AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಖಾಸಗಿ ಪೋಟೋಗಳನ್ನ ಪಡೆದು ಮಹಿಳೆಗೆ ಬ್ಲಾಕ್ ಮೇಲ್ ಮಾಡಿದ್ದ ಆರೋಪಿ ಅರೆಸ್ಟ್!

ಬಂಧಿತ ಪ್ರವೀಣ್ ರಾವ್, ಮಹಿಳೆಯ ಖಾಸಗಿ ಫೋಟೋ ಪಡೆದು ಆಕೆಯ ಪತಿಗೆ ಕಳುಹಿಸಿದ್ದನಂತೆ. ಈ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡದಂತೆ ಬೆದರಿಕೆಯೂ ಹಾಕಿದ್ದನಂತೆ.

ಬೆಂಗಳೂರಿನಲ್ಲಿ ಖಾಸಗಿ ಪೋಟೋಗಳನ್ನ ಪಡೆದು ಮಹಿಳೆಗೆ ಬ್ಲಾಕ್ ಮೇಲ್ ಮಾಡಿದ್ದ ಆರೋಪಿ ಅರೆಸ್ಟ್!
ಸಾಂಕೇತಿಕ ಚಿತ್ರ
TV9 Web
| Edited By: sandhya thejappa|

Updated on:May 22, 2022 | 8:32 AM

Share

ನೆಲಮಂಗಲ: ಲ್ಯಾಪ್​ಟಾಪ್​ (Laptop) ರಿಪೇರಿ ಮಾಡಲು ಮನೆಗೆ ಬಂದಿದ್ದಾಗ ಖಾಸಗಿ ಪೋಟೋಗಳನ್ನ ಪಡೆದು ಮಹಿಳೆಗೆ ಬ್ಲಾಕ್ ಮೇಲ್ (Blackmail) ಮಾಡಿದ್ದ ಆರೋಪಿಯನ್ನು ಬಾಗಲಗುಂಟೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ದಾಸರಹಳ್ಳಿಯ ಮಹೇಶ್ವರಿ ನಗರದ ಪ್ರವೀಣ್ ರಾವ್(40) ಬಂಧನಕ್ಕೆ ಒಳಗಾದ ಆರೋಪಿ. ಬಂಧಿತ ಪ್ರವೀಣ್ ರಾವ್, ಮಹಿಳೆಯ ಖಾಸಗಿ ಫೋಟೋ ಪಡೆದು ಆಕೆಯ ಪತಿಗೆ ಕಳುಹಿಸಿದ್ದನಂತೆ. ಈ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡದಂತೆ ಬೆದರಿಕೆಯೂ ಹಾಕಿದ್ದನಂತೆ. ಪ್ರಕರಣ ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಮೂವರು ಡ್ರಗ್ಸ್​ ಪೆಡ್ಲರ್ಸ್​ ಸೆರೆ: ಇಬ್ಬರು ವಿದೇಶಿ ಪ್ರಜೆಗಳು ಸೇರಿ ಮೂವರು ಡ್ರಗ್ಸ್​ ಪೆಡ್ಲರ್ಸ್​ನ​ ಬೆಂಗಳೂರು ಈಶಾನ್ಯ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ನೈಜೀರಿಯಾ ಮೂಲದ ಜೆರಿಽ, ರುವಾಂಡಾ ಮೂಲದ ಎವ್ರಾ ಜಾರ್ಜ್, ಶಿವಾಜಿನಗರದ ಮೊಹಮ್ಮದ್ ಫಾರೂಕ್ ಬಂಧಿತರು. ಬಂಧಿತರಿಂದ 5 ಲಕ್ಷ ರೂ. ಮೌಲ್ಯದ 88 ಗ್ರಾಂ ಎಂಡಿಎಂಎ ವಶಕ್ಕೆ ಪಡೆಯಲಾಗಿದೆ.  ಪಾಸ್​ಪೋರ್ಟ್, ವೀಸಾ ಇಲ್ಲದೆ ಜೆರಿಽ ಅಕ್ರಮವಾಗಿ ನೆಲೆಸಿದ್ದ.

ಇದನ್ನೂ ಓದಿ: 3 ಚಿತ್ರಗಳ ಪೋಸ್ಟರ್​ ಒಟ್ಟಿಗೆ ಜೋಡಿಸಿದ ಪ್ರಶಾಂತ್​ ನೀಲ್​; ಫ್ಯಾನ್ಸ್​ ತಲೆಯಲ್ಲಿ ಮೂಡಿದೆ ದೊಡ್ಡ ಪ್ರಶ್ನೆ

ಜನರಿಗೆ ವಂಚಿಸುತ್ತಿದ್ದ ಆರೋಪಿ ಬಂಧನ: ನಕಲಿ ಸಿಮ್ ಕಾರ್ಡ್, ಬ್ಯಾಂಕ್ ಖಾತೆ ಬಳಸಿ ವಂಚಿಸುತ್ತಿದ್ದ ಸ್ಯಾಮುಯಲ್ ಒಕೇನ್(26) ನನ್ನು ಬಂಧಿಸಲಾಗಿದೆ. ಆರೋಪಿಯಿಂದ ಪೊಲೀಸರು 5 ಸಿಮ್ ಕಾರ್ಡ್, 6 ವಿವಿಧ ಬ್ಯಾಂಕ್​ಗಳ ಡೆಬಿಟ್ ಕಾರ್ಡ್ ಜಪ್ತಿ ಮಾಡಿದ್ದಾರೆ. ಈತ ಈಶಾನ್ಯ ರಾಜ್ಯಗಳ ಜನರಿಗೆ ಹಣ ನೀಡಿ ಬ್ಯಾಂಕ್ ಖಾತೆ ತೆರೆಯುತ್ತಿದ್ದ. ಅವರದ್ದೇ ಹೆಸರಿನಲ್ಲಿ ನಕಲಿ ಸಿಮ್ ಕಾರ್ಡ್ ಕೂಡ ಖರೀದಿಸುತ್ತಿದ್ದ. ಕೊರಿಯರ್ ಮೂಲಕ ಸಿಮ್ ಕಾರ್ಡ್​ ಬೆಂಗಳೂರಿಗೆ ತರಿಸಿಕೊಳ್ತಿದ್ದ. ಬಳಿಕ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯದ ಜನರಿಗೆ ಕರೆ ಮಾಡುತ್ತಿದ್ದ.

ಕೆಲಸ, ಲೋನ್ ಕೊಡಿಸುವುದಾಗಿ ಕರೆಮಾಡಿ ಹಣ ಹಾಕಿಸಿಕೊಳುತ್ತಿದ್ದ.ಲಾಟರಿ ಹಾಗೂ ಗಿಫ್ಟ್ ಬಂದಿದೆ ಎಂತಲೂ ಹಣ ಹಾಕಿಸಿಕೊಳ್ಳುತ್ತಿದ್ದ. ಗುಪ್ತ ಮಾಹಿತಿ ಪಡೆದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:27 am, Sun, 22 May 22

Follow Us
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು