AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

5 ಕೋಟಿ ರೂ. ಮೌಲ್ಯದ ಹಳೇ ನೋಟಿಗೆ ಬೆಂಕಿ ಹಚ್ಚಿ ಸುಡಲು ಮುಂದಾದ ಪೊಲೀಸರು! ಕಾರಣವೇನು?

ಬೆಂಗಳೂರಿನ ಹಲವು ಪ್ರಕರಣಗಳಲ್ಲಿ ಪೊಲೀಸರು 5 ಕೋಟಿಗೂ ಹೆಚ್ಚು ಹಳೇ ನೋಟುಗಳನ್ನು ಜಪ್ತಿ ಮಾಡಿದ್ದಾರೆ. ಇದೀಗ ಹಳೇ ನೋಟುಗಳಿಗೆ ಬೆಂಕಿ ಇಡಲು ಪೊಲೀಸರು ತೀರ್ಮಾನಿಸಿದ್ದು ಕೋರ್ಟ್ ಮೊರೆ ಹೋಗಿದ್ದಾರೆ. ಕೋರ್ಟ್ ಅನುಮತಿ ಕೊಟ್ಟರೆ ಪೊಲೀಸರು ಹಳೇ ನೋಟು ನಾಶಪಡಿಸಲಿದ್ದಾರೆ.

5 ಕೋಟಿ ರೂ. ಮೌಲ್ಯದ ಹಳೇ ನೋಟಿಗೆ ಬೆಂಕಿ ಹಚ್ಚಿ ಸುಡಲು ಮುಂದಾದ ಪೊಲೀಸರು! ಕಾರಣವೇನು?
ಸಾಂದರ್ಭಿಕ ಚಿತ್ರ
Jagadisha B
| Updated By: ಆಯೇಷಾ ಬಾನು|

Updated on: Oct 06, 2024 | 12:13 PM

Share

ಬೆಂಗಳೂರು, ಅ.06: 5 ಕೋಟಿ ಮೌಲ್ಯದ ಹಳೇ ನೋಟುಗಳನ್ನು (Old Notes) ನಾಶಪಡಿಸಲು ಬೆಂಗಳೂರು ಪೊಲೀಸರು (Bengaluru Police) ಮುಂದಾಗಿದ್ದಾರೆ. ಬೆಂಗಳೂರಿನ ಹಲವು ಪ್ರಕರಣಗಳಲ್ಲಿ ಪೊಲೀಸರು 5 ಕೋಟಿಗೂ ಹೆಚ್ಚು ಹಳೇ ನೋಟುಗಳನ್ನು ಜಪ್ತಿ ಮಾಡಿದ್ದಾರೆ. ಈ ಹಳೇ ನೋಟುಗಳನ್ನು ಆರ್​ಬಿಐಗೆ (Reserve Bank Of India) ನೀಡಿ ಬದಲಾವಣೆಗೆ ಮುಂದಾಗಿದ್ದು ಆರ್​​ಬಿಐ ಕೂಡ ಹಳೇ ನೋಟುಗಳನ್ನು ಸ್ವೀಕರಿಸಲು ನಿರಾಕರಿಸಿದೆ. ಈ ಹಿನ್ನೆಲೆ ಇದೀಗ ಹಳೇ ನೋಟುಗಳಿಗೆ ಬೆಂಕಿ ಇಡಲು ಪೊಲೀಸರು ತೀರ್ಮಾನಿಸಿದ್ದು ಕೋರ್ಟ್ ಮೊರೆ ಹೋಗಿದ್ದಾರೆ.

ಹಳೇ ನೋಟುಗಳನ್ನು ತೆಗೆದುಕೊಳ್ಳಲು ಆರ್​ಬಿಐ ನಿರಾಕರಿಸಿದ್ದೇಕೆ?

ಬೆಂಗಳೂರಿನ ಪೊಲೀಸರ ಬಳಿ ಐದು ಕೋಟಿಗೂ ಅಧಿಕ ಹಳೆಯ ನೋಟಿನ ಕಂತೆಗಳಿವೆ. 1 ಸಾವಿರ ಹಾಗೂ 500 ಮುಖಬೆಲೆಯ ಹಳೇ ನೋಟುಗಳಿಗೆ ನಯಾಪೈಸೆ ಬೆಲೆ ಇಲ್ಲ. ಆ ನೋಟುಗಳೀಗ ಕೇವಲ ಕಾಗದದ ಚೂರಷ್ಟೇ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾನೇ (RBI) ಹೇಳಿದೆ.

ಇದನ್ನೂ ಓದಿ: ಬೆಂಗಳೂರು ನಮ್ಮ ಮೆಟ್ರೋ ಹಳದಿ ಲೈನ್: ಮಹತ್ವದ ಅಪ್​ಡೇಟ್ ನೀಡಿದ ಬಿಎಂಆರ್​ಸಿಎಲ್

ಬೆಂಗಳೂರಿನ ಹಲವು ಪ್ರಕರಣದಲ್ಲಿ 5 ಕೋಟಿಗೂ ಅಧಿಕ ಹಳೆಯ ನೋಟುಗಳನ್ನ ಸೀಜ್ ಮಾಡಲಾಗಿದೆ. ಬೇರೆ ಬೇರೆ ಪ್ರಕರಣದಲ್ಲಿ ಹಳೇ ನೋಟುಗಳು ಪತ್ತೆಯಾಗಿವೆ. ನೋಟು ಅಮಾನ್ಯೀಕರಣ ಬಳಿಕ ಹಳೇ ನೋಟುಗಳು ಬೆಲೆ ಕಳೆದುಕೊಂಡಿವೆ. ನೋಟು ಅಮಾನ್ಯೀಕರಣ ಬಳಿಕ ಬದಲಾವಣೆಗೆ ಕಾಲಾವಕಾಶ ನೀಡಲಾಗಿತ್ತು. ಇದೀಗ ಕೊಟ್ಟ ಕಾಲಾವಕಾಶ ಕೂಡ ಮುಗಿದು ಹೋಗಿದೆ. ಹೀಗಾಗಿ ಹಳೇ ನೋಟುಗಳನ್ನು ಸ್ವೀಕರಿಸಲು ಸಾಧ್ಯವಿಲ್ಲ ಎಂದು RBI ತಿಳಿಸಿದೆ.

ಹಳೇ ನೋಟು ಹಿನ್ನೆಲೆ ಪೊಲೀಸರು ಬ್ಯಾಂಕ್​ನಲ್ಲಿ ಡೆಪಾಸಿಟ್ ಮಾಡೋಕು ಆಗ್ತಿಲ್ಲ. ಅತ್ತ ಆರ್​ಬಿಐ ಕೂಡ ಈ ಹಣವನ್ನ ಸ್ವೀಕಾರ ಮಾಡ್ತಿಲ್ಲ. ಹೀಗಾಗಿಯೇ ಹಳೇ ನೋಟುಗಳನ್ನ ಸುಟ್ಟು ಹಾಕಲು ಪೊಲೀಸರು ನಿರ್ಧರಿಸಿದ್ದಾರೆ. ಕೋರ್ಟ್ ಅನುಮತಿ ಪಡೆದ ಬಳಿಕ ಪೊಲೀಸರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಕೋರ್ಟ್ ಅನುಮತಿ ಕೊಟ್ಟರೆ ಪೊಲೀಸರು ಹಳೇ ನೋಟು ನಾಶಪಡಿಸಲಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ