AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಲ್ಸನ್ ಗಾರ್ಡನ್ ನಾಗ, ಸೈಕಲ್ ರವಿ, ಸೈಲೆಂಟ್ ಸುನಿಲ ಸೇರಿದಂತೆ 45 ರೌಡಿಶೀಟರ್ಸ್​ ಮನೆಗಳ ಮೇಲೆ ಸಿಸಿಬಿ ಪೊಲೀಸರ ರೇಡ್

ರೌಡಿಶೀಟರ್ಸ್ ಹತ್ಯೆಯಾದರೆ ಆಯಾ ವ್ಯಾಪ್ತಿಯ ಇನ್​​ಸ್ಪೆಕ್ಟರ್ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಕಮಿಷನರ್​ ಎಚ್ಚರಿಕೆ ನೀಡಿರುವುದರಿಂದ ಪೊಲೀಸರು ಅಖಾಡಕ್ಕಿಳಿದು ರೌಡಿ ಶೀಟರ್ಸ್​ ಹಾಗೂ ಅವರ ಸಹಚರರಿಗೆ ಬಿಸಿ ಮುಟ್ಟಿಸುತ್ತಿದ್ದಾರೆ.

ವಿಲ್ಸನ್ ಗಾರ್ಡನ್ ನಾಗ, ಸೈಕಲ್ ರವಿ, ಸೈಲೆಂಟ್ ಸುನಿಲ ಸೇರಿದಂತೆ 45 ರೌಡಿಶೀಟರ್ಸ್​ ಮನೆಗಳ ಮೇಲೆ ಸಿಸಿಬಿ ಪೊಲೀಸರ ರೇಡ್
ರೌಡಿಶೀಟರ್ಸ್​ ಮನೆ ಮೇಲೆ ದಾಳಿ ಮಾಡಿದ ಪೊಲೀಸರು
Follow us
TV9 Web
| Updated By: Skanda

Updated on:Jul 23, 2021 | 8:35 AM

ಬೆಂಗಳೂರು: ಬೆಂಗಳೂರಿನಲ್ಲಿ ಪುಡಾರಿಗಳ (Anti Social Elements) ಕಾಟ ಹೆಚ್ಚಾಗಿದ್ದು, ಅವರನ್ನು ಹದ್ದುಬಸ್ತಿನಲ್ಲಿಡುವುದು ಆರಕ್ಷಕರಿಗೆ (Bengaluru Police) ದೊಡ್ಡ ಸವಾಲಾಗಿದೆ. ದಿನೇದಿನೇ ರಾಜಧಾನಿಯಲ್ಲಿ ಕೊಲೆ, ಸುಲಿಗೆ ಪ್ರಕರಣಗಳು ಅಧಿಕವಾಗುತ್ತಿದ್ದು, ರೌಡಿ ಶೀಟರ್ಸ್​ಗಳ (Rowdies) ಅಟ್ಟಹಾಸಕ್ಕೆ ತುರ್ತಾಗಿ ಕಡಿವಾಣ ಹಾಕಲು ಬೆಂಗಳೂರು ಪೊಲೀಸರು ಸಜ್ಜಾಗಿದ್ದಾರೆ. ರೌಡಿಗಳ ಮೇಲೆ ನಿಗಾ ವಹಿಸುವಂತೆ ಪೊಲೀಸ್ ಕಮಿಷನರ್ ಕಮಲ್​ ಪಂತ್ ಆದೇಶ ನೀಡಿದ ಬೆನ್ನಲ್ಲೇ 45ಕ್ಕೂ ಹೆಚ್ಚು ರೌಡಿಶೀಟರ್ಸ್​ ಮನೆ ಮೇಲೆ ಸಿಸಿಬಿ ಪೊಲೀಸರು ಇಂದು ದಾಳಿ (Raid) ಮಾಡಿದ್ದಾರೆ. ಕೆಲ ದಿನಗಳ ಹಿಂದಷ್ಟೇ 2 ಸಾವಿರಕ್ಕೂ ಅಧಿಕ ರೌಡಿ ಶೀಟರ್ಸ್​ ಮನೆ ಮೇಲೆ ದಾಳಿ ಮಾಡಿದ್ದ ಪೊಲೀಸರು ಇಂದು ಮತ್ತೊಮ್ಮೆ ಬಿಸಿ (Warning) ಮುಟ್ಟಿಸಿದ್ದಾರೆ.

ರೌಡಿಶೀಟರ್ಸ್ ಹತ್ಯೆಯಾದರೆ ಆಯಾ ವ್ಯಾಪ್ತಿಯ ಇನ್​​ಸ್ಪೆಕ್ಟರ್ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಕಮಿಷನರ್​ ಎಚ್ಚರಿಕೆ ನೀಡಿರುವುದರಿಂದ ಪೊಲೀಸರು ಅಖಾಡಕ್ಕಿಳಿದು ರೌಡಿ ಶೀಟರ್ಸ್​ ಹಾಗೂ ಅವರ ಸಹಚರರಿಗೆ ಬಿಸಿ ಮುಟ್ಟಿಸುತ್ತಿದ್ದಾರೆ. ಇಂದು ಬೆಂಗಳೂರಿನಲ್ಲಿ 45 ಮನೆಗಳ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ವಿಲ್ಸನ್ ಗಾರ್ಡನ್ ನಾಗ, ಸೈಕಲ್ ರವಿ, ಸೈಲೆಂಟ್ ಸುನಿಲ, ಜಿ.ಬಿ.ನಾರಾಯಣ್ ಸೇರಿದಂತೆ ಹಲವರ ಮನೆಗಳನ್ನು ಪರಿಶೀಲಿಸಿದ್ದಾರೆ. ಕೆಲವರ ಮನೆಗಳಲ್ಲಿ ಹಣ, ಮಾರಕಾಸ್ತ್ರಗ ಪತ್ತೆಯಾಗಿದ್ದು ಅದನ್ನು ವಶಕ್ಕೆ ಪಡೆದಿದ್ಧಾರೆ.

ಬೆಂಗಳೂರಲ್ಲಿ ಅಪರಾಧ ಪ್ರಕರಣಗಳನ್ನು ನಿಯಂತ್ರಣ ಮಾಡಬೇಕೆಂದು ಪಣ ತೊಟ್ಟಿರುವ ಪೊಲೀಸರು, ರೌಡಿಶೀಟರ್ಸ್ ಮೇಲೆ ನಿಗಾವಹಿಸಲು ಪ್ರತ್ಯೇಕ ತಂಡ ರಚಿಸಿಕೊಂಡಿದ್ದಾರೆ. ಆಯಾ ಠಾಣಾ ವ್ಯಾಪ್ತಿಯಲ್ಲಿ ಇಬ್ಬರು ಸಬ್ ಇನ್​ಸ್ಪೆಕ್ಟರ್ ನೇತೃತ್ವದಲ್ಲಿ 2 ಪ್ರತ್ಯೇಕ ತಂಡ ರಚಿಸಿ ಪ್ರತಿನಿತ್ಯ ರೌಡಿ ಆಸಾಮಿಗಳ ಮೇಲೆ ಕಣ್ಣಿಡುವ ಜವಾಬ್ದಾರಿ ಹೊತ್ತುಕೊಂಡಿದ್ದಾರೆ.

ರೌಡೀಶೀಟರ್ ಗಳ ಪಿನ್ ಟು ಪಿನ್ ಮಾಹಿತಿ ಕಲೆ ಹಾಕಲಿರುವ ಪ್ರತ್ಯೇಕ ತಂಡಗಳು, ತಮ್ಮ ಠಾಣಾ ವ್ಯಾಪ್ತಿಯಲ್ಲಿರುವ ರೌಡಿಶೀಟರ್ಸ್ ಯಾರು? ಅವರ ವಿಳಾಸ, ಪ್ರಸ್ತುತ ಉದ್ಯೋಗ ಏನು? ಎಲ್ಲಿ ಕೆಲಸ ಮಾಡುತ್ತಿದ್ದಾರೆ? ಯಾರು ಕೆಲಸ ನೀಡಿದವರು? ಅವರ ಹಿನ್ನೆಲೆ ಏನು? ತಮ್ಮ ವ್ಯಾಪ್ತಿಯ ರೌಡಿಶೀಟರ್​ಗಳ ವಿರೋಧಿ ಬಣದವರು ಯಾರು? ಅವರು ಎಲ್ಲಿದ್ದಾರೆ? ಹೀಗೆ ವಿವಿಧ ವಿಷಯಗಳನ್ನು ಸಂಗ್ರಹಿಸುತ್ತಿದ್ದಾರೆ.

ಜೈಲಿನಲ್ಲೇ ಗ್ಯಾಂಗ್ ಕಟ್ಟಿಕೊಂಡ ರೌಡಿಗಳು ಒಂದೇ ಗ್ಯಾಂಗ್​ಗೆ ಸೇರಿದ ಹಲವು ಮಂದಿ ಒಂದೆಡೆ ಸೇರಿ ಪಾತಕಗಳಿಗೆ ಸ್ಕೆಚ್ ಹಾಕುತ್ತಿರುವುದು ಪೊಲೀಸರ ಗಮನಕ್ಕೆ ಬಂದಿದೆ. ಹೀಗಾಗಿ ಆ ಗ್ಯಾಂಗ್ ನ ಸದಸ್ಯರನ್ನು ಹತೋಟಿಗೆ ತರಲು ಚಿಂತನೆ ಮಾಡಲಾಗುತ್ತಿದೆ. ಬೇರೆ ಬ್ಯಾರಕ್ ಅಥವಾ ಜೈಲಿಗೆ ಶಿಫ್ಟ್ ಮಾಡಿಸುವ ಬಗ್ಗೆಯೂ ಚಿಂತನೆ ನಡೆದಿದೆ. ಈ ಬಗ್ಗೆ ಕಾರಾಗೃಹ ಡಿಜಿ ಜೊತೆ ಚರ್ಚೆ ನಡೆಸಲಿರುವ ಕಮಲ್ ಪಂತ್​ ಮುಂದಿನ ದಿನಗಳಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕುಳಿತವರ ನೆಟ್ವರ್ಕ್ ಬ್ಲಾಕ್ ಮಾಡಲು ತಂತ್ರ ರೂಪಿಸಲಿದ್ದಾರೆ ಎಂದು ತಿಳಿದುಬಂದಿದೆ.

(Bengaluru Police Raid on Rowdy sheeters in order to control crime activities in the city)

ಇದನ್ನೂ ಓದಿ: ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ನೆಟ್​​ವರ್ಕ್​​ಗೆ ಬ್ರೇಕ್​ ಹಾಕಲು ಫೀಲ್ಡ್​​ಗೆ ಇಳಿದ ಆಯುಕ್ತ ಕಮಲ್ ಪಂತ್ ಮತ್ತು ಡಿಜಿ ಅಲೋಕ್ ಕುಮಾರ್​

ಬೆಂಗಳೂರಿನಲ್ಲಿ ಶೂಟೌಟ್; ರೌಡಿಶೀಟರ್ ಬಬ್ಲಿ ಹತ್ಯೆ ಆರೋಪಿಗಳ ಮೇಲೆ ಗುಂಡು, ಹತ್ತು ರೌಡಿಗಳು ಅಂದರ್ 

ಬೆಂಗಳೂರಿನಲ್ಲಿ 1,500 ರೌಡಿಗಳು ಪೊಲೀಸರ ವಶಕ್ಕೆ; 2 ಸಾವಿರ ರೌಡಿ ಶೀಟರ್ಸ್ ಮನೆ ಮೇಲೆ ದಾಳಿ

Published On - 8:29 am, Fri, 23 July 21

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನೂಕುನುಗ್ಗಲು; ಕಾಲು ಮುರಿದುಕೊಂಡ ಯುವಕ
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನೂಕುನುಗ್ಗಲು; ಕಾಲು ಮುರಿದುಕೊಂಡ ಯುವಕ
ನಿನ್ನೆ ಗಲಾಟೆಗಳಿಗೆ ಅವಕಾಶ ನೀಡದ ಬೆಂಗಳೂರು ಜನಕ್ಕೆ ಧನ್ಯವಾದ: ದಯಾನಂದ
ನಿನ್ನೆ ಗಲಾಟೆಗಳಿಗೆ ಅವಕಾಶ ನೀಡದ ಬೆಂಗಳೂರು ಜನಕ್ಕೆ ಧನ್ಯವಾದ: ದಯಾನಂದ
ಕೊಹ್ಲಿ ಆ್ಯಂಡ್​ ಟೀಂಗೆ ಕನ್ನಡ ಧ್ವಜ ನೀಡಿ ಸ್ವಾಗತಿಸಿದ ಡಿಕೆ ಶಿವಕುಮಾರ್
ಕೊಹ್ಲಿ ಆ್ಯಂಡ್​ ಟೀಂಗೆ ಕನ್ನಡ ಧ್ವಜ ನೀಡಿ ಸ್ವಾಗತಿಸಿದ ಡಿಕೆ ಶಿವಕುಮಾರ್
ವಿಶ್ವದ ಅತಿದೊಡ್ಡ ರೈಲ್ವೆ ಸೇತುವೆಯಾದ ಚೆನಾಬ್ ಕುರಿತ ಅಚ್ಚರಿಯ ಸಂಗತಿಗಳಿವು
ವಿಶ್ವದ ಅತಿದೊಡ್ಡ ರೈಲ್ವೆ ಸೇತುವೆಯಾದ ಚೆನಾಬ್ ಕುರಿತ ಅಚ್ಚರಿಯ ಸಂಗತಿಗಳಿವು
IPL​​ ಕಪ್​ ಹೊತ್ತು ಬೆಂಗಳೂರಿಗೆ ಬಂದ ಆರ್​ಸಿಬಿ ಆಟಗಾರರು, ಲೈವ್​ ಇಲ್ಲಿದೆ
IPL​​ ಕಪ್​ ಹೊತ್ತು ಬೆಂಗಳೂರಿಗೆ ಬಂದ ಆರ್​ಸಿಬಿ ಆಟಗಾರರು, ಲೈವ್​ ಇಲ್ಲಿದೆ
ವಿಧಾನ ಸೌಧದಲ್ಲಿ ಸತ್ಕಾರದ ನಂತರ ತೆರೆದ ವಾಹನದಲ್ಲಿ ಮೆರವಣಿಗೆ ಇಲ್ಲ
ವಿಧಾನ ಸೌಧದಲ್ಲಿ ಸತ್ಕಾರದ ನಂತರ ತೆರೆದ ವಾಹನದಲ್ಲಿ ಮೆರವಣಿಗೆ ಇಲ್ಲ
ಸಾಯಂಕಾಲ 6 ಗಂಟೆಯಿಂದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಟಗಾರರ ವಿಕ್ಟರಿ ಪರೇಡ್
ಸಾಯಂಕಾಲ 6 ಗಂಟೆಯಿಂದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಟಗಾರರ ವಿಕ್ಟರಿ ಪರೇಡ್
ಮೈಸೂರಿನ ಎಲ್ಲ ಇಂದಿರಾ ಕ್ಯಾಂಟೀನ್​ಗಳಲ್ಲಿ ಉಚಿತ ಹೋಳಿಗೆ ಊಟ
ಮೈಸೂರಿನ ಎಲ್ಲ ಇಂದಿರಾ ಕ್ಯಾಂಟೀನ್​ಗಳಲ್ಲಿ ಉಚಿತ ಹೋಳಿಗೆ ಊಟ
ಸಮಾರಂಭದ ಬಗ್ಗೆ ಹೆಚ್ಚಿನ ವಿವರಗಳನ್ನು ನೀಡದ ಡಿಸಿಎಂ ಡಿಕೆ ಶಿವಕುಮಾರ್
ಸಮಾರಂಭದ ಬಗ್ಗೆ ಹೆಚ್ಚಿನ ವಿವರಗಳನ್ನು ನೀಡದ ಡಿಸಿಎಂ ಡಿಕೆ ಶಿವಕುಮಾರ್
ಆರ್​ಸಿಬಿ ಗೆದ್ದ ಬಳಿಕ ಮಕ್ಕಳಂತೆ ಕುಣಿದು ಕುಪ್ಪಳಿಸಿದ ಪ್ರಶಾಂತ್ ನೀಲ್
ಆರ್​ಸಿಬಿ ಗೆದ್ದ ಬಳಿಕ ಮಕ್ಕಳಂತೆ ಕುಣಿದು ಕುಪ್ಪಳಿಸಿದ ಪ್ರಶಾಂತ್ ನೀಲ್