AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಖಾಸಗಿ ಪೋಟೋಗಳನ್ನ ಪಡೆದು ಮಹಿಳೆಗೆ ಬ್ಲಾಕ್ ಮೇಲ್ ಮಾಡಿದ್ದ ಆರೋಪಿ ಅರೆಸ್ಟ್!

ಬಂಧಿತ ಪ್ರವೀಣ್ ರಾವ್, ಮಹಿಳೆಯ ಖಾಸಗಿ ಫೋಟೋ ಪಡೆದು ಆಕೆಯ ಪತಿಗೆ ಕಳುಹಿಸಿದ್ದನಂತೆ. ಈ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡದಂತೆ ಬೆದರಿಕೆಯೂ ಹಾಕಿದ್ದನಂತೆ.

ಬೆಂಗಳೂರಿನಲ್ಲಿ ಖಾಸಗಿ ಪೋಟೋಗಳನ್ನ ಪಡೆದು ಮಹಿಳೆಗೆ ಬ್ಲಾಕ್ ಮೇಲ್ ಮಾಡಿದ್ದ ಆರೋಪಿ ಅರೆಸ್ಟ್!
ಸಾಂಕೇತಿಕ ಚಿತ್ರ
Follow us
TV9 Web
| Updated By: sandhya thejappa

Updated on:May 22, 2022 | 8:32 AM

ನೆಲಮಂಗಲ: ಲ್ಯಾಪ್​ಟಾಪ್​ (Laptop) ರಿಪೇರಿ ಮಾಡಲು ಮನೆಗೆ ಬಂದಿದ್ದಾಗ ಖಾಸಗಿ ಪೋಟೋಗಳನ್ನ ಪಡೆದು ಮಹಿಳೆಗೆ ಬ್ಲಾಕ್ ಮೇಲ್ (Blackmail) ಮಾಡಿದ್ದ ಆರೋಪಿಯನ್ನು ಬಾಗಲಗುಂಟೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ದಾಸರಹಳ್ಳಿಯ ಮಹೇಶ್ವರಿ ನಗರದ ಪ್ರವೀಣ್ ರಾವ್(40) ಬಂಧನಕ್ಕೆ ಒಳಗಾದ ಆರೋಪಿ. ಬಂಧಿತ ಪ್ರವೀಣ್ ರಾವ್, ಮಹಿಳೆಯ ಖಾಸಗಿ ಫೋಟೋ ಪಡೆದು ಆಕೆಯ ಪತಿಗೆ ಕಳುಹಿಸಿದ್ದನಂತೆ. ಈ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡದಂತೆ ಬೆದರಿಕೆಯೂ ಹಾಕಿದ್ದನಂತೆ. ಪ್ರಕರಣ ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಮೂವರು ಡ್ರಗ್ಸ್​ ಪೆಡ್ಲರ್ಸ್​ ಸೆರೆ: ಇಬ್ಬರು ವಿದೇಶಿ ಪ್ರಜೆಗಳು ಸೇರಿ ಮೂವರು ಡ್ರಗ್ಸ್​ ಪೆಡ್ಲರ್ಸ್​ನ​ ಬೆಂಗಳೂರು ಈಶಾನ್ಯ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ನೈಜೀರಿಯಾ ಮೂಲದ ಜೆರಿಽ, ರುವಾಂಡಾ ಮೂಲದ ಎವ್ರಾ ಜಾರ್ಜ್, ಶಿವಾಜಿನಗರದ ಮೊಹಮ್ಮದ್ ಫಾರೂಕ್ ಬಂಧಿತರು. ಬಂಧಿತರಿಂದ 5 ಲಕ್ಷ ರೂ. ಮೌಲ್ಯದ 88 ಗ್ರಾಂ ಎಂಡಿಎಂಎ ವಶಕ್ಕೆ ಪಡೆಯಲಾಗಿದೆ.  ಪಾಸ್​ಪೋರ್ಟ್, ವೀಸಾ ಇಲ್ಲದೆ ಜೆರಿಽ ಅಕ್ರಮವಾಗಿ ನೆಲೆಸಿದ್ದ.

ಇದನ್ನೂ ಓದಿ: 3 ಚಿತ್ರಗಳ ಪೋಸ್ಟರ್​ ಒಟ್ಟಿಗೆ ಜೋಡಿಸಿದ ಪ್ರಶಾಂತ್​ ನೀಲ್​; ಫ್ಯಾನ್ಸ್​ ತಲೆಯಲ್ಲಿ ಮೂಡಿದೆ ದೊಡ್ಡ ಪ್ರಶ್ನೆ

ಜನರಿಗೆ ವಂಚಿಸುತ್ತಿದ್ದ ಆರೋಪಿ ಬಂಧನ: ನಕಲಿ ಸಿಮ್ ಕಾರ್ಡ್, ಬ್ಯಾಂಕ್ ಖಾತೆ ಬಳಸಿ ವಂಚಿಸುತ್ತಿದ್ದ ಸ್ಯಾಮುಯಲ್ ಒಕೇನ್(26) ನನ್ನು ಬಂಧಿಸಲಾಗಿದೆ. ಆರೋಪಿಯಿಂದ ಪೊಲೀಸರು 5 ಸಿಮ್ ಕಾರ್ಡ್, 6 ವಿವಿಧ ಬ್ಯಾಂಕ್​ಗಳ ಡೆಬಿಟ್ ಕಾರ್ಡ್ ಜಪ್ತಿ ಮಾಡಿದ್ದಾರೆ. ಈತ ಈಶಾನ್ಯ ರಾಜ್ಯಗಳ ಜನರಿಗೆ ಹಣ ನೀಡಿ ಬ್ಯಾಂಕ್ ಖಾತೆ ತೆರೆಯುತ್ತಿದ್ದ. ಅವರದ್ದೇ ಹೆಸರಿನಲ್ಲಿ ನಕಲಿ ಸಿಮ್ ಕಾರ್ಡ್ ಕೂಡ ಖರೀದಿಸುತ್ತಿದ್ದ. ಕೊರಿಯರ್ ಮೂಲಕ ಸಿಮ್ ಕಾರ್ಡ್​ ಬೆಂಗಳೂರಿಗೆ ತರಿಸಿಕೊಳ್ತಿದ್ದ. ಬಳಿಕ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯದ ಜನರಿಗೆ ಕರೆ ಮಾಡುತ್ತಿದ್ದ.

ಕೆಲಸ, ಲೋನ್ ಕೊಡಿಸುವುದಾಗಿ ಕರೆಮಾಡಿ ಹಣ ಹಾಕಿಸಿಕೊಳುತ್ತಿದ್ದ.ಲಾಟರಿ ಹಾಗೂ ಗಿಫ್ಟ್ ಬಂದಿದೆ ಎಂತಲೂ ಹಣ ಹಾಕಿಸಿಕೊಳ್ಳುತ್ತಿದ್ದ. ಗುಪ್ತ ಮಾಹಿತಿ ಪಡೆದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:27 am, Sun, 22 May 22

ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ