AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಡ್ ವರ್ಡ್ ಮೂಲಕ ಬೆಂಗಳೂರಿನಲ್ಲಿ ದರೋಡೆ ಮಾಡುತ್ತಿದ್ದ ಇಬ್ಬರು ಅರೆಸ್ಟ್! ಖದೀಮರ ಕೋಡ್ ವರ್ಡ್ ಹೇಗಿದೆ ನೋಡಿ

ಮನೆ ಕೆಲಸ ಮಾಡಿಸಲು ಬ್ಯಾಂಕ್​ನಿಂದ ನಾಲ್ಕು ಲಕ್ಷ ಹಣ ಡ್ರಾ ಮಾಡಿ ಬರುತಿದ್ದ ವ್ಯಕ್ತಿಯನ್ನು ಹಿಂಬಾಲಿಸಿ ದರೋಡೆ ಮಾಡಿದ್ದರು. ಆರೋಪಿಗಳ ವಿರುದ್ಧ ಕೊತ್ತನೂರು ಠಾಣೆ ವ್ಯಾಪ್ತಿಯಲ್ಲಿ ಮೂರು ಪ್ರಕರಣ ದಾಖಲಾಗಿತ್ತು.

ಕೋಡ್ ವರ್ಡ್ ಮೂಲಕ ಬೆಂಗಳೂರಿನಲ್ಲಿ ದರೋಡೆ ಮಾಡುತ್ತಿದ್ದ ಇಬ್ಬರು ಅರೆಸ್ಟ್! ಖದೀಮರ ಕೋಡ್ ವರ್ಡ್ ಹೇಗಿದೆ ನೋಡಿ
ದರೋಡೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನ ಕೊತ್ತನೂರು ಠಾಣೆ ಪೊಲೀಸರು ಬಂಧಿಸಿದ್ದಾರೆ
TV9 Web
| Updated By: sandhya thejappa|

Updated on:Jan 23, 2022 | 10:47 AM

Share

ಬೆಂಗಳೂರು: ಓಜಿ ಕುಪ್ಪಂ ಗ್ಯಾಂಗ್​ನ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಗಿರಿಕುಮಾರ್, ಷಣ್ಮುಗಂ ಎಂಬುವವರನ್ನ ಬೆಂಗಳೂರಿನ ಕೊತ್ತನೂರು ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆರೋಪಿಗಳ ವಿರುದ್ಧ 7 ಪ್ರಕರಣಗಳು ದಾಖಲಾಗಿದ್ದು, ಕೋಡ್ ವರ್ಡ್​ಗಳ (Code Word) ಮೂಲಕವೇ ದರೋಡೆ (Robbery), ಕಳ್ಳತನ (Theft) ಮಾಡುತ್ತಿದ್ದರು. ತಲೆ ಮೇಲೆ ಕೈ ಇಟ್ಟರೆ ಅಲರ್ಟ್ ಆಗಿರುವಂತೆ, ಮೂಗಿನ ಮೇಲೆ ಕೈ ಇಟ್ಟರೆ ಕಳ್ಳತನ ಮಾಡುವಂತೆ ಕೋಡ್ ವರ್ಡ್ ಮೂಲಕ ಸೂಚನೆ ನೀಡುತ್ತಿದ್ದರು.

ಬಂಧಿತ ಆರೋಪಿಗಳು ಬ್ಯಾಂಕ್ ಬಳಿ ಹೊಂಚು ಹಾಕಿ ಹಣ ಡ್ರಾ ಮಾಡಿಕೊಂಡು ಬರುವವರನ್ನು ಹಿಂಬಾಲಿಸಿ ಕ್ಷಣಾರ್ಧದಲ್ಲಿ ದರೋಡೆ ಮಾಡುತಿದ್ದರು. ಮನೆ ಕೆಲಸ ಮಾಡಿಸಲು ಬ್ಯಾಂಕ್​ನಿಂದ ​ನಾಲ್ಕು ಲಕ್ಷ ಹಣ ಡ್ರಾ ಮಾಡಿ ಬರುತಿದ್ದ ವ್ಯಕ್ತಿಯನ್ನು ಹಿಂಬಾಲಿಸಿ ದರೋಡೆ ಮಾಡಿದ್ದರು. ಆರೋಪಿಗಳ ವಿರುದ್ಧ ಕೊತ್ತನೂರು ಠಾಣೆ ವ್ಯಾಪ್ತಿಯಲ್ಲಿ ಮೂರು ಪ್ರಕರಣ ದಾಖಲಾಗಿತ್ತು. ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದ ಪೊಲೀಸರಿಗೆ ಇದೀಗ ರೇಡ್ ಹ್ಯಾಂಡ್ ಅಗಿ ಸಿಕ್ಕಿ ಬಿದ್ದಿದ್ದಾರೆ.

ಕಾಲೇಜಿನಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದವನು ಬಂಧನ ಪ್ರತಿಷ್ಟಿತ ಕಾಲೇಜಿನಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಎಎಸ್​ಪಿ ಲಕ್ಷ್ಮೀ ಗಣೇಶ ನೇತೃತ್ವದಲ್ಲಿ ಪಿಎಸ್ಐ ಗಜೇಂದ್ರ ಮತ್ತು ತಂಡದಿಂದ ದಾಳಿ ನಡೆಸಿ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ. ನೈಜೀರಿಯಾ ಮೂಲದ ವ್ಯಕ್ತಿ ಪ್ರತಿಷ್ಠಿತ ಕಾಲೇಜಿನ ಬಳಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ. ಡ್ರಗ್ಸ್ ಖರೀದಿಸುವ ನೆಪದಲ್ಲಿ ಹೋಗಿ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತನಿಂದ 15 ಎಂಡಿಎಮ್ ಮಾತ್ರೆ, ಕೋಕೆನ್, ಕ್ರಿಸ್ಟಲ್ ಮಿಥ್, ಎಲ್ಎಸ್ಟಿ ಸ್ಟಾಂಪ್ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ.

ಪಡಿತರ ಅಕ್ಕಿ ಸಾಗಿಸುತ್ತಿದ್ದ ಇಬ್ಬರು ಬಂಧನ ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಇಬ್ಬರನ್ನು ವಿಜಯನಗರ ಜಿಲ್ಲೆಯ ಕೂಡ್ಲಗಿ ತಾಲೂಕಿನ ಗುಡೇಕೋಟೆಯಲ್ಲಿ ಅರೆಸ್ಟ್ ಮಾಡಲಾಗಿದೆ. ಹಾನಗಲ್ ಕ್ರಾಸನಿಂದ ತುಮಕೂರಿಗೆ ಅಕ್ರಮವಾಗಿ ಅಕ್ಕಿ ಸಾಗಾಟ ಮಾಡುತ್ತಿದ್ದರು. ಅಕ್ಕಿ ಸಾಗಿಸುತ್ತಿದ್ದ ಇಬ್ಬರನ್ನ ಬಂಧಿಸಿದ ಗುಡೇಕೋಟೆ ಪೊಲೀಸರು, 50 ಕೆಜಿ ತೂಕದ 240 ಮೂಟೆ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ. ಆದಿಲ್ ಬಾಷಾ ಹಾಗೂ ಸುರೇಶ ಬಂಧಿತ ಆರೋಪಿಗಳು. ಈ ಪ್ರಕರಣ ಗುಡೇಕೋಟೆ ಠಾಣೆಯಲ್ಲಿ ದಾಖಲಾಗಿದೆ.

ಇದನ್ನೂ ಓದಿ

Lata Mangeshkar: ಲತಾ ಮಂಗೇಶ್ಕರ್ ಆರೋಗ್ಯದಲ್ಲಿ ತುಸು ಚೇತರಿಕೆ; ವೈದ್ಯರು ನೀಡಿದ ಮಾಹಿತಿ ಇಲ್ಲಿದೆ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲೊಂದು ಅಪರೂಪದ ಮದುವೆ; ಮಕ್ಕಳು, ಮೊಮ್ಮಕ್ಕಳ ಸಮ್ಮುಖದಲ್ಲಿ ಜೋಡಿಯಾದ 85 ವರ್ಷದ ವರ 65 ವರ್ಷದ ವಧು

Published On - 10:39 am, Sun, 23 January 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ