AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಡ್ ವರ್ಡ್ ಮೂಲಕ ಬೆಂಗಳೂರಿನಲ್ಲಿ ದರೋಡೆ ಮಾಡುತ್ತಿದ್ದ ಇಬ್ಬರು ಅರೆಸ್ಟ್! ಖದೀಮರ ಕೋಡ್ ವರ್ಡ್ ಹೇಗಿದೆ ನೋಡಿ

ಮನೆ ಕೆಲಸ ಮಾಡಿಸಲು ಬ್ಯಾಂಕ್​ನಿಂದ ನಾಲ್ಕು ಲಕ್ಷ ಹಣ ಡ್ರಾ ಮಾಡಿ ಬರುತಿದ್ದ ವ್ಯಕ್ತಿಯನ್ನು ಹಿಂಬಾಲಿಸಿ ದರೋಡೆ ಮಾಡಿದ್ದರು. ಆರೋಪಿಗಳ ವಿರುದ್ಧ ಕೊತ್ತನೂರು ಠಾಣೆ ವ್ಯಾಪ್ತಿಯಲ್ಲಿ ಮೂರು ಪ್ರಕರಣ ದಾಖಲಾಗಿತ್ತು.

ಕೋಡ್ ವರ್ಡ್ ಮೂಲಕ ಬೆಂಗಳೂರಿನಲ್ಲಿ ದರೋಡೆ ಮಾಡುತ್ತಿದ್ದ ಇಬ್ಬರು ಅರೆಸ್ಟ್! ಖದೀಮರ ಕೋಡ್ ವರ್ಡ್ ಹೇಗಿದೆ ನೋಡಿ
ದರೋಡೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನ ಕೊತ್ತನೂರು ಠಾಣೆ ಪೊಲೀಸರು ಬಂಧಿಸಿದ್ದಾರೆ
TV9 Web
| Edited By: sandhya thejappa|

Updated on:Jan 23, 2022 | 10:47 AM

Share

ಬೆಂಗಳೂರು: ಓಜಿ ಕುಪ್ಪಂ ಗ್ಯಾಂಗ್​ನ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಗಿರಿಕುಮಾರ್, ಷಣ್ಮುಗಂ ಎಂಬುವವರನ್ನ ಬೆಂಗಳೂರಿನ ಕೊತ್ತನೂರು ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆರೋಪಿಗಳ ವಿರುದ್ಧ 7 ಪ್ರಕರಣಗಳು ದಾಖಲಾಗಿದ್ದು, ಕೋಡ್ ವರ್ಡ್​ಗಳ (Code Word) ಮೂಲಕವೇ ದರೋಡೆ (Robbery), ಕಳ್ಳತನ (Theft) ಮಾಡುತ್ತಿದ್ದರು. ತಲೆ ಮೇಲೆ ಕೈ ಇಟ್ಟರೆ ಅಲರ್ಟ್ ಆಗಿರುವಂತೆ, ಮೂಗಿನ ಮೇಲೆ ಕೈ ಇಟ್ಟರೆ ಕಳ್ಳತನ ಮಾಡುವಂತೆ ಕೋಡ್ ವರ್ಡ್ ಮೂಲಕ ಸೂಚನೆ ನೀಡುತ್ತಿದ್ದರು.

ಬಂಧಿತ ಆರೋಪಿಗಳು ಬ್ಯಾಂಕ್ ಬಳಿ ಹೊಂಚು ಹಾಕಿ ಹಣ ಡ್ರಾ ಮಾಡಿಕೊಂಡು ಬರುವವರನ್ನು ಹಿಂಬಾಲಿಸಿ ಕ್ಷಣಾರ್ಧದಲ್ಲಿ ದರೋಡೆ ಮಾಡುತಿದ್ದರು. ಮನೆ ಕೆಲಸ ಮಾಡಿಸಲು ಬ್ಯಾಂಕ್​ನಿಂದ ​ನಾಲ್ಕು ಲಕ್ಷ ಹಣ ಡ್ರಾ ಮಾಡಿ ಬರುತಿದ್ದ ವ್ಯಕ್ತಿಯನ್ನು ಹಿಂಬಾಲಿಸಿ ದರೋಡೆ ಮಾಡಿದ್ದರು. ಆರೋಪಿಗಳ ವಿರುದ್ಧ ಕೊತ್ತನೂರು ಠಾಣೆ ವ್ಯಾಪ್ತಿಯಲ್ಲಿ ಮೂರು ಪ್ರಕರಣ ದಾಖಲಾಗಿತ್ತು. ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದ ಪೊಲೀಸರಿಗೆ ಇದೀಗ ರೇಡ್ ಹ್ಯಾಂಡ್ ಅಗಿ ಸಿಕ್ಕಿ ಬಿದ್ದಿದ್ದಾರೆ.

ಕಾಲೇಜಿನಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದವನು ಬಂಧನ ಪ್ರತಿಷ್ಟಿತ ಕಾಲೇಜಿನಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಎಎಸ್​ಪಿ ಲಕ್ಷ್ಮೀ ಗಣೇಶ ನೇತೃತ್ವದಲ್ಲಿ ಪಿಎಸ್ಐ ಗಜೇಂದ್ರ ಮತ್ತು ತಂಡದಿಂದ ದಾಳಿ ನಡೆಸಿ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ. ನೈಜೀರಿಯಾ ಮೂಲದ ವ್ಯಕ್ತಿ ಪ್ರತಿಷ್ಠಿತ ಕಾಲೇಜಿನ ಬಳಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ. ಡ್ರಗ್ಸ್ ಖರೀದಿಸುವ ನೆಪದಲ್ಲಿ ಹೋಗಿ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತನಿಂದ 15 ಎಂಡಿಎಮ್ ಮಾತ್ರೆ, ಕೋಕೆನ್, ಕ್ರಿಸ್ಟಲ್ ಮಿಥ್, ಎಲ್ಎಸ್ಟಿ ಸ್ಟಾಂಪ್ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ.

ಪಡಿತರ ಅಕ್ಕಿ ಸಾಗಿಸುತ್ತಿದ್ದ ಇಬ್ಬರು ಬಂಧನ ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಇಬ್ಬರನ್ನು ವಿಜಯನಗರ ಜಿಲ್ಲೆಯ ಕೂಡ್ಲಗಿ ತಾಲೂಕಿನ ಗುಡೇಕೋಟೆಯಲ್ಲಿ ಅರೆಸ್ಟ್ ಮಾಡಲಾಗಿದೆ. ಹಾನಗಲ್ ಕ್ರಾಸನಿಂದ ತುಮಕೂರಿಗೆ ಅಕ್ರಮವಾಗಿ ಅಕ್ಕಿ ಸಾಗಾಟ ಮಾಡುತ್ತಿದ್ದರು. ಅಕ್ಕಿ ಸಾಗಿಸುತ್ತಿದ್ದ ಇಬ್ಬರನ್ನ ಬಂಧಿಸಿದ ಗುಡೇಕೋಟೆ ಪೊಲೀಸರು, 50 ಕೆಜಿ ತೂಕದ 240 ಮೂಟೆ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ. ಆದಿಲ್ ಬಾಷಾ ಹಾಗೂ ಸುರೇಶ ಬಂಧಿತ ಆರೋಪಿಗಳು. ಈ ಪ್ರಕರಣ ಗುಡೇಕೋಟೆ ಠಾಣೆಯಲ್ಲಿ ದಾಖಲಾಗಿದೆ.

ಇದನ್ನೂ ಓದಿ

Lata Mangeshkar: ಲತಾ ಮಂಗೇಶ್ಕರ್ ಆರೋಗ್ಯದಲ್ಲಿ ತುಸು ಚೇತರಿಕೆ; ವೈದ್ಯರು ನೀಡಿದ ಮಾಹಿತಿ ಇಲ್ಲಿದೆ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲೊಂದು ಅಪರೂಪದ ಮದುವೆ; ಮಕ್ಕಳು, ಮೊಮ್ಮಕ್ಕಳ ಸಮ್ಮುಖದಲ್ಲಿ ಜೋಡಿಯಾದ 85 ವರ್ಷದ ವರ 65 ವರ್ಷದ ವಧು

Published On - 10:39 am, Sun, 23 January 22

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ