AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಗೆ ನುಗ್ಗಿ ಗನ್ ತೋರಿಸಿ ಡಕಾಯಿತಿ ಮಾಡುತ್ತಿದ್ದ ಆರೋಪಿಗೆ ಗುಂಡು ಹಾರಿಸಿ ಅರೆಸ್ಟ್ ಮಾಡಿದ ಪೊಲೀಸ್ ಇನ್ಸ್ಪೆಕ್ಟರ್

ಆರೋಪಿ ದಿವಾಕರ್ನನ್ನು ಬಂಧಿಸಲು ತೆರಳಿದ್ದಾಗ ಚಾಕುವಿನಿಂದ ಇರಿದು ಹಲ್ಲೆಗೆ ಯತ್ನಿಸಿದ್ದ. ಹೀಗಾಗಿ ಆತ್ಮರಕ್ಷಣೆಗಾಗಿ ಸಂಜಯನಗರ ಠಾಣೆ ಇನ್ಸ್‌ಪೆಕ್ಟರ್ ಬಾಲರಾಜ್‌ ಫೈರಿಂಗ್‌ ಮಾಡಿ ಆರೋಪಿ ದಿವಾಕರ್ನನ್ನು ಅರೆಸ್ಟ್ ಮಾಡಿದ್ದಾರೆ.

ಮನೆಗೆ ನುಗ್ಗಿ ಗನ್ ತೋರಿಸಿ ಡಕಾಯಿತಿ ಮಾಡುತ್ತಿದ್ದ ಆರೋಪಿಗೆ ಗುಂಡು ಹಾರಿಸಿ ಅರೆಸ್ಟ್ ಮಾಡಿದ ಪೊಲೀಸ್ ಇನ್ಸ್ಪೆಕ್ಟರ್
ಆರೋಪಿ ದಿವಾಕರ್
TV9 Web
| Edited By: ಆಯೇಷಾ ಬಾನು|

Updated on:Dec 31, 2021 | 7:42 AM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಖಾಕಿ ಗನ್ ಸದ್ದು ಮಾಡಿದೆ. ಆರೋಪಿ ಕಾಲಿಗೆ ಗುಂಡು ಹಾರಿಸಿ ಅರೆಸ್ಟ್‌ ಮಾಡಿರುವ ಘಟನೆ ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಆರೋಪಿ ದಿವಾಕರ್ನನ್ನು ಬಂಧಿಸಲು ತೆರಳಿದ್ದಾಗ ಚಾಕುವಿನಿಂದ ಇರಿದು ಹಲ್ಲೆಗೆ ಯತ್ನಿಸಿದ್ದ. ಹೀಗಾಗಿ ಆತ್ಮರಕ್ಷಣೆಗಾಗಿ ಸಂಜಯನಗರ ಠಾಣೆ ಇನ್ಸ್‌ಪೆಕ್ಟರ್ ಬಾಲರಾಜ್‌ ಫೈರಿಂಗ್‌ ಮಾಡಿ ಆರೋಪಿ ದಿವಾಕರ್ನನ್ನು ಅರೆಸ್ಟ್ ಮಾಡಿದ್ದಾರೆ. ಘಟನೆಯಲ್ಲಿ ಕಾನ್ಸ್‌ಟೇಬಲ್ ಪ್ರದೀಪ್ ಎಂಬಾತನಿಗೆ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ಸ್ಪೆಕ್ಟರ್ ಬಾಲ್ರಾಜ್ ಮತ್ತು ಕಾನ್ಸ್‌ಟೇಬಲ್ ಪ್ರದೀಪ್

ಆರೋಪಿ ದಿವಾಕರ್, ಮನೆಗಳಿಗೆ ನುಗ್ಗಿ ಹಣೆಗೆ ಪಿಸ್ತೂಲ್ ಇಟ್ಟು ಡಕಾಯಿತಿ ಮಾಡ್ತಿದ್ದ. ನವೆಂಬರ್ 29 ರಂದು ಯಶವಂತಪುರದಲ್ಲಿ ಡಕಾಯಿತಿ ನಡೆಸಿದ್ದ. ಎರಡು ದಿನದ ಹಿಂದೆ ಅಂದ್ರೆ ಬುಧವಾರ ರಾತ್ರಿ ಆರೋಪಿ ಅರೆಸ್ಟ್ ಮಾಡಲು ತೆರಳಿದ್ದ ಪಿಎಸ್ಐಗೆ ಚಾಕು ಇರಿದು ಎಸ್ಕೇಪ್ ಆಗಿದ್ದ. ಸದ್ಯ ಇಂದು ಐದು ಗಂಟೆ ಸುಮಾರಿಗೆ ಆರೋಪಿ ಅರೆಸ್ಟ್ ಮಾಡಲು ಸಂಜಯ್ ನಗರ ಇನ್ಸ್ಪೆಕ್ಟರ್ ಬಾಲ್ರಾಜ್ ತೆರಳಿದ್ದಾರೆ. ಈ ವೇಳೆ ಮತ್ತೆ ಪೊಲೀಸರ ಮೇಲೆ ಅಟ್ಯಾಕ್ ಮಾಡಿ ಪರಾರಿಯಾಗಲು ಯತ್ನಿಸಿದ್ದಾನೆ. ಹೀಗಾಗಿ ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗುವಂತೆ ಇನ್ಸ್ಪೆಕ್ಟರ್ ಬಾಲ್ರಾಜ್ ಸೂಚಿಸಿದ್ದಾರೆ. ಮತ್ತೆ ಅಟ್ಯಾಕ್ ಮಾಡಲು ಆರೋಪಿ ದಿವಾಕರ್ ಮುಂದಾಗಿದ್ದ. ಈ ವೇಳೆ ಆತ್ಮ ರಕ್ಷಣೆಗೆಂದು ಇನ್ಸ್ಪೆಕ್ಟರ್ ಬಾಲ್ರಾಜ್ ಗುಂಡು ಹಾರಿಸಿ ಅರೆಸ್ಟ್ ಮಾಡಿದ್ದಾರೆ. ಆರೋಪಿ ವಿರುದ್ಧ ಡಕಾಯಿತಿ, ರಾಬರಿ ಕೊಲೆಯತ್ನ ಸೇರಿ ಸುಮಾರು ಏಳು ಕೇಸ್ಗಳಲ್ಲಿ ಬೇಕಾದ ಆರೋಪಿಯಾಗಿದ್ದಾನೆ.

ಇದನ್ನೂ ಓದಿ: Gold Rate: ಆಭರಣ ಪ್ರಿಯರಿಗೆ ಸಂತೋಷದ ವಿಚಾರ; ಚಿನ್ನ, ಬೆಳ್ಳಿ ದರದಲ್ಲಿ ಭಾರೀ ಇಳಿಕೆ

Published On - 7:32 am, Fri, 31 December 21

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ