AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಖಾಸಗಿ ಪೋಟೋಗಳನ್ನ ಪಡೆದು ಮಹಿಳೆಗೆ ಬ್ಲಾಕ್ ಮೇಲ್ ಮಾಡಿದ್ದ ಆರೋಪಿ ಅರೆಸ್ಟ್!

ಬಂಧಿತ ಪ್ರವೀಣ್ ರಾವ್, ಮಹಿಳೆಯ ಖಾಸಗಿ ಫೋಟೋ ಪಡೆದು ಆಕೆಯ ಪತಿಗೆ ಕಳುಹಿಸಿದ್ದನಂತೆ. ಈ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡದಂತೆ ಬೆದರಿಕೆಯೂ ಹಾಕಿದ್ದನಂತೆ.

ಬೆಂಗಳೂರಿನಲ್ಲಿ ಖಾಸಗಿ ಪೋಟೋಗಳನ್ನ ಪಡೆದು ಮಹಿಳೆಗೆ ಬ್ಲಾಕ್ ಮೇಲ್ ಮಾಡಿದ್ದ ಆರೋಪಿ ಅರೆಸ್ಟ್!
ಸಾಂಕೇತಿಕ ಚಿತ್ರ
TV9 Web
| Edited By: |

Updated on:May 22, 2022 | 8:32 AM

Share

ನೆಲಮಂಗಲ: ಲ್ಯಾಪ್​ಟಾಪ್​ (Laptop) ರಿಪೇರಿ ಮಾಡಲು ಮನೆಗೆ ಬಂದಿದ್ದಾಗ ಖಾಸಗಿ ಪೋಟೋಗಳನ್ನ ಪಡೆದು ಮಹಿಳೆಗೆ ಬ್ಲಾಕ್ ಮೇಲ್ (Blackmail) ಮಾಡಿದ್ದ ಆರೋಪಿಯನ್ನು ಬಾಗಲಗುಂಟೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ದಾಸರಹಳ್ಳಿಯ ಮಹೇಶ್ವರಿ ನಗರದ ಪ್ರವೀಣ್ ರಾವ್(40) ಬಂಧನಕ್ಕೆ ಒಳಗಾದ ಆರೋಪಿ. ಬಂಧಿತ ಪ್ರವೀಣ್ ರಾವ್, ಮಹಿಳೆಯ ಖಾಸಗಿ ಫೋಟೋ ಪಡೆದು ಆಕೆಯ ಪತಿಗೆ ಕಳುಹಿಸಿದ್ದನಂತೆ. ಈ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡದಂತೆ ಬೆದರಿಕೆಯೂ ಹಾಕಿದ್ದನಂತೆ. ಪ್ರಕರಣ ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಮೂವರು ಡ್ರಗ್ಸ್​ ಪೆಡ್ಲರ್ಸ್​ ಸೆರೆ: ಇಬ್ಬರು ವಿದೇಶಿ ಪ್ರಜೆಗಳು ಸೇರಿ ಮೂವರು ಡ್ರಗ್ಸ್​ ಪೆಡ್ಲರ್ಸ್​ನ​ ಬೆಂಗಳೂರು ಈಶಾನ್ಯ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ನೈಜೀರಿಯಾ ಮೂಲದ ಜೆರಿಽ, ರುವಾಂಡಾ ಮೂಲದ ಎವ್ರಾ ಜಾರ್ಜ್, ಶಿವಾಜಿನಗರದ ಮೊಹಮ್ಮದ್ ಫಾರೂಕ್ ಬಂಧಿತರು. ಬಂಧಿತರಿಂದ 5 ಲಕ್ಷ ರೂ. ಮೌಲ್ಯದ 88 ಗ್ರಾಂ ಎಂಡಿಎಂಎ ವಶಕ್ಕೆ ಪಡೆಯಲಾಗಿದೆ.  ಪಾಸ್​ಪೋರ್ಟ್, ವೀಸಾ ಇಲ್ಲದೆ ಜೆರಿಽ ಅಕ್ರಮವಾಗಿ ನೆಲೆಸಿದ್ದ.

ಇದನ್ನೂ ಓದಿ: 3 ಚಿತ್ರಗಳ ಪೋಸ್ಟರ್​ ಒಟ್ಟಿಗೆ ಜೋಡಿಸಿದ ಪ್ರಶಾಂತ್​ ನೀಲ್​; ಫ್ಯಾನ್ಸ್​ ತಲೆಯಲ್ಲಿ ಮೂಡಿದೆ ದೊಡ್ಡ ಪ್ರಶ್ನೆ

ಜನರಿಗೆ ವಂಚಿಸುತ್ತಿದ್ದ ಆರೋಪಿ ಬಂಧನ: ನಕಲಿ ಸಿಮ್ ಕಾರ್ಡ್, ಬ್ಯಾಂಕ್ ಖಾತೆ ಬಳಸಿ ವಂಚಿಸುತ್ತಿದ್ದ ಸ್ಯಾಮುಯಲ್ ಒಕೇನ್(26) ನನ್ನು ಬಂಧಿಸಲಾಗಿದೆ. ಆರೋಪಿಯಿಂದ ಪೊಲೀಸರು 5 ಸಿಮ್ ಕಾರ್ಡ್, 6 ವಿವಿಧ ಬ್ಯಾಂಕ್​ಗಳ ಡೆಬಿಟ್ ಕಾರ್ಡ್ ಜಪ್ತಿ ಮಾಡಿದ್ದಾರೆ. ಈತ ಈಶಾನ್ಯ ರಾಜ್ಯಗಳ ಜನರಿಗೆ ಹಣ ನೀಡಿ ಬ್ಯಾಂಕ್ ಖಾತೆ ತೆರೆಯುತ್ತಿದ್ದ. ಅವರದ್ದೇ ಹೆಸರಿನಲ್ಲಿ ನಕಲಿ ಸಿಮ್ ಕಾರ್ಡ್ ಕೂಡ ಖರೀದಿಸುತ್ತಿದ್ದ. ಕೊರಿಯರ್ ಮೂಲಕ ಸಿಮ್ ಕಾರ್ಡ್​ ಬೆಂಗಳೂರಿಗೆ ತರಿಸಿಕೊಳ್ತಿದ್ದ. ಬಳಿಕ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯದ ಜನರಿಗೆ ಕರೆ ಮಾಡುತ್ತಿದ್ದ.

ಕೆಲಸ, ಲೋನ್ ಕೊಡಿಸುವುದಾಗಿ ಕರೆಮಾಡಿ ಹಣ ಹಾಕಿಸಿಕೊಳುತ್ತಿದ್ದ.ಲಾಟರಿ ಹಾಗೂ ಗಿಫ್ಟ್ ಬಂದಿದೆ ಎಂತಲೂ ಹಣ ಹಾಕಿಸಿಕೊಳ್ಳುತ್ತಿದ್ದ. ಗುಪ್ತ ಮಾಹಿತಿ ಪಡೆದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:27 am, Sun, 22 May 22

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?