AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಾದ್ಯಂತ ಕಾರು ಕದಿಯುತ್ತಿದ್ದ ಆಸಾಮಿ ಅರೆಸ್ಟ್! 21 ಕಾರುಗಳು ಪೊಲೀಸರ ವಶಕ್ಕೆ

2003ರಿಂದ ಈವರೆಗೆ 60ಕ್ಕೂ ಅಧಿಕ ಕಾರುಗಳನ್ನ ಕಳ್ಳತನ ಮಾಡಿದ್ದಾನೆ. 2019ರ ಬಳಿಕ ಬೆಂಗಳೂರಿನಲ್ಲೂ ಸಾಲು ಸಾಲು ಕಳ್ಳತನ ಮಾಡಿದ್ದಾನೆ. ವಿದೇಶದಿಂದ ಡಿವೈಸ್​ಗಳನ್ನ ತರಿಸಿಕೊಂಡು ಕೃತ್ಯ ಎಸಗಿರುವುದು ವಿಚಾರಣೆ ಬಳಿಕ ಬೆಳಕಿಗೆ ಬಂದಿದೆ.

ದೇಶದಾದ್ಯಂತ ಕಾರು ಕದಿಯುತ್ತಿದ್ದ ಆಸಾಮಿ ಅರೆಸ್ಟ್! 21 ಕಾರುಗಳು ಪೊಲೀಸರ ವಶಕ್ಕೆ
ಆರೋಪಿ ಸತ್ಯೇಂದರ್ ಸಿಂಗ್ ಶೇಖಾವತ್, ಆರೋಪಿ ಕದ್ದ ಕಾರು
TV9 Web
| Edited By: |

Updated on:Mar 16, 2022 | 12:41 PM

Share

ಬೆಂಗಳೂರು: ದೇಶದಾದ್ಯಂತ ಕಾರುಗಳನ್ನ (Cars) ಕದಿಯುತ್ತಿದ್ದ ಆರೋಪಿಯನ್ನು ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಸತ್ಯೇಂದರ್ ಸಿಂಗ್ ಶೇಖಾವತ್ (41) ರಾಜಸ್ಥಾನ್ (Rajasthan) ಮೂಲದವನಾಗಿದ್ದು, ಬಂಧಿತನಿಂದ ಕೋಟ್ಯಾಂತರ ಮೌಲ್ಯದ 21 ವಿವಿಧ ಕಾರುಗಳನ್ನ ವಶಕ್ಕೆ ಪಡೆದಿದ್ದಾರೆ. ಎಂಬಿಎ ಪದವೀಧರನಾಗಿರುವ ಆರೋಪಿ ತೆಲಂಗಾಣ ಪೊಲೀಸರಿಗೆ ಕ್ಯಾಚ್ ಮಿ ಇಫ್ ಯು ಕ್ಯಾನ್ ಎಂದು ಸವಾಲ್ ಹಾಕಿರುವ ಬಗ್ಗೆ ಮಾಹಿತಿ ತಿಳಿದುಬಂದಿದೆ.

2003ರಿಂದ ಈವರೆಗೆ 60ಕ್ಕೂ ಅಧಿಕ ಕಾರುಗಳನ್ನ ಕಳ್ಳತನ ಮಾಡಿದ್ದಾನೆ. 2019ರ ಬಳಿಕ ಬೆಂಗಳೂರಿನಲ್ಲೂ ಸಾಲು ಸಾಲು ಕಳ್ಳತನ ಮಾಡಿದ್ದಾನೆ. ವಿದೇಶದಿಂದ ಡಿವೈಸ್​ಗಳನ್ನ ತರಿಸಿಕೊಂಡು ಕೃತ್ಯ ಎಸಗಿರುವುದು ವಿಚಾರಣೆ ಬಳಿಕ ಬೆಳಕಿಗೆ ಬಂದಿದೆ. ಕಾರ್ ಸಾಫ್ಟ್​ವೇರ್​ಗಳನ್ನ ಹ್ಯಾಕ್ ಮಾಡಿ ಕಾರ್ ಅನ್ ಲಾಕ್ ಮಾಡುತ್ತಿದ್ದ. ಕೆಲವು ಕಾರ್​ಗಳ ಮ್ಯಾನ್ಯುಲ್ ಲಾಕ್​ಗಳ ದಾಖಲೆಯನ್ನು ಕದ್ದು ತಯಾರಿಸುತಿದ್ದ. ಕದ್ದ ಕಾರಿನಲ್ಲೇ ಆರೋಪಿ ರಾಜಸ್ಥಾನಕ್ಕೆ ತೆರಳುತಿದ್ದ.

ಕದ್ದ ಕಾರುಗಳನ್ನ ಬಂಧಿತ ಆರೋಪಿ ಸತ್ಯೇಂದರ್ ಸಿಂಗ್ ಶೇಖಾವತ್ ಬಳಿಕ ಆ ಕಾರುಗಳನ್ನು ಮಾಫಿಯಾ ಜನರಿಗೆ ಮಾರಾಟ ಮಾಡುತಿದ್ದ. ಅಮೃತಹಳ್ಳಿ ಪೊಲೀಸರು ರಾಜಸ್ಥಾನದಲ್ಲಿ ಸತತ ಒಂದು ತಿಂಗಳ ಕಾರ್ಯಾಚರಣೆ ನಡೆಸಿ, ಆರೋಪಿಯನ್ನು ಬಂಧಿಸಿದ್ದಾರೆ.

ನಕ್ಷತ್ರ ಆಮೆಗಳನ್ನು ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ: ಬೆಂಗಳೂರು ಅರಣ್ಯ ಸಂಚಾರಿ ದಳದ ಕಾರ್ಯಾಚರಣೆಯಲ್ಲಿ ನಕ್ಷತ್ರ ಆಮೆಗಳನ್ನ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಬೆಂಗಳೂರು ನಗರದ ಬೆಂಗಳೂರು ಉತ್ತರ ತಾಲೂಕಿನ ಮತ್ತಿಕೆರೆ ಬಳಿ  ಮೊಹಮ್ಮದ್ ಹಾರೂನ್(27)ನನ್ನು ವಶಕ್ಕೆ ಪಡೆಯಲಾಗಿದೆ. ಎರಡು ಜೀವಂತ ನಕ್ಷತ್ರ ಆಮೆ, ಆಕ್ಟಿವಾ ಹೊಂಡಾ ಜಪ್ತಿ ಮಾಡಿಲಾಗಿದ್ದು, ಆರೋಪಿಯ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಉಲ್ಲಂಘನೆಯಡಿ ಅರಣ್ಯ ಮೊಕದ್ದಮೆ ದಾಖಲಾಗಿದೆ.

ಇದನ್ನೂ ಓದಿ

ತುಮಕೂರಿನ ಅಶೋಕ ಲಾಡ್ಜ್ ಅಂಡ್ ಹೋಟೆಲ್​ನಲ್ಲಿ ಹೆಂಡತಿ ಕಾಲು ಕತ್ತರಿಸಿ, ತಾನೂ ಹೊಟ್ಟೆಗೆ ಚೂರಿ ಹಾಕಿಕೊಂಡ ಗಂಡ

ಈ ರೀತಿಯ ಜೀವನಶೈಲಿಯಿಂದ ಸ್ತನ ಕ್ಯಾನ್ಸರ್​ನ ಅಪಾಯ ಹೆಚ್ಚು: ಇಲ್ಲಿದೆ ಮಾಹಿತಿ

Published On - 12:38 pm, Wed, 16 March 22

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ