ಬೆಂಗಳೂರಿನಲ್ಲಿ ಪ್ರತಿಭಟನಾಕಾರರ ಕೈಯಿಂದ ಪೊಲೀಸ್ ಜೀಪ್ ಸೇರಿದ ಗಣೇಶನ ವಿಗ್ರಹ; ವಿಡಿಯೋಗೆ ಭಾರೀ ವಿರೋಧ

ಮಂಡ್ಯದ ನಾಗಮಂಗಲದಲ್ಲಿ ಗಣೇಶ ಉತ್ಸವದ ವೇಳೆ ನಡೆದ ಕೋಮುಗಲಭೆಯನ್ನು ವಿರೋಧಿಸಿ ಹಿಂದೂ ಕಾರ್ಯಕರ್ತರು ಬೆಂಗಳೂರಿನಲ್ಲಿ ಗಣೇಶನ ವಿಗ್ರಹವನ್ನು ಹಿಡಿದು ಪ್ರತಿಭಟನೆ ನಡೆಸುತ್ತಿದ್ದರು. ಪ್ರತಿಭಟನಾಕಾರರನ್ನು ಚದುರಿಸಿದ ಪೊಲೀಸರು ಅವರ ಕೈಯಲ್ಲಿದ್ದ ಗಣೇಶನನ್ನು ಹೊತ್ತುಕೊಂಡು ಹೋಗಿ ಪೊಲೀಸ್ ಜೀಪ್​ನಲ್ಲಿಟ್ಟುಕೊಂಡಿದ್ದಾರೆ. ಈ ವಿಡಿಯೋ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಇದರಿಂದಾಗಿ ಬೆಂಗಳೂರು ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದಾರೆ.

ಬೆಂಗಳೂರಿನಲ್ಲಿ ಪ್ರತಿಭಟನಾಕಾರರ ಕೈಯಿಂದ ಪೊಲೀಸ್ ಜೀಪ್ ಸೇರಿದ ಗಣೇಶನ ವಿಗ್ರಹ; ವಿಡಿಯೋಗೆ ಭಾರೀ ವಿರೋಧ
ಪೊಲೀಸ್ ಜೀಪ್ ಸೇರಿದ ಗಣೇಶನ ವಿಗ್ರಹ
Follow us
|

Updated on: Sep 14, 2024 | 5:44 PM

ಬೆಂಗಳೂರು: ಬೆಂಗಳೂರಿನಲ್ಲಿ ಪೊಲೀಸ್ ವ್ಯಾನ್‌ನಲ್ಲಿ ಗಣೇಶನ ವಿಗ್ರಹ ಇರುವ ಫೋಟೋಗಳು, ವಿಡಿಯೋಗಳು ಭಾರೀ ಚರ್ಚೆಗೆ ಕಾರಣವಾಗಿವೆ. ಮಂಡ್ಯದಲ್ಲಿ ಗಣೇಶ ಉತ್ಸವದ ವೇಳೆ ನಡೆದ ಕೋಮುಗಲಭೆಯಲ್ಲಿ ಕಲ್ಲು ತೂರಾಟಗಾರ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಘರ್ಷಣೆಯ ನಂತರ ಬಂಧಿತರಾಗಿರುವ ಹಿಂದೂ ಸದಸ್ಯರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಬೆಂಗಳೂರು ಮಹಾನಗರ ಗಣೇಶ ಉತ್ಸವ ಸಮಿತಿ ವತಿಯಿಂದ ಬೆಂಗಳೂರಿನ ಟೌನ್​ಹಾಲ್ ಎದುರು ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನಾಕಾರರು ಗಣಪತಿ ವಿಗ್ರಹವನ್ನು ಹಿಡಿದುಕೊಂಡೇ ಪ್ರತಿಭಟನೆ ಮಾಡಿದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ಪೊಲೀಸ್​ ಬಸ್​ಗೆ ಹತ್ತಿಸಿ, ಅವರ ಕೈಯಲ್ಲಿದ್ದ ಗಣೇಶ ವಿಗ್ರಹವನ್ನು ಹೊತ್ತುಕೊಂಡು ಪೊಲೀಸ್ ಜೀಪ್​ನೊಳಗೆ ಇಟ್ಟುಕೊಂಡಿದ್ದಾರೆ. ಇದರ ವಿಡಿಯೋ, ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ಇದನ್ನೂ ಓದಿ: ಮಸೀದಿ ಮುಂದೆ ಡ್ಯಾನ್ಸ್ ಮಾಡಬಾರದು ಎಂದರೆ ಪಾಕಿಸ್ತಾನ, ಬಾಂಗ್ಲಾಕ್ಕೆ ಹೋಗಲಿ; ಬಸನಗೌಡ ಯತ್ನಾಳ್ ವಾಗ್ದಾಳಿ

ಸೆ.12ರಂದು ನಾಗಮಂಗಲ ತಾಲೂಕಿನಲ್ಲಿ ನಡೆದ ನಿಮಜ್ಜನ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟದ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬೆಂಗಳೂರಿನ ಟೌನ್‌ಹಾಲ್ ಬಳಿ ಗಣೇಶ ಮೂರ್ತಿ ಹೊತ್ತ ಪ್ರತಿಭಟನಾಕಾರರ ಗುಂಪೊಂದು ಪ್ರತಿಭಟನೆ ನಡೆಸಿತು. ಕಲ್ಲು ತೂರಾಟಗಾರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಂಗಳೂರು ಮಹಾನಗರ ಗಣೇಶ ಉತ್ಸವ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಘರ್ಷಣೆಯ ನಂತರ ಬಂಧಿಸಲ್ಪಟ್ಟ ಹಿಂದೂ ಸದಸ್ಯರ ಬಿಡುಗಡೆ ಮಾಡುವಂತೆ ಒತ್ತಾಯಿಸಲಾಯಿತು.

ಆದರೆ, ಪ್ರತಿಭಟನೆಗೆ ಪೊಲೀಸರು ಅನುಮತಿ ನಿರಾಕರಿಸಿದ್ದರು. ಹೀಗಾಗಿ, ಸುವ್ಯವಸ್ಥೆಯನ್ನು ಕಾಪಾಡಲು ಪೊಲೀಸರು ಸುಮಾರು 40 ವ್ಯಕ್ತಿಗಳನ್ನು ಬಂಧಿಸಿದರು. ಈ ವೇಳೆ ಗಣೇಶನ ವಿಗ್ರಹವನ್ನು ಪ್ರತಿಭಟನಾಕಾರರಿಂದ ತೆಗೆದುಕೊಂಡು ಪೊಲೀಸ್ ವ್ಯಾನ್‌ನಲ್ಲಿ ಇರಿಸಲಾಯಿತು. ಇದು ಈಗ ಭಾರೀ ಚರ್ಚೆಗೆ ಕಾರಣವಾಗಿದೆ. ಪೊಲೀಸರು ಗಣೇಶನ ಮೂರ್ತಿಯನ್ನು ಪೊಲೀಸ್ ವಾಹನದಲ್ಲಿರಿಸುವ ಮೂಲಕ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಆದರೆ, ಪ್ರತಿಭಟನಾಕಾರರಿಂದ ವಶಪಡಿಸಿಕೊಂಡು ಪೊಲೀಸ್​ ಜೀಪ್​ನಲ್ಲಿ ಸುರಕ್ಷಿತವಾಗಿರಿಸಲಾಗಿದ್ದ ಗಣೇಶನ ವಿಗ್ರಹವನ್ನು ಪೊಲೀಸರೇ ವಿಸರ್ಜನೆ ಮಾಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಮಂಡ್ಯ ಗಲಭೆ: ನಾಗಮಂಗಲಕ್ಕೆ ಬಾರದಂತೆ ಪ್ರಮೋದ್ ಮುತಾಲಿಕ್​ಗೆ ನಿರ್ಬಂಧ

ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಅಗೌರವ ತೋರುತ್ತಿದೆ ಮತ್ತು ಪರಿಸ್ಥಿತಿಯನ್ನು ತಪ್ಪಾಗಿ ನಿಭಾಯಿಸುತ್ತಿದೆ ಎಂದು ಹಲವು ಬಿಜೆಪಿ ನಾಯಕರು ಆರೋಪಿಸಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರ ಧಾರ್ಮಿಕ ಆಚರಣೆಗಳನ್ನು ರಕ್ಷಿಸುವಲ್ಲಿ ವಿಫಲವಾಗಿದೆ ಎಂದು ಟೀಕಿಸಿದ ಅವರು ಗಣಪತಿಗೆ ಅವಮಾನ ಮಾಡಲಾಗಿದೆ. ಇದಕ್ಕೆ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ಕರ್ನಾಟಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
CPL 2024: ಕಾರ್ನ್​ವಾಲ್ ಕಮಾಲ್: ರಾಯಲ್ಸ್​ಗೆ ಭರ್ಜರಿ ತಂದುಕೊಟ್ಟ ರಹ್​ಕೀಮ್
CPL 2024: ಕಾರ್ನ್​ವಾಲ್ ಕಮಾಲ್: ರಾಯಲ್ಸ್​ಗೆ ಭರ್ಜರಿ ತಂದುಕೊಟ್ಟ ರಹ್​ಕೀಮ್
‘ಬೇಸರ ಆಗೇ ಆಗುತ್ತದೆ’; ದರ್ಶನ್ ಕೇಸ್ ಬಗ್ಗೆ ಉಪೇಂದ್ರ ಮಾತು  
‘ಬೇಸರ ಆಗೇ ಆಗುತ್ತದೆ’; ದರ್ಶನ್ ಕೇಸ್ ಬಗ್ಗೆ ಉಪೇಂದ್ರ ಮಾತು