AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

5 ಕೋಟಿ ರೂ. ಮೌಲ್ಯದ ಹಳೇ ನೋಟಿಗೆ ಬೆಂಕಿ ಹಚ್ಚಿ ಸುಡಲು ಮುಂದಾದ ಪೊಲೀಸರು! ಕಾರಣವೇನು?

ಬೆಂಗಳೂರಿನ ಹಲವು ಪ್ರಕರಣಗಳಲ್ಲಿ ಪೊಲೀಸರು 5 ಕೋಟಿಗೂ ಹೆಚ್ಚು ಹಳೇ ನೋಟುಗಳನ್ನು ಜಪ್ತಿ ಮಾಡಿದ್ದಾರೆ. ಇದೀಗ ಹಳೇ ನೋಟುಗಳಿಗೆ ಬೆಂಕಿ ಇಡಲು ಪೊಲೀಸರು ತೀರ್ಮಾನಿಸಿದ್ದು ಕೋರ್ಟ್ ಮೊರೆ ಹೋಗಿದ್ದಾರೆ. ಕೋರ್ಟ್ ಅನುಮತಿ ಕೊಟ್ಟರೆ ಪೊಲೀಸರು ಹಳೇ ನೋಟು ನಾಶಪಡಿಸಲಿದ್ದಾರೆ.

5 ಕೋಟಿ ರೂ. ಮೌಲ್ಯದ ಹಳೇ ನೋಟಿಗೆ ಬೆಂಕಿ ಹಚ್ಚಿ ಸುಡಲು ಮುಂದಾದ ಪೊಲೀಸರು! ಕಾರಣವೇನು?
ಸಾಂದರ್ಭಿಕ ಚಿತ್ರ
Jagadisha B
| Edited By: |

Updated on: Oct 06, 2024 | 12:13 PM

Share

ಬೆಂಗಳೂರು, ಅ.06: 5 ಕೋಟಿ ಮೌಲ್ಯದ ಹಳೇ ನೋಟುಗಳನ್ನು (Old Notes) ನಾಶಪಡಿಸಲು ಬೆಂಗಳೂರು ಪೊಲೀಸರು (Bengaluru Police) ಮುಂದಾಗಿದ್ದಾರೆ. ಬೆಂಗಳೂರಿನ ಹಲವು ಪ್ರಕರಣಗಳಲ್ಲಿ ಪೊಲೀಸರು 5 ಕೋಟಿಗೂ ಹೆಚ್ಚು ಹಳೇ ನೋಟುಗಳನ್ನು ಜಪ್ತಿ ಮಾಡಿದ್ದಾರೆ. ಈ ಹಳೇ ನೋಟುಗಳನ್ನು ಆರ್​ಬಿಐಗೆ (Reserve Bank Of India) ನೀಡಿ ಬದಲಾವಣೆಗೆ ಮುಂದಾಗಿದ್ದು ಆರ್​​ಬಿಐ ಕೂಡ ಹಳೇ ನೋಟುಗಳನ್ನು ಸ್ವೀಕರಿಸಲು ನಿರಾಕರಿಸಿದೆ. ಈ ಹಿನ್ನೆಲೆ ಇದೀಗ ಹಳೇ ನೋಟುಗಳಿಗೆ ಬೆಂಕಿ ಇಡಲು ಪೊಲೀಸರು ತೀರ್ಮಾನಿಸಿದ್ದು ಕೋರ್ಟ್ ಮೊರೆ ಹೋಗಿದ್ದಾರೆ.

ಹಳೇ ನೋಟುಗಳನ್ನು ತೆಗೆದುಕೊಳ್ಳಲು ಆರ್​ಬಿಐ ನಿರಾಕರಿಸಿದ್ದೇಕೆ?

ಬೆಂಗಳೂರಿನ ಪೊಲೀಸರ ಬಳಿ ಐದು ಕೋಟಿಗೂ ಅಧಿಕ ಹಳೆಯ ನೋಟಿನ ಕಂತೆಗಳಿವೆ. 1 ಸಾವಿರ ಹಾಗೂ 500 ಮುಖಬೆಲೆಯ ಹಳೇ ನೋಟುಗಳಿಗೆ ನಯಾಪೈಸೆ ಬೆಲೆ ಇಲ್ಲ. ಆ ನೋಟುಗಳೀಗ ಕೇವಲ ಕಾಗದದ ಚೂರಷ್ಟೇ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾನೇ (RBI) ಹೇಳಿದೆ.

ಇದನ್ನೂ ಓದಿ: ಬೆಂಗಳೂರು ನಮ್ಮ ಮೆಟ್ರೋ ಹಳದಿ ಲೈನ್: ಮಹತ್ವದ ಅಪ್​ಡೇಟ್ ನೀಡಿದ ಬಿಎಂಆರ್​ಸಿಎಲ್

ಬೆಂಗಳೂರಿನ ಹಲವು ಪ್ರಕರಣದಲ್ಲಿ 5 ಕೋಟಿಗೂ ಅಧಿಕ ಹಳೆಯ ನೋಟುಗಳನ್ನ ಸೀಜ್ ಮಾಡಲಾಗಿದೆ. ಬೇರೆ ಬೇರೆ ಪ್ರಕರಣದಲ್ಲಿ ಹಳೇ ನೋಟುಗಳು ಪತ್ತೆಯಾಗಿವೆ. ನೋಟು ಅಮಾನ್ಯೀಕರಣ ಬಳಿಕ ಹಳೇ ನೋಟುಗಳು ಬೆಲೆ ಕಳೆದುಕೊಂಡಿವೆ. ನೋಟು ಅಮಾನ್ಯೀಕರಣ ಬಳಿಕ ಬದಲಾವಣೆಗೆ ಕಾಲಾವಕಾಶ ನೀಡಲಾಗಿತ್ತು. ಇದೀಗ ಕೊಟ್ಟ ಕಾಲಾವಕಾಶ ಕೂಡ ಮುಗಿದು ಹೋಗಿದೆ. ಹೀಗಾಗಿ ಹಳೇ ನೋಟುಗಳನ್ನು ಸ್ವೀಕರಿಸಲು ಸಾಧ್ಯವಿಲ್ಲ ಎಂದು RBI ತಿಳಿಸಿದೆ.

ಹಳೇ ನೋಟು ಹಿನ್ನೆಲೆ ಪೊಲೀಸರು ಬ್ಯಾಂಕ್​ನಲ್ಲಿ ಡೆಪಾಸಿಟ್ ಮಾಡೋಕು ಆಗ್ತಿಲ್ಲ. ಅತ್ತ ಆರ್​ಬಿಐ ಕೂಡ ಈ ಹಣವನ್ನ ಸ್ವೀಕಾರ ಮಾಡ್ತಿಲ್ಲ. ಹೀಗಾಗಿಯೇ ಹಳೇ ನೋಟುಗಳನ್ನ ಸುಟ್ಟು ಹಾಕಲು ಪೊಲೀಸರು ನಿರ್ಧರಿಸಿದ್ದಾರೆ. ಕೋರ್ಟ್ ಅನುಮತಿ ಪಡೆದ ಬಳಿಕ ಪೊಲೀಸರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಕೋರ್ಟ್ ಅನುಮತಿ ಕೊಟ್ಟರೆ ಪೊಲೀಸರು ಹಳೇ ನೋಟು ನಾಶಪಡಿಸಲಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ