AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಡ್ ವರ್ಡ್ ಮೂಲಕ ಬೆಂಗಳೂರಿನಲ್ಲಿ ದರೋಡೆ ಮಾಡುತ್ತಿದ್ದ ಇಬ್ಬರು ಅರೆಸ್ಟ್! ಖದೀಮರ ಕೋಡ್ ವರ್ಡ್ ಹೇಗಿದೆ ನೋಡಿ

ಮನೆ ಕೆಲಸ ಮಾಡಿಸಲು ಬ್ಯಾಂಕ್​ನಿಂದ ನಾಲ್ಕು ಲಕ್ಷ ಹಣ ಡ್ರಾ ಮಾಡಿ ಬರುತಿದ್ದ ವ್ಯಕ್ತಿಯನ್ನು ಹಿಂಬಾಲಿಸಿ ದರೋಡೆ ಮಾಡಿದ್ದರು. ಆರೋಪಿಗಳ ವಿರುದ್ಧ ಕೊತ್ತನೂರು ಠಾಣೆ ವ್ಯಾಪ್ತಿಯಲ್ಲಿ ಮೂರು ಪ್ರಕರಣ ದಾಖಲಾಗಿತ್ತು.

ಕೋಡ್ ವರ್ಡ್ ಮೂಲಕ ಬೆಂಗಳೂರಿನಲ್ಲಿ ದರೋಡೆ ಮಾಡುತ್ತಿದ್ದ ಇಬ್ಬರು ಅರೆಸ್ಟ್! ಖದೀಮರ ಕೋಡ್ ವರ್ಡ್ ಹೇಗಿದೆ ನೋಡಿ
ದರೋಡೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನ ಕೊತ್ತನೂರು ಠಾಣೆ ಪೊಲೀಸರು ಬಂಧಿಸಿದ್ದಾರೆ
TV9 Web
| Edited By: |

Updated on:Jan 23, 2022 | 10:47 AM

Share

ಬೆಂಗಳೂರು: ಓಜಿ ಕುಪ್ಪಂ ಗ್ಯಾಂಗ್​ನ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಗಿರಿಕುಮಾರ್, ಷಣ್ಮುಗಂ ಎಂಬುವವರನ್ನ ಬೆಂಗಳೂರಿನ ಕೊತ್ತನೂರು ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆರೋಪಿಗಳ ವಿರುದ್ಧ 7 ಪ್ರಕರಣಗಳು ದಾಖಲಾಗಿದ್ದು, ಕೋಡ್ ವರ್ಡ್​ಗಳ (Code Word) ಮೂಲಕವೇ ದರೋಡೆ (Robbery), ಕಳ್ಳತನ (Theft) ಮಾಡುತ್ತಿದ್ದರು. ತಲೆ ಮೇಲೆ ಕೈ ಇಟ್ಟರೆ ಅಲರ್ಟ್ ಆಗಿರುವಂತೆ, ಮೂಗಿನ ಮೇಲೆ ಕೈ ಇಟ್ಟರೆ ಕಳ್ಳತನ ಮಾಡುವಂತೆ ಕೋಡ್ ವರ್ಡ್ ಮೂಲಕ ಸೂಚನೆ ನೀಡುತ್ತಿದ್ದರು.

ಬಂಧಿತ ಆರೋಪಿಗಳು ಬ್ಯಾಂಕ್ ಬಳಿ ಹೊಂಚು ಹಾಕಿ ಹಣ ಡ್ರಾ ಮಾಡಿಕೊಂಡು ಬರುವವರನ್ನು ಹಿಂಬಾಲಿಸಿ ಕ್ಷಣಾರ್ಧದಲ್ಲಿ ದರೋಡೆ ಮಾಡುತಿದ್ದರು. ಮನೆ ಕೆಲಸ ಮಾಡಿಸಲು ಬ್ಯಾಂಕ್​ನಿಂದ ​ನಾಲ್ಕು ಲಕ್ಷ ಹಣ ಡ್ರಾ ಮಾಡಿ ಬರುತಿದ್ದ ವ್ಯಕ್ತಿಯನ್ನು ಹಿಂಬಾಲಿಸಿ ದರೋಡೆ ಮಾಡಿದ್ದರು. ಆರೋಪಿಗಳ ವಿರುದ್ಧ ಕೊತ್ತನೂರು ಠಾಣೆ ವ್ಯಾಪ್ತಿಯಲ್ಲಿ ಮೂರು ಪ್ರಕರಣ ದಾಖಲಾಗಿತ್ತು. ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದ ಪೊಲೀಸರಿಗೆ ಇದೀಗ ರೇಡ್ ಹ್ಯಾಂಡ್ ಅಗಿ ಸಿಕ್ಕಿ ಬಿದ್ದಿದ್ದಾರೆ.

ಕಾಲೇಜಿನಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದವನು ಬಂಧನ ಪ್ರತಿಷ್ಟಿತ ಕಾಲೇಜಿನಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಎಎಸ್​ಪಿ ಲಕ್ಷ್ಮೀ ಗಣೇಶ ನೇತೃತ್ವದಲ್ಲಿ ಪಿಎಸ್ಐ ಗಜೇಂದ್ರ ಮತ್ತು ತಂಡದಿಂದ ದಾಳಿ ನಡೆಸಿ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ. ನೈಜೀರಿಯಾ ಮೂಲದ ವ್ಯಕ್ತಿ ಪ್ರತಿಷ್ಠಿತ ಕಾಲೇಜಿನ ಬಳಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ. ಡ್ರಗ್ಸ್ ಖರೀದಿಸುವ ನೆಪದಲ್ಲಿ ಹೋಗಿ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತನಿಂದ 15 ಎಂಡಿಎಮ್ ಮಾತ್ರೆ, ಕೋಕೆನ್, ಕ್ರಿಸ್ಟಲ್ ಮಿಥ್, ಎಲ್ಎಸ್ಟಿ ಸ್ಟಾಂಪ್ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ.

ಪಡಿತರ ಅಕ್ಕಿ ಸಾಗಿಸುತ್ತಿದ್ದ ಇಬ್ಬರು ಬಂಧನ ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಇಬ್ಬರನ್ನು ವಿಜಯನಗರ ಜಿಲ್ಲೆಯ ಕೂಡ್ಲಗಿ ತಾಲೂಕಿನ ಗುಡೇಕೋಟೆಯಲ್ಲಿ ಅರೆಸ್ಟ್ ಮಾಡಲಾಗಿದೆ. ಹಾನಗಲ್ ಕ್ರಾಸನಿಂದ ತುಮಕೂರಿಗೆ ಅಕ್ರಮವಾಗಿ ಅಕ್ಕಿ ಸಾಗಾಟ ಮಾಡುತ್ತಿದ್ದರು. ಅಕ್ಕಿ ಸಾಗಿಸುತ್ತಿದ್ದ ಇಬ್ಬರನ್ನ ಬಂಧಿಸಿದ ಗುಡೇಕೋಟೆ ಪೊಲೀಸರು, 50 ಕೆಜಿ ತೂಕದ 240 ಮೂಟೆ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ. ಆದಿಲ್ ಬಾಷಾ ಹಾಗೂ ಸುರೇಶ ಬಂಧಿತ ಆರೋಪಿಗಳು. ಈ ಪ್ರಕರಣ ಗುಡೇಕೋಟೆ ಠಾಣೆಯಲ್ಲಿ ದಾಖಲಾಗಿದೆ.

ಇದನ್ನೂ ಓದಿ

Lata Mangeshkar: ಲತಾ ಮಂಗೇಶ್ಕರ್ ಆರೋಗ್ಯದಲ್ಲಿ ತುಸು ಚೇತರಿಕೆ; ವೈದ್ಯರು ನೀಡಿದ ಮಾಹಿತಿ ಇಲ್ಲಿದೆ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲೊಂದು ಅಪರೂಪದ ಮದುವೆ; ಮಕ್ಕಳು, ಮೊಮ್ಮಕ್ಕಳ ಸಮ್ಮುಖದಲ್ಲಿ ಜೋಡಿಯಾದ 85 ವರ್ಷದ ವರ 65 ವರ್ಷದ ವಧು

Published On - 10:39 am, Sun, 23 January 22

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ