AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕಕಾಲಕ್ಕೆ 203 ರೌಡಿಗಳ ಮನೆ ಮೇಲೆ ಪೊಲೀಸರ ದಾಳಿ; ರೌಡಿಶೀಟರ್​ಗಳಿಗೆ ವಾರ್ನಿಂಗ್

ಅಪರಾಧ ಪ್ರಕರಣಗಳು ಹೆಚ್ಚಾದ ಹಿನ್ನೆಲೆ ದಕ್ಷಿಣ ವಿಭಾಗದಲ್ಲಿ ದಾಳಿ ನಡೆಸಿದ ಪೊಲೀಸರು, ಸದ್ಯ ಸ್ಟೇಷನ್ಗೆ ಕರೆಸಿ ಎಲ್ಲರಿಂದಲೂ ಮುಚ್ಚಳಿಕೆ ಬರೆಸಿಕೊಳ್ಳುತ್ತಿದ್ದಾರೆ.

ಏಕಕಾಲಕ್ಕೆ 203 ರೌಡಿಗಳ ಮನೆ ಮೇಲೆ ಪೊಲೀಸರ ದಾಳಿ; ರೌಡಿಶೀಟರ್​ಗಳಿಗೆ ವಾರ್ನಿಂಗ್
ರೌಡಿಗಳ ಮನೆ ಮೇಲೆ ದಾಳಿ ನಡೆಸಿದ ಪೊಲೀಸರು
TV9 Web
| Edited By: sandhya thejappa|

Updated on: Aug 09, 2021 | 11:28 AM

Share

ಬೆಂಗಳೂರು: ಇಂದು (ಆಗಸ್ಟ್ 9) ಮುಂಜಾನೆ ನಾಲ್ಕು ಗಂಟೆ ಸಮಯದಲ್ಲಿ ಏಕಕಾಲಕ್ಕೆ ಸುಮಾರು 203 ರೌಡಿಗಳ (Rowdy Sheeters )ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ದಕ್ಷಿಣ ವಿಭಾಗದಲ್ಲಿ ದಾಳಿ ನಡೆಸಿದ ಪೊಲೀಸರು ರೌಡಿಶೀಟರ್ಸ್​ಗೆ ವಾರ್ನಿಂಗ್ ಮಾಡಿದ್ದಾರೆ. ಸಿದ್ದಾಪುರ, ಚೆನ್ನಮ್ಮನಕೆರೆ ಅಚ್ಚುಕಟ್ಟು, ಹನುಮಂತನಗರ, ಬನಶಂಕರಿ ಠಾಣಾ ವ್ಯಾಪ್ತಿಯಲ್ಲಿ ತೋಪರಾಜ, ಮೂರಡಿ ಸುನಿಲ, ಭೋಜ, ವೆಂಕಟೇಶ್, ಸಂಜಯ್ ಸೇರಿದಂತೆ ಪ್ರಮುಖ ರೌಡಿ ಆಸಾಮಿಗಳ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

ಅಪರಾಧ ಪ್ರಕರಣಗಳು ಹೆಚ್ಚಾದ ಹಿನ್ನೆಲೆ ದಕ್ಷಿಣ ವಿಭಾಗದಲ್ಲಿ ದಾಳಿ ನಡೆಸಿದ ಪೊಲೀಸರು, ಸದ್ಯ ಸ್ಟೇಷನ್​ಗೆ ಕರೆಸಿ ಎಲ್ಲರಿಂದಲೂ ಮುಚ್ಚಳಿಕೆ ಬರೆಸಿಕೊಳ್ಳುತ್ತಿದ್ದಾರೆ.

ಸಾವಿರಾರು ರೌಡಿಗಳ ಮನೆ ಮೇಲೆ ದಾಳಿ ನಡೆಸಿದ್ದ ಪೊಲೀಸರು ಬೆಂಗಳೂರಿನಲ್ಲಿ ದೊಡ್ಡ ಮಟ್ಟದ ಕಾರ್ಯಾಚರಣೆಗಿಳಿದಿದ್ದ ಪೊಲೀಸರು ಜುಲೈ 10ರ ಬೆಳ್ಳಂಬೆಳಗ್ಗೆ ಸಾವಿರಾರು ರೌಡಿಶೀಟರ್​ಗಳ ಮನೆ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದರು. ನಗರದ 8 ವಲಯಗಳ ಪೊಲೀಸರಿಂದ ಏಕಕಾಲಕ್ಕೆ ದಾಳಿ ಮಾಡಲಾಗಿದ್ದು, ಲಾಕ್​ಡೌನ್​ ತೆರವು ಬಳಿಕ ಅಪರಾಧ ಕೃತ್ಯ ಹೆಚ್ಚಳವಾಗುತ್ತಿದ್ದ ಹಿನ್ನೆಲೆಯಲ್ಲಿ ದೊಡ್ಡ ಮಟ್ಟದ ಕಾರ್ಯಾಚರಣೆ ನಡೆಸಿದ್ದರು. ಹಣಕಾಸು ವ್ಯವಹಾರ, ವೈಯಕ್ತಿಕ ದ್ವೇಷ ಸೇರಿದಂತೆ ಇತ್ಯಾದಿ ಕಾರಣಗಳಿಂದ ದಾಖಲಾಗಿದ್ದ ಕೊಲೆ ಪ್ರಕರಣಗಳು ಹಾಗೂ ಜೈಲಿನಲ್ಲೇ ಕುಳಿತು ರೌಡಿಸಂ ನಡೆಸುತ್ತಿದ್ದ ವಿಚಾರವನ್ನು ಅತಿ ಗಂಭೀರವಾಗಿ ಪರಿಗಣಿಸಿದ್ದ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್, ಹೆಚ್ಚುವರಿ ಆಯುಕ್ತರು, ಡಿಸಿಪಿಗಳೊಂದಿಗೆ ಸಭೆ ನಡೆಸಿ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಸೂಚಿಸಿದ್ದರು. ಅದರಂತೆ ಆಯಾ ವ್ಯಾಪ್ತಿಯಲ್ಲಿ ರೌಡಿಗಳ ಮೇಲೆ ನಿಗಾ ವಹಿಸಿದ್ದ ಪೊಲೀಸರು ಬೆಂಗಳೂರು ನಗರದಾದ್ಯಂತ ಸಾವಿರಕ್ಕೂ ಹೆಚ್ಚು ರೌಡಿಶೀಟರ್ಸ್ ಮನೆ ಮೇಲೆ ದಾಳಿ ನಡೆಸಿ ನೂರಾರು ಜನರನ್ನು ವಶಕ್ಕೆ ಪಡೆದಿದ್ದರು.

ಇದನ್ನೂ ಓದಿ

ಎಲ್ಲಿಯೂ ಪ್ಲಾಸ್ಟಿಕ್​ ಧ್ವಜ ಬಳಕೆಯಾಗದಂತೆ ನಿಗಾ ವಹಿಸಿ; ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಸೂಚನೆ

Big News: ಸಾವಿರಾರು ರೌಡಿಗಳ ಮನೆ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ ಬೆಂಗಳೂರು ಪೊಲೀಸರು; ನೂರಾರು ಜನ ವಶಕ್ಕೆ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ