
ರವಿಶಂಕರ್ ಗುರೂಜಿ ಮಾತಿಗೆ ಪ್ರಧಾನಿ ಮೋದಿಗೂ ನಗು!
ರವಿಶಂಕರ್ ಗುರೂಜಿ ಮಾತಿಗೆ ಪ್ರಧಾನಿ ಮೋದಿಗೂ ನಗು!
ರವಿಶಂಕರ್ ಗುರೂಜಿಯ 100ನೇ ಹುಟ್ಟುಹಬ್ಬಕ್ಕೂ ಬರುತ್ತೇನೆ ಎಂದ ಪ್ರಧಾನಿ ಮೋದಿ
ರವಿಶಂಕರ್ ಗುರೂಜಿಯ 100ನೇ ಹುಟ್ಟುಹಬ್ಬಕ್ಕೂ ಬರುತ್ತೇನೆ ಎಂದ ಪ್ರಧಾನಿ ಮೋದಿ
ಮೋದಿ ಸಂಚರಿಸೋ ರಸ್ತೇಲಿ ಜಿಲೆಟಿನ್ ಕಡ್ಡಿಗಳು ಪತ್ತೆ: ಶಂಕಿತ ಪೊಲೀಸ್ ವಶಕ್ಕೆ
ಮೋದಿ ಸಂಚರಿಸೋ ರಸ್ತೇಲಿ ಜಿಲೆಟಿನ್ ಕಡ್ಡಿಗಳು ಪತ್ತೆ: ಶಂಕಿತ ಪೊಲೀಸ್ ವಶಕ್ಕೆ
ಮೋದಿಗೆ ಆರ್ಟ್​ ಆಫ್ ಲಿವಿಂಗ್ ಫೋಟೊ ಕೊಟ್ಟು ಸನ್ಮಾನಿಸಿದ ಗುರೂಜಿ
ಮೋದಿಗೆ ಆರ್ಟ್​ ಆಫ್ ಲಿವಿಂಗ್ ಫೋಟೊ ಕೊಟ್ಟು ಸನ್ಮಾನಿಸಿದ ಗುರೂಜಿ