AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಾದ್ಯಂತ ಕಾರು ಕದಿಯುತ್ತಿದ್ದ ಆಸಾಮಿ ಅರೆಸ್ಟ್! 21 ಕಾರುಗಳು ಪೊಲೀಸರ ವಶಕ್ಕೆ

2003ರಿಂದ ಈವರೆಗೆ 60ಕ್ಕೂ ಅಧಿಕ ಕಾರುಗಳನ್ನ ಕಳ್ಳತನ ಮಾಡಿದ್ದಾನೆ. 2019ರ ಬಳಿಕ ಬೆಂಗಳೂರಿನಲ್ಲೂ ಸಾಲು ಸಾಲು ಕಳ್ಳತನ ಮಾಡಿದ್ದಾನೆ. ವಿದೇಶದಿಂದ ಡಿವೈಸ್​ಗಳನ್ನ ತರಿಸಿಕೊಂಡು ಕೃತ್ಯ ಎಸಗಿರುವುದು ವಿಚಾರಣೆ ಬಳಿಕ ಬೆಳಕಿಗೆ ಬಂದಿದೆ.

ದೇಶದಾದ್ಯಂತ ಕಾರು ಕದಿಯುತ್ತಿದ್ದ ಆಸಾಮಿ ಅರೆಸ್ಟ್! 21 ಕಾರುಗಳು ಪೊಲೀಸರ ವಶಕ್ಕೆ
ಆರೋಪಿ ಸತ್ಯೇಂದರ್ ಸಿಂಗ್ ಶೇಖಾವತ್, ಆರೋಪಿ ಕದ್ದ ಕಾರು
TV9 Web
| Edited By: |

Updated on:Mar 16, 2022 | 12:41 PM

Share

ಬೆಂಗಳೂರು: ದೇಶದಾದ್ಯಂತ ಕಾರುಗಳನ್ನ (Cars) ಕದಿಯುತ್ತಿದ್ದ ಆರೋಪಿಯನ್ನು ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಸತ್ಯೇಂದರ್ ಸಿಂಗ್ ಶೇಖಾವತ್ (41) ರಾಜಸ್ಥಾನ್ (Rajasthan) ಮೂಲದವನಾಗಿದ್ದು, ಬಂಧಿತನಿಂದ ಕೋಟ್ಯಾಂತರ ಮೌಲ್ಯದ 21 ವಿವಿಧ ಕಾರುಗಳನ್ನ ವಶಕ್ಕೆ ಪಡೆದಿದ್ದಾರೆ. ಎಂಬಿಎ ಪದವೀಧರನಾಗಿರುವ ಆರೋಪಿ ತೆಲಂಗಾಣ ಪೊಲೀಸರಿಗೆ ಕ್ಯಾಚ್ ಮಿ ಇಫ್ ಯು ಕ್ಯಾನ್ ಎಂದು ಸವಾಲ್ ಹಾಕಿರುವ ಬಗ್ಗೆ ಮಾಹಿತಿ ತಿಳಿದುಬಂದಿದೆ.

2003ರಿಂದ ಈವರೆಗೆ 60ಕ್ಕೂ ಅಧಿಕ ಕಾರುಗಳನ್ನ ಕಳ್ಳತನ ಮಾಡಿದ್ದಾನೆ. 2019ರ ಬಳಿಕ ಬೆಂಗಳೂರಿನಲ್ಲೂ ಸಾಲು ಸಾಲು ಕಳ್ಳತನ ಮಾಡಿದ್ದಾನೆ. ವಿದೇಶದಿಂದ ಡಿವೈಸ್​ಗಳನ್ನ ತರಿಸಿಕೊಂಡು ಕೃತ್ಯ ಎಸಗಿರುವುದು ವಿಚಾರಣೆ ಬಳಿಕ ಬೆಳಕಿಗೆ ಬಂದಿದೆ. ಕಾರ್ ಸಾಫ್ಟ್​ವೇರ್​ಗಳನ್ನ ಹ್ಯಾಕ್ ಮಾಡಿ ಕಾರ್ ಅನ್ ಲಾಕ್ ಮಾಡುತ್ತಿದ್ದ. ಕೆಲವು ಕಾರ್​ಗಳ ಮ್ಯಾನ್ಯುಲ್ ಲಾಕ್​ಗಳ ದಾಖಲೆಯನ್ನು ಕದ್ದು ತಯಾರಿಸುತಿದ್ದ. ಕದ್ದ ಕಾರಿನಲ್ಲೇ ಆರೋಪಿ ರಾಜಸ್ಥಾನಕ್ಕೆ ತೆರಳುತಿದ್ದ.

ಕದ್ದ ಕಾರುಗಳನ್ನ ಬಂಧಿತ ಆರೋಪಿ ಸತ್ಯೇಂದರ್ ಸಿಂಗ್ ಶೇಖಾವತ್ ಬಳಿಕ ಆ ಕಾರುಗಳನ್ನು ಮಾಫಿಯಾ ಜನರಿಗೆ ಮಾರಾಟ ಮಾಡುತಿದ್ದ. ಅಮೃತಹಳ್ಳಿ ಪೊಲೀಸರು ರಾಜಸ್ಥಾನದಲ್ಲಿ ಸತತ ಒಂದು ತಿಂಗಳ ಕಾರ್ಯಾಚರಣೆ ನಡೆಸಿ, ಆರೋಪಿಯನ್ನು ಬಂಧಿಸಿದ್ದಾರೆ.

ನಕ್ಷತ್ರ ಆಮೆಗಳನ್ನು ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ: ಬೆಂಗಳೂರು ಅರಣ್ಯ ಸಂಚಾರಿ ದಳದ ಕಾರ್ಯಾಚರಣೆಯಲ್ಲಿ ನಕ್ಷತ್ರ ಆಮೆಗಳನ್ನ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಬೆಂಗಳೂರು ನಗರದ ಬೆಂಗಳೂರು ಉತ್ತರ ತಾಲೂಕಿನ ಮತ್ತಿಕೆರೆ ಬಳಿ  ಮೊಹಮ್ಮದ್ ಹಾರೂನ್(27)ನನ್ನು ವಶಕ್ಕೆ ಪಡೆಯಲಾಗಿದೆ. ಎರಡು ಜೀವಂತ ನಕ್ಷತ್ರ ಆಮೆ, ಆಕ್ಟಿವಾ ಹೊಂಡಾ ಜಪ್ತಿ ಮಾಡಿಲಾಗಿದ್ದು, ಆರೋಪಿಯ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಉಲ್ಲಂಘನೆಯಡಿ ಅರಣ್ಯ ಮೊಕದ್ದಮೆ ದಾಖಲಾಗಿದೆ.

ಇದನ್ನೂ ಓದಿ

ತುಮಕೂರಿನ ಅಶೋಕ ಲಾಡ್ಜ್ ಅಂಡ್ ಹೋಟೆಲ್​ನಲ್ಲಿ ಹೆಂಡತಿ ಕಾಲು ಕತ್ತರಿಸಿ, ತಾನೂ ಹೊಟ್ಟೆಗೆ ಚೂರಿ ಹಾಕಿಕೊಂಡ ಗಂಡ

ಈ ರೀತಿಯ ಜೀವನಶೈಲಿಯಿಂದ ಸ್ತನ ಕ್ಯಾನ್ಸರ್​ನ ಅಪಾಯ ಹೆಚ್ಚು: ಇಲ್ಲಿದೆ ಮಾಹಿತಿ

Published On - 12:38 pm, Wed, 16 March 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?