AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

5 ಕೋಟಿ ರೂ. ಮೌಲ್ಯದ ಹಳೇ ನೋಟಿಗೆ ಬೆಂಕಿ ಹಚ್ಚಿ ಸುಡಲು ಮುಂದಾದ ಪೊಲೀಸರು! ಕಾರಣವೇನು?

ಬೆಂಗಳೂರಿನ ಹಲವು ಪ್ರಕರಣಗಳಲ್ಲಿ ಪೊಲೀಸರು 5 ಕೋಟಿಗೂ ಹೆಚ್ಚು ಹಳೇ ನೋಟುಗಳನ್ನು ಜಪ್ತಿ ಮಾಡಿದ್ದಾರೆ. ಇದೀಗ ಹಳೇ ನೋಟುಗಳಿಗೆ ಬೆಂಕಿ ಇಡಲು ಪೊಲೀಸರು ತೀರ್ಮಾನಿಸಿದ್ದು ಕೋರ್ಟ್ ಮೊರೆ ಹೋಗಿದ್ದಾರೆ. ಕೋರ್ಟ್ ಅನುಮತಿ ಕೊಟ್ಟರೆ ಪೊಲೀಸರು ಹಳೇ ನೋಟು ನಾಶಪಡಿಸಲಿದ್ದಾರೆ.

5 ಕೋಟಿ ರೂ. ಮೌಲ್ಯದ ಹಳೇ ನೋಟಿಗೆ ಬೆಂಕಿ ಹಚ್ಚಿ ಸುಡಲು ಮುಂದಾದ ಪೊಲೀಸರು! ಕಾರಣವೇನು?
ಸಾಂದರ್ಭಿಕ ಚಿತ್ರ
Jagadisha B
| Edited By: |

Updated on: Oct 06, 2024 | 12:13 PM

Share

ಬೆಂಗಳೂರು, ಅ.06: 5 ಕೋಟಿ ಮೌಲ್ಯದ ಹಳೇ ನೋಟುಗಳನ್ನು (Old Notes) ನಾಶಪಡಿಸಲು ಬೆಂಗಳೂರು ಪೊಲೀಸರು (Bengaluru Police) ಮುಂದಾಗಿದ್ದಾರೆ. ಬೆಂಗಳೂರಿನ ಹಲವು ಪ್ರಕರಣಗಳಲ್ಲಿ ಪೊಲೀಸರು 5 ಕೋಟಿಗೂ ಹೆಚ್ಚು ಹಳೇ ನೋಟುಗಳನ್ನು ಜಪ್ತಿ ಮಾಡಿದ್ದಾರೆ. ಈ ಹಳೇ ನೋಟುಗಳನ್ನು ಆರ್​ಬಿಐಗೆ (Reserve Bank Of India) ನೀಡಿ ಬದಲಾವಣೆಗೆ ಮುಂದಾಗಿದ್ದು ಆರ್​​ಬಿಐ ಕೂಡ ಹಳೇ ನೋಟುಗಳನ್ನು ಸ್ವೀಕರಿಸಲು ನಿರಾಕರಿಸಿದೆ. ಈ ಹಿನ್ನೆಲೆ ಇದೀಗ ಹಳೇ ನೋಟುಗಳಿಗೆ ಬೆಂಕಿ ಇಡಲು ಪೊಲೀಸರು ತೀರ್ಮಾನಿಸಿದ್ದು ಕೋರ್ಟ್ ಮೊರೆ ಹೋಗಿದ್ದಾರೆ.

ಹಳೇ ನೋಟುಗಳನ್ನು ತೆಗೆದುಕೊಳ್ಳಲು ಆರ್​ಬಿಐ ನಿರಾಕರಿಸಿದ್ದೇಕೆ?

ಬೆಂಗಳೂರಿನ ಪೊಲೀಸರ ಬಳಿ ಐದು ಕೋಟಿಗೂ ಅಧಿಕ ಹಳೆಯ ನೋಟಿನ ಕಂತೆಗಳಿವೆ. 1 ಸಾವಿರ ಹಾಗೂ 500 ಮುಖಬೆಲೆಯ ಹಳೇ ನೋಟುಗಳಿಗೆ ನಯಾಪೈಸೆ ಬೆಲೆ ಇಲ್ಲ. ಆ ನೋಟುಗಳೀಗ ಕೇವಲ ಕಾಗದದ ಚೂರಷ್ಟೇ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾನೇ (RBI) ಹೇಳಿದೆ.

ಇದನ್ನೂ ಓದಿ: ಬೆಂಗಳೂರು ನಮ್ಮ ಮೆಟ್ರೋ ಹಳದಿ ಲೈನ್: ಮಹತ್ವದ ಅಪ್​ಡೇಟ್ ನೀಡಿದ ಬಿಎಂಆರ್​ಸಿಎಲ್

ಬೆಂಗಳೂರಿನ ಹಲವು ಪ್ರಕರಣದಲ್ಲಿ 5 ಕೋಟಿಗೂ ಅಧಿಕ ಹಳೆಯ ನೋಟುಗಳನ್ನ ಸೀಜ್ ಮಾಡಲಾಗಿದೆ. ಬೇರೆ ಬೇರೆ ಪ್ರಕರಣದಲ್ಲಿ ಹಳೇ ನೋಟುಗಳು ಪತ್ತೆಯಾಗಿವೆ. ನೋಟು ಅಮಾನ್ಯೀಕರಣ ಬಳಿಕ ಹಳೇ ನೋಟುಗಳು ಬೆಲೆ ಕಳೆದುಕೊಂಡಿವೆ. ನೋಟು ಅಮಾನ್ಯೀಕರಣ ಬಳಿಕ ಬದಲಾವಣೆಗೆ ಕಾಲಾವಕಾಶ ನೀಡಲಾಗಿತ್ತು. ಇದೀಗ ಕೊಟ್ಟ ಕಾಲಾವಕಾಶ ಕೂಡ ಮುಗಿದು ಹೋಗಿದೆ. ಹೀಗಾಗಿ ಹಳೇ ನೋಟುಗಳನ್ನು ಸ್ವೀಕರಿಸಲು ಸಾಧ್ಯವಿಲ್ಲ ಎಂದು RBI ತಿಳಿಸಿದೆ.

ಹಳೇ ನೋಟು ಹಿನ್ನೆಲೆ ಪೊಲೀಸರು ಬ್ಯಾಂಕ್​ನಲ್ಲಿ ಡೆಪಾಸಿಟ್ ಮಾಡೋಕು ಆಗ್ತಿಲ್ಲ. ಅತ್ತ ಆರ್​ಬಿಐ ಕೂಡ ಈ ಹಣವನ್ನ ಸ್ವೀಕಾರ ಮಾಡ್ತಿಲ್ಲ. ಹೀಗಾಗಿಯೇ ಹಳೇ ನೋಟುಗಳನ್ನ ಸುಟ್ಟು ಹಾಕಲು ಪೊಲೀಸರು ನಿರ್ಧರಿಸಿದ್ದಾರೆ. ಕೋರ್ಟ್ ಅನುಮತಿ ಪಡೆದ ಬಳಿಕ ಪೊಲೀಸರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಕೋರ್ಟ್ ಅನುಮತಿ ಕೊಟ್ಟರೆ ಪೊಲೀಸರು ಹಳೇ ನೋಟು ನಾಶಪಡಿಸಲಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್