AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಅನ್ಯ ಧರ್ಮದ ಹುಡುಗನ ಜೊತೆ ಹೋಗುತ್ತಿದ್ದ ಯುವತಿಗೆ ಬುರ್ಖಾ ತೆಗೆಯುವಂತೆ ಒತ್ತಾಯ; ಮುಸ್ಲಿಂ ಯುವಕ ಬಂಧನ

ಕಾರಿನಿಂದ ಬೈಕ್​ ಅಡ್ಡಗಟ್ಟಿ ಮುಸ್ಲಿಂ ಯುವತಿಗೆ ನಿಂದಿಸಿ ಬುರ್ಖಾ ತೆಗೆಯುವಂತೆ ಒತ್ತಾಯಿಸ್ದ ಮುಸ್ಲಿಂ ಯುವಕನನ್ನು ಬೆಂಗಳೂರು ಪೂರ್ವ ವಿಭಾಗದ ಸೆನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಜಾಕೀರ್​ ಆರೋಪಿ ಜಾಕೀರ್ ಅಹಮ್ಮದ್ ರಷ್ಯಾದಲ್ಲಿ ಮೆಡಿಕಲ್ ಓದುತ್ತಿದ್ದು, ಎರಡು ತಿಂಗಳ ರಜೆಗಾಗಿ ಬೆಂಗಳೂರಿಗೆ ಬಂದಿದ್ದನು.

ಬೆಂಗಳೂರು: ಅನ್ಯ ಧರ್ಮದ ಹುಡುಗನ ಜೊತೆ ಹೋಗುತ್ತಿದ್ದ ಯುವತಿಗೆ ಬುರ್ಖಾ ತೆಗೆಯುವಂತೆ ಒತ್ತಾಯ; ಮುಸ್ಲಿಂ ಯುವಕ ಬಂಧನ
ಅನ್ಯ ಧರ್ಮದ ಹುಡುಗನ ಜೊತೆ ಹೋಗುತ್ತಿದ್ದಕ್ಕೆ ನಿಂದನೆ
TV9 Web
| Edited By: |

Updated on:Aug 28, 2023 | 11:04 AM

Share

ಬೆಂಗಳೂರು: ಅನ್ಯ ಧರ್ಮದ ಹುಡುಗನ ಜೊತೆ ಹೋಗುತ್ತಿದ್ದಕ್ಕೆ ಮುಸ್ಲಿಂ (Muslim) ಯುವತಿಗೆ ಕೆಟ್ಟದಾಗಿ ನಿಂದಿಸಿದ್ದ ಮುಸ್ಲಿಂ ಯುವಕನನ್ನು ಬೆಂಗಳೂರು (Bengaluru) ಪೂರ್ವ ವಿಭಾಗದ ಸೆನ್ ಠಾಣೆ ಪೊಲೀಸರು (Police) ಬಂಧಿಸಿದ್ದಾರೆ. ಕೋಲಾರ ಜಿಲ್ಲೆ ಬಂಗಾರಪೇಟೆ ಮೂಲದ ಜಾಕೀರ್ ಅಹಮ್ಮದ್ ಬಂಧಿತ ಆರೋಪಿ. ಮುಸ್ಲಿಂ ಯುವತಿ, ಬೈಕ್​ನಲ್ಲಿದ್ದ ಯುವಕ ಇಬ್ಬರು ಪರಿಚಿತರು. ಇಬ್ಬರೂ ಕಂಪನಿಯೊಂದಕ್ಕೆ ಸಂದರ್ಶನ ನೀಡಲು ಹೋಗಿದ್ದರು. ಸಂದರ್ಶ ಮುಗಿದ ಬಳಿಕ ಯುವತಿಯನ್ನು ಮನೆಗೆ ಡ್ರಾಪ್ ಮಾಡಲು ಯುವಕ ಹೋಗುತ್ತಿದ್ದ.

ಮುಸ್ಲಿಂ ಯುವತಿ ಅನ್ಯಧರ್ಮಿಯ ಯುವಕನ ಜೊತೆಗೆ ಹೋಗುತ್ತಿದ್ದಿದ್ದನ್ನು ನೋಡಿದ ಆರೋಪಿ ಜಾಕೀರ್, ಕಾರಿನಿಂದ ಬೈಕ್ ಅಡ್ಡಗಟ್ಟಿದ್ದಾನೆ. ನಂತರ ಯುವತಿಯನ್ನು ಕೆಟ್ಟದಾಗಿ ನಿಂದಿಸಿದ್ದಾನೆ. ಅಲ್ಲದೇ ಬುರ್ಖಾ ತೆಗೆಯುವಂತೆ ಒತ್ತಾಯಿಸಿದ್ದಾನೆ. ತಾನು ಮಾಡುತ್ತಿರುವ ಕೃತ್ಯದ ಬಗ್ಗೆ ತಾನೇ ಮೊಬೈಲ್​ ಕ್ಯಾಮೆರಾದಲ್ಲಿ ಸೆರೆ ಹಿಡಿದು ಸೋಷಿಯಲ್ ಮೀಡಿಯಾದಲ್ಲಿ‌ ಹರಿಬಿಟ್ಟಿದ್ದಾನೆ.

ಇದನ್ನೂ ಓದಿ: ಬೆಂಗಳೂರು: ಗಣೇಶ ಮೂರ್ತಿ ಕೂರಿಸುವ ವಿಚಾರಕ್ಕೆ ಗಲಾಟೆ; ಚಾಕು ಇರಿತ

ಈ ವಿಡಿಯೋವನ್ನು ಫೇಸ್​​ಬುಕ್​​ನಲ್ಲಿ​​ ಫ್ಯಾಕ್ಟ್ಸ್​​​ ಖಾತೆದಾರರು ಸಚಿವ ಪ್ರಿಯಾಂಕ್​ ಖರ್ಗೆ ಅವರಿಗೆ ಟ್ಯಾಗ್​ ಮಾಡಿ “ಒಬ್ಬ ಬುರ್ಖಾ ಧಾರಿ ಯುವತಿ ಹಿಂದೂ ಯುವಕನೊಂದು ಸಂಚರಿಸಿದರೇ ಒಬ್ಬ ಮುಸ್ಲಿಂ ಯುವಕ ನಿಂದಿಸಿದ್ದು, ಸರಿಯೇ? ಇನ್ನು ಯುವತಿ ವಿರುದ್ಧ ಈ ರೀತಿಯಾದ ಭಾಷೆ ಬಳಸಿದ್ದು ಸರಿಯೇ ?” ಎಂದು ಫೇಸ್​ಬುಕ್​ನಲ್ಲಿ ಪೋಸ್ಟ್​​ ಮಾಡಿ ಪ್ರಶ್ನಿಸಿದ್ದಾರೆ. ನಂತರ ಬೆಂಗಳೂರು ಪೊಲೀಸರಿಗೆ ಟ್ಯಾಗ್​ ಮಾಡಿ “ಆತನ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಿ” ಎಂದು ಆಗ್ರಹಿಸಿದ್ದಾರೆ.

ಆರೋಪಿ ಜಾಕೀರ್ ಅಹಮ್ಮದ್ ರಷ್ಯಾದಲ್ಲಿ ಮೆಡಿಕಲ್ ಓದುತ್ತಿದ್ದು, ಎರಡು ತಿಂಗಳ ರಜೆಗಾಗಿ ಬೆಂಗಳೂರಿನ ಗೋವಿಂದಪುರದ ತನ್ನ ಅಕ್ಕನ ಮನೆಗೆ ಬಂದಿದ್ದನು. ಸದ್ಯ ಪೊಲೀಸರು ಗೋವಿಂದಪುರದ ಸೋದರಿ ಮನೆಯಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:00 am, Mon, 28 August 23

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?