AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕಕಾಲಕ್ಕೆ 203 ರೌಡಿಗಳ ಮನೆ ಮೇಲೆ ಪೊಲೀಸರ ದಾಳಿ; ರೌಡಿಶೀಟರ್​ಗಳಿಗೆ ವಾರ್ನಿಂಗ್

ಅಪರಾಧ ಪ್ರಕರಣಗಳು ಹೆಚ್ಚಾದ ಹಿನ್ನೆಲೆ ದಕ್ಷಿಣ ವಿಭಾಗದಲ್ಲಿ ದಾಳಿ ನಡೆಸಿದ ಪೊಲೀಸರು, ಸದ್ಯ ಸ್ಟೇಷನ್ಗೆ ಕರೆಸಿ ಎಲ್ಲರಿಂದಲೂ ಮುಚ್ಚಳಿಕೆ ಬರೆಸಿಕೊಳ್ಳುತ್ತಿದ್ದಾರೆ.

ಏಕಕಾಲಕ್ಕೆ 203 ರೌಡಿಗಳ ಮನೆ ಮೇಲೆ ಪೊಲೀಸರ ದಾಳಿ; ರೌಡಿಶೀಟರ್​ಗಳಿಗೆ ವಾರ್ನಿಂಗ್
ರೌಡಿಗಳ ಮನೆ ಮೇಲೆ ದಾಳಿ ನಡೆಸಿದ ಪೊಲೀಸರು
TV9 Web
| Edited By: sandhya thejappa|

Updated on: Aug 09, 2021 | 11:28 AM

Share

ಬೆಂಗಳೂರು: ಇಂದು (ಆಗಸ್ಟ್ 9) ಮುಂಜಾನೆ ನಾಲ್ಕು ಗಂಟೆ ಸಮಯದಲ್ಲಿ ಏಕಕಾಲಕ್ಕೆ ಸುಮಾರು 203 ರೌಡಿಗಳ (Rowdy Sheeters )ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ದಕ್ಷಿಣ ವಿಭಾಗದಲ್ಲಿ ದಾಳಿ ನಡೆಸಿದ ಪೊಲೀಸರು ರೌಡಿಶೀಟರ್ಸ್​ಗೆ ವಾರ್ನಿಂಗ್ ಮಾಡಿದ್ದಾರೆ. ಸಿದ್ದಾಪುರ, ಚೆನ್ನಮ್ಮನಕೆರೆ ಅಚ್ಚುಕಟ್ಟು, ಹನುಮಂತನಗರ, ಬನಶಂಕರಿ ಠಾಣಾ ವ್ಯಾಪ್ತಿಯಲ್ಲಿ ತೋಪರಾಜ, ಮೂರಡಿ ಸುನಿಲ, ಭೋಜ, ವೆಂಕಟೇಶ್, ಸಂಜಯ್ ಸೇರಿದಂತೆ ಪ್ರಮುಖ ರೌಡಿ ಆಸಾಮಿಗಳ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

ಅಪರಾಧ ಪ್ರಕರಣಗಳು ಹೆಚ್ಚಾದ ಹಿನ್ನೆಲೆ ದಕ್ಷಿಣ ವಿಭಾಗದಲ್ಲಿ ದಾಳಿ ನಡೆಸಿದ ಪೊಲೀಸರು, ಸದ್ಯ ಸ್ಟೇಷನ್​ಗೆ ಕರೆಸಿ ಎಲ್ಲರಿಂದಲೂ ಮುಚ್ಚಳಿಕೆ ಬರೆಸಿಕೊಳ್ಳುತ್ತಿದ್ದಾರೆ.

ಸಾವಿರಾರು ರೌಡಿಗಳ ಮನೆ ಮೇಲೆ ದಾಳಿ ನಡೆಸಿದ್ದ ಪೊಲೀಸರು ಬೆಂಗಳೂರಿನಲ್ಲಿ ದೊಡ್ಡ ಮಟ್ಟದ ಕಾರ್ಯಾಚರಣೆಗಿಳಿದಿದ್ದ ಪೊಲೀಸರು ಜುಲೈ 10ರ ಬೆಳ್ಳಂಬೆಳಗ್ಗೆ ಸಾವಿರಾರು ರೌಡಿಶೀಟರ್​ಗಳ ಮನೆ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದರು. ನಗರದ 8 ವಲಯಗಳ ಪೊಲೀಸರಿಂದ ಏಕಕಾಲಕ್ಕೆ ದಾಳಿ ಮಾಡಲಾಗಿದ್ದು, ಲಾಕ್​ಡೌನ್​ ತೆರವು ಬಳಿಕ ಅಪರಾಧ ಕೃತ್ಯ ಹೆಚ್ಚಳವಾಗುತ್ತಿದ್ದ ಹಿನ್ನೆಲೆಯಲ್ಲಿ ದೊಡ್ಡ ಮಟ್ಟದ ಕಾರ್ಯಾಚರಣೆ ನಡೆಸಿದ್ದರು. ಹಣಕಾಸು ವ್ಯವಹಾರ, ವೈಯಕ್ತಿಕ ದ್ವೇಷ ಸೇರಿದಂತೆ ಇತ್ಯಾದಿ ಕಾರಣಗಳಿಂದ ದಾಖಲಾಗಿದ್ದ ಕೊಲೆ ಪ್ರಕರಣಗಳು ಹಾಗೂ ಜೈಲಿನಲ್ಲೇ ಕುಳಿತು ರೌಡಿಸಂ ನಡೆಸುತ್ತಿದ್ದ ವಿಚಾರವನ್ನು ಅತಿ ಗಂಭೀರವಾಗಿ ಪರಿಗಣಿಸಿದ್ದ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್, ಹೆಚ್ಚುವರಿ ಆಯುಕ್ತರು, ಡಿಸಿಪಿಗಳೊಂದಿಗೆ ಸಭೆ ನಡೆಸಿ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಸೂಚಿಸಿದ್ದರು. ಅದರಂತೆ ಆಯಾ ವ್ಯಾಪ್ತಿಯಲ್ಲಿ ರೌಡಿಗಳ ಮೇಲೆ ನಿಗಾ ವಹಿಸಿದ್ದ ಪೊಲೀಸರು ಬೆಂಗಳೂರು ನಗರದಾದ್ಯಂತ ಸಾವಿರಕ್ಕೂ ಹೆಚ್ಚು ರೌಡಿಶೀಟರ್ಸ್ ಮನೆ ಮೇಲೆ ದಾಳಿ ನಡೆಸಿ ನೂರಾರು ಜನರನ್ನು ವಶಕ್ಕೆ ಪಡೆದಿದ್ದರು.

ಇದನ್ನೂ ಓದಿ

ಎಲ್ಲಿಯೂ ಪ್ಲಾಸ್ಟಿಕ್​ ಧ್ವಜ ಬಳಕೆಯಾಗದಂತೆ ನಿಗಾ ವಹಿಸಿ; ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಸೂಚನೆ

Big News: ಸಾವಿರಾರು ರೌಡಿಗಳ ಮನೆ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ ಬೆಂಗಳೂರು ಪೊಲೀಸರು; ನೂರಾರು ಜನ ವಶಕ್ಕೆ

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​